Actress Malaika Arora: ಬಾಲಿವುಡ್ನಲ್ಲಿ ಫಿಟ್ನೆಸ್ ಕಾಯ್ದುಕೊಂಡಿರುವ ನಟಿ ಮಲೈಕಾ ಅರೋರ ಅವರು ವೈಯಕ್ತಿಕ ಜೀವನದಲ್ಲಿ ಭಾರೀ ಸದ್ದು ಮಾಡಿದ್ದಾರೆ. ಈಗಾಗಲೇ ಡಿವೋರ್ಸ್ ಪಡೆದಿರುವ ಮಲೈಕಾ ಅರೋರ ಅವರು Splitsvilla ಸ್ಪರ್ಧಿ ಸೋರಬ್ ಬೇಡಿ ಜೊತೆಗೆ ಪಾರ್ಟಿ ಮಾಡಿರುವ ಫೋಟೋ ವೈರಲ್ ಆಗ್ತಿದೆ.
- Home
- News
- State
- Karnataka News Live: 22 ವರ್ಷದ ಮಗನಿರುವಾಗಲೇ ಚಿರಯುವಕನ ಜೊತೆ 52ರ ನಟಿ ಮಲೈಕಾ ಅರೋರ ಲವ್? ರೊಮ್ಯಾಂಟಿಕ್ ವಿಡಿಯೋ ವೈರಲ್
Karnataka News Live: 22 ವರ್ಷದ ಮಗನಿರುವಾಗಲೇ ಚಿರಯುವಕನ ಜೊತೆ 52ರ ನಟಿ ಮಲೈಕಾ ಅರೋರ ಲವ್? ರೊಮ್ಯಾಂಟಿಕ್ ವಿಡಿಯೋ ವೈರಲ್

ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗೆಂದು ನಾನು ದೆಹಲಿಗೆ ಬಂದಿಲ್ಲ. ಯಾರದ್ದೋ ಕೈಕಾಲು ಹಿಡಿದು ಬಿಜೆಪಿ ಸೇರಲ್ಲ. ಬಿಜೆಪಿಗೆ ತಗೊಳ್ಳಿ ಅಂತಾ ಯಾರ ಬಳಿಯೂ ಹೋಗಲ್ಲ. ನಾವು ಸ್ವಾಭಿಮಾನದಿಂದ ಬದುಕಿರೋರು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಬಿಜೆಪಿ ಸೇರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಭ್ರಷ್ಟ ಕುಟುಂಬದ ನೇತೃತ್ವವನ್ನು ನಾವು ಒಪ್ಪಲ್ಲ. ರಾಜ್ಯದಲ್ಲಿ ಭ್ರಷ್ಟ ಕುಟುಂಬ ಎಲ್ಲಿವರೆಗೆ ಇರುತ್ತೋ, ಅಲ್ಲಿವರೆಗೂ ಬಿಜೆಪಿ ಸೇರುವ ಪ್ರಶ್ನೆ ಉದ್ಭವಿಸಲ್ಲ. ನಾನೇ ಪ್ರಾದೇಶಿಕ ಪಕ್ಷ ಮಾಡ್ತಿನಿ. 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತಿನಿ. ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು. ಮಗನ ಮದುವೆ ನಿಮಿತ್ತ ದೆಹಲಿಗೆ ಬಂದಿದ್ದೇನೆ. ಕೆಲವು ಹಳೆಯ ಸ್ನೇಹಿತರ ಭೇಟಿಗೆ ಬಂದಿದ್ದೇನೆ. ಯಾವ ಬಿಜೆಪಿ ನಾಯಕರನ್ನೂ ಭೇಟಿ ಮಾಡಲ್ಲ, ಪಕ್ಷ ಸೇರುವ ಬಗ್ಗೆ ಚರ್ಚೆ ಮಾಡಲ್ಲ ಎಂದರು.
Karnataka News Live 10 March 202622 ವರ್ಷದ ಮಗನಿರುವಾಗಲೇ ಚಿರಯುವಕನ ಜೊತೆ 52ರ ನಟಿ ಮಲೈಕಾ ಅರೋರ ಲವ್? ರೊಮ್ಯಾಂಟಿಕ್ ವಿಡಿಯೋ ವೈರಲ್
Karnataka News Live 10 March 2026ಒಂದೇ ಕೇಸಲ್ಲಿ 4 MLC ಕೊಟ್ಟು ವಿಮಾ ಕಂಪನಿಗೆ ವಂಚಿಸಲು ಯತ್ನ - ವೈದ್ಯರ ವಿರುದ್ಧ ತನಿಖೆಗೆ ತಡೆಕೋರಲು ನಿರಾಕರಿಸಿದ ಹೈಕೋರ್ಟ್
ಒಂದೇ ಅಪಘಾತಕ್ಕೆ ನಾಲ್ಕು ಕಾನೂನುಬದ್ದ ವೈದ್ಯಕೀಯ ಪರೀಕ್ಷಾ ಪ್ರಮಾಣ ಪತ್ರ (ಎಂಎಲ್ಸಿ) ನೀಡಿದ ಆರೋಪದ ಮೇಲೆ ವೈದ್ಯರೊಬ್ಬರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಹಾಸನದ 'ಜನಪ್ರಿಯ' ಆಸ್ಪತ್ರೆಯ ವೈದ್ಯ ಡಾ.ಅಬ್ದುಲ್ ಬಶೀರ್ ಅವರ ವಿರುದ್ಧ ಈ ಆರೋಪ ಕೇಳಿ ಬಂದಿದೆ.
Karnataka News Live 10 March 2026ರಾಮನಗರಕ್ಕೂ ಬಂತು ಬಟ್ಟೆ ಬ್ಯಾಗ್ ಎಟಿಎಂ ಮಷಿನ್! ಎಪಿಎಂಸಿಯಲ್ಲಿ ಪ್ರಾಯೋಗಿಕ ಪ್ರಯತ್ನ
ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸುವ ಗುರಿಯೊಂದಿಗೆ ರಾಮನಗರ ನಗರಸಭೆಯು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ATM ಮಾದರಿಯಲ್ಲಿ ಕಾರ್ಯನಿರ್ವಹಿಸುವ ‘ಕ್ಲಾತ್ ಬ್ಯಾಗ್ ವೆಂಡಿಂಗ್ ಮಷಿನ್’ ಪ್ರಾಯೋಗಿಕವಾಗಿ APMC ಮಾರುಕಟ್ಟೆಯಲ್ಲಿ ಅಳವಡಿಸಿದ್ದು, 10 ರೂಪಾಯಿ ನಾಣ್ಯ ಹಾಕಿದರೆ ಬಟ್ಟೆಯ ಕೈಚೀಲ ಲಭ್ಯವಾಗಲಿದೆ.
Karnataka News Live 10 March 2026ಎತ್ತಿನಹೊಳೆ, ಮೇಕೆದಾಟು ವಿಳಂಬಕ್ಕೆ ರಾಜ್ಯ ಸರ್ಕಾರ ಕಾರಣ - ದೇವೇಗೌಡ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯಸಭೆಯಲ್ಲಿ, ಎತ್ತಿನಹೊಳೆ ಮತ್ತು ಮೇಕೆದಾಟು ಯೋಜನೆಗಳ ವಿಳಂಬಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. ಯೋಜನಾ ವೆಚ್ಚದ ಏರಿಕೆ, ಪರಿಸರ ನಿಯಮಗಳ ಉಲ್ಲಂಘನೆ, ರೈತರಿಗೆ ನೀರು ಒದಗಿಸುವಲ್ಲಿನ ವೈಫಲ್ಯವನ್ನು ಅವರು ಬಲವಾಗಿ ಖಂಡಿಸಿದ್ದಾರೆ.
Karnataka News Live 10 March 2026ಮತದಾರರ ಕರಡುಪಟ್ಟಿ ಪ್ರಕಟ ಗ್ರೇಟರ್ ಬೆಂಗಳೂರಲ್ಲಿ 89 ಲಕ್ಷ ಮತದಾರರು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದ ಬಳಿಕ ಐದು ಪಾಲಿಕೆಗಳಿಗೆ ಮೊದಲ ಬಾರಿ ನಡೆಯಲಿರುವ ಚುನಾವಣೆಗೆ ಒಟ್ಟು 88,91,411 ಜನರು ಮತದಾನದ ಹಕ್ಕು ಹೊಂದಿದ್ದಾರೆ. ಸೋಮವಾರ ಜಿಬಿಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕರಡು ಮತದಾರರ ಪಟ್ಟಿಯ ಕುರಿತು ಮಾಹಿತಿ ಹಂಚಿಕೊಂಡ ಜಿಲ್ಲಾ ಚುನಾವಣಾಧಿಕಾರಿ
Karnataka News Live 10 March 2026ನಿಯಂತ್ರಣ ತಪ್ಪಿ ಪಲ್ಟಿಯಾದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್; 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ
Karnataka News Live 10 March 2026Shivamogga - ಬಾವಿ ಕಳೆದು ಹೋಗಿದೆ ಹುಡುಕಿ ಕೊಡಿ - ಕುಡುಮಲ್ಲಿಗೆ ಗ್ರಾಮಸ್ಥರ ಪ್ರತಿಭಟನೆ
ಬಾವಿ ಕಳೆದು ಹೋಗಿದೆ ಹುಡುಕಿ ಕೊಡಿ ಎಂದು ಕುಡುಮಲ್ಲಿಗೆ ಗ್ರಾಮಸ್ಥರ ಪ್ರತಿಭಟನೆ ನಡೆಸಿದ್ದಾರೆ. ಹಾಗಾದ್ರೆ ಗ್ರಾಮದಲ್ಲಿದ್ದ ಬಾವಿ ಏನಾಯ್ತು? ನಟ ರವಿಶಂಕರ್ ಗೌಡ ನಟನೆಯ ‘ಸರ್ಕಾರಿ ಕೆಲಸ, ದೇವರ ಕೆಲಸ’ ಕನ್ನಡ ಸಿನಿಮಾದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಿಜವಾಗಿಯೂ ಸಂಭವಿಸಿದೆ.
Karnataka News Live 10 March 2026ಬೆಂಗಳೂರಿನ ಅರ್ಧದಷ್ಟು ಕಸ ಮರು ಬಳಕೆ - ಜಿಬಿಎ-ರಾಜ್ಯ ನಿರ್ವಹಣೆಯಲ್ಲಿ ಶೀಘ್ರ ಭಾರಿ ಬದಲಾವಣೆ
ನಗರದ ಶೇ.45-50ರಷ್ಟು ತ್ಯಾಜ್ಯ ರಿಸೈಕ್ಲಿಂಗ್ ಆಗುತ್ತಿದೆ. ಮುಂದೆ ಇದನ್ನು ಇನ್ನಷ್ಟು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೇಳಿದ್ದಾರೆ.
Karnataka News Live 10 March 2026ಪೊಲೀಸರು ಶಾಸಕರ ಕರೆ ಸ್ವೀಕರಿಸುವುದು ಕಡ್ಡಾಯ
ಶಾಸಕರು ಹಾಗೂ ಸಂಸದರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಇಟ್ಟುಕೊಳ್ಳಬೇಕು, ಆ ಜನಪ್ರತಿನಿಧಿಗಳ ಕರೆಗಳಿಗೆ ಪ್ರತಿಕ್ರಿಯಿಸಬೇಕು ಎಂದು ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ। ಎಂ.ಎ.ಸಲೀಂ ಸೂಚಿಸಿದ್ದಾರೆ.
Karnataka News Live 10 March 2026ರಾಯಚೂರು - ಕರೆಂಟ್ ಶಾಕ್ಗೆ ಸ್ನೇಹಿತ ಬಲಿ - 9ನೇ ಕ್ಲಾಸ್ ಬಾಲಕನ ಶವಕ್ಕೆ ಕಲ್ಲು ಕಟ್ಟಿ ಕೆರೆಗೆಸೆದ ಸ್ನೇಹಿತರು
ರಾಯಚೂರಿನ ಲಿಂಗಸೂಗೂರಿನಲ್ಲಿ, ಬೀಳ್ಕೊಡುಗೆ ಸಮಾರಂಭಕ್ಕೆ ಬಟ್ಟೆ ತರಲೆಂದು ಹೋದ 15 ವರ್ಷದ ಕಾರ್ತಿಕ್ ಎಂಬ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ್ದಾನೆ. ಆತನ ಸಾವಿನಿಂದ ಹೆದರಿದ ಆತನ ಸ್ನೇಹಿತರು, ಶವವನ್ನು ಗೋಣಿಚೀಲದಲ್ಲಿ ಕಟ್ಟಿ ಕೆರೆಗೆ ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ.