ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆರ್‌ಎಂಪಿ ವೈದ್ಯರು ಕೈ ಜೋಡಿಸುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್  ಮನವಿ ಮಾಡಿದೆ.

ಬೆಂಗಳೂರು, (ಜುಲೈ.08): ಕರ್ನಾಟಕದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಸಹ ಹಗಲು ರಾತ್ರಿ ಎನ್ನದೇ ಕಾರ್ಯನಿರ್ವಹಿಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆಲಸ ವೇಳೆ ವೈದ್ಯರಿಗೂ ಸಹ ಕೊರೋನಾ ಸೋಂಕು ತಗುಲಿತ್ತಿದೆ. ಇದರಿಂದ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಆರ್‌ಎಂಪಿ ವೈದ್ಯರು ಕೈ ಜೋಡಿಸುವಂತೆ ಮನವಿ ಮಾಡಿದೆ. 

ತಿಂಗಳೊಳಗೆ ಗುತ್ತಿಗೆ ವೈದ್ಯರ ಉದ್ಯೋಗ ಖಾಯಂ : ಆರೋಗ್ಯ ಸಚಿವರಿಂದ ಭರವಸೆ

ಈಗ ಜಗತ್ತು ಅಭೂತಪೂರ್ವ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿದೆ. ನಮ್ಮ ರಾಜ್ಯವು ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಈ ಸಮಯದಲ್ಲಿ ನಿಮ್ಮ ಸೇವೆಗಳು ತುರ್ತಾಗಿ ಅಗತ್ಯವಿದೆ. 

ಇದನ್ನು ಸಾಂಕ್ರಾಮಿಕ ರೋಗವೆಂದು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿದೆ. ಈ ಕಾರಣಕ್ಕೆ ಆರ್‌ಎಂಪಿಗಳು ತಮ್ಮ ಸೇವೆಯನ್ನು ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಸಲ್ಲಿಸಲು ಕೋರಿದೆ. ಮತ್ತು ರಾಜ್ಯದ ವಿವಿಧ ಸ್ಥಳಗಳಲ್ಲಿ ನಿಮ್ಮ ಸೇವೆ ಅಗತ್ಯವಿರುವಲ್ಲೆಲ್ಲಾ ಕಡೆ ಸೇವೆ ಅವಶ್ಯವಿದ್ದು, ನಿಮ್ಮಲ್ಲಿ ಸ್ವಯಂಪ್ರೇರಣೆಯಿಂದ ಸೇವೆ ಸಲ್ಲಿಸಲು ಸಿದ್ಧರಿರುವವರು, ಈ rguhscovid 19 vol@gmail.com ಲಿಂಕ್‌ಗೆ ನಿಮ್ಮ ಹೆಸರನ್ನು ನೀಡಿ ಎಂದು ಕರ್ನಾಟಕ ಮೆಡಿಕಲ್ ಕೌನ್ಸಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.