ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 3000ಕ್ಕೂ ಅಧಿಕ ಪುರಾತನ ಕುರುಹುಗಳು ಪತ್ತೆಯಾಗಿದ್ದು, ಇದು ದೇಶದಲ್ಲೇ ಅತಿ ಹೆಚ್ಚು ಪ್ರಾಚ್ಯಾವಶೇಷಗಳನ್ನು ಹೊಂದಿದ ಗ್ರಾಮವಾಗುವತ್ತ ಸಾಗಿದೆ. ಇತ್ತೀಚಿನ ಉತ್ಖನನದಲ್ಲಿ 9-10ನೇ ಶತಮಾನದ ರಾಷ್ಟ್ರಕೂಟರ ಕಾಲದ ಅಪರೂಪದ ವೀರಗಲ್ಲು ಕೂಡ ಪತ್ತೆಯಾಗಿದೆ
- Home
- News
- State
- Karnataka News Live: ಒಪನ್ ಮ್ಯೂಸಿಯಂ ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ
LIVE NOW
Karnataka News Live: ಒಪನ್ ಮ್ಯೂಸಿಯಂ ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ

ಸಾರಾಂಶ
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ರಾಜ್ಯದ ಮುಜರಾಯಿ ಇಲಾಖೆ ಆಧೀನದ ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ₹167 ಕೋಟಿ ಆದಾಯ ಗಳಿಸಿದೆ. 2025ರ ಏ.1ರಿಂದ 2026ರ ಮಾ.31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ. ಇದರಲ್ಲಿ ಒಟ್ಟು ₹85.20 ಕೋಟಿ ಖರ್ಚಾಗಿದೆ. 2024-2025ನೇ ಸಾಲಿನಲ್ಲಿ ₹155 ಕೋಟಿ ಆದಾಯ ಗಳಿಸಿತ್ತು. ಈ ಬಾರಿ ₹167 ಕೋಟಿ ಆದಾಯ ಗಳಿಸುವ ಮೂಲಕ ಈ ಆರ್ಥಿಕ ವರ್ಷದಲ್ಲಿ ಕಳೆದ ಆರ್ಥಿಕ ವರ್ಷದಿಂದ ಸುಮಾರು ₹12 ಕೋಟಿ ಅಧಿಕ ಆದಾಯ ಗಳಿಸಿದೆ. ಈ ಮೂಲಕ ಸತತ 15ನೇ ವರ್ಷ ಆದಾಯ ಗಳಿಕೆಯಲ್ಲಿ ನಂ.1 ಮುಜರಾಯಿ ದೇವಸ್ಥಾನವಾಗಿ ಹೊರಹೊಮ್ಮಿದೆ.
Add Asianetnews Kannada as a Preferred Source

06:35 AM (IST) May 11
Karnataka News Live 11 May 2026ಒಪನ್ ಮ್ಯೂಸಿಯಂ ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ
Read Full Story
06:12 AM (IST) May 11
Karnataka News Live 11 May 2026ಸರ್ಕಾರಿ ಗೌರವದ ಜತೆ ಚಳ್ಳಕೆರೆಯಲ್ಲಿ ಇಂದು ಸಚಿವ ಸುಧಾಕರ್ ಅಂತ್ಯಕ್ರಿಯೆ
ಭಾನುವಾರ ನಿಧನರಾದ ಸಚಿವ ಡಿ.ಸುಧಾಕರ್ ಅವರ ಅಂತ್ಯ ಸಂಸ್ಕಾರವು ಸೋಮವಾರ ಮಧ್ಯಾಹ್ನ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Read Full Story 05:51 AM (IST) May 11
Karnataka News Live 11 May 2026ಹೈದರಾಬಾದ್ ಉದ್ಯಮಿ ಅಂಜನಾದ್ರಿಗೆ ಅರ್ಪಿಸಿದ ಚಿನ್ನದ ಕಿರೀಟ, ಗದೆ ಅಸಲಿಯತ್ತು ಬಯಲು
ಗಂಗಾವತಿಯ ಕಿಷ್ಕಿಂದಾ ಅಂಜನಾದ್ರಿಗೆ ಹೈದರಾಬಾದ್ ಉದ್ಯಮಿಯೊಬ್ಬರು ಸಮರ್ಪಿಸಿದ್ದ ಆಭರಣಗಳು ಚಿನ್ನದ್ದಲ್ಲ, ಬದಲಿಗೆ ಚಿನ್ನಲೇಪಿತ ತಾಮ್ರ ಎಂದು ದೃಢಪಟ್ಟಿದೆ. ಲೋಹ ತಜ್ಞರ ಪರೀಕ್ಷೆ ನಂತರ, ದೇವಾಲಯದ ಆಡಳಿತಾಧಿಕಾರಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದು, ದಾನಿಗಳಿಂದ ಸಾಮಗ್ರಿಗಳ ಮೌಲ್ಯದ ರಸೀದಿ ಕೇಳಲಾಗಿದೆ.
Read Full Story 05:41 AM (IST) May 11
Karnataka News Live 11 May 2026ಮಳೆ ನಿಂತು 10 ದಿನ ಕಳೆದ್ರೂ ಬಿದ್ದ ಮರಗಳ ಸಂಗ್ರಹಕ್ಕೆ ಜಿಬಿಎ ಪರದಾಟ; ಅಗತ್ಯ ಜಾಗವೇ ಇಲ್ಲ
ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ನೂರಾರು ಮರಗಳು ಧರೆಗುರುಳಿವೆ. ಆದರೆ, ಬಿದ್ದ ಮರಗಳನ್ನು ಸಂಗ್ರಹಿಸಲು ಪಾಲಿಕೆಗೆ ಅಧಿಕೃತ ಡಿಪೋ ಇಲ್ಲದಿರುವುದರಿಂದ, ಸ್ಮಶಾನ ಮತ್ತು ಕೆರೆ ಅಂಗಳಗಳಂತಹ ತಾತ್ಕಾಲಿಕ ಸ್ಥಳಗಳಲ್ಲಿ ಸಂಗ್ರಹಿಸಲಾಗುತ್ತಿದ್ದು, ಇದು ತೆರವು ಕಾರ್ಯ ವಿಳಂಬಕ್ಕೆ ಕಾರಣವಾಗಿದೆ.
Read Full Story 05:34 AM (IST) May 11
Karnataka News Live 11 May 2026ಬೈಕ್ ಸವಾರನ ಸಾವಿಗೆ ಕಾರಣನಾಗಿದ್ದ ವ್ಯಕ್ತಿಗೆ 1 ವರ್ಷದ ಬದಲು 1 ದಿನ ಜೈಲು - ಹೈಕೋರ್ಟ್
14 ವರ್ಷಗಳ ಹಿಂದೆ ಕಾರು ಟೆಸ್ಟ್ ಡ್ರೈವ್ ವೇಳೆ ಬೈಕ್ ಸವಾರನ ಸಾವಿಗೆ ಕಾರಣರಾದ 78 ವರ್ಷದ ವೃದ್ಧನಿಗೆ ಹೈಕೋರ್ಟ್ ಮಾನವೀಯತೆ ತೋರಿದೆ. ಗಾಲಿ ಕುರ್ಚಿಯಲ್ಲಿರುವ ಆರೋಪಿಯ ಒಂದು ವರ್ಷದ ಜೈಲು ಶಿಕ್ಷೆಯನ್ನು ಒಂದು ದಿನಕ್ಕೆ ಇಳಿಸಿ, ಮೃತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿದೆ.
Read Full Story 05:29 AM (IST) May 11
Karnataka News Live 11 May 2026Bengaluru - ಪ್ರೇಯಸಿ ಜತೆ ಪರಾರಿ ಆಗಿದ್ದ ಯುವಕನ ಅಣ್ಣನ ಕಿಡ್ನಾಪ್ ನಾಟಕ ಕೊನೆಗೂ ಬಯಲು
ತನ್ನ ಪ್ರೇಯಸಿಯೊಂದಿಗೆ ಪರಾರಿಯಾದ ಯುವಕನನ್ನು ಮರಳಿ ಕರೆತರಲು, ಯುವತಿಯ ಪೋಷಕರು ಯುವಕನ ಸಹೋದರನನ್ನೇ ಅಪಹರಿಸಿ ಹಲ್ಲೆ ನಡೆಸಿದಂತೆ ನಾಟಕವಾಡಿದ್ದಾರೆ. ಈ ಅಪಹರಣದ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ತನಿಖೆಯ ವೇಳೆ ಇದು ಪೂರ್ವನಿಯೋಜಿತ ನಾಟಕ ಎಂಬುದು ಬೆಳಕಿಗೆ ಬಂದಿದೆ.
Read Full Story 05:21 AM (IST) May 11
Karnataka News Live 11 May 2026ಪ್ರಧಾನಿ ಮೋದಿ ಮಾರ್ಗದಲ್ಲಿ ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಪತ್ತೆ; ಓರ್ವ ಶಂಕಿತನ ಬಂಧನ
ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ತೆರಳುವ ಮಾರ್ಗದಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿ ಆತಂಕ ಸೃಷ್ಟಿಸಿವೆ. ಈ ಸಂಬಂಧ ಸ್ಫೋಟದ ಬೆದರಿಕೆ ಕರೆ ಮಾಡಿದ್ದ ಶಂಕಿತನನ್ನು ವಶಕ್ಕೆ ಪಡೆಯಲಾಗಿದ್ದು, ಭದ್ರತಾ ಲೋಪದ ಕುರಿತು ತನಿಖೆಗಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
Read Full Story