ತಾಯಿ ಜೊತೆ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೋಗಿದ್ದ ಬಾಲಕ ಹರ್ಷಿತ್ ಚಿರತೆ ದಾಳಿಗೆ ಬಲಿಯಾದ ಘಟನೆ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ನನ್ನ ಮಗುವನ್ನು ಕಣ್ಣ ಮುಂದೆ ಚಿರತೆ ಎತ್ತಿಕೊಂಡು ಹೋಗಿ ಕೊಂದಿತು ಎಂದು ಕಣ್ಣೀರಿಟ್ಟಿದ್ದಾರೆ.
- Home
- News
- State
- Karnataka News Live: ಕಣ್ಣ ಮುಂದೆ ಮಗುವನ್ನು ಚಿರತೆ ಕೊಂದಿತು, ಮಲೆ ಮಹದೇಶ್ವರದಲ್ಲಿ ಮಗನ ಕಳ್ಕೊಂಡ ತಾಯಿ ಆಕ್ರಂದನ
Karnataka News Live: ಕಣ್ಣ ಮುಂದೆ ಮಗುವನ್ನು ಚಿರತೆ ಕೊಂದಿತು, ಮಲೆ ಮಹದೇಶ್ವರದಲ್ಲಿ ಮಗನ ಕಳ್ಕೊಂಡ ತಾಯಿ ಆಕ್ರಂದನ

ಬೆಂಗಳೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಚಿವ ಡಿ.ಸುಧಾಕರ್ ಇಂದು ಬೆಳಗಿನ ಜಾವ 3.15ರ ವೇಳೆಗೆ ನಿಧನರಾಗಿದ್ದಾರೆ. ಡಿ.ಸುಧಾಕರ್ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಡಿ ಚಿಪ್ಪಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆಪರೇಷನ್ ಬಳಿಕ ಇನ್ನೇನು ಡಿಸ್ಚಾರ್ಜ್ ಆಗಬೇಕು ಎನ್ನುವಷ್ಟರಲ್ಲಿ ಶ್ವಾಸಕೋಶಕ್ಕೆ ಸೋಂಕು ತಗುಲಿತ್ತು ಹೆಚ್ಚು ಧೂಮಪಾನ ಮಾಡ್ತಿದ್ದ ಕಾರಣಕ್ಕೆ ಶ್ವಾಸಕೋಶದ ಸೋಂಕು ತೀವ್ರವಾಗಿತ್ತು. ಕೊನೆಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೂ ಯಾವುದೇ ಚೇತರಿಕೆ ಕಾಣಲಿಲ್ಲ
ಕೊನೆಗೆ ವೈದ್ಯರು ECMO ಅಳವಡಿಕೆ ಮಾಡಿದ್ದರು. ಶ್ವಾಸಕೋಶ ಹಾಗೂ ಹೃದಯ ಸರಿಯಾಗಿ ಕೆಲಸ ಮಾಡದ ಕಾರಣ, ECMO ಮಷಿನ್ ಈ ಕಾರ್ಯ ನಿರ್ವಹಿಸುತ್ತದೆ ನಾಲ್ಕು ವಾರಗಳ ನಿಗಾದಲ್ಲಿ ಇರಿಸಲಾಗಿತ್ತು. ಚೇತರಿಕೆ ಕಂಡುಬಂದರೆ ಶ್ವಾಸಕೋಶದ ಟ್ರಾನ್ಸ್ಪ್ಲಾಂಟ್ ಮಾಡುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಯಾವುದೇ ಚೇತರಿಕೆ ಕಾಣದೆ ಬೆಳಗಿನ ಜಾವ ಸುಧಾಕರ್ ಕೊನೆಯುಸಿರೆಳಿದಿದ್ದಾರೆ
Karnataka News Live 10 May 2026ಕಣ್ಣ ಮುಂದೆ ಮಗುವನ್ನು ಚಿರತೆ ಕೊಂದಿತು, ಮಲೆ ಮಹದೇಶ್ವರದಲ್ಲಿ ಮಗನ ಕಳ್ಕೊಂಡ ತಾಯಿ ಆಕ್ರಂದನ
Karnataka News Live 10 May 2026ಈಜಲು ಹೋದ ಕೊಪ್ಪಳದ ಯುವಕ ನೀರಿನಲ್ಲಿ ಮುಳುಗಿ ಸಾವು, ಮತೃದೇಹಕ್ಕಾಗಿ ಹುಡುಕಾಟ
17ರ ಹರೆಯದ ಯುವಕ ಬೋದೂರು ಗ್ರಾಮದಲ್ಲಿ ಈಜಾಡಲು ತೆರಳಿದ್ದಾನೆ. 6 ಮಂದಿ ಯುವಕರ ಗುಂಪು ಈಜಾಡುತ್ತಿದ್ದ ವೇಳೆ ಅಪ್ಪಾಜಿಗೌಡ ನೀರಿನಲ್ಲಿ ಮುಳುಗಿ ಮೃತಪಟ್ಟ ದುರಂತ ಘಟನೆ ನಡೆದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ.
Karnataka News Live 10 May 2026ಅಂಜನಾದ್ರಿ ದೇವಾಲಯಕ್ಕೆ ದಾನವಾದ ಆಭರಣಗಳು ಸಂಪೂರ್ಣ ಚಿನ್ನವಲ್ಲ - ಎಸಿ ಮಾಲಗಿತ್ತಿ ಹೇಳೋದೇನು?
ಅಂಜನಾದ್ರಿಯ ಶ್ರೀ ಆಂಜನೇಯಸ್ವಾಮಿಗೆ ಹೈದ್ರಾಬಾದ್ ಮೂಲಕ ಉದ್ಯಮಿ ಮಹೇಶರೆಡ್ಡಿ ಕುಟುಂಬದವರು ಸಮರ್ಪಣೆ ಮಾಡಿರುವ ಪ್ರಭಾವಳಿ,ಕಿರೀಟ, ಗಧೆ ಸೇರಿದಂತೆ 12 ಸಾಮಾನುಗಳು ಚಿನ್ನ ಲೇಪಿತ ತಾಮ್ರದಿಂದ ಕೂಡಿದೆ.
Karnataka News Live 10 May 202625 ವರ್ಷಗಳಲ್ಲಾಗದ ಅಭಿವೃದ್ಧಿ 3 ವರ್ಷದಲ್ಲಿ ಮಾಡಿರುವೆ - ಎಚ್ಡಿಕೆ ವಿರುದ್ಧ ಇಕ್ಬಾಲ್ ಹುಸೇನ್ ವಾಗ್ದಾಳಿ
ರಾಮನಗರ ಕ್ಷೇತ್ರದಲ್ಲಿ 25 ವರ್ಷಗಳಿಂದ ಅಧಿಕಾರದಲ್ಲಿದ್ದವರು ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಕೇವಲ 3 ವರ್ಷಗಳಲ್ಲಿ ಮಾಡಿ ತೋರಿಸಿದ್ದೇನೆ ಎಂದು ಎಚ್ಡಿಕೆ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
Karnataka News Live 10 May 2026ಭ್ರಷ್ಟಾಚಾರದ ವಿರುದ್ಧ ವಾಟಾಳ್ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ - ವಾಟಾಳ್ ನಾಗರಾಜ್
ಭ್ರಷ್ಟಾಚಾರ, ಲಂಚಾವತಾರ ವಿರೋಧಿಸಿ ವಾಟಾಳ್ ಕನ್ನಡ ಪಕ್ಷದ ವತಿಯಿಂದ ಯುವಜನರು, ರೈತರು, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಹೋರಾಟ ಆರಂಭಿಸಿದ್ದೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.
Karnataka News Live 10 May 2026ಅವರಿಗೆ ಮಗಳಾಗಿ, ಇವರಿಗೆ ತಾಯಿಯಾಗಿರಲು ನಾನು ನಿಜಕ್ಕೂ ಅದೃಷ್ಟವಂತೆ; ರಾಧಿಕಾ ಪಂಡಿತ್ ಪೋಸ್ಟ್ ವೈರಲ್!
ರಾಧಿಕಾ ಪಂಡಿತ್ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಕಡಲ ತೀರದ ಅದ್ಭುತ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಾಧಿಕಾ ತಮ್ಮ ತಾಯಿ ಮತ್ತು ಮುದ್ದಾದ ಮಕ್ಕಳ ಜೊತೆ ಕಾಲ ಕಳೆಯುತ್ತಿರುವುದು ಕಂಡುಬಂದಿದೆ. ಆದರೆ ಈ ಪೋಸ್ಟ್ ಯಾಕೆ ಅಷ್ಟೊಂದು ವೈರಲ್ ಆಗಿದೆ ಗೊತ್ತಾ? ಈ ಸ್ಟೋರಿ ನೋಡಿ..
Karnataka News Live 10 May 2026ಒಳ ಮೀಸಲಾತಿಯಿಂದ ಯಾರಿಗೂ ಅನ್ಯಾಯ ಆಗಲ್ಲ - ಸಚಿವ ಕೆ.ಎಚ್.ಮುನಿಯಪ್ಪ
ಒಳ ಮೀಸಲಾತಿಗೆ ಸಂಬಂಧಿಸಿ ವಿಶ್ರಾಂತ ನ್ಯಾ.ನಾಗಮೋಹನ್ ದಾಸ್ ವರದಿಯನ್ನು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟ ಸಭೆ ಅವಿರೋಧವಾಗಿ ಒಪ್ಪಿಕೊಂಡಿದೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
Karnataka News Live 10 May 2026ಮಣಿಪಾಲದ ಎಂಐಟಿಗೆ ವಿಶ್ವ ಗರಿ, CFA ಮಾನ್ಯತೆ ಪಡೆದ ದೇಶದ ಮೊದಲ ಎಂಜಿನಿಯರಿಂಗ್ ಸಂಸ್ಥೆ! ಇನ್ಮುಂದೆ ಜಾಗತಿಕ ಶಿಕ್ಷಣ
Karnataka News Live 10 May 2026ಮಂಗಳೂರು ಕದ್ರಿಯಲ್ಲಿ ಮತ್ತೊಂದು ಉದ್ಯಾನವನಕ್ಕೆ ಸಿದ್ಧತೆ! 3.50ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ, ಇಲ್ಲಿ ಏನೇನಿರಲಿದೆ?
Karnataka News Live 10 May 2026ಮಂಗಳೂರು ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ಹಿಡಿದ ರೈಲ್ವೆ ಪೊಲೀಸರೇ ಶಾಕ್ ಆದ್ರು!
Karnataka News Live 10 May 2026ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬೆಂಗಳೂರು ಬಾಲಕ ಬಲಿಯಾಗಲು ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ!
Karnataka News Live 10 May 2026ಪ್ರತಿ ದಿನ 25 ಕಿ.ಮಿ ಇವಿ ಯೂನಿಸೈಕಲ್ನಲ್ಲಿ ಬೆಂಗಳೂರಿಗನ ಪ್ರಯಾಣ, ಪೊಲೀಸ್ ತಡೆದಿದ್ದೇಕೆ?
ಬೆಂಗಳೂರಿನ ಯವಕ ಪ್ರತಿ ದಿನ ಮನೆಯಿಂದ ಕಚೇರಿಗೆ ಎಲೆಕ್ಟ್ರಿಕ್ ಯೂನಿಸೈಕಲ್ನಲ್ಲಿ ಪ್ರಯಾಣ ಮಾಡುತ್ತಾನೆ. ಟ್ರಾಫಿಕ್ ನಡುವೆ ಸರಾಗವಾಗಿ ಸಾಗಬಹುದು, ಪಾರ್ಕಿಂಗ್ ಸಮಸ್ಯೆ ಇಲ್ಲ, ದಿಢೀರ್ ಟ್ರಾಫಿಕ್ ಪೊಲೀಸರು ತಡೆದು ಮಾಡಿದ್ದೇನು?
Karnataka News Live 10 May 2026ಬಿಟ್ ಕಾಯಿನ್ - ಇಷ್ಟೆಲ್ಲಾ ಆದ್ರೂ ಬುದ್ಧಿ ಕಲಿಯದ ಶ್ರೀಕಿ, ಇಡಿ ಬಂಧನದ ಹಿಂದಿನ ದಿನ ಅಮೆರಿಕ ಕಂಪನಿಯ ಸರ್ವರ್ ಹ್ಯಾಕ್
Karnataka News Live 10 May 2026ಅಪ್ಪು 'ಜೇಮ್ಸ್' ಪ್ರೊಡ್ಯೂಸರ್ ಭರ್ಜರಿ ಕಂಬ್ಯಾಕ್; ಭಾರೀ ಮೊತ್ತಕ್ಕೆ 'ಪೆದ್ದಿ' ಡಿಸ್ಟ್ರಿಬ್ಯೂಷನ್ ರೈಟ್ಸ್!
ನಗುಮುಖದ ಒಡೆಯ ಪುನೀತ್ ರಾಜ್ಕುಮಾರ್ ನಟಿಸಿದ ಕಟ್ಟ ಕಡೆಯ ಸಿನಿಮಾ ಜೇಮ್ಸ್. 50 ಕೋಟಿಯಲ್ಲಿ ತಯಾರಾದ ಈ ಸಿನಿಮಾ ಬರೋಬ್ಬರಿ 151 ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿ ಎಲ್ಲರ ಕಣ್ಣು ಒದ್ದೆಯಾಗುವಂತೆ ಮಾಡಿತ್ತು. ಅಪ್ಪು ನಮ್ಮನ್ನ ಅಗಲಿದ ನಂತ್ರ ತೆರೆಕಂಡ ಸಿನಿಮಾ ಇದಾಗಿತ್ತು.
Karnataka News Live 10 May 2026ರಾಯಚೂರು - ಲಿಂಗಸುಗೂರು ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳಿಂದಲೇ ತಡರಾತ್ರಿಯವರೆಗೆ ಗುಂಡು-ತುಂಡು ಪಾರ್ಟಿ, ಭಾರೀ ಆಕ್ರೋಶ
Karnataka News Live 10 May 2026'ಗೋಲ್ಡನ್ ಮೂವಿಸ್'ನಿಂದ ಸಿಹಿ ಸುದ್ದಿ; ಕೇವಲ ನಿರ್ಮಾಪಕಿಯಲ್ಲ, ಈಗ ಗಾಯಕಿಯೂ ಆದ ಶಿಲ್ಪಾ ಗಣೇಶ್!
ಗಣೇಶ್ ಅವರ ಸಿನಿಮಾಗಳಲ್ಲಿ ಸಂಗೀತಕ್ಕೆ ಯಾವಾಗಲೂ ಒಂದು ವಿಶೇಷ ತೂಕವಿರುತ್ತದೆ. ಈಗ ತಮ್ಮದೇ ಮನೆಯ ನಿರ್ಮಾಣದ ಚಿತ್ರಕ್ಕೆ ಪತ್ನಿಯೇ ಹಾಡಿರುವುದು ಈ ಸಿನಿಮಾದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. 'ಪಿಕ್ಚರ್' ಚಿತ್ರದ ಈ ಹಾಡು ಈಗ ವೈರಲ್ ಆಗಿದೆ.
Karnataka News Live 10 May 2026ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ, ಕುಟುಂಬದೊಂದಿಗೆ ನಾಗಮಲೆಯತ್ತ ಹೋಗುತ್ತಿದ್ದಾಗ ಬೆಂಗಳೂರು ಮೂಲದ ಬಾಲಕ ಬಲಿ!
Karnataka News Live 10 May 2026JDS - ಮೈಚಳಿ ಬಿಟ್ಟು ಪಕ್ಷ ಸಂಘಟಿಸಿ, ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತೆ - ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ
ದೊಡ್ಡಬಳ್ಳಾಪುರದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮುಖಂಡರು ವೈಮನಸ್ಸು ಬಿಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದು ಕರೆ ನೀಡಿದರು. ರಾಜ್ಯ ಸರ್ಕಾರದ ವೈಫಲ್ಯ ಜನರ ಮುಂದಿಟ್ಟು, ಮುಂಬರುವ ಚುನಾವಣೆಗಳಲ್ಲಿ ಯುವಶಕ್ತಿಯ ಬೆಂಬಲದೊಂದಿಗೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ.
Karnataka News Live 10 May 2026ಮೈಸೂರು ಕನ್ನಡಿ ಗೋಡೆ - ಮೂತ್ರ ವಿಸರ್ಜನೆ ತಡೆ ಯೋಜನೆ ವಿಫಲ! ಕ್ಯಾರೇ ಅನ್ನದೆ ಕನ್ನಡಿ ಮುಂದೆ ನಿಂತೇ ಮೂತ್ರ ಮಾಡಿದ!
Karnataka News Live 10 May 2026ಬೆಂಗಳೂರಿನ ನೆಲದಲ್ಲಿಂದು ಕೇಸರಿ ಸೂರ್ಯ ಉದಯ, ಎಚ್ಎಎಲ್ನಲ್ಲಿ ಪ್ರಧಾನಿ ಮೋದಿ ಅಬ್ಬರ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ!
ಪಂಚರಾಜ್ಯ ಚುನಾವಣೆಯಲ್ಲಿನ ಗೆಲುವಿನ ಬಳಿಕ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭವ್ಯ ಸ್ವಾಗತ ದೊರೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲುವಿನ ಸಂಭ್ರಮವನ್ನು ಹಂಚಿಕೊಂಡು, ದಕ್ಷಿಣ ಭಾರತದಲ್ಲಿ ಪಕ್ಷದ ಬೆಳವಣಿಗೆಯನ್ನು ಶ್ಲಾಘಿಸಿದರು