ಸರ್ಕಾರಿ ನೌಕರಿ ಕನಸು ಕಂಡವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಿಗೆ 2,500 ಕಂಪ್ಯೂಟರ್ ಸೈನ್ಸ್ (ಗಣಕ ವಿಜ್ಞಾನ) ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಿದ್ದ ಸರ್ಕಾರವು, ಈ ಹುದ್ದೆಗಳ ನೇಮಕಾತಿಗೆ ನಿಯಮಾವಳಿಗೆ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಹೊರಡಿಸಿದೆ.
- Home
- News
- State
- Karnataka News Live: 2500 Govt Jobs - ಸರ್ಕಾರಿ ನೌಕರಿ ಕನಸು ಕಂಡವರಿಗೆ ಬಂಪರ್ ಸುದ್ದಿ - ಬರೋಬ್ಬರಿ 2500 ಹುದ್ದೆಗಳಿಗೆ ನೇಮಕಾತಿ ಬಿಗ್ ಅಪ್ಡೇಟ್!
Karnataka News Live: 2500 Govt Jobs - ಸರ್ಕಾರಿ ನೌಕರಿ ಕನಸು ಕಂಡವರಿಗೆ ಬಂಪರ್ ಸುದ್ದಿ - ಬರೋಬ್ಬರಿ 2500 ಹುದ್ದೆಗಳಿಗೆ ನೇಮಕಾತಿ ಬಿಗ್ ಅಪ್ಡೇಟ್!

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜಾಮೀನು ನೀಡಲು ಮೂರನೇ ಬಾರಿಗೆ ಇಲ್ಲಿಯ ಹೈಕೋರ್ಟ್ ಪೀಠವು ನಿರಾಕರಿಸಿದೆ. ಆರೋಪಿ ಫಯಾಜ್ ಪರವಾಗಿ ವಾದ ಮಂಡಿಸಿದ ನ್ಯಾಯವಾದಿ ಎಂ.ಹತ್ತರಕಿ, ಜಾಮೀನು ನೀಡುವಂತೆ ನ್ಯಾಯಪೀಠದ ಎದುರು ಮನವಿ ಮಾಡಿದರು.
ನೇಹಾ ಪರವಾಗಿ ವಾದಿಸಿದ ವಕೀಲ ರಾಘವೇಂದ್ರ ಮುತ್ತಗೀಕರ, ಆರೋಪಿ ಮಾಡಿರುವ ಕೊಲೆಯು ಗಂಭೀರ ಸ್ವರೂಪದ್ದಾಗಿದ್ದು, ಆರೋಪಿಗೆ ಶಿಕ್ಷೆ ಪ್ರಕಟವಾಗುವ ವರೆಗೂ ಜಾಮೀನು ನೀಡದಿರುವಂತೆ ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಏಕಸದಸ್ಯ ಪೀಠದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
Karnataka News Live 1 July 20262500 Govt Jobs - ಸರ್ಕಾರಿ ನೌಕರಿ ಕನಸು ಕಂಡವರಿಗೆ ಬಂಪರ್ ಸುದ್ದಿ - ಬರೋಬ್ಬರಿ 2500 ಹುದ್ದೆಗಳಿಗೆ ನೇಮಕಾತಿ ಬಿಗ್ ಅಪ್ಡೇಟ್!
Karnataka News Live 1 July 2026ಕೊನೆಗೂ ಕುಮಟಾದ ಯಡ್ತಾರೆ-ಕಬ್ಬರ್ಗಿ ಗ್ರಾಮಕ್ಕೆ ಬಂತು ಬಸ್; ಅಧಿಕೃತವಾಗಿ ಪ್ರತಿನಿತ್ಯ ಸಂಚಾರ
Karnataka News Live 1 July 2026Illegal Bangladeshi in Bengaluru - ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 12 ಮಂದಿ ಬಾಂಗ್ಲಾದೇಶಿಗರ ಬಂಧನ
ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿ, ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದ 12 ಬಾಂಗ್ಲಾದೇಶ ಮೂಲದ ಪ್ರಜೆಗಳನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾನವ ಕಳ್ಳ ಸಾಗಣೆ ಮೂಲಕ ಬಾಂಗ್ಲಾದೇಶದಿಂದ ಮಹಿಳೆಯರನ್ನು ಕರೆಯಿಸಿ ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪಿಗಳು.
Karnataka News Live 1 July 2026ತಾಂಡಾಗಳಲ್ಲಿ ಕ್ರಾಂತಿಕಾರಿ ಹೆಜ್ಜೆ; ನಿಯಮ ಉಲ್ಲಂಘಿಸಿದವರಿಗೆ 1 ಲಕ್ಷ ರೂಪಾಯಿ ದಂಡ
ಲಂಬಾಣಿ ತಾಂಡಾಗಳಲ್ಲಿ, ಬಂಜಾರಾ ಕ್ರಾಂತಿದಳ ಮತ್ತು ಸೇವಾಲಾಲ ಜಯಂತಿ ಸಮಿತಿಗಳು ವರದಕ್ಷಿಣೆ ಪಿಡುಗಿನ ವಿರುದ್ಧ ಹೊಸ ಕ್ರಾಂತಿಯನ್ನು ಆರಂಭಿಸಿವೆ. ವರದಕ್ಷಿಣೆ ಕೊಡು-ಕೊಳ್ಳುವಿಕೆಯನ್ನು ನಿಷೇಧಿಸಿ, ನಿಯಮ ಉಲ್ಲಂಘಿಸಿದವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸುವ ಐತಿಹಾಸಿಕ ನಿರ್ಧಾರ ಕೈಗೊಳ್ಳುವ ಮೂಲಕ ಸರಳ ವಿವಾಹಗಳಿಗೆ ಆದ್ಯತೆ ನೀಡುತ್ತಿವೆ.