ತುಮಕೂರಿನ ಮಹಾತ್ಮಾ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಮರುನಾಮಕರಣ ಮಾಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಜಿಲ್ಲಾಡಳಿತದ ಈ ಕ್ರಮದ ವಿರುದ್ಧ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
- Home
- News
- State
- Karnataka News Live: ಗಾಂಧಿ ಹೆಸರು ತೆಗೆದು ಪರಮೇಶ್ವರ್ ಹೆಸರು - ನರೇಗಾಕ್ಕೆ ಒಂದು ನ್ಯಾಯ, ಸ್ಟೇಡಿಯಂಗೆ ಒಂದು ನ್ಯಾಯವೇ?
Karnataka News Live: ಗಾಂಧಿ ಹೆಸರು ತೆಗೆದು ಪರಮೇಶ್ವರ್ ಹೆಸರು - ನರೇಗಾಕ್ಕೆ ಒಂದು ನ್ಯಾಯ, ಸ್ಟೇಡಿಯಂಗೆ ಒಂದು ನ್ಯಾಯವೇ?

ಬೀದರ್: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ದಿನ ಬೆಳಗಾದರೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಹಾಸನದ ಅರಿಸಿಕೇರಿ ಮಠದ ಕೋಡಿಮಠದ ಶಿವಾನಂದ ರಾಜೇಂದ್ರ ಸ್ವಾಮಿಗಳು ಭವಿಷ್ಯ ನುಡಿದಿದ್ದು, ಯುಗಾದಿವರೆಗೆ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ಹಾಲುಮತದ ಜನರ ಕೈಗೆ ಅಧಿಕಾರ ಸಿಕ್ಕರೆ ಅವರಿಂದ ಅಧಿಕಾರ ಪಡೆಯುವುದು ಕಷ್ಟ. ಸದ್ಯ ರಾಜರ ಭಂಡಾರ (ಬಜೆಟ್) ಆಗಬೇಕು. ಹಾಲುಮತದ ಹಕ್ಕ-ಬುಕ್ಕರು ಹಾಲುಮತ ಸಮಾಜದ ಪ್ರಮುಖರಿದ್ದರು, ವಿಜಯನಗರ ಸಾಮ್ರಾಜ್ಯ ಕಟ್ಟಿದ್ದರು. ಛತ್ರಪತಿ ಶಿವಾಜಿ ಕೂಡ ಹಾಲಮತದವರು, ಕಾಶಿ ವಿಶ್ವನಾಥದ ರಾಣಿ ಅಹಿಲ್ಯಾ ಬಾಯಿ ಅದೇ ಸಮಾಜದವರಾಗಿದ್ದರು. ಹೀಗಾಗಿ ಈ ಸಮಾಜ ಪ್ರಾಚೀನ ಮತ್ತು ದೈವೀಕ ಶಕ್ತಿಯುಳ್ಳ ಸಮಾಜವಾಗಿದೆ. ಸಿದ್ದರಾಮಯ್ಯ ಕೂಡ ಹಾಲುಮತ ಸಮಾಜದ ಮೊಟ್ಟ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಸಾಧ್ಯವಿದೆ ಎಂದು ಭವಿಷ್ಯ ನುಡಿದಿದ್ದಾರೆ.
Karnataka News Live 12 January 2026 ಗಾಂಧಿ ಹೆಸರು ತೆಗೆದು ಪರಮೇಶ್ವರ್ ಹೆಸರು - ನರೇಗಾಕ್ಕೆ ಒಂದು ನ್ಯಾಯ, ಸ್ಟೇಡಿಯಂಗೆ ಒಂದು ನ್ಯಾಯವೇ?
Karnataka News Live 12 January 2026 ಧಾರವಾಡ ಕಿಡ್ನ್ಯಾಪ್ ಕೇಸ್ - ಜೋಯಿಡಾದಲ್ಲಿ ಮಕ್ಕಳ ರಕ್ಷಣೆ, ಅಪಹರಣಕಾರ ಮಹ್ಮದ್ ಕರೀಂ ಬಂಧನ!
Karnataka News Live 12 January 2026 ಪುನೀತ್ ಕೆರೆಹಳ್ಳಿ ತಂಡದಿಂದ ಅಕ್ರಮ ವಲಸಿಗರ ಬೇಟೆ - ಪೊಲೀಸರು ಮಾಡಬೇಕಾದ ಕೆಲಸವನ್ನು ಸಂಘಟನೆಗಳು ಮಾಡಬೇಕೇ?
Karnataka News Live 12 January 2026 ಸಿದ್ದರಾಮಯ್ಯ ಮೇಲೆ ದೈವಕೃಪೆ - ಹಾಲುಮತದ ಬಗ್ಗೆ ಮಾತನಾಡಿದರೆ ಸರ್ವನಾಶ; ರಾಜಕಾರಣಿಗೆ ಕೋಡಿಶ್ರೀ ವಾರ್ನ್!
ತಿಂಥಿಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಡಿ ಮಠದ ಶ್ರೀಗಳು, ಸಿಎಂ ಸಿದ್ದರಾಮಯ್ಯರ ಯಶಸ್ಸಿಗೆ ದೈವಕೃಪೆಯೇ ಕಾರಣ ಎಂದಿದ್ದಾರೆ. ಹಾಲುಮತ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದರೆ ಸರ್ವನಾಶ ತಪ್ಪಿದ್ದಲ್ಲ ಎಂದು ಎಚ್ಚರಿಸಿದ ಅವರು, ಬಜೆಟ್ ಮುಗಿಯುವವರೆಗೂ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಭವಿಷ್ಯ
Karnataka News Live 12 January 2026 ಧಾರವಾಡ ಕಿಡ್ನ್ಯಾಪ್ ಕೇಸ್ ಸುಖಾಂತ್ಯ - ಜೋಯಿಡಾದಲ್ಲಿ ಪತ್ತೆಯಾದ್ರು ಶಾಲಾ ಮಕ್ಕಳು! ಅಪಹರಣಕಾರ ಸಿಕ್ಕಿಬಿದ್ದಿದ್ದೇ ರೋಚಕ!
ಧಾರವಾಡದ ಕಮಲಾಪುರ ಶಾಲೆಯಿಂದ ಅಪಹರಣಕ್ಕೊಳಗಾಗಿದ್ದ ಇಬ್ಬರು ಮಕ್ಕಳು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ ಪತ್ತೆಯಾಗಿದ್ದಾರೆ. ಅಪಹರಣಕಾರನು ಬೈಕ್ ಅಪಘಾತಕ್ಕೀಡಾದ ನಂತರ, ಸ್ಥಳಕ್ಕೆ ಬಂದ ಪೊಲೀಸರು ಮಕ್ಕಳನ್ನು ರಕ್ಷಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
Karnataka News Live 12 January 2026 ಸುಗ್ಗಿಯ ಹಬ್ಬ ಸಂಕ್ರಾಂತಿ ಜ.14ಕ್ಕೋ ಅಥವಾ 15ಕ್ಕೋ? ಸರ್ಕಾರಿ ರಜೆ ಇರೋದು ಯಾವಾಗ? ಒಮ್ಮೆ ನೋಡಿ!
ಕನ್ನಡ ನಾಡಿನ ಸುಗ್ಗಿಯ ಸಂಭ್ರಮ ಕೊಡುವ ಮಕರ ಸಂಕ್ರಾಂತಿ ಹಬ್ಬ ಜ.14ಕ್ಕೋ ಅಥವಾ 15ಕ್ಕೋ? ಈ ಗೊಂದಲಕ್ಕೆ ಇಲ್ಲಿದೆ ಉತ್ತರ. ಹಬ್ಬದ ನಿಖರ ದಿನಾಂಕ, ಸರ್ಕಾರಿ ರಜೆ, ಮತ್ತು ಆಚರಣೆಯ ಸಂಪೂರ್ಣ ಮಾಹಿತಿ ತಿಳಿಯಿರಿ.
Karnataka News Live 12 January 2026 ಲಕ್ಕುಂಡಿ ನಿಧಿ ಪ್ರಕರಣ - ‘ಅದು ಚಿನ್ನ ಅಲ್ಲ’ ಎಂದಿದ್ದ ಅಧಿಕಾರಿ ಈಗ ಯು-ಟರ್ನ್!
Karnataka News Live 12 January 2026 ಹಾಟ್ ಅವತಾರದಲ್ಲಿ ಪಡ್ಡೆ ಹೈಕಳ ನಿದ್ದೆ ಕದ್ದ Bigg Boss ಸ್ಪಂದನಾ ಸೋಮಣ್ಣ - ವಿಡಿಯೋ ವೈರಲ್
ಬಿಗ್ಬಾಸ್ ಸೀಸನ್ 12ರ ಮೂಲಕ ಖ್ಯಾತಿ ಪಡೆದ ನಟಿ ಸ್ಪಂದನಾ ಸೋಮಣ್ಣ, ತಮ್ಮ ನಟನಾ ವೃತ್ತಿಜೀವನದ ಜೊತೆಗೆ ಇತ್ತೀಚೆಗೆ ಮಾಡಿಸಿದ ಹಾಟ್ ಫೋಟೋಶೂಟ್ನಿಂದ ಸದ್ದು ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ ಫೋಟೋಗಳು.
Karnataka News Live 12 January 2026 ಧಾರವಾಡದಲ್ಲಿ ಆತಂಕ - ಶಾಲೆಯಿಂದ ಇಬ್ಬರು 3ನೇ ತರಗತಿ ಮಕ್ಕಳ ಕಿಡ್ನ್ಯಾಪ್, ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯ!
Karnataka News Live 12 January 2026 ಬೆಂಗಳೂರಲ್ಲೇ ಇದೆ ಟಾಕ್ಸಿಕ್ ಟೀಸರ್ನ ವಿದೇಶಿ ಜಗತ್ತು; ಕಾರು ಗುದ್ದಿದ ಶೂಟಿಂಗ್ ಸ್ಪಾಟ್ ರಿವೀಲ್ ಮಾಡಿದ ಅಲೆಮಾರಿ!
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟೀಸರ್ ವಿದೇಶದಲ್ಲಿ ಚಿತ್ರೀಕರಿಸಿದ್ದಲ್ಲ, ಬದಲಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಟ್ ಹಾಕಿ ಶೂಟಿಂಗ್ ಮಾಡಲಾಗಿದೆ. ಯೂಟ್ಯೂಬರ್ ಅಲೆಮಾರಿ ಅಮಿತ್ ಈ ಶೂಟಿಂಗ್ ಸ್ಪಾಟ್ನ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ಈ ಟೀಸರ್ 84 ಮಿಲಿಯನ್ ವೀಕ್ಷಣೆ ಪಡೆದಿದೆ.
Karnataka News Live 12 January 2026 Shivamogga ಸೊರಬದ ಹಾಯ ಗ್ರಾಮ 10ನೇ ಶತಮಾನದ ಮೂರು ಶಾಸನೋಕ್ತ ಗೋದಾನದ ಕಲ್ಲುಗಳು ಪತ್ತೆ!
ಸೊರಬ ತಾಲೂಕಿನ ಹಾಯ ಗ್ರಾಮದಲ್ಲಿ 10ನೇ ಶತಮಾನಕ್ಕೆ ಸೇರಿದ ಮೂರು ಶಾಸನೋಕ್ತ ಗೋದಾನದ ಕಲ್ಲುಗಳು ಪತ್ತೆಯಾಗಿವೆ. ರಾಷ್ಟ್ರಕೂಟರ ಕಾಲದ ಈ ಶಾಸನಗಳು, ಕುಪ್ಪಗಡ್ಡೆಯ ಮಹಾಜನಗಳಿಗೆ ಗೋದಾನ ನೀಡಿದ ವಿವರಗಳನ್ನು ಮತ್ತು ಕೃಷಿ ಮಹತ್ವ ಸಾರುವ ಚಿನ್ಹೆಗಳನ್ನು ಒಳಗೊಂಡಿವೆ.
Karnataka News Live 12 January 2026 BBK ಗಿಲ್ಲಿ ನಟ ಭಾವುಕ - ಸೋತಿರ್ಬೋದು ಆದ್ರೆ ಸತ್ತಿಲ್ಲ, ಎವಿಕ್ಟ್ ಆದೆ ಆದ್ರೆ ಜನರ ಮನಸ್ಸಿಂದ ಡಿಲೀಟ್ ಆಗ್ಲಿಲ್ಲ!
ಬಿಗ್ಬಾಸ್ ಫಿನಾಲೆ ಸಮೀಪಿಸುತ್ತಿದ್ದಂತೆ, ಮನೆಯಿಂದ ಹೊರಹೋಗುವ ಬಗ್ಗೆ ಸುದೀಪ್ ಪ್ರಶ್ನೆಗೆ ಗಿಲ್ಲಿ ನಟ ಭಾವುಕ ಉತ್ತರ ನೀಡಿದ್ದಾರೆ. ತಾನು ಎವಿಕ್ಟ್ ಆಗಬಹುದು ಆದರೆ ಜನರ ಮನಸ್ಸಿನಿಂದ ಡಿಲೀಟ್ ಆಗುವುದಿಲ್ಲ ಎಂದ ಅವರ ಮಾತು ವೈರಲ್ ಆಗಿದೆ.
Karnataka News Live 12 January 2026 ಟಾಕ್ಸಿಕ್ ಚಿತ್ರದ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು - ಯಶ್ಗೆ ಕಾನೂನು ಸಂಕಷ್ಟ, ಫ್ಯಾನ್ಸ್ಗೆ ಆತಂಕ ಮೂಡಿಸಿದ ಆಯೋಗದ ಪತ್ರ!
Karnataka News Live 12 January 2026 ತುಂಗಭದ್ರಾ ಡ್ಯಾಂನ ಎಲ್ಲ ಗೇಟ್ ಬದಲಾವಣೆ ಮೇನಲ್ಲಿ ಅಂತ್ಯ, 3 ರಾಜ್ಯಗಳಿಂದ 54 ಕೋಟಿ ವೆಚ್ಚ, ಕರ್ನಾಟಕದ ಪಾಲೆಷ್ಟು?
Karnataka News Live 12 January 2026 ಚಾಮರಾಜನಗರ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಹಣ ನೀಡದ ರಾಜ್ಯಸರ್ಕಾರ, ಕೌಲಂದೆ ನಿಲ್ದಾಣದಲ್ಲಿ ಕ್ರಾಸಿಂಗ್ಗೆ ಒತ್ತಾಯ
ಚಾಮರಾಜನಗರ ರೈಲ್ವೇ ಯೋಜನೆಗೆ ಶತಮಾನ ತುಂಬಿದರೂ, ನಂಜನಗೂಡು-ಚಾಮರಾಜನಗರ ನಡುವೆ ಕೌಲಂದೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ ಇಲ್ಲದಿರುವುದು ಹೆಚ್ಚಿನ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ಇದರ ಜೊತೆಗೆ, ಮೆಟ್ಟುಪಾಳ್ಯಂ ಮತ್ತು ಹೆಜ್ಜಾಲ-ಚಾಮರಾಜನಗರದಂತಹ ದಶಕಗಳ ಬೇಡಿಕೆಯ ಯೋಜನೆಗಳೂ ನೆನೆಗುದಿಗೆ ಬಿದ್ದಿವೆ.
Karnataka News Live 12 January 2026 ಚಿಕ್ಕೋಡಿ - 90 ವರ್ಷದ ವೃದ್ಧೆಯ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಲ್ಲೆ; ರಸ್ತೆಗಿಳಿದ ಅನ್ನದಾತರು!
Karnataka News Live 12 January 2026 'ಬಿಗ್ ಬಾಸ್ ನನ್ನ ಮನೆಗೆ ಕಳಿಸಿ' ಎನ್ನುತ್ತಲೇ ಫೈನಲ್ಗೇರಿದ 'ಧ್ರುವಂತನ 10 ಸದ್ಗುಣ' ಬಿಚ್ಚಿಟ್ಟ ಮಹಿಳೆ!
ಬಿಗ್ ಬಾಸ್ ಸೀಸನ್ 12ರ ಫೈನಲಿಸ್ಟ್ ಸ್ಪರ್ಧಿಗಳಲ್ಲಿ ಒಬ್ಬರಾದ ಧ್ರುವಂತ್, ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಅನೇಕರು ಪರಿಗಣಿಸುತ್ತಿದ್ದಾರೆ. ಅವರ ಉತ್ತಮ ಗುಣಗಳು, ಸೀಕ್ರೆಟ್ ರೂಮ್ ನಂತರ ಬದಲಾದ ಆಟ ಮತ್ತು ಕಿಚ್ಚ ಸುದೀಪ್ ಅವರಿಂದ 'ಕಿಚ್ಚನ ಚಪ್ಪಾಳೆ' ಪಡೆದಿದ್ದು ಅವರ ಗೆಲುವಿನ ಸಾಧ್ಯತೆ ಹೆಚ್ಚಿಸಿದೆ.
Karnataka News Live 12 January 2026 ಇದು ದಕ್ಷಿಣ ಭಾರತದ ನಟಿಯ ದುಬಾರಿ ನಿವಾಸ, ಇಂಟಿರಿಯರ್ ನೋಡಿದ್ರೆನೇ ಕಳೆದೋಗ್ತಿರಿ, ಗಂಡನಿಗಿಂತ ಈಕೆಯ ಆಗರ್ಭ ಶ್ರೀಮಂತೆ!
ದಕ್ಷಿಣ ಭಾರತದ ಈ ನಟಿ ಚೆನ್ನೈನ ಪ್ರತಿಷ್ಠಿತ ಪೋಯಸ್ ಗಾರ್ಡನ್ನಲ್ಲಿ ಐಷಾರಾಮಿ ಬಂಗಲೆಯನ್ನು ಹೊಂದಿದ್ದಾರೆ. ಈ ಲೇಖನವು ಅವರ ₹200 ಕೋಟಿ ನಿವ್ವಳ ಮೌಲ್ಯ, ರಿಯಲ್ ಎಸ್ಟೇಟ್ ಹೂಡಿಕೆಗಳು, ಖಾಸಗಿ ಜೆಟ್, ಮತ್ತು ಅವರ ಮನೆಗಳ ವಿಶಿಷ್ಟ ಒಳಾಂಗಣ ವಿನ್ಯಾಸದ ಬಗ್ಗೆ ವಿವರಿಸುತ್ತದೆ.
Karnataka News Live 12 January 2026 ಗಿಲ್ಲಿ ನಟ ಮದ್ವೆಯಾಗೋ ಹುಡುಗಿ ಇವಳೇ - ಆಪ್ತ ಸ್ನೇಹಿತ ರಿವೀಲ್! Bigg Bossನಿಂದ ಬಂದ ಮೇಲೆ ಗುಡ್ನ್ಯೂಸ್
ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿ ಗಿಲ್ಲಿ ನಟ, ಕಾವ್ಯಾ ಶೈವ ಮೇಲೆ ಮನಸೋತಿದ್ದಾರೆ. ಆದರೆ, ರಕ್ಷಿತಾ ಶೆಟ್ಟಿ ಕೂಡ ಗಿಲ್ಲಿ ಬಗ್ಗೆ ಆಸಕ್ತಿ ತೋರಿದ್ದು, ಮನೆಯಲ್ಲಿ ತ್ರಿಕೋನ ಪ್ರೇಮಕಥೆ ಸೃಷ್ಟಿಯಾಗಿದೆ. ಈ ನಡುವೆ, ಗಿಲ್ಲಿಯ ಆಪ್ತ ಸ್ನೇಹಿತ ದೀಪಕ್ ಗೌಡ, ಗಿಲ್ಲಿ ನಟನ ಮದುವೆ ಬಗ್ಗೆ ಹೇಳಿದ್ದೇನು?
Karnataka News Live 12 January 2026 ಅಂಕೋಲಾದ ಸುಂಕಸಾಳದಲ್ಲಿ ಬ್ಯಾಂಕ್ ಆಫ್ ಬರೋಡಾದಲ್ಲಿ ದರೋಡೆಗೆ ವಿಫಲ ಯತ್ನ - ಸ್ಟ್ರಾಂಗ್ ರೂಮ್ ಒಡೆಯಲಾಗದೆ ಕಳ್ಳರು ಪರಾರಿ
ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆದಿದೆ. ಬ್ಯಾಂಕ್ನ ಶೌಚಾಲಯದ ಗೋಡೆ ಕೊರೆದು ಒಳನುಗ್ಗಿದ ದುಷ್ಕರ್ಮಿಗಳು, ಹಣ ಹಾಗೂ ಚಿನ್ನಾಭರಣವಿದ್ದ ಸ್ಟ್ರಾಂಗ್ ರೂಮ್ ಒಡೆಯಲು ಸಾಧ್ಯವಾಗದೆ ಬರಿಗೈಯಲ್ಲಿ ಪರಾರಿಯಾಗಿದ್ದಾರೆ.