11:49 PM (IST) Mar 02

Karnataka Latest News Live:ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ - ರಥದ ಅಲಂಕಾರದಲ್ಲಿ ರಾಜಕೀಯ - ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ

ಹೊಳೇನರಸೀಪುರದ ಲಕ್ಷ್ಮಿ ನರಸಿಂಹ ಸ್ವಾಮಿ ರಥೋತ್ಸವದ ಅಲಂಕಾರ ವಿಚಾರದಲ್ಲಿ ರಾಜಕೀಯ ನುಸುಳಿದೆ. ಸಂಸದ ಶ್ರೇಯಸ್ ಪಟೇಲ್ ನೀಡಿದ ಬಟ್ಟೆ ಬಳಸಿದ್ದಕ್ಕೆ ರೇವಣ್ಣ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Read Full Story
11:21 PM (IST) Mar 02

Karnataka Latest News Live:ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!

ಯುಎಇ ಮೇಲೆ ನಡೆದ ಡ್ರೋನ್ ಮತ್ತು ಮಿಸೈಲ್ ದಾಳಿಯ ನಡುವೆ ಸಿಲುಕಿದ್ದ 230 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ್ದಾರೆ. ದಾಳಿಯ ಭೀಕರತೆಯನ್ನು ವಿವರಿಸಿದ ಅವರು, ಸಂಕಷ್ಟದ ಸಮಯದಲ್ಲಿ ಉಚಿತ ವಸತಿ ಮತ್ತು ಭದ್ರತೆ ಒದಗಿಸಿದ ಯುಎಇ ಸರ್ಕಾರದ ಕಾರ್ಯವನ್ನು ಶ್ಲಾಘಿಸಿದ್ದಾರೆ.
Read Full Story
11:11 PM (IST) Mar 02

Karnataka Latest News Live:ಒಳಗಿರುವ ಪರಮಾತ್ಮ ಆಡಿಸಿದ ಆಟ - ಕಂಠಪೂರ್ತಿ ಕುಡಿದು ಬಾರ್ ಮುಂದೆಯೇ ಮಲಗಿದ ನಾರಿ

Rayabhaga woman's video goes viral: ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಎಂಬ ಹಾಡಿನಂತೆ ಇಲ್ಲೊಬ್ಬಳು ಮಹಿಳೆ ತಾನು ಯಾವ ಪುರುಷರಿಗೆ ಕಡಿಮೆ ಇಲ್ಲ ಎಂಬಂತೆ ಬಾರ್ ಮುಂದೆ ಕುಡಿದು ಬಿದ್ದಿದ್ದಾಳೆ.ಆಕೆಯ ವೀಡಿಯೋ ವೈರಲ್ ಆಗಿದೆ.

Read Full Story
09:25 PM (IST) Mar 02

Karnataka Latest News Live:ಸಾಲ ಮರುಪಾವತಿಯಲ್ಲಿ ದೇಶದಲ್ಲಿಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನ, ಇದು ಕರಾವಳಿಗರ ಪ್ರಾಮಾಣಿಕತೆ

ಮಂಗಳೂರಿನ ಬೋಳೂರಿನಲ್ಲಿ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ನೂತನ ಕಟ್ಟಡ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಕೃಷಿ ಸಾಲ ಮರುಪಾವತಿಯಲ್ಲಿ ಅವಿಭಜಿತ ಕರಾವಳಿ ಜಿಲ್ಲೆ ದೇಶದಲ್ಲೇ ಅಗ್ರಸ್ಥಾನದಲ್ಲಿದೆ

Read Full Story
08:55 PM (IST) Mar 02

Karnataka Latest News Live:ಗಲೀಜು ಟಾಯ್ಲೆಟ್‌, ಕೆಟ್ಟ ಊಟ, ನೆಲದ ಮೇಲೆ ನಿದ್ರೆ - ತಿಹಾರ್ ಜೈಲಲ್ಲಿ ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಕನ್ನಡ ಸಿನಿಮಾ ನಟಿ!

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದ ನಟಿ ಸಂದೀಪಾ ವಿರ್ಕ್, ಅಲ್ಲಿನ ಕಠೋರ ಜೀವನ, ಅನೈರ್ಮಲ್ಯ ಮತ್ತು ಭ್ರಷ್ಟಾಚಾರದ ಬಗ್ಗೆ ತಮ್ಮ ನೋವಿನ ಅನುಭವವನ್ನು ಹಂಚಿಕೊಂಡಿದ್ದಾರೆ. ಜೈಲಿನಲ್ಲಿದ್ದಾಗ ಸಾವನ್ನೇ ಬಯಸಿದ್ದೆ ಎಂದು ಹೇಳಿದ್ದಾರೆ.

Read Full Story
08:31 PM (IST) Mar 02

Karnataka Latest News Live:ಡಿಆರ್‌ಡಿಒ ನೇಮಕಾತಿ 2026 - ರಕ್ಷಣಾ ವಲಯದ ಮಹತ್ವದ ಕರೆ! ಒಟ್ಟು 188 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ 2026ನೇ ಸಾಲಿನಲ್ಲಿ 188 ಆಡಳಿತಾಧಿಕಾರಿ ಮತ್ತು ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಪದವಿ ಅಥವಾ ಬಿಇ/ಬಿ.ಟೆಕ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಮಾರ್ಚ್ 29, 2026ರೊಳಗೆ ನಿಗದಿತ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

Read Full Story
07:43 PM (IST) Mar 02

Karnataka Latest News Live:ಶಿವಮೊಗ್ಗ - ಬುರ್ಖಾ ಧರಿಸಿ ಪ್ರೇಯಸಿಯನ್ನು ನೋಡಲು ಬಂದ ಪ್ರೇಮಿಗೆ ಮಕ್ಕಳ ಕಳ್ಳನೆಂದು ಭಾವಿಸಿ ಕಂಬಕ್ಕೆ ಕಟ್ಟಿ ಗೂಸಾ!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ, ಪ್ರೇಯಸಿಯನ್ನು ನೋಡಲು ಬುರ್ಖಾ ಧರಿಸಿ ಬಂದ ಯುವಕನನ್ನು ಮಕ್ಕಳ ಕಳ್ಳನೆಂದು ತಪ್ಪಾಗಿ ಭಾವಿಸಿದ ಸ್ಥಳೀಯರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಪೊಲೀಸರ ವಿಚಾರಣೆಯ ನಂತರ, ಆತ ಪ್ರೇಯಸಿಯನ್ನು ಭೇಟಿಯಾಗಲು ಬಂದಿದ್ದನೆಂಬ ಸತ್ಯಾಂಶ ಬಯಲಾಗಿದೆ.
Read Full Story
06:51 PM (IST) Mar 02

Karnataka Latest News Live:ಕೋಲಾರದ ಕರುಳು ಹಿಂಡುವ ದುರಂತ - ತಾಯಿಯ ಕಠಿಣ ನಿರ್ಧಾರಕ್ಕೆ ಇಬ್ಬರು ಕಂದಮ್ಮಗಳ ಸಾವು!

ಕೋಲಾರದ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ, ಕೌಟುಂಬಿಕ ಕಲಹದಿಂದ ನೊಂದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಕುಂಟೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಸ್ಥಳೀಯರು ತಾಯಿಯನ್ನು ರಕ್ಷಿಸಿದ್ದಾರೆ.

Read Full Story
06:02 PM (IST) Mar 02

Karnataka Latest News Live:ಕರಿದ ಎಣ್ಣೆ ಮರಳಿ ಬಳಸದಂತೆ ಏಮ್ಸ್ ವೈದ್ಯೆ ಎಚ್ಚರಿಕೆ, ಫಾಸ್ಟ್ ಫುಡ್ ಮಳಿಗೆಗಳಲ್ಲಿನ ಪರೀಕ್ಷೆಯ ಶಾಕಿಂಗ್ ಸತ್ಯ!

ಅಡುಗೆ ಎಣ್ಣೆಯನ್ನು ಪದೇಪದೇ ಬಿಸಿ ಮಾಡಿ ಮರುಬಳಕೆ ಮಾಡುವುದು ಸಾಮಾನ್ಯವಾದರೂ, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಅಭ್ಯಾಸವು ಕ್ಯಾನ್ಸರ್ ಮತ್ತು ಹೃದಯ ರಕ್ತನಾಳದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ, ಎಣ್ಣೆಯನ್ನು ಮತ್ತೆ ಬಿಸಿ ಮಾಡಿದಾಗ ರಾಸಾಯನಿಕಗಳು ಬಿಡುಗಡೆಯಾಗುತ್ತವೆ.

Read Full Story
05:43 PM (IST) Mar 02

Karnataka Latest News Live:Karna Serial Twist - ಡಾ.ನಿಧಿ ಈಗ ಲಾಯರ್​ ನಿಧಿ! Law ಪದವಿ ಬಗ್ಗೆ ಬಿಸಿಬಿಸಿ ಚರ್ಚೆ- ಏನ್ ಹೇಳತ್ತೆ ಕಾನೂನು?

ಕರ್ಣ ಸೀರಿಯಲ್​ನಲ್ಲಿ, ರಮೇಶ್‌ನ ಸಂಚಿನಿಂದ ಕರ್ಣ ಜೈಲಿನಲ್ಲಿದ್ದಾನೆ. ಸರಿಯಾದ ಸಮಯಕ್ಕೆ ಲಾಯರ್ ಕೈಕೊಟ್ಟಾಗ, ಲಾಯರ್ ಆಗಿ ಕೋರ್ಟ್‌ಗೆ ಪ್ರವೇಶಿಸಿ ಎಲ್ಲರಿಗೂ ಆಘಾತ ನೀಡಿದ್ದಾಳೆ. ಕಾನೂನು ಪದವಿ ಇಲ್ಲದೆ ವಾದಿಸಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಈ ಲೇಖನ ಚರ್ಚಿಸುತ್ತದೆ.

Read Full Story
05:34 PM (IST) Mar 02

Karnataka Latest News Live:ನಿಜವಾಯ್ತು ಬ್ರಹ್ಮಾಂಡ ಗುರೂಜಿ ಭವಿಷ್ಯ - ಇರಾನ್-ಇಸ್ರೇಲ್ ಯುದ್ಧದ ಮೂಲಕ ಜಗತ್ತಿಗೆ ಶುರುವಾಯ್ತು ಗ್ರಹಣ ಗಂಡಾಂತರ!

2026ರ ಸೂರ್ಯಗ್ರಹಣದ ಬಗ್ಗೆ ಬ್ರಹ್ಮಾಂಡ ಗುರೂಜಿ ನುಡಿದಿದ್ದ ಭವಿಷ್ಯವಾಣಿಗಳು ಸತ್ಯವಾಗುತ್ತಿವೆ. ಮಧ್ಯಪ್ರಾಚ್ಯದಲ್ಲಿ ಯುದ್ಧ, ಜಾಗತಿಕ ಆರ್ಥಿಕ ಕುಸಿತ, ಮತ್ತು ವಿಮಾನ ಹಾಗೂ ಹಡಗು ಪ್ರಯಾಣದಲ್ಲಿನ ಅಪಾಯಗಳ ಬಗ್ಗೆ ಅವರು ನೀಡಿದ್ದ ಎಚ್ಚರಿಕೆಗಳು ಇದೀಗ ನಿಜವಾಗುತ್ತಿವೆ ಎಂದು ಈ ಲೇಖನವು ವಿವರಿಸುತ್ತದೆ.
Read Full Story
05:12 PM (IST) Mar 02

Karnataka Latest News Live:ನಟಿ ಅಮೂಲ್ಯ ಪತಿ ಜಗದೀಶ್‌ ಆರ್‌ ಚಂದ್ರಗೆ ಉತ್ತಮ ಹುದ್ದೆ ಕೊಟ್ಟ BJP ಪಕ್ಷ! ಏನದು?

Actress Amulya Husband: ನಟಿ ಅಮೂಲ್ಯ ಪತಿ ಜಗದೀಶ್‌ ಆರ್‌ ಚಂದ್ರ ಅವರು ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಅವರಿಗೆ ಬಿಜೆಪಿ ಪಕ್ಷವು ಒಳ್ಳೆಯ ಹುದ್ದೆಯನ್ನು ನೀಡಿದೆ. ಅನೇಕರು ಜಗದೀಶ್‌ಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

Read Full Story
04:45 PM (IST) Mar 02

Karnataka Latest News Live:ಡಿವೋರ್ಸ್‌ ಕೇಳಿರೋ ದಳಪತಿ ವಿಜಯ್‌ ಹೆಂಡ್ತಿ ಸಂಗೀತಾ ಸಾಮಾನ್ಯದವರಲ್ಲ! ಕೂತು ತಿನ್ನುವಷ್ಟಿದೆ ಅಪ್ಪನ ಆಸ್ತಿ!

ನಟ ದಳಪತಿ ವಿಜಯ್‌ ಪತ್ನಿ ಸಂಗೀತಾ ಅವರು ಡಿವೋರ್ಸ್‌ಗಾಗಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಅಂದಹಾಗೆ ಸಂಗೀತಾ ಅವರು ಮೊದಲು ವಿಜಯ್‌ ಅಭಿಮಾನಿಯಾಗಿ, ಪ್ರೀತಿಸಿ ಮದುವೆಯಾಗಿದ್ದರು. ವಿಜಯ್‌ ಅವರಿಗೆ ಬೇರೆ ನಟಿಯ ಜೊತೆ ಅನೈತಿಕ ಸಂಬಂಧವಿದೆ ಎಂದು ಸಂಗೀತಾ ಹೇಳಿದ್ದರು. 

Read Full Story
04:30 PM (IST) Mar 02

Karnataka Latest News Live:ಮಂಗಳೂರು - ಉಳ್ಳಾಲ ಮಸೀದಿ ಎದುರು ಬಾಂಬ್ ಸ್ಪೋಟಿಸುವ ಬೆದರಿಕೆ, ಗಂಭೀರವಾಗಿ ಪರಿಗಣಿಸಿದ ಪೊಲೀಸರು

ಉಳ್ಳಾಲ ಮಸೀದಿ ಎದುರು ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪೋಸ್ಟ್ ವೈರಲ್ ಆಗಿದ್ದು, ಇದು ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.
Read Full Story
04:13 PM (IST) Mar 02

Karnataka Latest News Live:Photo - ಇದು 'ರಾಧಾ ರಮಣ' ನಟಿ ಕಾವ್ಯಾ ಗೌಡರ 150 ಕೋಟಿ ಮನೆಯೇ? ಎಂಥ ಅದ್ದೂರಿ ಬಂಗಲೆ ಕಣ್ರೀ..!

Actress Kavya Gowda Home: ಹದಿನೈದು ದಿನಗಳ ಹಿಂದೆ ರಾಧಾ ರಮಣ ಧಾರಾವಾಹಿ ನಟಿ ಕಾವ್ಯಾ ಗೌಡ ಅವರ 150 ಕೋಟಿ ರೂಪಾಯಿ ಮನೆ ದೊಡ್ಡ ಚರ್ಚೆಯಾಗಿತ್ತು. ಈಗ ಕಾವ್ಯಾ ಗೌಡ ಅವರು ಪತಿ ಸೋಮಶೇಖರ್‌ ಜೊತೆ ಫೋಟೋಶೂಟ್‌ ಮಾಡಿಸಿರೋದು ಸಿಕ್ಕಾಪಟ್ಟೆ ಮೆಚ್ಚುಗೆ ಗಳಿಸುತ್ತಿದೆ.

Read Full Story
03:34 PM (IST) Mar 02

Karnataka Latest News Live:Bhagyalakshmi Serial - ಭಾಗ್ಯ ಸಾವಿನೊಂದಿಗೆ ಧಾರಾವಾಹಿ ಮುಗಿಸ್ತಾರಾ? ಜ್ಯೋತಿಷಿ ಹೇಳಿದಂತೆ ನಡೀತಿದೆ!

Bhagyalakshmi Serial Episode Update: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಭಾಗ್ಯ ಯಾರ ಜೊತೆ ಬದುಕುತ್ತಾಳೆ ಎನ್ನೋದು ದೊಡ್ಡ ಪ್ರಶ್ನೆ ಆಗಿದೆ. ಹೀಗಿರುವಾಗ ಅವಳ ಪ್ರಾಣಕ್ಕೆ ಅಪಾಯ ಬಂದಿದೆ. ಹೌದು, ತಾಂಡವ್‌ ತನ್ನ ಜೊತೆಗಿಲ್ಲ ಎಂದು ಶ್ರೇಷ್ಠ ಅವಳನ್ನು ಕೊಲ್ಲಲು ನೋಡುತ್ತಿದ್ದಾಳೆ.

Read Full Story
03:27 PM (IST) Mar 02

Karnataka Latest News Live:ಅಪಾಯಕಾರಿ ಬೆಂಗಳೂರು ವೀಲಿಂಗ್, ಮಾನ್ಯತಾ ಟೆಕ್ ಪಾರ್ಕ್ ಬಳಿ ಬುರ್ಕಾ ಧರಿಸಿದ ಯುವ ಜೋಡಿಯ ಅಪಾಯಕಾರಿ ಹುಚ್ಚಾಟ!

ಬೆಂಗಳೂರಿನಲ್ಲಿ ವೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಯುವಕನೊಬ್ಬ ಯುವತಿಯೊಂದಿಗೆ ಅತ್ಯಂತ ಅಪಾಯಕಾರಿ ಬೈಕ್ ಸ್ಟಂಟ್ ಮಾಡಿದ್ದಾನೆ. ಹೆಲ್ಮೆಟ್ ಇಲ್ಲದೆ, ಸಂಚಾರ ನಿಯಮಗಳನ್ನು ಉಲ್ಲಂಘಿಸಿ ನಡೆಸಿದ ಈ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read Full Story
03:07 PM (IST) Mar 02

Karnataka Latest News Live:Amruthadhaare ಮಲ್ಲಿ-ಸುನಿ ಎಂಗೇಜ್​ಮೆಂಟ್​ ಶೂಟಿಂಗ್​ನಲ್ಲಿ ಗಾಢ ನಿದ್ದೆಯಲ್ಲಿ ಅಪ್ಪಿ - ಏನೆಲ್ಲಾ ಆಯ್ತು ನೋಡಿ

ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮತ್ತು ಸುನಿಲ್ ನಿಶ್ಚಿತಾರ್ಥ ನಡೆದಿದೆ. ಆದರೆ, ಜೈದೇವನ ಕುತಂತ್ರದಿಂದ ಈ ಮದುವೆ ನಡೆಯುತ್ತಿದ್ದು, ಈ ಸತ್ಯ ಸುನಿಲ್‌ಗೆ ತಿಳಿದಿದೆ. ಇದರ ನಡುವೆ, ನಟಿ ಅನ್ವಿತಾ ಸಾಗರ್ ನಿಶ್ಚಿತಾರ್ಥದ ಶೂಟಿಂಗ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
Read Full Story
03:04 PM (IST) Mar 02

Karnataka Latest News Live:ತಳ್ಳು ತಳ್ಳು ಐಸ್ಸಾ.. ಇನ್ನು ಸ್ವಲ್ಪ ತಳ್ಳಣ್ಣ; ರೈಲ್ವೆ ಹಳಿ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್

ಬೆಂಗಳೂರು ಹೊರವಲಯದ ಆನೇಕಲ್-ಅತ್ತಿಬೆಲೆ ರಸ್ತೆಯ ರೈಲ್ವೆ ಹಳಿ ಮೇಲೆ ಬಿಎಂಟಿಸಿ ಬಸ್ ಕೆಟ್ಟು ನಿಂತು ಆತಂಕ ಸೃಷ್ಟಿಸಿತ್ತು. ಸುಮಾರು 30 ನಿಮಿಷಗಳ ಕಾಲ ರೈಲು ಮತ್ತು ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ನಂತರ ಸ್ಥಳೀಯರು ಬಸ್ ತಳ್ಳಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Read Full Story
02:58 PM (IST) Mar 02

Karnataka Latest News Live:ಮದ್ದೂರು ನಗರಸಭೆಗೆ ಗ್ರಾಮಗಳ ವಿಲೀನಕ್ಕೆ ಹೆಚ್.ಡಿ.ಕುಮಾರಸ್ವಾಮಿ ವಿರೋಧ - 4 ಗ್ರಾ.ಪಂ. ಹೊರಗಿಡಲು ಸರ್ಕಾರಕ್ಕ ಪತ್ರ!

ಮದ್ದೂರು ತಾಲ್ಲೂಕಿನ 4 ಗ್ರಾಮ ಪಂಚಾಯಿತಿಗಳನ್ನು ನಗರಸಭೆಗೆ ಸೇರಿಸುವ ಸರ್ಕಾರದ ನಿರ್ಧಾರವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರೋಧಿಸಿದ್ದಾರೆ. ಈ 'ಜನವಿರೋಧಿ' ಕ್ರಮ ಹಿಂಪಡೆಯುವಂತೆ ಸಿದ್ದರಾಮಯ್ಯನವರಿಗೆ ಪತ್ರ ಬರೆದು, 70 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ

Read Full Story