LIVE NOW
Karnataka News Live: ತಮಿಳುನಾಡಿಗೆ 8500 ಕ್ಯುಸೆಕ್ ನೀರು: ಕಾವೇರಿ ನದಿಗಿಳಿದು ಪ್ರತಿಭಟನೆ

ಸಾರಾಂಶ
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನಿತ್ಯ 8500 ಕ್ಯುಸೆಕ್ಗೂ ಅಧಿಕ ನೀರನ್ನು ಹರಿಸುತ್ತಿದ್ದಾರೆ ಎಂದು ಆರೋಪಿಸಿ ಭೂಮಿತಾಯಿ ಹೋರಾಟ ಸಮಿತಿ ಸದಸ್ಯರು ಕಾವೇರಿ ನದಿಗಿಳಿದು ಪ್ರತಿಭಟಿಸಿದರು. ಪಟ್ಟಣದ ಸ್ನಾನ ಘಟ್ಟದ ಬಳಿ ಸಮಿತಿ ರೈತ ಮುಖಂಡ ಕೆ.ಎಸ್.ನಂಜುಡೇಗೌಡ, ಸಮಿತಿ ಅಧ್ಯಕ್ಷ ಬಿಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ರೈತರು ನದಿಗಿಳಿದು ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಂಜುಂಡೇಗೌಡ ಮಾತನಾಡಿ, ಸರ್ಕಾರ ಸ್ಥಳೀಯ ನಾಲೆಗಳಿಗೆ ನೀರು ಹರಿಸಿ ರೈತರ ಬೆಳೆ ಉಳಿಸಲು ಮುಂದಾಗುತ್ತಿಲ್ಲ. ಬದಲಿಗೆ ಕಾವೇರಿ ನೀರು ಪ್ರಾಧಿಕಾರ ಹೇಳಿದಂತೆ ಪ್ರತಿ ಬಾರಿ ತಮಿಳುನಾಡಿಗೆ ನೀರು ಹರಿಸುತ್ತಾ ಬಂದಿದೆ. 2 ತಿಂಗಳ ಹಿಂದೆ ಕಟಾವಿಗೆ ಬಂದ ಬೆಳೆ ಬಾಡುತ್ತಿರುವ ಬಗ್ಗೆ ರೈತರು ಸಿಎಂ ಬಳಿ ನೀರು ಕೇಳಿ ಮನವಿ ಮಾಡಿದರೂ ಮುಖ್ಯಮಂತ್ರಿ ನೀರು ಕೇಳಬೇಡಿ, ಬೆಳೆ ಬೆಳೆಯಬೇಡಿ ಎಂದು ರೈತರಿಗೆ ಉಡಾಫೆ ಉತ್ತರ ನೀಡಿ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದರು.