08:45 AM (IST) Jul 25

Karnataka Latest News Live 25 July 2026Tumakuru - ಏಕಕಾಲದಲ್ಲಿ 11 ಇಲಾಖೆಗಳ ಸಚಿವರಾಗಿದ್ದ ಹಿರಿಯ ನಾಯಕ ಸಿ. ವೀರಪ್ಪ ನಿಧನ

ಕಾಂಗ್ರೆಸ್ ನಾಯಕ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರ ಮಾವ ಮಾಜಿ ಸಚಿವರಾಗಿದ್ದ ವೀರಪ್ಪ ನಿಧನರಾಗಿದ್ದಾರೆ. ತುಮಕೂರು ಜಲ್ಲೆಯ ಕೊರಟಗೆರೆಯ ತೋಟದ ಮನೆಯಲ್ಲಿ ರಾತ್ರಿ ನಿಧನರಾಗಿರುವ ಮಾಹಿತಿ ಲಭ್ಯವಾಗಿ

Read Full Story
08:42 AM (IST) Jul 25

Karnataka Latest News Live 25 July 2026‘ವಿಸ್ಕಿ, ಬಿಯರ್ ಹಾಗೂ ರಮ್.. ಸ್ವಾಮಿ.. ಕಿರಾಣಿ ಅಂಗಡಿಗಳಲ್ಲೂ ಮದ್ಯ ಮಾರಾಟ, ಸರ್ಕಾರದ ವಿರುದ್ಧ ಕೋರ್ಟ್ ಗರಂ

‘ಕೃಷಿ ಕೆಲಸ ಮಾಡಿ ದಣಿದು ಬಂದ ಕಾರ್ಮಿಕರಿಗೆ ನೀಡಲು ಪ್ರಾವಿಷನ್ ಸ್ಟೋರ್‌ ನಲ್ಲಿ ಬಿಯರ್-ಲಿಕ್ಕರ್ ಇರಿಸಲಾಗಿತ್ತು...’ ಎಂಬ ವಾದ ಕೇಳಿ ಅಚ್ಚರಿಗೊಂಡ ಹೈಕೋರ್ಟ್, ಇಂಥ ಕೆಲಸವನ್ನು ಸ್ಕಾಟ್ ಲ್ಯಾಂಡ್ ನಲ್ಲಿ ವಿಸ್ಕಿ ಕಂಡುಹಿಡಿದಾಗ ಮಾಡಲಾಗುತ್ತಿತ್ತು. ಆ ಪದ್ಧತಿ ಭಾರತದಲ್ಲಿ ಮಾಡಬೇಕಿಲ್ಲ ಎಂದು ನುಡಿಯಿತು.

Read Full Story
08:16 AM (IST) Jul 25

Karnataka Latest News Live 25 July 2026BPL ಕಾರ್ಡ್‌ ಆದಾಯ ಮಿತಿ 3 ಲಕ್ಷಕ್ಕೆ ಏರಿಸಲು ಸರ್ಕಾರದ ಚಿಂತನೆ; 2 ತಿಂಗಳಲ್ಲಿ ಇಂದಿರಾ ಕಿಟ್‌

ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿಯನ್ನು ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಇದರೊಂದಿಗೆ, 'ಅನ್ನಭಾಗ್ಯ' ಯೋಜನೆಯಡಿ 'ಇಂದಿರಾ ಕಿಟ್' ವಿತರಣೆ ಮತ್ತು ಪಡಿತರ ಕಾಳಸಂತೆ ತಡೆಯಲು ಕಮಾಂಡ್ ಕಂಟ್ರೋಲ್ ರೂಂ ಸ್ಥಾಪಿಸುವ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.
Read Full Story
08:13 AM (IST) Jul 25

Karnataka Latest News Live 25 July 2026ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ, ಇತ್ತ ಟಿಬಿ ಡ್ಯಾಂನಲ್ಲಿ ಕೇವಲ 29 ಟಿಎಂಸಿ ನೀರು! ಇಂದಿನ ಜಲಾಶಯಗಳ ನೀರಿನ ಪ್ರಮಾಣ ಎಷ್ಟು?

ಪ್ರಸಕ್ತ ಸಾಲಿನಲ್ಲಿ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೇವಲ 29 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯೇ ಇದಕ್ಕೆ ಕಾರಣವಾಗಿದ್ದು, ಸದ್ಯ, ಜಲಾಶಯದ ನೀರು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ!

Read Full Story
08:05 AM (IST) Jul 25

Karnataka Latest News Live 25 July 202616 ಸಾವಿರ ಗರ್ಭ ನಾಪತ್ತೆಗೆ ‘ಗರ್ಭಪಾತ’ದ ಕತೆ! ಸರ್ಕಾರಕ್ಕೆ ಸುಳ್ಳು ಮಾಹಿತಿಯ ಆರೋಪ

‘ಕನ್ನಡಪ್ರಭ’ ವರದಿಯ ಆಧಾರದ ಮೇಲೆ, ಯಾದಗಿರಿ ಜಿಲ್ಲೆಯಲ್ಲಿ 16,116 ಗರ್ಭಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಗ್ಯ ಇಲಾಖೆಯು ಮುಖ್ಯಮಂತ್ರಿ ಕಚೇರಿಗೆ ಗರ್ಭಪಾತದ ಸುಳ್ಳು ಮಾಹಿತಿ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣವನ್ನು ರಾಜ್ಯ ಮಾನವ ಹಕ್ಕುಗಳ ಆಯೋಗವು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದು, ತನಿಖೆಗೆ ಆದೇಶಿಸಿದೆ.
Read Full Story
07:52 AM (IST) Jul 25

Karnataka Latest News Live 25 July 2026Havri - SSLCಯಲ್ಲಿ 98%, PUCಯಲ್ಲಿ 95% - ಬಿಂದುಶ್ರೀಗೆ ನೀಟ್‌ನಲ್ಲಿ ಬಂದಿದ್ದು 11 ಅಂಕ

ಹಾನಗಲ್ಲದ ಪ್ರತಿಭಾವಂತ ವಿದ್ಯಾರ್ಥಿನಿ ಬಿಂದು ಶ್ರೀ ಪವಾರ ಅವರು ನೀಟ್‌ ಪರೀಕ್ಷೆಯಲ್ಲಿ 668 ಅಂಕ ನಿರೀಕ್ಷಿಸಿದ್ದರು, ಆದರೆ ಅವರಿಗೆ -11 ಅಂಕ ಬಂದಿದೆ. ತಮ್ಮ ಓಎಂಆರ್‌ ಶೀಟ್ ಬದಲಾಗಿದೆ ಮತ್ತು ಹೆಬ್ಬೆಟ್ಟಿನ ಗುರುತು ಹೊಂದಿಕೆಯಾಗುತ್ತಿಲ್ಲ ಎಂದು ಆರೋಪಿಸಿ, ಅವರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ದೂರು ನೀಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
Read Full Story
07:42 AM (IST) Jul 25

Karnataka Latest News Live 25 July 2026ಸಚಿವ ಸಂಪುಟ ವಿಸ್ತರಣೆ ಬಿಗ್ ಅಪ್ಡೇಟ್; ನೀಟ್ ಪ್ರತಿಭಟನೆ ಮುಗಿಯುತ್ತಿದ್ದಂತೆ ಇತ್ತ ವಿಸ್ತರಣೆಗೆ ತಯಾರಿ!

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯಿಂದ ಮುಂದೂಲ್ಪಟ್ಟಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವ ಸಂದರ್ಭದಲ್ಲಾದರೂ ಆಗಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ತಿಳಿಸಿದರು.

Read Full Story
07:34 AM (IST) Jul 25

Karnataka Latest News Live 25 July 2026BMTC ಪ್ರಯಾಣಿಕರೇ, ವಾಂತಿ ಬರ್ತಿದೆ, ಕಿಟಕಿ ಸೀಟ್ ಬಿಟ್ಕೊಡಿ ಅಂತ ಜನರು ಬಂದ್ರೆ ಹುಷಾರ್!

ಬಿಎಂಟಿಸಿ ಬಸ್‌ಗಳಲ್ಲಿ ವಾಂತಿ ಬರುವ ನೆಪವೊಡ್ಡಿ, ಕಿಟಕಿ ಸೀಟಿನಲ್ಲಿ ಕುಳಿತ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಪಿಕ್‌ಪಾಕೆಟ್‌ ಮಾಡುತ್ತಿದ್ದ ಐವರ ಗ್ಯಾಂಗ್ ಪೈಕಿ ಇಬ್ಬರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ನೌಕರರೊಬ್ಬರಿಂದ 35 ಸಾವಿರ ರು. ಕಳವು ಮಾಡಿದ ಪ್ರಕರಣದ ಬೆನ್ನತ್ತಿದ ಪೊಲೀಸರು, ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹಿಡಿದಿದ್ದಾರೆ.
Read Full Story
07:24 AM (IST) Jul 25

Karnataka Latest News Live 25 July 2026ಕುಡಿದು ಅಮಲಿನಲ್ಲಿ ಇದ್ದಾಗ ವಾಹನ ಚಲಿಸಿ ಮೃತಪಟ್ಟರೆ ಪರಿಹಾರವಿಲ್ಲ - ಹೈಕೋರ್ಟ್ ಕೋರ್ಟ್‌

ಮದ್ಯ ಸೇವಿಸಿ ವಾಹನ ಚಲಾಯಿಸಿದ ವೇಳೆ ಸ್ವಯಂ ಅಫಘಾತಕ್ಕೀಡಾಗಿ ಮೃತಪಟ್ಟ ಸವಾರನ ಅವಲಂಬಿತರು ಪೂರ್ಣ ಪ್ರಮಾಣದ ಪರಿಹಾರ ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

Read Full Story
07:23 AM (IST) Jul 25

Karnataka Latest News Live 25 July 2026ಇಂದು, ನಾಳೆ ಬೆಂಗಳೂರಿನ ಪ್ರಮುಖ ಏರಿಯಾಗಳಲ್ಲೇ ವಿದ್ಯುತ್ ಕಟ್; ಬೆಸ್ಕಾಂನಿಂದ ಪ್ರಕಟಣೆ

ಬೆಸ್ಕಾಂ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜು.25 ಮತ್ತು 26 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೆ.ಎಸ್‌.ಟಿ, ವಿಕ್ಟೋರಿಯಾ, ಬ್ಯಾಡರಹಳ್ಳಿ ಮತ್ತು ತಾವರೆಕೆರೆ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ.
Read Full Story