ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಕೋಟೆಯ ಬಳಿ ನೆಲ ಅಗೆಯುವಾಗ ಒಂದಲ್ಲ ಎರಡಲ್ಲ ಮುನ್ನೂರಕ್ಕೂ ಹೆಚ್ಚು ಪುರಾತನ ಕಾಲದ ನಾಣ್ಯಗಳು ಪತ್ತೆಯಾಗಿವೆ. ಯಾವ ಕಾಲದ್ದು? ನಾಣ್ಯಗಳ ಮೇಲಿನ ಲಿಪಿ ಯಾವ ಭಾಷೆಯಲ್ಲಿದೆ ಹೆಚ್ಚಿನ ವಿವರ ತಿಳಿಯಿರಿ
- Home
- News
- State
- State News Live: Ancient coins - ರಾಯಚೂರು ಜಿಲ್ಲೆಯಲ್ಲಿ ಕೋಟೆಯ ಮಣ್ಣು ಅಗೆಯುವಾಗ ಪುರಾತನ ಕಾಲದ 360 ನಾಣ್ಯಗಳು ಪತ್ತೆ!
State News Live: Ancient coins - ರಾಯಚೂರು ಜಿಲ್ಲೆಯಲ್ಲಿ ಕೋಟೆಯ ಮಣ್ಣು ಅಗೆಯುವಾಗ ಪುರಾತನ ಕಾಲದ 360 ನಾಣ್ಯಗಳು ಪತ್ತೆ!

ಬೆಂಗಳೂರು (ಆ.22): ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಯೋಜನೆ ಮತ್ತು ಸಾಂಖ್ಯಿಕ ಸಚಿವಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿ ಸಿದ್ದು, ಬರುವ ಸೋಮವಾರ ಅಥವಾ ಮಂಗಳವಾರದ ಹೊತ್ತಿಗೆ ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆಯಿದೆ. ಇನ್ನೊಂದೆಡೆ, ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಸಚಿವ ನಾಗೇಂದ್ರಗೆ ನೀಡಲಾಗಿರುವುದು ಮತ್ತೊಂದು ವಿವಾದಕ್ಕೆ ನಾಂದಿ ಹಾಡುವ ಸಾಧ್ಯತೆ ಇದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
Karnataka News Live 22nd August:Ancient coins - ರಾಯಚೂರು ಜಿಲ್ಲೆಯಲ್ಲಿ ಕೋಟೆಯ ಮಣ್ಣು ಅಗೆಯುವಾಗ ಪುರಾತನ ಕಾಲದ 360 ನಾಣ್ಯಗಳು ಪತ್ತೆ!
Karnataka News Live 22nd August:ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ - ಡಿಸೆಂಬರ್ನೊಳಗೆ ಈ ನಾಲ್ಕು ಜಿಲ್ಲೆಗಳಿಗೆ ಹರಿಯಲಿದೆ ನೀರು!
ಭದ್ರಾ ಮೇಲ್ದಂಡೆ ಯೋಜನೆಯ ಮೊದಲ ಹಂತದ ಕಾಮಗಾರಿಯು ನವೆಂಬರ್ ಅಥವಾ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು, ದಾವಣಗೆರೆ, ಚಿತ್ರದುರ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
Karnataka News Live 22nd August:ನಾಡಿನ ಜನಕ್ಕಿಂತ ನೈಸ್ ಕಂಪನಿ, ಸರ್ಕಾರ ದೊಡ್ಡದಲ್ಲ; ಟೋಲ್ ಕಟ್ಟೋಕೆ ಹೋಗ್ಬೇಡಿ - ಎಚ್ಡಿ ಕುಮಾರಸ್ವಾಮಿ
Karnataka News Live 22nd August:ರಾಜೀನಾಮೆ ಬೇಡಿಕೆ ಮಧ್ಯೆಯೇ ನಾಗೇಂದ್ರಗೆ ಬಂಪರ್ ಗಿಫ್ಟ್ - ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿ!
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುತ್ತಿರುವ ನಡುವೆಯೇ, ರಾಜ್ಯ ಸರ್ಕಾರ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಿದೆ. ಸರ್ಕಾರದ ಈ ನಿರ್ಧಾರವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಸದಸ್ಯರು ತೀವ್ರ ಅಸಮಾಧಾನ.
Karnataka News Live 22nd August:ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿಲ್ಲ ಅಂತಾ ರಾಮಾಯಣದ ಮೇಲೆ ನಾಗೇಂದ್ರ ಪ್ರಮಾಣ ಮಾಡಲಿ: ಶ್ರೀರಾಮುಲು
ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ, ಸಚಿವ ಬಿ.ನಾಗೇಂದ್ರ ಅವರು ರಾಮಾಯಣ ಕೃತಿಯ ಮೇಲೆ ಕೈ ಇಟ್ಟು ಪ್ರಮಾಣ ಮಾಡಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಸವಾಲು ಹಾಕಿದ್ದಾರೆ. ನಾಗೇಂದ್ರ ರಾಜೀನಾಮೆ ನೀಡುವವರೆಗೂ ತಮ್ಮ ಹೋರಾಟ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.
Karnataka News Live 22nd August:ಮೈಸೂರು ದಸರಾ ಹೊತ್ತಲ್ಲಿ ಇದೇನು ಹೊಸ ಸಮಸ್ಯೆ! ಚಾಮುಂಡೇಶ್ವರಿ ದೇವಾಲಯದ ಅರ್ಚಕರಿಗೆ ಬಿಳಿಮಚ್ಚೆ ಕಾರಣಕ್ಕೆ ಪೂಜೆಗೆ ಅಡ್ಡಿ? ಕೋರ್ಟ್ ಹೇಳಿದ್ದೇನು?
ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಅನುವಂಶಿಕ ಅರ್ಚಕರಿಗೆ ಬಿಳಿಮಚ್ಚೆ ಕಾರಣಕ್ಕೆ ಪೂಜೆಗೆ ಅಡ್ಡಿಪಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹೈಕೋರ್ಟ್, ಅರ್ಚಕರಿಗೆ ಪೂಜೆಗೆ ಅಡ್ಡಿ ಉಂಟಾಗಿದೆಯೇ ಎಂದು ಪರಿಶೀಲಿಸಲು ಇಬ್ಬರು ವಕೀಲರನ್ನು ಕೋರ್ಟ್ ಕಮಿಷನರ್ಗಳಾಗಿ ನೇಮಿಸಿ ಆದೇಶಿಸಿದೆ.
Karnataka News Live 22nd August:ಬೆಂಗಳೂರು ಏರ್ಪೋರ್ಟ್ಗೆ ಮುಂದಿನ ವರ್ಷವೇ ಮೆಟ್ರೋ ಶುರು? ಎಂಜಿ ರಸ್ತೆಯಿಂದ ಕೇವಲ 45 ನಿಮಿಷ ಸಾಕು!
ಬೆಂಗಳೂರಿನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋದ ಬ್ಲೂ ಲೇನ್ ಮಾರ್ಗದ ಕಾಮಗಾರಿಯು ಶೇ.75ರಷ್ಟು ಪೂರ್ಣಗೊಂಡಿದೆ. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಂಡರೆ, ಮುಂದಿನ ವರ್ಷದಿಂದ ಮೆಟ್ರೋ ಸಂಚಾರ ಆರಂಭವಾಗಲಿದ್ದು, ಎಂಜಿ ರಸ್ತೆಯಿಂದ ಕೇವಲ 45 ನಿಮಿಷಗಳಲ್ಲಿ ವಿಮಾನ ನಿಲ್ದಾಣ ತಲುಪಬಹುದಾಗಿದೆ.
Karnataka News Live 22nd August:ನಾಗೇಂದ್ರ ತಲೆದಂಡಕ್ಕೆ ಬಿಜೆಪಿ ಬಿಗ್ ಪ್ಲಾನ್! ಬಳ್ಳಾರಿ ಪಾದಯಾತ್ರೆ ದಿನಾಂಕ, ಆರಂಭ ಸ್ಥಳದ ಬಗ್ಗೆ ಶೀಘ್ರ ಘೋಷಣೆ?
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಪರಿಶಿಷ್ಟ ಪಂಗಡದ ನಾಯಕರ ನೇತೃತ್ವದಲ್ಲಿ ನಡೆಯಲಿರುವ ಈ ಪಾದಯಾತ್ರೆಯು, ನಾಗೇಂದ್ರ ಅವರ ಕ್ಷೇತ್ರವಾದ ಬಳ್ಳಾರಿಯಲ್ಲಿ ಅಂತ್ಯಗೊಳ್ಳುವಂತೆ ಪ್ಲಾನ್!
Karnataka News Live 22nd August:ಕುಂದಾಪುರ: ಆಸ್ಪತ್ರೆ ಅಕ್ರಮ ಬಯಲಿಗೆಳೆದ 'ಕನ್ನಡಪ್ರಭ' ವರದಿಗಾರನ ಮಲೆ ಹಲ್ಲೆ; ಡಾ ಮಹೇಂದ್ರ ಶೆಟ್ಟಿ ಸಸ್ಪೆಂಡ್
ಕುಂದಾಪುರ ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ 'ಕನ್ನಡಪ್ರಭ' ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿದ್ದಾರೆ. ಘಟನೆ ಹಿನ್ನೆಲೆ ವೈದ್ಯರ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
Karnataka News Live 22nd August:Kabini Dam: ಕಬಿನಿ ಡ್ಯಾಂನಿಂದ 9 ದಿನಗಳಲ್ಲೇ 4 ಟಿಎಂಸಿ ನೀರು ತಮಿಳುನಾಡಿಗೆ! ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ?
ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಿಂದ ರೈತರ ಕೃಷಿ ಚಟುವಟಿಕೆಗಳಿಗೆ ನೀರು ಒದಗಿಸುವ ಬದಲು, ಒಳಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ನೀರು ನೇರವಾಗಿ ತಮಿಳುನಾಡಿಗೆ ಸೇರುತ್ತಿದ್ದು, ಕಳೆದ ಒಂಬತ್ತು ದಿನಗಳಲ್ಲಿ ಜಲಾಶಯದಿಂದ 4 ಟಿಎಂಸಿ ನೀರು ಖಾಲಿ!