- Home
- News
- State
- Karnataka News Live: ಕಾಲಿಗೆ ಪೊರಕೆ ತಾಗಿದ್ದಕ್ಕೆ ಬೈದ ಗ್ರಾಹಕನ ಕಣ್ಣಿಗೆ ಖಾರದ ಪುಡಿ ಎರಚಿ ಥಳಿಸಿದ ಮಹಿಳೆ!
Karnataka News Live: ಕಾಲಿಗೆ ಪೊರಕೆ ತಾಗಿದ್ದಕ್ಕೆ ಬೈದ ಗ್ರಾಹಕನ ಕಣ್ಣಿಗೆ ಖಾರದ ಪುಡಿ ಎರಚಿ ಥಳಿಸಿದ ಮಹಿಳೆ!

ಧಾರವಾಡ: ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳ ತಂಡವು ಮಂಗಳವಾರ ಜಿಲ್ಲೆಯ 24 ಗ್ರಾಪಂಗಳ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿತು.
ಕಳಪೆ ಕಾಮಗಾರಿ, ಬಿಲ್ ಪಾವತಿಗೆ ಹಣಕ್ಕಾಗಿ ಬೇಡಿಕೆ, ಕಾಮಗಾರಿಗಳ ಹಿರಿತನ ಆಧರಿಸಿ ಬಾಕಿ ಬಿಲ್ ಪಾವತಿಸದಿರುವುದು, ದಾಖಲೆಗಳನ್ನು ನಿರ್ವಹಿಸದಿರುವುದು, ಫಲಾನುಭವಿಗಳಿಗೆ ಸೌಲಭ್ಯ ನೀಡಲು ವಿಳಂಬ ಸೇರಿ ಇನ್ನಿತರ ಲೋಪದೋಷಗಳ ಕುರಿತು ಲೋಕಾಯುಕ್ತರಿಗೆ ದೂರುಗಳು ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಜಿಲ್ಲೆಯ 24 ಗ್ರಾಪಂಗಳ ದಾಖಲಾತಿ ಪರಿಶೀಲಿಸಿದ್ದು, ತಿಂಗಳಾಂತ್ಯಕ್ಕೆ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Karnataka News Live 10 June 2026ಕಾಲಿಗೆ ಪೊರಕೆ ತಾಗಿದ್ದಕ್ಕೆ ಬೈದ ಗ್ರಾಹಕನ ಕಣ್ಣಿಗೆ ಖಾರದ ಪುಡಿ ಎರಚಿ ಥಳಿಸಿದ ಮಹಿಳೆ!
Karnataka News Live 10 June 2026ವರ್ಷಧಾರೆಗೆ ತುಂಬಿದ ನರೇಗಾ ಕಂದಕಗಳು - ಗಜೇಂದ್ರಗಡ ತಾಲೂಕಿನ ರೈತರ ಮೊಗದಲ್ಲಿ ಮಂದಹಾಸ!
Karnataka News Live 10 June 20264 ವಿಧಗಳಲ್ಲಿ ತ್ಯಾಜ್ಯ ವಿಂಗಡಿಸದಿದ್ದರೆ ಪ್ರಕರಣ ದಾಖಲಿಸಿ ದಂಡ ಹಾಕಿ; ಮುಖ್ಯಾಧಿಕಾರಿ ಎಚ್ಚರಿಕೆ
ಪುರಸಭೆಯು ಘನತ್ಯಾಜ್ಯ ನಿರ್ವಹಣಾ ನಿಯಮದ ಅಡಿಯಲ್ಲಿ ತ್ಯಾಜ್ಯವನ್ನು 4 ವಿಧಗಳಲ್ಲಿ ವಿಂಗಡಿಸುವುದನ್ನು ಕಡ್ಡಾಯಗೊಳಿಸಿದೆ. ಈ ನಿಯಮ ಪಾಲಿಸದ ಸಾರ್ವಜನಿಕರು ಮತ್ತು ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಮುಖ್ಯಾಧಿಕಾರಿ ಟಿ.ಲೀಲಾವತಿ ಎಚ್ಚರಿಕೆ ನೀಡಿದ್ದಾರೆ.