ವಾಲ್ಮೀಕಿ ನಿಗಮ ಹಗರಣದಲ್ಲಿ ಜಾಮೀನು ಪಡೆದಿರುವ ಸಚಿವ ನಾಗೇಂದ್ರ, ಕೋರ್ಟ್ ಅನುಮತಿ ಇಲ್ಲದೆ ದೆಹಲಿಗೆ ಪ್ರವಾಸ ಕೈಗೊಂಡ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುತ್ತಿದ್ದು, ಷರತ್ತು ಉಲ್ಲಂಘನೆ ಸಾಬೀತಾದರೆ ಅವರ ಜಾಮೀನು ರದ್ದಾಗುವ, ಸಚಿವ ಸ್ಥಾನಕ್ಕೆ ಕುತ್ತು?
- Home
- News
- State
- Karnataka Latest News Live: B Nagendra - ಕೋರ್ಟ್ ಷರತ್ತು ಮೀರಿ ನಾಗೇಂದ್ರ ದಿಲ್ಲಿ ಭೇಟಿ - ಇಡಿ ತನಿಖೆ, ಸಾಕ್ಷ್ಯ ಸಿಕ್ಕರೆ ಏನಾಗುತ್ತೆ?
LIVE NOW
Karnataka Latest News Live: B Nagendra - ಕೋರ್ಟ್ ಷರತ್ತು ಮೀರಿ ನಾಗೇಂದ್ರ ದಿಲ್ಲಿ ಭೇಟಿ - ಇಡಿ ತನಿಖೆ, ಸಾಕ್ಷ್ಯ ಸಿಕ್ಕರೆ ಏನಾಗುತ್ತೆ?

ಸಾರಾಂಶ
ಚಿಕ್ಕಮಗಳೂರು: ಬಿಡದಿ ಟೌನ್ಶಿಪ್ಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆ ನಡೆಸುತ್ತೇವೆಯೇ ವಿನಃ ಮೈತ್ರಿ ಮುರಿದುಬಿದ್ದಿಲ್ಲ ಎಂದು ಸಂಸದ ಡಾ। ಮಂಜುನಾಥ್ ಹೇಳಿದರು. ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಪ್ರಾಯಶ್ಚಿತ್ತ ಪಾದಯಾತ್ರೆ ಎಂದು ಶಾಸಕ ಬಾಲಕೃಷ್ಣ ಅವರು ಕರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು ಒತ್ತಾಯ ಮಾಡಿ ನಾವು ಸ್ವಾಧೀನಕ್ಕೆ ಮುಂದಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕ ಪಾದಯಾತ್ರೆಗೆ ಸಿದ್ಧರಾಗಿದ್ದಾರೆ. ಫಲವತ್ತಾದ ರೈತರ ಭೂಮಿಯನ್ನು ಪಡೆಯಬಾರದು. ಹಿಂದೆ ಹಾರೋಹಳ್ಳಿ ಪ್ರಕರಣದಲ್ಲೂ ರೈತರು ಪ್ರತಿಭಟಿಸಿದ್ದರು. ಶೇ.80ರಷ್ಟು ರೈತರ ವಿರೋಧವಿದೆ. ಪ್ರಜಾಪ್ರಭುತ್ವದಲ್ಲಿ ರೈತರ ಒಟ್ಟಾರೆ ಅಭಿಪ್ರಾಯ ಪಡೆದು, ನಿರ್ಧಾರ ಕೈಗೊಳ್ಳಬೇಕು ಎಂದರು.
07:35 AM (IST) Aug 09
Karnataka Latest News Live 9 August 2026B Nagendra - ಕೋರ್ಟ್ ಷರತ್ತು ಮೀರಿ ನಾಗೇಂದ್ರ ದಿಲ್ಲಿ ಭೇಟಿ - ಇಡಿ ತನಿಖೆ, ಸಾಕ್ಷ್ಯ ಸಿಕ್ಕರೆ ಏನಾಗುತ್ತೆ?
Read Full Story
07:33 AM (IST) Aug 09
Karnataka Latest News Live 9 August 2026ಒತ್ತುವರಿದಾರರಿಗೆ ಬಿಗ್ ಶಾಕ್ - 165 ಎಕರೆ ಭೂಮಿಯನ್ನು ವಶಕ್ಕೆ ಪಡೆದುಕೊಂಡ ಬಿಎಂಟಿಸಿ
ಕಳೆದ ಎರಡು ವರ್ಷಗಳಲ್ಲಿ, ಬಿಎಂಟಿಸಿ ವಿಶೇಷ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ 165 ಎಕರೆ ಭೂಮಿಯನ್ನು ಮರುವಶಕ್ಕೆ ಪಡೆದಿದೆ. ಪೊಲೀಸ್ ಮತ್ತು ಕಂದಾಯ ಇಲಾಖೆಗಳ ಸಹಕಾರದೊಂದಿಗೆ ನಡೆದ ಈ ಕಾರ್ಯಾಚರಣೆಯಲ್ಲಿ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಮುಂದೆಯೂ ಈ ಕ್ರಮ ಮುಂದುವರಿಯಲಿದೆ.
Read Full Story 07:06 AM (IST) Aug 09
Karnataka Latest News Live 9 August 2026ಬೆಂಗಳೂರು - ಹಿಂದಿ ಬರಲ್ಲವೆಂದ ಕನ್ನಡಿಗನ ಮೇಲೆ ಹಿಂದಿವಾಲಾಗಳಿಂದಲೇ ಹಲ್ಲೆ!
ಬೆಂಗಳೂರಿನ ಯಲಹಂಕದಲ್ಲಿ ಹಿಂದಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಡೆಲಿವರಿ ಬಾಯ್ ಬಸವರಾಜ್ ಮೇಲೆ ಪರಭಾಷಿಕರು ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರು ಯುವತಿಯರು ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Read Full Story