ಪತ್ನಿಗೆ ಹಿಡಿದ ದೆವ್ವ ಬಿಡಿಸಲು ವಿಫಲನಾದ ಮಾಂತ್ರಿಕನೊಬ್ಬನಿಗೆ ವ್ಯಕ್ತಿಯೊಬ್ಬ ಪಾಠ ಕಲಿಸಿದ್ದಾನೆ. ಪೂಜೆ ನೆಪದಲ್ಲಿ ಮನೆಗೆ ಕರೆಸಿ, ಅಪಹರಿಸಿ ಸುಲಿಗೆ ಮಾಡಲಾಗಿದೆ. ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
- Home
- News
- State
- Karnataka News Live: ಪತ್ನಿಗೆ ದೆವ್ವ ಬಿಡಿಸಲು ವಿಫಲನಾದ ಮಾಂತ್ರಿಕನಿಗೆ ಶಾಕ್ ಕೊಟ್ಟ ಪತಿ; ನಾಲ್ವರ ಬಂಧನ
Karnataka News Live: ಪತ್ನಿಗೆ ದೆವ್ವ ಬಿಡಿಸಲು ವಿಫಲನಾದ ಮಾಂತ್ರಿಕನಿಗೆ ಶಾಕ್ ಕೊಟ್ಟ ಪತಿ; ನಾಲ್ವರ ಬಂಧನ

ಬೆಳಗಾವಿ: ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಶಾಸಕ ರಾಜು ಕಾಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಐನಾಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನ ನೀಡಬೇಕೆಂದು ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್ ಗಮನಕ್ಕೆ ತಂದಿದ್ದೇವೆ. ಲಕ್ಷ್ಮಣ ಸವದಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೊಡಬೇಕೆಂದು ಹೇಳಿರುವುದಾಗಿ ತಿಳಿಸಿದರು. ಬೆಳಗಾವಿ ಜಿಲ್ಲೆಯ ಶಾಸಕರಿಗಿಂತ ನಾನು ಹಿರಿಯ. ಆದರೆ, ನನ್ನ ಆರೋಗ್ಯ ಸರಿ ಇಲ್ಲದ ಕಾರಣ ನಾನು ಸಚಿವ ಸ್ಥಾನ ಕೇಳಿಲ್ಲ. ಅಶೋಕ ಪಟ್ಟಣ, ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದರು.
Karnataka News Live 11 July 2026ಪತ್ನಿಗೆ ದೆವ್ವ ಬಿಡಿಸಲು ವಿಫಲನಾದ ಮಾಂತ್ರಿಕನಿಗೆ ಶಾಕ್ ಕೊಟ್ಟ ಪತಿ; ನಾಲ್ವರ ಬಂಧನ
Karnataka News Live 11 July 2026ಕರಾಳ ರಹಸ್ಯ ಬಯಲು; ಜಿಮ್-ಫಿಟ್ನೆಸ್ ಅನ್ನೋ ಹೆಣ್ಮಕ್ಕಳೇ ಇನ್ನಾದ್ರೂ ಎಚ್ಚೆತ್ತುಕೊಳ್ಳಿ!
ಜಿಮ್ ಮಾಲೀಕ ಮತ್ತು ತರಬೇತುದಾರನೊಬ್ಬ, ತರಬೇತಿಗೆ ಬರುತ್ತಿದ್ದ ಯುವತಿಯರು ಮತ್ತು ಗೃಹಿಣಿಯರಿಗೆ ಬ್ಲ್ಯಾಕ್ಮೇಲ್ ಮಾಡಿ, ಲಕ್ಷಗಟ್ಟಲೆ ಹಣ ವಸೂಲಿ ಮಾಡುತ್ತಿದ್ದ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ತನ್ನ ನಿಜವಾದ ಗುರುತು ಮುಚ್ಚಿಟ್ಟು, ಸಿಸಿ ಕ್ಯಾಮೆರಾಗಳಲ್ಲಿ ದೃಶ್ಯ ಸೆರೆಹಿಡಿದು ಹೆಣ್ಣುಮಕ್ಕಳ ಜೀವನದೊಂದಿಗೆ ಆಟವಾಡುತ್ತಿದ್ದ ಈ ಘಟನೆಯು, ಜಿಮ್ಗಳಿಗೆ ಮಹಿಳೆಯರನ್ನು ಕಳುಹಿಸುವಾಗ ಎಚ್ಚರಿಕೆ ವಹಿಸುವಂತೆ ಒತ್ತಿ ಹೇಳುತ್ತದೆ.
Karnataka News Live 11 July 2026ನೆಹರು ಎಲ್ಲಿ, ಮೋದಿ ಎಲ್ಲಿ ಇಬ್ಬರ ನಡುವೆ ಹೋಲಿಕೆ ಸಾಧ್ಯವೇ ಇಲ್ಲ ಎಂದ ಸಿದ್ದರಾಮಯ್ಯ
ಏನೂ ಇಲ್ಲದ ಅಂದಿನ ಭಾರತವನ್ನು ಕಟ್ಟಿದ ನೆಹರು ಎಲ್ಲಿ? ಎಲ್ಲವೂ ಇರುವ ಈಗಿನ ಭಾರತದ ಅಧಿಕಾರ ನಡೆಸುವ ಮೋದಿ ಎಲ್ಲಿ? ಆದರೂ ಅವರಿಬ್ಬರ ಆಡಳಿತವನ್ನು ಹೋಲಿಕೆ ಮಾಡುವ ಕೆಲಸ ನಡೆಯುತ್ತಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.