ಕೊಡಗಿನ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯದಲ್ಲಿದ್ದ ತೇಜಸ್ವಿ (32) ಅವರು ತಮ್ಮ ಹುಟ್ಟೂರಲ್ಲಿ ಕೃಷಿ ಮಾಡುವ ಆಸಕ್ತಿಯಿಂದ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿದ್ದಾರೆ.
Karnataka News Live: ಕೃಷಿಯಲ್ಲಿ ತೊಡಗಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ರಾಜೀನಾಮೆ!

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಲೈಂಗಿ*ಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯ ಮಾಲೀಕ ಸೇರಿ ಮೂವರನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
8 ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಸತಿ ಶಾಲೆಯ ಮುಖ್ಯಸ್ಥ ಧನಂಜಯ್, ಕೃತ್ಯಕ್ಕೆ ನೆರವಾದ ಆರೋಪದ ಮೇಲೆ ಮಹಿಳಾ ವಾರ್ಡನ್ ಮತ್ತು ಕೃತ್ಯದ ಬಗ್ಗೆ ತಿಳಿದಿದ್ದರೂ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಧನಂಜಯ್ ಪತ್ನಿಯನ್ನು ಬಂಧಿಸಲಾಗಿದೆ. ಬಾಲಕಿಯ ಪಾಲಕರು ನೀಡಿದ ದೂರಿನನ್ವಯ ಮೂವರು ಆರೋಪಿಗಳನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Karnataka News Live 1 March 2026ಕೃಷಿಯಲ್ಲಿ ತೊಡಗಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ರಾಜೀನಾಮೆ!
Karnataka News Live 1 March 2026ಇಂದಿನಿಂದ ಮೊಬೈಲಲ್ಲಿ ಸಿಮ್ ಇದ್ರೆ ಮಾತ್ರ ವಾಟ್ಸಪ್ ಬಳಕೆ!
ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆ ತೆರೆಯುವಾಗ ನೋಂದಾಯಿಸಲಾಗುವ ಸಂಖ್ಯೆಯ ಸಿಮ್ಕಾರ್ಡ್ ಮೊಬೈಲ್ನಲ್ಲಿ ಇದ್ದರೆ ಮಾತ್ರ ಇಂದಿನಿಂದ ಆ ಆ್ಯಪ್ಗಳನ್ನು ಬಳಸಲಾಗುವುದು. ಅಂತೆಯೇ ವಾಟ್ಸಪ್ ಮತ್ತು ಟೆಲಿಗ್ರಾಂಗೆ ವೆಬ್ನಲ್ಲಿ ಲಾಗ್ಇನ್ ಆಗಿದ್ದರೆ, ಅವುಗಳು 6 ತಾಸುಗಳ ಬಳಿಕ ತಾವಾಗಿಯೇ ಲಾಗ್ಔಟ್ ಆಗಲಿವೆ.
Karnataka News Live 1 March 2026ಕಾಂಗ್ರೆಸ್ ಈಗ ಮುಸ್ಲಿಂ ಲೀಗ್ - ಮಾವೋವಾದಿ ಆಗಿದೆ - ಮೋದಿ ವಾಗ್ದಾಳಿ
ದೆಹಲಿಯಲ್ಲಿ ನಡೆದ ಜಾಗತಿಕ ಎಐ ಶೃಂಗಸಭೆ ವೇಳೆ ಶರ್ಟ್ ಬಿಚ್ಚಿ ಬನಿಯನ್ನಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ನ ನಡೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದು, ‘ಇಂದು ವಿಪಕ್ಷವು ಮುಸ್ಲಿಂ ಲೀಗ್-ಮಾವೋವಾದಿ ಕಾಂಗ್ರೆಸ್ ಆಗಿದೆ.
Karnataka News Live 1 March 2026‘ವಿಶ್ವದ ಅತಿ ಬ್ಯುಸಿ’ ದುಬೈ ಏರ್ಪೋರ್ಟ್ ಸ್ಥಗಿತ
ಇರಾನ್ ದಾಳಿಯ ಕಾರಣ ವಿಶ್ವದ ಅತಿ ಬ್ಯುಸಿ ಏರ್ಪೋರ್ಟ್ ಎಂದೇ ಪ್ರಖ್ಯಾತಿ ಪಡೆದ ದುಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆಯನ್ನು ನಿಲ್ಲಿಸಿದೆ. ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ
Karnataka News Live 1 March 2026ಬಂಗಾಳ ಅಂತಿಮ ಮತಪಟ್ಟಿ ಬಿಡುಗಡೆ - 63 ಲಕ್ಷ ಹೆಸರು ಡಿಲೀಟ್
ಪ. ಬಂಗಾಳದಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮುಗಿದಿದ್ದು, ಅಂತಿಮ ಮತಪಟ್ಟಿ ಬಿಡುಗಡೆ ಆಗಿದೆ ಹಾಗೂ ಸುಮಾರು 63 ಲಕ್ಷ ಜನರ ಹೆಸರನ್ನು ಕೈಬಿಡಲಾಗಿದೆ. ಇನ್ನೂ 60 ಲಕ್ಷ ಮಂದಿ ಹೆಸರು ಪರಿಶೀಲನೆ ಬಾಕಿ ಇದೆ.
Karnataka News Live 1 March 2026ಸ್ತ್ರೀಯರಿಗೆ ಗರ್ಭಕಂಠ ಕ್ಯಾನ್ಸರ್ ಲಸಿಕೆಗೆ ಮೋದಿ ಚಾಲನೆ
ಇತ್ತೀಚೆಗೆ ಸ್ತ್ರೀಯರಲ್ಲಿ ಹೆಚ್ಚುತ್ತಿರುವ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಸರ್ಕಾರದ ವತಿಯಿಂದ ಉಚಿತವಾಗಿ ನೀಡಲಾಗುತ್ತಿರುವ ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜಸ್ಥಾನದ ಅಜ್ಮೇರ್ನಲ್ಲಿ ಚಾಲನೆ ನೀಡಿದರು.
Karnataka News Live 1 March 2026ಆ್ಯಂಥ್ರೋಪಿಕ್ ಎಐ ತಂತ್ರಜ್ಞಾನಕ್ಕೆ ಟ್ರಂಪ್ ನಿರ್ಬಂಧ
ಆ್ಯಂಥ್ರೋಪಿಕ್ ಟೆಕ್ನಾಲಜಿ ವಿರುದ್ಧ ಡೊನಾಲ್ಡ್ ಟ್ರಂಪ್ ಗರಂ ಆಗಿದ್ದಾರೆ. ಸಂಸ್ಥೆಯ ಎಐ ತಂತ್ರಜ್ಞಾನವನ್ನು ಸೇನೆಗೆ ಮುಕ್ತವಾಗಿ ಬಳಸಲು ಅವಕಾಶ ನೀಡದ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಟ್ರಂಪ್, ಅಮೆರಿಕದ ರಕ್ಷಣಾ ಸಂಸ್ಥೆಗಳು ಆ್ಯಂಥ್ರೋಪಿಕ್ ಟೆಕ್ನಾಲಜಿ ಬಳಸದಂತೆ ಆದೇಶ ಹೊರಡಿಸಿದ್ದಾರೆ.