Asianet Suvarna News Asianet Suvarna News

ಎರಡು ದಿನ ಆಗಲಿದೆ ಕರ್ನಾಟಕ-ಮಹಾರಾಷ್ಟ್ರ ಗಡಿ ಬಂದ್ : ವಾಟಾಳ್ ನಾಗರಾಜ್

ರಾಜ್ಯದಲ್ಲಿ ಎರಡು ದಿನ  ಬಂದ್ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಎಲ್ಲಿ ಬಂದ್ ಆಗಲಿದೆ. ಹಾಗೂ ಯಾವಾಗ...? 

Karnataka Maharashtra border Bandh On January 21 And 22 snr
Author
Bengaluru, First Published Jan 21, 2021, 9:15 AM IST

ಬೆಂಗಳೂರು (ಜ.21): ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿಕೆ ಖಂಡಿಸಿ ಕನ್ನಡಪರ ಸಮಘಟನೆಗಳು ಇಂದು ಮತ್ತು ಶುಕ್ರವಾರ  (ಜ.21,22): ರಾಜ್ಯದ ಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. 

ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್  ನೇತೃತ್ವದಲ್ಲಿ ಬುಧವಾರ  ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದ್ದು ಇಂದುಕರ್ನಾಟಕ ಗಡಿ ಅತ್ತಿಬೆಲೆ, ಶುಕ್ರವಾರ ಬೆಳಗಾವಿ ಗಡಿ ಹಾಗೂ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. 

ತಮಿಳು ಬ್ಯಾನರ್ ಕಿತ್ತುಹಾಕಿದ ವಾಟಾಳ್ ಮೇಲೆ ಕೇಸ್, ಕೇಸ್ ..

ಈ ಬಗ್ಗೆ ಮಾತನಾಡಿರುವ ವಾಟಾಳ್ ನಾಗರಾಜ್  ಮಹಾಜನ್ ವರದಿ ಪ್ರಕಾರ ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು. ಆದರು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮನಸೋ ಇಚ್ಛೆ  ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕುವ ಕೆಲಸ ಮಾಡುತ್ತಿದ್ದಾರೆ ಎಂದು  ಹೇಳಿದರು. 

ಚಾಮರಾಜನಗರ: ನಡುರಸ್ತೆಯಲ್ಲಿ ಮಲಗಿ ವಾಟಾಳ್ ನಾಗರಾಜ್ ಪ್ರತಿಭಟನೆ ..

 ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ ರಾ ಗೊವಿಮದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು  ಅನೇಕರಿದ್ದರು. 

Follow Us:
Download App:
  • android
  • ios