09:43 AM (IST) Feb 12

Karnataka News Live 12 February 2026Breaking News - ಬೆಳ್ಳಂ ಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಬೇಟೆ; ಬೆಸ್ಕಾಂ ಎಇಇ ಸೇರಿ ಅಧಿಕಾರಿಗಳಿಗೆ ಶಾಕ್!

ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು, ಶಿವಮೊಗ್ಗ, ಧಾರವಾಡ ಮತ್ತು ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಸ್ಕಾಂ ಎಇಇ ಅರ್ಜುನ ಆರ್.ಹೆಚ್. ಮತ್ತು ಸರ್ವೇಯರ್ ಸೋಮಲಿಂಗಪ್ಪ ಅವರ ನಿವಾಸ, ಕಚೇರಿ ಹಾಗೂ ಫಾರ್ಮ್‌ ಹೌಸ್‌ಗಳ ಮೇಲೆ ದಾಳಿ ನಡೆಸಿದ್ದಾರೆ.

Read Full Story
08:27 AM (IST) Feb 12

Karnataka News Live 12 February 2026Ballari Illegal Urea Scam - ಬಳ್ಳಾರಿಯಲ್ಲಿ ಅಕ್ರಮವಾಗಿ ಪತ್ತೆಯಾದ ಯೂರಿಯ ಗೊಬ್ಬರ ಜಾಲಕ್ಕೆ ಕೇರಳದ ನಂಟು?

ಬಳ್ಳಾರಿ ನಗರದಲ್ಲಿ ಪೊಲೀಸರು ಅಕ್ರಮ ದಂಧೆಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಕಳೆದ ಒಂದು ತಿಂಗಳಲ್ಲಿ ಮಟ್ಕಾ, ಜೂಜಾಟ ಸೇರಿದಂತೆ 127 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೊಲೀಸ್ ದಾಳಿಯಿಂದಾಗಿ ಅನೇಕ ದಂಧೆಕೋರರು ಊರು ಬಿಟ್ಟು ತಲೆಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ.

Read Full Story
08:14 AM (IST) Feb 12

Karnataka News Live 12 February 2026Karnataka Weather - ರಾಜ್ಯಾದ್ಯಂತ ಒಣಹವೆ; ದಾವಣಗೆರೆಯಲ್ಲಿ 13 ಡಿಗ್ರಿ ತಾಪಮಾನ ದಾಖಲು

ಇಂದು ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ದಾವಣಗೆರೆಯಲ್ಲಿ ರಾಜ್ಯದಲ್ಲೇ ಅತಿ ಕನಿಷ್ಠ ತಾಪಮಾನ 13°C ದಾಖಲಾಗಿದೆ. ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ, ಅದಕ್ಕೆ ತಕ್ಕಂತೆ ಯೋಜನೆ ರೂಪಿಸಿಕೊಳ್ಳುವಂತೆ ಜನರಿಗೆ ಸೂಚಿಸಲಾಗಿದೆ.
Read Full Story
07:45 AM (IST) Feb 12

Karnataka News Live 12 February 2026Karnataka Politics - ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತೆ, ಪದೇ ಪದೆ ಕೇಳ್ಬೇಡಿ ಎಂದ ಸಿಎಂ

ನಾಯಕತ್ವ ಬದಲಾವಣೆಯ ಕುರಿತಾದ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವೂ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದ್ದು, ಈ ಬಗ್ಗೆ ಪದೇ ಪದೇ ಪ್ರಶ್ನೆ ಕೇಳದಂತೆ ಮಾಧ್ಯಮಗಳಿಗೆ ಮನವಿ .

Read Full Story
07:45 AM (IST) Feb 12

Karnataka News Live 12 February 2026ಬಿಜೆಪಿಗ ಮುಖಂಡಗೆ ನೀಡಿದ್ದ ಕರ್ನಾಟಕ ರಾಜ್ಯ ಸಚಿವ ಸ್ಥಾನ ವಾಪಸ್‌!

ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್‌ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.

Read Full Story
07:34 AM (IST) Feb 12

Karnataka News Live 12 February 2026ಕುಸುಮರೋಗಿಗಳಿಗೆ ಉದ್ಯೋಗ ಮೀಸಲು ಬೇಕು-ಬಾಧಿಸೋದು ಗಂಡು ಮಕ್ಕಳನ್ನೇ!

ಕರ್ನಾಟಕ ರಾಜ್ಯ ಹಿಮೋಫಿಲಿಯಾ ಸೊಸೈಟಿ ಕಾರ್ಯದರ್ಶಿ, ಸ್ವತಃ ಕುಸುಮ ರೋಗ ಪೀಡಿತ ಡಾ.ಸುರೇಶ ಹನಗವಾಡಿ ಕಳೆದ 4 ದಶಕದಿಂದ ಕುಸುಮ ರೋಗಿಗಳ ಸೇವೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ.

Read Full Story
07:16 AM (IST) Feb 12

Karnataka News Live 12 February 2026ವಿಧಾನಸೌಧದಲ್ಲಿ ಚಿನ್ನ ಸಿಕ್ಕಿದ್ಹೇಗೆ? ಹಣದ ಬದಲಿಗೆ ಬಂಗಾರ ಕೊಡಲು ತಂದಿದ್ದನೇ? ತನಿಖೆ ಆಗಲಿ - ರವಿಕುಮಾರ್‌

ವಿಧಾನಸೌಧದಲ್ಲಿ 300 ಗ್ರಾಂ ಚಿನ್ನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್ ತನಿಖೆಗೆ ಆಗ್ರಹಿಸಿದ್ದಾರೆ. ಇದು ಲಂಚಾವತಾರ ಮತ್ತು ಭ್ರಷ್ಟಾಚಾರದ ಉದಾಹರಣೆಯಾಗಿದ್ದು, ಇದರಲ್ಲಿ ಭಾಗಿಯಾದ ಸಚಿವರು ಹಾಗೂ ಅಧಿಕಾರಿಗಳು ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
Read Full Story
07:11 AM (IST) Feb 12

Karnataka News Live 12 February 2026ಗಲ್ವಾನ್‌ ಸಂಘರ್ಷದ ಸೇನಾ ಪುಸ್ತಕದಿಂದ‘ರಾಜಕೀಯ ಕದನ’!

ನಿವೃತ್ತ ಭಾರತೀಯ ಸೇನಾ ಮುಖ್ಯಸ್ಥ ಜ. ಎಂ.ಎಂ. ನರವಣೆ ಅವರ ಅಪ್ರಕಟಿತ ಆತ್ಮಕಥೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಆತ್ಮಚರಿತ್ರೆ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಏನಿದು ವಿವಾದ? ಪುಸ್ತಕದಲ್ಲಿ ಅಂಥದ್ದೇನಿದೆ? ರಾಹುಲ್‌ ಗಾಂಧಿ ಆರೋಪವೇನು? ಇತ್ಯಾದಿಗಳ ಮಾಹಿತಿ ಇಲ್ಲಿದೆ.

Read Full Story