- Home
- News
- State
- Karnataka News Live: Bengaluru ಕರ್ನಾಟಕ ಗೃಹ ಮಂಡಳಿಯ ಸೂರ್ಯ ನಗರ ಲೇಔಟ್ ಭೂಸ್ವಾಧೀನ ರದ್ದು - ಹೈಕೋರ್ಟ್
LIVE NOW
Karnataka News Live: Bengaluru ಕರ್ನಾಟಕ ಗೃಹ ಮಂಡಳಿಯ ಸೂರ್ಯ ನಗರ ಲೇಔಟ್ ಭೂಸ್ವಾಧೀನ ರದ್ದು - ಹೈಕೋರ್ಟ್

ಸಾರಾಂಶ
ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಅಕ್ರಮದಲ್ಲಿ ನೇರ ಅಥವಾ ಪರೋಕ್ಷವಾಗಿಯಾಗಲಿ ತಮ್ಮ ಪಾತ್ರವಿದೆ ಎಂಬುದು ಸಾಭೀತಾದರೆ ತಾವು ರಾಜಕೀಯ ನಿವೃತ್ತಿ ಪಡೆಯಲು ಸಿದ್ದ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, ಕೆಪಿಎಸ್ಸಿ ಪ್ರಕರಣದಲ್ಲಿ ತಮ್ಮ ಪಾತ್ರವಿದೆ ಎಂದು ಹೇಳುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರು ತಮ್ಮ ಆರೋಪಕ್ಕೆ ಪೂರಕವಾದ ದಾಖಲೆ ಬಹಿರಂಗಪಡಿಸಲಿ, ತಮ್ಮ ಪಾತ್ರ ಸಾಭೀತಾದರೆ ನಮ್ಮ ಕುಟುಂಬವೂ ರಾಜಕೀಯವಾಗಿ ಹಿಂದೆ ಸರಿಯುವ ಪರಿಸ್ಥಿತಿ ಬರಬಹುದು. ಆದರೆ ನಮ್ಮ ವಿರುದ್ಧ ಆರೋಪ ಮಾಡುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರು ತಮ್ಮ ವಿರುದ್ಧದ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯಲು ಸಿದ್ಧರಿದ್ದಾರೆಯೇ ಎಂದು ಪ್ರಶ್ನಿಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
05:37 AM (IST) Sep 01
Karnataka News Live 1 September 2026Bengaluru ಕರ್ನಾಟಕ ಗೃಹ ಮಂಡಳಿಯ ಸೂರ್ಯ ನಗರ ಲೇಔಟ್ ಭೂಸ್ವಾಧೀನ ರದ್ದು - ಹೈಕೋರ್ಟ್
ಪರಿಸರ ಸೂಕ್ಷ್ಮ ವಲಯದ ನಿಯಮ ಉಲ್ಲಂಘಿಸಿ ಕರ್ನಾಟಕ ಗೃಹ ಮಂಡಳಿಯು ಸೂರ್ಯ ನಗರ ಲೇಔಟ್ ಅಭಿವೃದ್ಧಿಪಡಿಸಿದ್ದರಿಂದ, ಹೈಕೋರ್ಟ್ ಭೂಸ್ವಾಧೀನವನ್ನು ರದ್ದುಪಡಿಸಿದೆ. ಈ ಆದೇಶದಿಂದ ಸಾವಿರಾರು ನಿವೇಶನ ಹಂಚಿಕೆದಾರರಲ್ಲಿ ಆತಂಕ ಸೃಷ್ಟಿಯಾಗಿದ್ದು, ಕೆಎಚ್ಬಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.
Read Full Story