08:23 AM (IST) Feb 11

Karnataka News Live 11 February 2026Haveri - ಅಂಕಲ್ ಮಮ್ಮಿಗೆ ಫೋನ್ ಕೊಡಿ - ಮದುವೆಯಾದ ವಾರದಲ್ಲೇ ಬಯಲಾಯ್ತು ವಧು ರೇಖಾ ಆಂಟಿ ರಹಸ್ಯ!

ಹಾವೇರಿಯ ರಾಣೆಬೆನ್ನೂರು ತಾಲೂಕಿನಲ್ಲಿ, ಇಬ್ಬರು ಮಕ್ಕಳ ತಾಯಿಯಾದ ಮಹಿಳೆಯೊಬ್ಬಳು 2.5 ಲಕ್ಷ ರೂಪಾಯಿ ವಧುದಕ್ಷಿಣೆ ಪಡೆದು ಯುವಕನೊಬ್ಬನನ್ನು ಮದುವೆಯಾಗಿದ್ದಾಳೆ. ಮದುವೆಯಾದ ವಾರದಲ್ಲೇ ಆಕೆಯ ಮಕ್ಕಳು ಫೋನ್ ಮಾಡಿದಾಗ ವಂಚನೆ ಬಯಲಾಗಿದ್ದು, ಪರಾರಿಯಾಗಲು ಯತ್ನಿಸಿದ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.
Read Full Story
08:11 AM (IST) Feb 11

Karnataka News Live 11 February 2026'ಸಾರಾಯಿ ಕುಡಿಬೇಡ ಅಮ್ಮ..' ಎಂದಿದ್ದಕ್ಕೆ ಮಗಳನ್ನೇ ಕೊಂದ ತಾಯಿ!

ಯಾದಗಿರಿಯ ರಾಜೀವಗಾಂಧಿ ನಗರದಲ್ಲಿ, ಮದ್ಯಪಾನ ಮಾಡುವುದನ್ನು ವಿರೋಧಿಸಿದ್ದಕ್ಕೆ ತಾಯಿಯೊಬ್ಬಳು ತನ್ನ 11 ವರ್ಷದ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ನಂತರ ಮಗಳ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದು, ಪೊಲೀಸ್ ತನಿಖೆಯ ವೇಳೆ ಕೊಲೆ ರಹಸ್ಯ ಬಯಲಾಗಿದೆ.
Read Full Story
08:00 AM (IST) Feb 11

Karnataka News Live 11 February 2026ಮನೆಯೊಂದು ಮೂರು ಬಾಗಿಲಾದ ಮೈಸೂರು JDS - ಅಪ್ಪನ ವಿರುದ್ಧವೇ ಮಗ? GTDಗೆ HDK ಬಿಗ್‌ ಶಾಕ್!

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ನಡುವೆ, ಕುಮಾರಸ್ವಾಮಿಯವರು ಹೊಸ ಅಭ್ಯರ್ಥಿಯ ಸುಳಿವು ನೀಡಿದ್ದು, ಜಿ.ಟಿ.ಡಿ ಪುತ್ರ ಹರೀಶ್ ಗೌಡ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಜೆಡಿಎಸ್ ಟಿಕೆಟ್ ತಂದೆಗೋ ಅಥವಾ ಮಗನಿಗೋ ಎಂಬ ಕುತೂಹಲ ಮೂಡಿದೆ.

Read Full Story
07:41 AM (IST) Feb 11

Karnataka News Live 11 February 2026Haveri - 'ಓದಿಕೊ' ಎಂದಿದ್ದಕ್ಕೆ ಮನನೊಂದ SSLC ವಿದ್ಯಾರ್ಥಿನಿ ದುರಂತ ಅಂತ್ಯ!

ಹಾವೇರಿ ಜಿಲ್ಲೆಯ ಮರೋಳ ಗ್ರಾಮದಲ್ಲಿ, ಪರೀಕ್ಷೆಯ ಒತ್ತಡ ಮತ್ತು ಪೋಷಕರ ಬುದ್ಧಿಮಾತಿನಿಂದ ಮನನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.

Read Full Story
07:34 AM (IST) Feb 11

Karnataka News Live 11 February 2026ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಬಿಎಂಆರ್‌ಸಿಎಲ್‌ನಲ್ಲಿ ಗೊಂದಲ- ಆದಾಯ ಸಾಕಾಗ್ತಿಲ್ಲ

ಮೆಟ್ರೋ ಪ್ರಯಾಣ ದರ ಶೇ.5ರಷ್ಟು ಹೆಚ್ಚಳಕ್ಕೆ ಸದ್ಯಕ್ಕೆ ತಡೆಬಿದ್ದಿದ್ದು ಜನತೆ ನಿರಾಳರಾಗಿದ್ದಾರೆ. ಆದರೆ, ದರ ಏರಿಕೆ ವಿಚಾರದಲ್ಲಿ ಆಡಳಿತಾತ್ಮಕ ದ್ವಂದ್ವದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಸಿಲುಕಿದೆ.

Read Full Story
07:28 AM (IST) Feb 11

Karnataka News Live 11 February 2026ಎಐ ದುರ್ಬಳಕೆ ತಡೆಗೆ ಕಠಿಣ ನಿಯಮ ಜಾರಿ - ಹೊಸ ನಿಯಮದಲ್ಲೇನಿದೆ?

ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಅಶ್ಲೀಲ ಮತ್ತು ಮಾನಹಾನಿಕರ ಚಿತ್ರಗಳನ್ನು ರಚಿಸುವ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ‘ಯಾವುದೇ ಎಐ ಕಂಟೆಂಟ್‌ ಇದ್ದರೆ ‘ಎಐ’ ಎಂಬ ಲೇಬಲ್‌ ಕಡ್ಡಾಯವಾಗಿ ನಮೂದಿಸಬೇಕು.

Read Full Story
07:20 AM (IST) Feb 11

Karnataka News Live 11 February 2026ಅಂತರಾಷ್ಟ್ರೀಯ ತೈಲ ಸ್ಮಗ್ಲಿಂಗ್‌ ಜಾಲ ಭೇದಿಸಿದ ಕರಾವಳಿ ಪಡೆ

ಭಾರತೀಯ ಕರಾವಳಿ ಕಾವಲು ಪಡೆಯು (ಐಸಿಜಿ) ಸಮುದ್ರ ಮತ್ತು ವಾಯು ಆಧರಿತ ಕಾರ್ಯಾಚರಣೆ ನಡೆಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್‌ ತೈಲ ಕಳ್ಳಸಾಗಣೆ ಜಾಲವೊಂದನ್ನು ಸೋಮವಾರ ಭೇದಿಸಿದೆ. ಈ ರೀತಿ ಅಂತಾರಾಷ್ಟ್ರೀಯ ಮಟ್ಟದ ಜಾಲ ಭೇದಿಸಿದ್ದು ಇದೇ ಮೊದಲು.

Read Full Story
07:11 AM (IST) Feb 11

Karnataka News Live 11 February 2026ಗ್ರಾಪಂ ಸದಸ್ಯರ ಆರಂಭದ 15 ತಿಂಗಳು ಅವಿಶ್ವಾಸಕ್ಕಿಲ್ಲ ಅವಕಾಶ - ಹೈಕೋರ್ಟ್ ಹೇಳಿದ್ದೇನು?

ಗ್ರಾಮ ಪಂಚಾಯಿತಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ 15 ತಿಂಗಳ ನಂತರವೇ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೋಲಾರ ಜಿಲ್ಲೆಯ ಗ್ರಾಪಂ ಅಧ್ಯಕ್ಷರೊಬ್ಬರ ವಿರುದ್ಧದ ಅವಿಶ್ವಾಸ ನಿರ್ಣಯ ಸಭೆ ನಿಗದಿಯನ್ನು ನ್ಯಾಯಾಲಯ ಎತ್ತಿಹಿಡಿದಿದೆ.

Read Full Story
07:10 AM (IST) Feb 11

Karnataka News Live 11 February 2026ಜ। ನರವಣೆ ಆತ್ಮಚರಿತ್ರೆ ಬಗ್ಗೆ ರಾಹುಲ್‌ ವರ್ಸಸ್ ಪೆಂಗ್ವಿನ್‌

ಗಲ್ವಾನ್ ಸಂಘರ್ಷದ ವೇಳೆ ಮೋದಿ ಸರ್ಕಾರ ಅನುಸರಿಸಿದ ನೀತಿ ಪ್ರಶ್ನಿಸಲಾಗಿದೆ ಎನ್ನಲಾದ ನಿವೃತ್ತ ಸೇನಾ ಮುಖ್ಯಸ್ಥ ಜ। ಎಂ.ಎಂ. ನರವಣೆ ಆತ್ಮಚರಿತ್ರೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಾಗೂ ಪುಸ್ತಕ ಪ್ರಕಾಶನ ಸಂಸ್ಥೆ ಪೆಂಗ್ವಿನ್‌ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ.

Read Full Story