Asianet Suvarna News Asianet Suvarna News

ಗಡಿ ವಿವಾದ: ಕರ್ನಾಟಕ ಸಂಸದರಿಂದ ನಾಳೆ ಅಮಿತ್‌ ಶಾ ಭೇಟಿ

ನಾನು ಸಹ ಅಮಿತ್‌ ಶಾ ಜತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಈ ವೇಳೆ ರಾಜ್ಯದ ವಿಚಾರ, ನಿಲುವು, ವಾಸ್ತವಾಂಶವನ್ನು ತಿಳಿಸಿದ್ದೇನೆ. ಈ ವೇಳೆ ಹೇಳಿ ಕಳುಹಿಸಿದಾಗ ಸಭೆಗೆ ಬರಬೇಕಾಗಬಹುದು ಎಂದಿದ್ದಾರೆ: ಸಿಎಂ ಬೊಮ್ಮಾಯಿ 

Karnataka MP to visit Amit Shah on December 12th Due to Border Dispute grg
Author
First Published Dec 11, 2022, 2:30 AM IST

ಬೆಂಗಳೂರು(ಡಿ.11):  ಕರ್ನಾಟಕ- ಮಹಾರಾಷ್ಟ್ರದ ನಡುವೆ ಗಡಿಯಲ್ಲಿ ಉಂಟಾಗಿರುವ ಬೆಳವಣಿಗೆ ಕುರಿತಂತೆ ಮಾಹಿತಿ ನೀಡಲು ರಾಜ್ಯದ ಸಂಸದರ ನಿಯೋಗ ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾನು ಸಹ ಅಮಿತ್‌ ಶಾ ಜತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಈ ವೇಳೆ ರಾಜ್ಯದ ವಿಚಾರ, ನಿಲುವು, ವಾಸ್ತವಾಂಶವನ್ನು ತಿಳಿಸಿದ್ದೇನೆ. ಈ ವೇಳೆ ಹೇಳಿ ಕಳುಹಿಸಿದಾಗ ಸಭೆಗೆ ಬರಬೇಕಾಗಬಹುದು ಎಂದಿದ್ದಾರೆ. ಇದರ ಜೊತೆಗೆ ಸಂಸದರ ನಿಯೋಗ ಕೂಡ ಸೋಮವಾರ ನವದೆಹಲಿಯಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಿದೆ’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

Border Dispute: ಮಹಾರಾಷ್ಟ್ರದ ಅಪ್ಪಟ್ಟ ಮರಾಠಿ ಹಳ್ಳಿಗಳಿಗೂ ಕರ್ನಾಟಕ ಸೇರುವ ಒಲವು

ಅಮಿತ್‌ ಶಾ ಸಭೆ:

ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಡಿ.14 ಅಥವಾ 15ರಂದು ಸಭೆ ನಡೆಯಲಿದ್ದು, ನನ್ನನ್ನೂ ಸಹ ಸಭೆಗೆ ಆಹ್ವಾನಿಸಲಾಗಿದೆ. ಇದರ ಜೊತೆಗೆ ನಾನೂ ಸಹ ಖುದ್ದು ಅಮಿತ್‌ ಶಾ ಅವರನ್ನು ಭೇಟಿ ಮಾಡುತ್ತೇನೆ. ಈ ವೇಳೆ ಕರ್ನಾಟಕದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ಸರ್ವಪಕ್ಷ ಸಭೆ:

ಈ ನಡುವೆ ಸರ್ವಪಕ್ಷದ ಸಭೆ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜತೆ ಚರ್ಚಿಸಲಾಗಿದೆ. ಸಭೆ ನಿಗದಿಯಾದ ಬಳಿಕ ಹೇಳಲಾಗುವುದು ಎಂದು ಸಿಎಂ ತಿಳಿಸಿದರು.

ರಾಜೀ ಇಲ್ಲ:

ಇನ್ನು, ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ. ಈ ಹಿಂದೆಯೂ ಸಹ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ. ನ್ಯಾಯಾಲಯದಲ್ಲಿ ನಮ್ಮ ನ್ಯಾಯ ಸಮ್ಮತ ವಿಚಾರ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

ಎಂಇಎಸ್‌ ಕಾರ್ಯಕರ್ತರೇ ಪುಂಡಾಡಿಕೆ ನಿಲ್ಲಿಸಿ: ಲಕ್ಷ್ಮಣ ಸವದಿ

ಕೊಲ್ಹಾಪುರದಲ್ಲಿ ಮಹಾರಾಷ್ಟ್ರ ಸರ್ಕಾರ ವಿರುದ್ಧ ಪ್ರತಿಭಟನೆ

ಬೆಳಗಾವಿ: ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಸರ್ಕಾರದ ವಿರುದ್ಧವೇ ಮಹಾರಾಷ್ಟ್ರದ ಹೋರಾಟಗಾರರು ಶನಿವಾರ ಕೊಲ್ಹಾಪುರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕದ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಆಗ್ರಹಿಸಿದರು.

ಬೆಳಗಾವಿ ಬಗ್ಗೆ ಪ್ರಧಾನಿ ಮೋದಿ ಮೌನ ಮುರಿಯಲಿ: ಉದ್ಧವ್‌

ಜಾಲ್ನಾ (ಮಹಾರಾಷ್ಟ್ರ): ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಹಾರಾಷ್ಟ್ರಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಅವರು ಬೆಳಗಾವಿ ಗಡಿ ವಿವಾದದ ಕುರಿತು ಮೌನ ಮುರಿಯಬೇಕು. ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಒತ್ತಾಯಿಸಿದ್ದಾರೆ.
 

Follow Us:
Download App:
  • android
  • ios