08:05 AM (IST) Mar 12

Karnataka News Live 12 March 2026ಚಿತ್ರದುರ್ಗ - ಕಾಂಗ್ರೆಸ್ ಕಾರ್ಯಕರ್ತರಿಂದ ರಾಷ್ಟ್ರಧ್ವಜಕ್ಕೆ ಅವಮಾನ? ಪಕ್ಷದ ಧ್ವಜದೊಂದಿಗೆ ರಾಷ್ಟ್ರಧ್ವಜವೂ ಚರಂಡಿಗೆ!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ, ಕಾಂಗ್ರೆಸ್ ಕಚೇರಿಯ ಬಳಿ ರಾಷ್ಟ್ರಧ್ವಜವನ್ನು ಪಕ್ಷದ ಧ್ವಜಗಳೊಂದಿಗೆ ಬೇಜವಾಬ್ದಾರಿಯಿಂದ ಎಸೆದಿರುವ ಘಟನೆ ನಡೆದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Read Full Story
07:47 AM (IST) Mar 12

Karnataka News Live 12 March 2026Parappana Agrahara ಜೈಲೊಳಗೆ ಒಳಉಡುಪಲ್ಲಿ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡ್ರಗ್ಸ್ ಪೂರೈಸಲು ಯತ್ನಿಸಿದ ವಾರ್ಡನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಕೆಲಸದ ಮನೆಯಲ್ಲಿ ಕಳ್ಳತನ ಮಾಡಿದ ಮಹಿಳೆಯನ್ನೂ ಬಂಧಿಸಲಾಗಿದೆ.
Read Full Story
07:37 AM (IST) Mar 12

Karnataka News Live 12 March 2026Bengaluru Traffic - ಇಂದು ಬೆಂಗಳೂರಿನ ಈ ರಸ್ತೆಗಳತ್ತ ಹೋಗದಿರಿ! ಪರ್ಯಾಯ ಮಾರ್ಗದ ಮಾಹಿತಿ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಿಂದಾಗಿ, ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಶೇಷಾದ್ರಿ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಪೊಲೀಸರು ಸಾರ್ವಜನಿಕರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.
Read Full Story
07:17 AM (IST) Mar 12

Karnataka News Live 12 March 2026ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳು ಬಂದ್‌

ಗ್ಯಾಸ್‌ ಸಿಲಿಂಡರ್‌ಗಳ ಕೊರತೆ ಹಿನ್ನೆಲೆಯಲ್ಲಿ ನಗರದ 30ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳಲ್ಲಿ ಬುಧವಾರ ಊಟ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳಿಗೆ ಸಿಲಿಂಡರ್ ಪೂರೈಕೆಯಾಗದಿದ್ದರೆ ನಗರದ 175ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳು ಬಂದ್ ಮಾಡುವ ಆತಂಕ

Read Full Story
07:09 AM (IST) Mar 12

Karnataka News Live 12 March 2026Alnavar-Dandeli - ಶಾಸಕ ಆರ್.ವಿ. ದೇಶಪಾಂಡೆ ಮನವಿ ಮೇರೆಗೆ ರೈಲಿನ ವೇಳಾಪಟ್ಟಿ ಬದಲಾವಣೆ

ಶಾಸಕ ಆರ್.ವಿ. ದೇಶಪಾಂಡೆ ಅವರ ಪ್ರಯತ್ನದ ಫಲವಾಗಿ, ಅಳ್ನಾವರ-ದಾಂಡೇಲಿ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಈ ಹಿಂದೆ ಭಾನುವಾರ ರಜೆ ಇರುತ್ತಿದ್ದ ರೈಲು ಇನ್ನು ಮುಂದೆ ಗುರುವಾರ ಹೊರತುಪಡಿಸಿ ವಾರದ ಆರು ದಿನ ಸಂಚರಿಸಲಿದೆ. ಬೆಳಗಿನ ಮತ್ತು ಸಂಜೆಯ ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
Read Full Story
07:02 AM (IST) Mar 12

Karnataka News Live 12 March 2026ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ

‘ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಪೂರೈಕೆಯಲ್ಲಿ ಸಮಸ್ಯೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟ ಹಾಗೂ ಅಕ್ರಮ ದಾಸ್ತಾನು ಆಗದಂತೆ ಪೊಲೀಸ್‌, ಸಾರಿಗೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು’ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಸೂಚನೆ ನೀಡಿದ್ದಾರೆ

Read Full Story
07:00 AM (IST) Mar 12

Karnataka News Live 12 March 2026Chikkaballapur baby murder case - ಅನ್ಯಕೋಮಿನವನ ಜತೆ ಮದುವೆ; ಮೊಮ್ಮಗಳ 40 ದಿನದ ಶಿಶುವನ್ನೇ ಕತ್ತು ಹಿಸುಕಿ ಕೊಂದ ಅಜ್ಜಿ!

ಚಿಕ್ಕಬಳ್ಳಾಪುರದಲ್ಲಿ ಅನ್ಯಕೋಮಿನ ಯುವಕನನ್ನು ಮದುವೆಯಾದ ಮೊಮ್ಮಗಳ 40 ದಿನದ ಹಸುಗೂಸನ್ನು ಅಜ್ಜಿಯೇ ಕತ್ತು ಹಿಸುಕಿ ಕೊಂದಿದ್ದಾಳೆ. ಉಸಿರಾಟದ ಸಮಸ್ಯೆಯಿಂದ ಮಗು ಸತ್ತಿದೆ ಎಂದು ನಾಟಕವಾಡಿದ್ದರೂ, ಎಫ್‌ಎಸ್‌ಎಲ್ ವರದಿಯಿಂದ ಕೊಲೆ ರಹಸ್ಯ ಬಯಲಾಗಿದ್ದು, ಪೊಲೀಸರು ಆರೋಪಿ ಅಜ್ಜಿಯನ್ನು ಬಂಧಿಸಿದ್ದಾರೆ.
Read Full Story