06:23 AM (IST) Mar 02

Karnataka News Live 1 March 2026ಕಿಡ್ನಿ ರೋಗಿಗಳೇ, ಈ 5 ಸರಳ ಆಹಾರಗಳನ್ನು ತಪ್ಪದೇ ಬಳಸಿ!

ಕಿಡ್ನಿಗಳ ಆರೋಗ್ಯವನ್ನು ಸುಧಾರಿಸಲು ಆಹಾರ ಕ್ರಮವು ಪ್ರಮುಖ ಪಾತ್ರ ವಹಿಸುತ್ತದೆ. ಯಾಕಂದ್ರೆ, ದೇಹದಲ್ಲಿನ ತ್ಯಾಜ್ಯಗಳನ್ನು ಫಿಲ್ಟರ್ ಮಾಡಲು, ಎಲೆಕ್ಟ್ರೋಲೈಟ್‌ಗಳನ್ನು ಸಮತೋಲನಗೊಳಿಸಲು ಮತ್ತು ದ್ರವದ ಮಟ್ಟವನ್ನು ಕಾಪಾಡಿಕೊಳ್ಳಲು ಕಿಡ್ನಿಗಳು ಮುಖ್ಯವಾಗಿವೆ.
Read Full Story
10:17 PM (IST) Mar 01

Karnataka News Live 1 March 2026ಹೊಸ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಆರಂಭ, ದೆಹಲಿಗೆ ಬನ್ನಿ ಎಂದ ಹೆಚ್‌ಡಿಕೆ, ರೈತರಿಗೆ ಸಿಗುವುದೇ ನ್ಯಾಯ?

ಆಲೂರಿನಲ್ಲಿ ಹೊಸ ರೈಲ್ವೆ ಮಾರ್ಗಕ್ಕೆ ಭೂಮಿ ಕಳೆದುಕೊಳ್ಳುವ ರೈತರು ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಮನವಿ ಸಲ್ಲಿಸಿದ್ದಾರೆ. ರೈಲ್ವೆ ಸಚಿವರೊಂದಿಗೆ ಸಮಾಲೋಚಿಸಿ ಸೂಕ್ತ ಬೆಲೆ ಕೊಡಿಸುವ ಭರವಸೆ ನೀಡಿದ್ದಾರೆ.

Read Full Story
10:15 PM (IST) Mar 01

Karnataka News Live 1 March 2026ಚಿಕ್ಕಬಳ್ಳಾಪುರ ಅಲೀಪುರದಲ್ಲಿ ಖಮೇನಿ ಹತ್ಯೆಗೆ ಬಂದ್, ಕಣ್ಣೀರಿಟ್ಟ ಜನರಿಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ

ಚಿಕ್ಕಬಲ್ಳಾಪುರದ ಅಲೀಪುರದಲ್ಲಿ ಖಮೇನಿ ಹತ್ಯೆಗೆ ಬಂದ್, ಕಣ್ಣೀರಿಟ್ಟ ಜನರಿಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ, ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಅಲೀಪುರ ಮಿನಿ ಇರಾನ್ ಎಂದೇ ಗುರುತಿಸಿಕೊಂಡಿದೆ.

Read Full Story
09:58 PM (IST) Mar 01

Karnataka News Live 1 March 2026ಕೈಗಾ ಅಣುಸ್ಥಾವರ - ಅಣು ವಿದ್ಯುತ್ ಉತ್ಪಾದನೆಯಲ್ಲಿ ಸಂಪೂರ್ಣ ಆತ್ಮ ನಿರ್ಭರತೆ - ಡಾ.ಅಜಿತ್ ಕುಮಾರ್ ಮೊಹಂತಿ

ಕಾರವಾರದ ಕೈಗಾದಲ್ಲಿ 5 ಮತ್ತು 6ನೇ ಅಣುವಿದ್ಯುತ್ ಘಟಕಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಇದು ದೇಶದ ಅಣುಶಕ್ತಿ ತಂತ್ರಜ್ಞಾನದಲ್ಲಿನ ಸಂಪೂರ್ಣ ಆತ್ಮನಿರ್ಭರತೆಯನ್ನು ಸಾರುತ್ತದೆ. ಈ ಹೊಸ ಘಟಕಗಳು ತಲಾ 700 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಿದೆ.

Read Full Story
09:19 PM (IST) Mar 01

Karnataka News Live 1 March 2026ಬೆಂಗಳೂರು–ಅಶೋಕಪುರಂ ಮೆಮು ರೈಲು ವಿಳಂಬ, ಬಿಡದಿಯಲ್ಲಿ ಪ್ರಯಾಣಿಕರ ಪ್ರತಿಭಟನೆ, ಲಘು ಲಾಠಿ ಚಾರ್ಜ್!

ಬೆಂಗಳೂರು–ಅಶೋಕಪುರಂ ಮೆಮು ರೈಲು ತಾಂತ್ರಿಕ ದೋಷದಿಂದ ಸುಮಾರು ಒಂದೂವರೆ ಗಂಟೆ ವಿಳಂಬವಾದ ಹಿನ್ನೆಲೆಯಲ್ಲಿ, ಬಿಡದಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ತೀವ್ರ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ.

Read Full Story
08:12 PM (IST) Mar 01

Karnataka News Live 1 March 2026ಯುದ್ಧಭೀತಿ ಹಿನ್ನೆಲೆ - ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ಕೂಗು! ಸಹಾಯವಾಣಿ ತೆರೆದ ಜಿಲ್ಲಾಡಳಿತ

ಇಸ್ರೇಲ್-ಇರಾನ್ ಯುದ್ಧ ಭೀತಿಯಿಂದಾಗಿ ದುಬೈ ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿದ್ದು, ನೂರಾರು ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಪ್ರವಾಸಿಗರು, ಉದ್ಯೋಗಿಗಳು ಮತ್ತು ವಯೋವೃದ್ಧರು ತೀವ್ರ ಸಂಕಷ್ಟದಲ್ಲಿದ್ದು, ಅವರ ನೆರವಿಗಾಗಿ ಜಿಲ್ಲಾಡಳಿತಗಳು ಸಹಾಯವಾಣಿಗಳನ್ನು ಸ್ಥಾಪಿಸಿವೆ.

Read Full Story
07:42 PM (IST) Mar 01

Karnataka News Live 1 March 2026Dog Satish ಮಗನಿಗೆ ಡಿಂಪಲ್​ ಕ್ವೀನ್​ ರಚಿತಾ ರಾಮ್​ ನಾಯಕಿ? 1 ಕೋಟಿಗೆ ಆಫರ್​; ಏನಿದು ಬಿಸಿಬಿಸಿ ಸುದ್ದಿ?

ಬಿಗ್‌ಬಾಸ್ ಖ್ಯಾತಿಯ ಡಾಗ್ ಸತೀಶ್ ಅವರ ಮಗ ಹರ್ಷ್ ಅವರನ್ನು ನಾಯಕನನ್ನಾಗಿ ಮಾಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಹರ್ಷ್‌ಗೆ ನಾಯಕಿಯಾಗಿ ನಟಿ ರಚಿತಾ ರಾಮ್‌ಗೆ ಒಂದು ಕೋಟಿ ರೂಪಾಯಿ ಆಫರ್ ನೀಡಲಾಗಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Read Full Story
07:06 PM (IST) Mar 01

Karnataka News Live 1 March 2026ರಾಮನಗರದಲ್ಲಿ ಮಾರ್ಚ್‌5 ರಂದು ಉದ್ಯೋಗ ಮೇಳ, ಬರೋಬ್ಬರಿ 171 ಕಂಪೆನಿಗಳು ಭಾಗಿ, ನೀವು ಸಿದ್ಧರಿದ್ದೀರಾ?

ರಾಮನಗರದಲ್ಲಿ ಮಾರ್ಚ್ 5 ರಂದು ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳದಲ್ಲಿ 171ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದೆ.

Read Full Story
05:48 PM (IST) Mar 01

Karnataka News Live 1 March 2026ಮನೆಯಲ್ಲೇ ಕುಳಿತು ಆನ್​ಲೈನ್​ನಲ್ಲಿ ವಿವಾಹ ನೋಂದಣಿ ಮಾಡಿಕೊಳ್ಳಿ - ಹಂತ ಹಂತದ ಮಾಹಿತಿ ಇಲ್ಲಿದೆ

ವಿವಾಹ ನೋಂದಣಿ ಈಗ ಕಡ್ಡಾಯವಾಗಿದ್ದು, ಸರ್ಕಾರಿ ಸೌಲಭ್ಯಗಳಿಗೆ ಇದು ಅವಶ್ಯಕ. ಕರ್ನಾಟಕ ಸರ್ಕಾರವು ಕಾವೇರಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಲು ಅವಕಾಶ ನೀಡಿದೆ. ಮನೆಯಲ್ಲೇ ಕುಳಿತು ವಿವಾಹ ನೋಂದಣಿ ಮಾಡುವ ಹಂತ-ಹಂತದ ಮಾಹಿತಿ ಮತ್ತು ಬೇಕಾದ ದಾಖಲೆಗಳ ವಿವರ ಇಲ್ಲಿದೆ.
Read Full Story
05:41 PM (IST) Mar 01

Karnataka News Live 1 March 2026ಬೀದರ್ - ಶೀಲ ಶಂಕಿಸಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ, ರಾತ್ರಿ ಇಡೀ ಜಗಳವಾಡಿ ಬೆಳಗ್ಗೆ ಕಲ್ಲು ಎತ್ತಿ ಹಾಕಿ ಕೊಂದ!

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ, ಅನೈತಿಕ ಸಂಬಂಧದ ಶಂಕೆಯಿಂದ ಪತಿ ಕಿಶನ್ ತನ್ನ ಪತ್ನಿ ಅಶ್ವಿನಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ರಾತ್ರಿಯಿಡೀ ಜಗಳವಾಡಿದ ನಂತರ ನಸುಕಿನ ಜಾವ ಈ ಕೃತ್ಯ ಎಸಗಿದ್ದು, ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ.
Read Full Story
04:46 PM (IST) Mar 01

Karnataka News Live 1 March 2026ಎಂಗೇಜ್​ಮೆಂಟ್​ ಬೆನ್ನಲ್ಲೇ ಭಾರ್ಗವಿ- ಜೈದೇವ್​ ಹೋಟೆಲ್​ ಸುತ್ತಾಟ - ರಾಧಾ-ರಾಣವ್​ ಫೋಟೋ ವೈರಲ್

'ಅಮೃತಧಾರೆ' ಸೀರಿಯಲ್‌ನಲ್ಲಿ ಮಲ್ಲಿ ಮತ್ತು ಜೈದೇವ್ ಪಾತ್ರಧಾರಿಗಳಾಗಿದ್ದ ರಾಧಾ ಭಗವತಿ ಮತ್ತು ರಾಣವ್ ಗೌಡ ಇದೀಗ ನಿಜ ಜೀವನದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರಿಯಲ್ ಲೈಫ್‌ನಲ್ಲಿ ಒಂದಾಗಿದ್ದು, ಅವರ ನಿಶ್ಚಿತಾರ್ಥದ ನಂತರದ ಕ್ಷಣಗಳು ಮತ್ತು ವೃತ್ತಿಜೀವನದ ಬಗ್ಗೆ ಈ ಲೇಖನ ವಿವರಿಸುತ್ತದೆ.

Read Full Story
04:36 PM (IST) Mar 01

Karnataka News Live 1 March 2026ಹುಸಿಮುನಿಸು, ಪ್ರೀತಿ, ಕೋಳಿ ಜಗಳ; ಮದುವೆಯಾದ್ಮೇಲೆ ವಿಡಿಯೋ ಶೇರ್‌ ಮಾಡಿದ ನಟಿ ರಶ್ಮಿಕಾ ಮಂದಣ್ಣ

Actress Rashmika Mandanna: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಮದುವೆಯಾಗಿ, ಖುಷಿ ಅಲೆಯಲ್ಲಿ ತೇಲುತ್ತಿದ್ದಾರೆ. ಕುಟುಂಬಸ್ಥರ ಸಾಕ್ಷಿಯಾಗಿ, ಸ್ನೇಹಿತರು, ಆಪ್ತರ ಮುಂದೆ ಉದಯಪುರದಲ್ಲಿ ಗ್ರ್ಯಾಂಡ್‌ ಆಗಿ ಮದುವೆಯಾದ ಜೋಡಿ ತಿರುಮಲ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.

Read Full Story
04:20 PM (IST) Mar 01

Karnataka News Live 1 March 2026ಇವ್ರ ಎದುರು ಡೈಲಾಗೇ ಮರೆತುಹೋಗತ್ತೆ ಎಂದ ಸುನಿ - ಅಕ್ಕ-ತಮ್ಮ, ಆಂಟಿ ಲವರ್​ ಕಮೆಂಟ್ಸ್​ಗೆ ಹೇಳಿದ್ದೇನು?

ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮತ್ತು ಸುನಿ ನಿಶ್ಚಿತಾರ್ಥ ನಡೆದಿದೆ. ಆದರೆ ಮಲ್ಲಿ, ಜೈದೇವ್ ಪತ್ನಿ ಎಂಬ ಸತ್ಯ ಸುನಿಗೆ ತಿಳಿದು ಆಘಾತವಾಗಿದೆ. ಇದರ ನಡುವೆ, ತಮ್ಮಿಬ್ಬರ ವಯಸ್ಸಿನ ಅಂತರದ ಬಗ್ಗೆ ಟ್ರೋಲ್ ಮಾಡುವವರಿಗೆ ನಟರಾದ ಯಶು ಮತ್ತು ಅನ್ವಿತಾ ಸಾಗರ್ ಪ್ರತಿಕ್ರಿಯಿಸಿದ್ದಾರೆ.
Read Full Story
04:10 PM (IST) Mar 01

Karnataka News Live 1 March 2026‌ಇರಾನ್-ಇಸ್ರೇಲ್ ಯುದ್ಧದ ಭೀತಿ ಮಧ್ಯೆ ದುಬೈನಲ್ಲಿದ್ದೇ ಪರಿಸ್ಥಿತಿ ವಿವರಿಸಿದ ನಟಿ ದೀಪಿಕಾ ದಾಸ್!

ಇರಾನ್‌ ಇಸ್ರೇಲ್‌ ಯುದ್ಧದ ನಡುವೆ ಕೆಲವರು ದುಬೈ, ಕತಾರ್‌ನಲ್ಲಿದ್ದಾರೆ. ಅಲ್ಲಿಂದ ಭಾರತಕ್ಕೆ ಬರಲು ಕೆಲ ಕನ್ನಡಿಗರು ಒದ್ದಾಡುತ್ತಿದ್ದಾರೆ. ಹಾಗೆ ದೀಪಿಕಾ ದಾಸ್‌ ಕೂಡ ದುಬೈನಲ್ಲಿದ್ದಾರೆ. ಈಗ ಅಲ್ಲಿನ ಪರಿಸ್ಥಿತಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

Read Full Story
03:50 PM (IST) Mar 01

Karnataka News Live 1 March 2026ಹಾವೇರಿ - ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ, ದೇವರ ದರ್ಶನ ಪಡೆದ ನವಜೋಡಿ ಮನೆ ಸೇರಲೇ ಇಲ್ಲ!

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು, ಇತ್ತೀಚೆಗೆ ವಿವಾಹವಾದ ನವ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Read Full Story
03:34 PM (IST) Mar 01

Karnataka News Live 1 March 2026ಅಟ್ಯಾಚ್‌ಮೆಂಟ್‌ನಲ್ಲಿ ನಂಬಿಕೆಯಿಲ್ಲ, ಒಬ್ನೇ ಇರೋಕೆ ಖುಷಿ - ರಶ್ಮಿಕಾ ಮದುವೆ ಬಳಿಕ ರಕ್ಷಿತ್‌ ಶೆಟ್ಟಿ Interview

ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ಮದುವೆ ಆದರು. ಈ ಹಿಂದೆ ರಶ್ಮಿಕಾ ಜೊತೆ ಎಂಗೇಜ್‌ ಆಗಿದ್ದ ರಕ್ಷಿತ್‌ ಶೆಟ್ಟಿ ಅವರು ಕೆಲ ಸಮಯದಿಂದ ಎಲ್ಲಿಯೂ ಕಾಣಿಸಿಕೊಂಡಿಲ್ಲ. 3 ವರ್ಷಗಳ ಬಳಿಕ ಕನ್ನಡ ಪ್ರಭ ಪತ್ರಿಕೆಗೆ ಸಂದರ್ಶನ ನೀಡಿದ್ದರು. ರಶ್ಮಿಕಾ ಮದುವೆ ಬಳಿಕ ರಕ್ಷಿತ್‌ ಅವರು ಸಂದರ್ಶನ ನೀಡಿದ್ದಾರೆ.

Read Full Story
02:53 PM (IST) Mar 01

Karnataka News Live 1 March 2026Iran Israel War - ವಿಮಾನವಿಲ್ಲ, ದುಬೈನಲ್ಲಿ ಸಿಲುಕಿಕೊಂಡಿರೋ ಕನ್ನಡ ಸೆಲೆಬ್ರಿಟಿಗಳಿವರು!

Iran Israel Conflict: ಇರಾನ್‌ ಹಾಗೂ ಇಸ್ರೇಲ್‌ ಯುದ್ಧದ ಪರಿಣಾಮ ಬೇರೆ ದೇಶದ ಮೇಲೆ ಕೂಡ ಆಗಿದೆ. ಇನ್ನೊಂದು ಕಡೆ ಪಾಕಿಸ್ತಾನ್-ತಾಲಿಬಾನ್‌ ನಡುವೆ ಕೂಡ ಉದ್ವಿಘ್ನ ವಾತಾವರಣ ಶುರುವಾಗಿದೆ. ಅಂದಹಾಗೆ ಕನ್ನಡದ ಸೆಲೆಬ್ರಿಟಿಗಳು ದುಬೈನಲ್ಲಿದ್ದು, ಅಲ್ಲಿಂದ ಭಾರತಕ್ಕೆ ಬರಲು ಒದ್ದಾಡುತ್ತಿದ್ದಾರೆ. 

Read Full Story
01:03 PM (IST) Mar 01

Karnataka News Live 1 March 2026ಇರಾನ್-ಇಸ್ರೇಲ್‌ ಯುದ್ಧ - ಭಾರತಕ್ಕೆ ರಫ್ತು, ಆಮದು ಆಗುವ ವಸ್ತುಗಳೇನು? ನಮ್ಮಲ್ಲಿ ಬೆಲೆ ಏರಿಕೆ ಆಗುತ್ತಾ?

ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದೆ. ಇದರ ಜೊತೆಗೆ ಬೇರೆ ರಾಷ್ಟ್ರಗಳು ಕೂಡ ಇಲ್ಲಿ ಮೂಗು ತೂರಿಸುತ್ತಿವೆ. ಇದರಿಂದ ಭಾರತದ ಆರ್ಥಿಕತೆ ಮೇಲೆ ಏನು ಪರಿಣಾಮ ಬೀರಲಿದೆ ಇರಾನ್‌ನೊಂದಿಗೆ ಭಾರತದ ಸಂಬಂಧ ಹೇಗಿದೆ? ಏನೆಲ್ಲ ಪದಾರ್ಥ, ವಸ್ತುಗಳು ಆಮದು, ರಫ್ತು ಆಗುತ್ತವೆ?

Read Full Story
12:33 PM (IST) Mar 01

Karnataka News Live 1 March 2026Bigg Boss ಗೆಲುವಿನ ಬಳಿಕ ರಕ್ಷಿತಾ ಶೆಟ್ಟಿ ಕನಸಿನ ಹುಡುಗನ ಆಯ್ಕೆ ಬದಲಾಯ್ತು! ಪುಟ್ಟಿ ಮಾತಿಗೆ ಫ್ಯಾನ್ಸ್​ ಅಚ್ಚರಿ

ಬಿಗ್​ಬಾಸ್​ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ತಮಗೆ ಬೇಕಾದ ಹುಡುಗನ ಬಗ್ಗೆ ಮಾತನಾಡಿದ್ದಾರೆ. Bigg Boss ಮನೆಯಲ್ಲಿ ಇರುವಾಗ ತಮ್ಮ ಕನಸಿನ ಹುಡುಗ ರೈತನಾಗಿರಬೇಕು ಇತ್ಯಾದಿಯಾಗಿ ಹೇಳಿದ್ದರು. ಇದೀಗ ರನ್ನರ್​ ಅಪ್​ ಆಗಿ ಗೆಲುವು ಸಾಧಿಸಿದ ಬಳಿ ಮಂಗಳೂರು ಪುಟ್ಟಿ ಹೇಳಿದ್ದೇನು? 

Read Full Story
12:29 PM (IST) Mar 01

Karnataka News Live 1 March 2026ಪಾಕಿಸ್ತಾನ-ತಾಲಿಬಾನ್ ಸಂಘರ್ಷ; ಆಟ ಶುರು ಮಾಡಿದ ಅಮೆರಿಕದ ಡೊನಾಲ್ಡ್ ಟ್ರಂಪ್; ಭಾರತಕ್ಕೆ ಸಮಸ್ಯೆ?

Pakistan Taliban Conflict; ಅಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನದ ಸ್ವರಕ್ಷಣೆ ಹಕ್ಕನ್ನು ಅಮೆರಿಕ ಬೆಂಬಲಿಸಿದೆ. ಯುರೋಪಿಯನ್ ಯೂನಿಯನ್ ಸಂಘರ್ಷ ಕಡಿಮೆ ಮಾಡುವಂತೆ ಒತ್ತಾಯಿಸಿದೆ. ಈ ಮಧ್ಯೆ, ಪಾಕ್ ವಿಮಾನವನ್ನು ಹೊಡೆದುರುಳಿಸಿದ್ದೇವೆ ಎಂಬ ತಾಲಿಬಾನ್ ವಾದವನ್ನು ಪಾಕಿಸ್ತಾನ ತಳ್ಳಿಹಾಕಿದೆ.

Read Full Story