11:12 PM (IST) Dec 10

Karnataka News Live 10 December 2025 Bigg Boss ಬಗ್ಗೆ ನಂಬಲಸಾಧ್ಯ, ಯಾರೂ ಹೇಳದ ಗುಟ್ಟುಗಳನ್ನು ರಿವೀಲ್​ ಮಾಡಿದ ಅಭಿಷೇಕ್​ ಶ್ರೀಕಾಂತ್​

ಮಾಜಿ ಸ್ಪರ್ಧಿ ಅಭಿಷೇಕ್ ಶ್ರೀಕಾಂತ್ ಬಿಗ್ ಬಾಸ್ ಮನೆಯೊಳಗಿನ ಹಲವು ಗುಟ್ಟುಗಳನ್ನು ಬಹಿರಂಗಪಡಿಸಿದ್ದಾರೆ. ಸಮಯ ತಿಳಿಯದಂತೆ ಇರುವುದು, 24/7 ಲೈಟಿಂಗ್, ವಿಪರೀತ ಎಸಿ, ಸೀಮಿತ ಆಹಾರ ಮತ್ತು ಕ್ಯಾಮೆರಾದ ಮುಂದೆಯೇ ಸಮಸ್ಯೆ ಹೇಳಿಕೊಳ್ಳುವಂತಹ ನಿಯಮಗಳ ಬಗ್ಗೆ ಅವರು ವಿವರಿಸಿದ್ದಾರೆ.
Read Full Story
11:07 PM (IST) Dec 10

Karnataka News Live 10 December 2025 ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!

2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆಯನ್ನು CAT ರದ್ದುಗೊಳಿಸಿದೆ. ನ್ಯಾಯಾಲಯದ ಆದೇಶದ ಅನ್ವಯ, 8 ತಿಂಗಳ ಕಾನೂನು ಹೋರಾಟದ ನಂತರ ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಅವರಿಗೆ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ಬಡ್ತಿ ನೀಡಿದೆ.

Read Full Story
10:44 PM (IST) Dec 10

Karnataka News Live 10 December 2025 ಶಿರಸಿ ಸಾಯಿಬಾಬಾಗೆ ಬಲು ದುಬಾರಿಯ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ - ಕಾರಣವೂ ರಿವೀಲ್​!

'ಕನಸಿನ ರಾಣಿ' ಮಾಲಾಶ್ರೀ ತಮ್ಮ ಯಶಸ್ಸಿಗೆ ಕಾರಣರಾದ ಶಿರಡಿ ಸಾಯಿಬಾಬಾಗೆ ಕೃತಜ್ಞತಾಪೂರ್ವಕವಾಗಿ ಚಿನ್ನದ ಕಿರೀಟವನ್ನು ಸಮರ್ಪಿಸಿದ್ದಾರೆ. ತಮ್ಮ ಮೊದಲ ಚಿತ್ರ 'ನಂಜುಂಡಿ ಕಲ್ಯಾಣ'ಕ್ಕೂ ಮುನ್ನ ಬಾಬಾರ ಆಶೀರ್ವಾದ ಪಡೆದಿದ್ದ ಅವರು, ಇದೀಗ ಮಗಳು ಆರಾಧನಾ ಜೊತೆಗೂಡಿ ದೇಗುಲಕ್ಕೆ ಭೇಟಿ ನೀಡಿದ್ದಾರೆ.

Read Full Story
10:31 PM (IST) Dec 10

Karnataka News Live 10 December 2025 ರಾಮನಗರ - ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!

ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ, ರಸ್ತೆಗೆ ಅಡ್ಡಬಂದ ಕುರಿಗಳಿಗೆ ಹಾರ್ನ್ ಮಾಡಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಕುರಿಗಳ ಮಾಲೀಕ ಮತ್ತು ಗ್ರಾಮಸ್ಥರು ಸೇರಿ ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಗಾಯಗೊಂಡ ಚಾಲಕ ಮಂಜುನಾಥ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು.

Read Full Story
10:16 PM (IST) Dec 10

Karnataka News Live 10 December 2025 Karna Serial - ಮೋಸಗಾತಿಯ ಬಲೆಗೆ ಬಿದ್ದ ನಿಧಿ Red Light ಏರಿಯಾದಲ್ಲಿ ಸಿಕ್ಕಾಕ್ಕೊಂಡ್ಲು! ಮುಂದೇನು?

ಕರ್ಣ ಸೀರಿಯಲ್‌ನಲ್ಲಿ ಕರ್ಣ-ನಿತ್ಯಾ ಮದುವೆಯಿಂದ ತಪ್ಪಿಸಿಕೊಳ್ಳಲು ಯೋಚಿಸುತ್ತಿದ್ದರೆ, ಇತ್ತ ನಿಧಿ ಹೊಸ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಕುರುಡಿಯೊಬ್ಬಳಿಗೆ ಸಹಾಯ ಮಾಡಲು ಹೋಗಿ, ಆಕೆಯ ಮೋಸದ ಬಲೆಗೆ ಬಿದ್ದು ಅಪಾಯಕಾರಿ ಜಾಗದಲ್ಲಿ ಸಿಕ್ಕಿಹಾಕಿಕೊಂಡಿದ್ದಾಳೆ.
Read Full Story
10:10 PM (IST) Dec 10

Karnataka News Live 10 December 2025 ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದಕ ಸ್ವೀಕರಿಸಿದ ಬಾಲಕನೊಬ್ಬ ಅದನ್ನು ತಕ್ಷಣವೇ ತೆಗೆದುಹಾಕಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ನಕಾರಾತ್ಮಕ ಚರ್ಚೆಗೆ ಕಾರಣವಾದ ಈ ಘಟನೆಯ ಸತ್ಯಾಸತ್ಯತೆ ನಂತರ ಬಹಿರಂಗವಾಗಿದ್ದು, ಆ ಬಾಲಕ ಮಾನಸಿಕವಾಗಿ ಅಸ್ವಸ್ಥನಾಗಿದ್ದ ವಿಶೇಷ ಮಗು ಎನ್ನಲಾಗಿದೆ.

Read Full Story
09:55 PM (IST) Dec 10

Karnataka News Live 10 December 2025 ಗಂಡ-ಹೆಂಡ್ತಿ ಮಲಗಿದ್ರೂ ಬೆಡ್​ರೂಂ ಯಾವಾಗ್ಲೂ ಯಾಕೆ ಓಪನ್​ ಇರ್ಬೇಕು ಗೊತ್ತಾ? ಸೀರಿಯಲ್​ ಪ್ರೇಮಿಗಳು ಉತ್ತರಿಸ್ತಾರೆ ಕೇಳಿ!

ಕನ್ನಡ ಧಾರಾವಾಹಿಗಳು ಸ್ತ್ರೀಪ್ರಧಾನವಾಗಿದ್ದು, ನಾಯಕಿ ಮತ್ತು ವಿಲನ್ ನಡುವಿನ ಸಂಘರ್ಷವೇ ಮುಖ್ಯವಾಗಿರುತ್ತದೆ. ಬಹುತೇಕ ಸೀರಿಯಲ್‌ಗಳಲ್ಲಿ ಗಂಡ-ಹೆಂಡತಿಯ ಬೆಡ್‌ರೂಮ್ ಬಾಗಿಲು ತೆರೆದಿರುವುದೇಕೆ ಎಂಬ ಪ್ರಶ್ನೆ ಪ್ರೇಕ್ಷಕರನ್ನು ಕಾಡುತ್ತಿದೆ.

Read Full Story
09:40 PM (IST) Dec 10

Karnataka News Live 10 December 2025 ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ಶಾ ವಾಗ್ದಾಳಿ

ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ನೆಹರೂ ಕಾಲದಿಂದ ಇಂದಿನವರೆಗೆ ಕಾಂಗ್ರೆಸ್ ಪಕ್ಷವು 'ಮತಗಳ್ಳತನ'ದಲ್ಲಿ ತೊಡಗಿದೆ ಎಂದು ಐತಿಹಾಸಿಕ ಉದಾಹರಣೆಗಳೊಂದಿಗೆ ಆರೋಪಿಸಿದರು. ಕಾಂಗ್ರೆಸ್‌ನ ಸೋಲಿಗೆ ಇವಿಎಂ ಅಥವಾ ಮತದಾರರ ಪಟ್ಟಿಯಲ್ಲ, ಬದಲಾಗಿ ಅದರ ನಾಯಕತ್ವವೇ ಕಾರಣ ಎಂದು ಟೀಕಿಸಿದರು.

Read Full Story
09:17 PM (IST) Dec 10

Karnataka News Live 10 December 2025 ನಟಿ ಮಂಜು ಭಾಷಿಣಿ ಫ್ಯಾನ್ಸ್​ ಕಣ್ಣಿಗೆ ಕಾಣಿಸಿದ್ರೆ ನಿಮ್​ ಕಥೆ ಗೋವಿಂದ - Bigg Boss ಡಾಗ್​ ಸತೀಶ್​ಗೆ ಯಾಕಿಂತ ಎಚ್ಚರಿಕೆ?

ಬಿಗ್​ಬಾಸ್​ನಿಂದ ಹೊರಬಂದ ನಂತರ ಡಾಗ್​ ಸತೀಶ್​ ಸರಣಿ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಸಹ ಸ್ಪರ್ಧಿ ಮಂಜು ಭಾಷಿಣಿ, ತನ್ನ ಖ್ಯಾತಿ ತಿಳಿದ ನಂತರ ಮಾಲ್​ವೊಂದರಲ್ಲಿ ತನ್ನ ಹಿಂದೆ ಓಡಾಡಿದರು ಎಂದು ಹೇಳಿದ್ದಾರೆ. ಸತೀಶ್ ಅವರ ಈ ಹೇಳಿಕೆಗೆ ಮಂಜು ಭಾಷಿಣಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Full Story
09:00 PM (IST) Dec 10

Karnataka News Live 10 December 2025 2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!

ಕರ್ನಾಟಕದಲ್ಲಿ ಸುಮಾರು 2.84 ಲಕ್ಷ ಸರ್ಕಾರಿ ಮತ್ತು ಅರೆ-ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಸರ್ಕಾರ ಕೇವಲ 24,300 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. ಈ ಅಲ್ಪ ನೇಮಕಾತಿಯನ್ನೇ ದೊಡ್ಡ ಸಾಧನೆ ಎಂದು ಪ್ರಚಾರ ಮಾಡುತ್ತಿದೆ.

Read Full Story
08:22 PM (IST) Dec 10

Karnataka News Live 10 December 2025 ಗಿಲ್ಲಿ ನಟ ನಿನ್ನ*ನ್ ಅಂದಿದ್ದನ್ನ Bigg Boss ತೋರಿಸಿಲ್ಲ, ಅವನಂಥಾ ಗಲೀಜು ಲೈಫಲ್ಲೇ ನೋಡಿಲ್ಲ-ಡಾಗ್ ಸತೀಶ್!

ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ಡಾಗ್ ಸತೀಶ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಗಿಲ್ಲಿಯಷ್ಟು ಕೊಳಕು ವ್ಯಕ್ತಿಯನ್ನು ನೋಡಿಲ್ಲ ಎಂದಿರುವ ಸತೀಶ್, ಗಿಲ್ಲಿ ಬೈಗುಳನ್ನು ಜನರಿಗೆ ತೋರಿಸಲ್ಲ ಎಂದು ಹೇಳಿದ್ದಾರೆ.

Read Full Story
08:14 PM (IST) Dec 10

Karnataka News Live 10 December 2025 ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!

ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನ್ಯಾಯಾಲಯವು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ದೀಪೋತ್ಸವ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆಗಾಗಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
Read Full Story
07:33 PM (IST) Dec 10

Karnataka News Live 10 December 2025 Uttara Kannada - ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನಲ್ಲಿ, ಹುಟ್ಟುಹಬ್ಬದ ದಿನದಂದೇ ಗರ್ಭಿಣಿಯೊಬ್ಬರು ಹೆರಿಗೆಗೆ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದಾಂಡೇಲಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.
Read Full Story
07:17 PM (IST) Dec 10

Karnataka News Live 10 December 2025 ಯಕ್ಷಗಾನ ಕಲಾವಿದರ ಅಪಮಾನ - 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಸರ್ಕಾರಕ್ಕೆ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ

ಯಕ್ಷಗಾನ ಕಲಾವಿದರ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಶಾಸಕ ಸುನೀಲ್ ಕುಮಾರ್ ಸರ್ಕಾರದ ಕ್ರಮ ಪ್ರಶ್ನಿಸಿದರೆ, ಸಚಿವ ತಂಗಡಗಿ ಆ ವಿಷಯ ದೊಡ್ಡದು ಮಾಡೋದು ಸರಿಯಲ್ಲ ಎಂದರು.ಕೊಂಡರು.

Read Full Story
07:16 PM (IST) Dec 10

Karnataka News Live 10 December 2025 ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ದರ್ಶನ್‌ಗೆ ಗುಡ್ ನ್ಯೂಸ್; ಅಭಿಮಾನಿಗಳೂ ಫುಲ್ ಖುಷ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ನ್ಯಾಯಾಲಯದ ಆದೇಶದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಟಿವಿ ಸೌಲಭ್ಯ ಒದಗಿಸಲಾಗಿದೆ. ಅವರ 'ಡೆವಿಲ್' ಸಿನಿಮಾ ಬಿಡುಗಡೆಯ ಹಿಂದಿನ ದಿನವೇ ಈ ಸೌಲಭ್ಯ ದೊರೆತಿದೆ.

Read Full Story
07:05 PM (IST) Dec 10

Karnataka News Live 10 December 2025 ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!

ಲೈಂಗಿಕ ಸಮಸ್ಯೆ ಪರಿಹಾರದ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 40 ಲಕ್ಷ ರೂ. ವಂಚಿಸಿದ್ದ 'ವಿಜಯ್ ಚಿತ್ತೋಡಿಯಾ ಗುರೂಜಿ' ಎಂಬ ನಕಲಿ ಸ್ವಾಮೀಜಿ ಮತ್ತು ಆತನ ಸಹಚರನನ್ನು ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ.

Read Full Story
06:48 PM (IST) Dec 10

Karnataka News Live 10 December 2025 ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ - ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ!

ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆಗಾಗಿ ಸೀಲ್ ಡೌನ್ ಆಗಿದ್ದ ಬಿಡದಿಯ ಜಾಲಿವುಡ್ ಸ್ಟುಡಿಯೋಗೆ ಪುನರ್ ಆರಂಭಕ್ಕೆ ಅನುಮತಿ ಸಿಕ್ಕಿದೆ. ಸ್ಟುಡಿಯೋ ಆಡಳಿತ ಮಂಡಳಿಯ ಮನವಿ ಮೇರೆಗೆ, ಮಂಡಳಿಯು ಪರಿಶೀಲನೆ ನಡೆಸಿ ಅನುಮತಿ ನೀಡಿದ್ದು, ಇದರಿಂದ 'ಬಿಗ್ ಬಾಸ್ ಕನ್ನಡ' ಶೋ ಮುಂದುವರಿಯುವ ಸಾಧ್ಯತೆ ಇದೆ.
Read Full Story
06:25 PM (IST) Dec 10

Karnataka News Live 10 December 2025 ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ - ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!

Belagavi session: ವಿಧಾನಸಭೆಯಲ್ಲಿ ವಿಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ನಾಯಕತ್ವ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿ, ಆಡಳಿತ ಯಂತ್ರ ಕುಸಿದಿದೆ ಎಂದು ಆರೋಪಿಸಿದರು. 'ಕಿಂಗ್ ಅಲೈವ್' ಹೇಳಿಕೆ ಉಲ್ಲೇಖಿಸಿದಾಗ, ಸಚಿವ ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ ತೀವ್ರ ತಿರುಗೇಟು ನೀಡಿದರು,

Read Full Story
06:08 PM (IST) Dec 10

Karnataka News Live 10 December 2025 Video - ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!

ಬೆಂಗಳೂರಿನಲ್ಲಿ BMTC ಬಸ್ ಡ್ರೈವರ್ ಮತ್ತು ಕ್ಯಾಬ್ ಡ್ರೈವರ್ ನಡುವೆ ಚಲಿಸುತ್ತಿರುವ ಬಸ್ಸಿನಲ್ಲಿ ರೋಡ್ ರೇಜ್ ಘರ್ಷಣೆ ನಡೆದಿದೆ. ಕ್ಯಾಬ್ ಡ್ರೈವರ್ ಸ್ಟೀರಿಂಗ್‌ನಿಂದ ಚಾಲಕನ ಕೈ ಎಳೆದು ಹಲ್ಲೆ ಮಾಡಲು ಪ್ರಯತ್ನಿಸಿದ್ದಾನೆ. ಪ್ರಯಾಣಿಕರಿಗೆ ಪ್ರಾಣ ಸಂಕಟ ಎದುರಾಗಿತ್ತು.

Read Full Story
05:46 PM (IST) Dec 10

Karnataka News Live 10 December 2025 ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ - ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!

ಉತ್ತರ ಕರ್ನಾಟಕದ ಅಪ್ಪರ್ ಕೃಷ್ಣಾ ನೀರಾವರಿ ಯೋಜನೆ ಕುರಿತ ಚರ್ಚೆಯು ವಿಧಾನಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ಗದ್ದಲಕ್ಕೆ ಕಾರಣವಾಯಿತು. ಶಾಸಕ ಶಿವಲಿಂಗೇಗೌಡರ ಮಾತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದು ವೈಯಕ್ತಿಕ ವಾಕ್ಸಮರಕ್ಕೆ ಕಾರಣವಾಯಿತು.

Read Full Story