06:33 AM (IST) Aug 06

Karnataka Latest News Live 6 August 2026Karnataka Rains - ಮಲೆನಾಡು, ಕರಾವಳಿಯಲ್ಲಿ ಮಳೆ - ಅಣೆಕಟ್ಟೆಗಳಿಗೆ ಹೆಚ್ಚಾದ ಒಳಹರಿವು

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್‌ಎಸ್‌, ಕಬಿನಿ ಸೇರಿದಂತೆ ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಗುಡ್ಡ ಕುಸಿತ ಹಾಗೂ ಮನೆ ಹಾನಿ ವರದಿಯಾಗಿದೆ.
Read Full Story
06:20 AM (IST) Aug 06

Karnataka Latest News Live 6 August 2026BRTS ಅವ್ಯವಸ್ಥೆ - ಧಾರವಾಡದಲ್ಲಿ ಮೊಳಗಿದ ಎಚ್ಚರಿಕೆ ಗಂಟೆ, ಜಾಣ ಕುರುಡರಂತೆ ವರ್ತನೆ!

ಧಾರವಾಡದ ವಿದ್ಯಾಗಿರಿ ಬಳಿ ಬಿಆರ್‌ಟಿಎಸ್‌ನಿಂದ ಉಂಟಾಗುತ್ತಿರುವ ನಿರಂತರ ಅಪಘಾತ ಮತ್ತು ಅವ್ಯವಸ್ಥೆಯನ್ನು ಖಂಡಿಸಿ ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಜಂಕ್ಷನ್‌ ಅಭಿವೃದ್ಧಿ ಹಾಗೂ ರೋಡ್ ಬ್ರೇಕರ್‌ ಅಳವಡಿಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
Read Full Story
06:07 AM (IST) Aug 06

Karnataka Latest News Live 6 August 2026ಅಪ್ಪಾ ದುಡ್ಡು ಬೇಡ, ಬಡವರ ಸೇವೆ ಮಾಡು - ತಂದೆ ವಿಜಯಾನಂದ ಕಾಶಪ್ಪನವರಿಗೆ ಮಗಳ ಮಾತು

ನೂತನ ಸಚಿವ ವಿಜಯಾನಂದ ಕಾಶಪ್ಪನವರ ತವರಿಗೆ ಆಗಮಿಸಿದಾಗ, ಅವರ ಮಗಳು ಸಮಿಕ್ಷಾ 'ದುಡ್ಡು ಬೇಡ, ಬಡವರ ಸೇವೆ ಮಾಡು' ಎಂದು ಹೇಳಿ ಎಲ್ಲರ ಮನಗೆದ್ದಳು. ಇದೇ ವೇಳೆ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಸಂಬಂಧಿಸಿದಂತೆ ತಿಮ್ಮಾಪುರ ಮತ್ತು ನಂಜಯ್ಯನಮಠ ಅವರ ಆಡಿಯೋ ವಿವಾದದ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿದ್ದಾರೆ.
Read Full Story
05:55 AM (IST) Aug 06

Karnataka Latest News Live 6 August 2026Special voters list revision - ಮಂಡ್ಯ ಜಿಲ್ಲೆಯಲ್ಲಿ ಮತಪಟ್ಟಿಯಿಂದ 1.69 ಲಕ್ಷ ಮಂದಿ ಔಟ್

ಮಂಡ್ಯ ಜಿಲ್ಲೆಯಲ್ಲಿ ನಡೆದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ, ಸುಮಾರು 1.69 ಲಕ್ಷ ಜನರನ್ನು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲಾಗಿದೆ. ಇದಲ್ಲದೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಆಗಸ್ಟ್ 6 ರಂದು ಎಸ್ಎಸ್ಎಲ್‌ಸಿ, ಪಿಯುಸಿ, ಮತ್ತು ಪದವೀಧರರಿಗಾಗಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಿದೆ.

Read Full Story
05:47 AM (IST) Aug 06

Karnataka Latest News Live 6 August 2026ಮೃತ ಕಾನ್‌ಸ್ಟೇಬಲ್ ಅರ್ಜುನ್ ಶಂಕರ್ ಕುಟುಂಬಕ್ಕೆ 1.45 ಕೋಟಿ ರೂಪಾಯಿ ವಿಮೆ ಹಸ್ತಾಂತರ

ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಉಡುಪಿ ಜಿಲ್ಲಾ ಪೊಲೀಸ್ ಸಿಬ್ಬಂದಿ ಅರ್ಜುನ ಶಂಕರ ನೆಲ್ಲೂರ ಅವರ ಕುಟುಂಬಕ್ಕೆ ಎಸ್.ಬಿ.ಐ. ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ 1.45 ಕೋಟಿ ರೂಪಾಯಿ ವಿಮಾ ಚೆಕ್ ಹಸ್ತಾಂತರಿಸಲಾಯಿತು. ಪೊಲೀಸ್ ಇಲಾಖೆ ಮತ್ತು ಎಸ್.ಬಿ.ಐ. ನಡುವಿನ ಒಪ್ಪಂದದಂತೆ ಈ ಸೌಲಭ್ಯವನ್ನು ಒದಗಿಸಲಾಗಿದ್ದು, ಇದರ ಸದುಪಯೋಗ ಪಡೆಯಲು ಇತರೆ ಸಿಬ್ಬಂದಿಗೆ ಕರೆ ನೀಡಲಾಗಿದೆ.
Read Full Story
05:39 AM (IST) Aug 06

Karnataka Latest News Live 6 August 2026ಮಂತ್ರಿಗಿರಿ ಸಿಗದ್ದಕ್ಕೆ ನೋವಿಲ್ಲ, ಹೀಗ್ಯಾಕೆ ಮಾಡಿದರೆಂಬ ಬೇಸರ - ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ

ಸಚಿವ ಸ್ಥಾನದ ಭರವಸೆ ಹುಸಿಯಾದ ಕಾರಣ ರಾಜೀನಾಮೆ ನೀಡಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಪಕ್ಷದ ವರಿಷ್ಠರ ಮನವಿ ಹಾಗೂ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ. ತಮಗೆ ಮಾತುಕೊಟ್ಟು ತಪ್ಪಿದ ನಾಯಕರ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಇನ್ನು ಮುಂದೆ ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡುವುದಿಲ್ಲ ಎಂದು ಹೇಳಿದ್ದಾರೆ.
Read Full Story