ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉದ್ಯೋಗ ಸೃಷ್ಟಿಯ ಕಾರಣ ನೀಡಿ ಇನ್ನೋವೇಟಿವ್ ಫಿಲಂ ಸಿಟಿಗೆ ನೀಡಿದ್ದ ನೋಟಿಸ್ ಹಿಂಪಡೆಯಲು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದ್ದನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಪತ್ನಿಯ ಟಿವಿ ವೀಕ್ಷಣೆ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ಬಗ್ಗೆಯೂ ಅವರು ಮಾತನಾಡಿದ್ದಾರೆ.
- Home
- News
- State
- Karnataka News Live: ನಮ್ಮನೇಲಿ ನನ್ ಹೆಂಡ್ತಿ ನ್ಯೂಸ್ ನೋಡಲ್ಲ, ಬಿಗ್ ಬಾಸ್ ನೋಡ್ತಾರೆ; ಡಿ.ಕೆ. ಶಿವಕುಮಾರ್
Karnataka News Live: ನಮ್ಮನೇಲಿ ನನ್ ಹೆಂಡ್ತಿ ನ್ಯೂಸ್ ನೋಡಲ್ಲ, ಬಿಗ್ ಬಾಸ್ ನೋಡ್ತಾರೆ; ಡಿ.ಕೆ. ಶಿವಕುಮಾರ್

ಬೆಂಗಳೂರು: ಹಿರಿಯ ಚಿತ್ರನಟಿ ದಿ.ಲೀಲಾವತಿ ಅವರ ಪುತ್ರ, ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ವಿನೋದ್ ರಾಜ್ ಅವರು ತಾವೇ ಸ್ವತಃ ತಮ್ಮ ತೋಟದ ಜಮೀನಿನ ಗದ್ದೆಯಲ್ಲಿ ಭತ್ತ ಬೆಳೆದು, ಕಟಾವಿಗೂ ಮೊದಲು ಪೂಜೆ ನೆರವೇರಿಸಿ, ಭತ್ತವನ್ನು ಸ್ವತಃ ತಾವೇ ಕಟಾವು ಮಾಡಿ ರೈತರಿಗೆ ಮಾದರಿಯಾಗಿದ್ದಾರೆ. ಸೋಲದೇವನಹಳ್ಳಿಯಲ್ಲಿ ವಾಸವಾಗಿರುವ ನಟ ವಿನೋದ್ ರಾಜ್ ಅವರು ತಮ್ಮ ತೋಟದಲ್ಲಿ ತುಂತುರು ನೀರಾವರಿ ಪದ್ಧತಿಯಲ್ಲಿ ಅವರೇ ಉತ್ತಮ ತಳಿಯ ಭತ್ತವನ್ನು ನಾಟಿ ಮಾಡಿದ್ದರು. ಉತ್ತಮ ಭತ್ತದ ಬೆಳೆ ಬೆಳೆದಿದ್ದು, ಸಮಗ್ರ ಕೃಷಿ ಜೊತೆಗೆ ತೋಟಗಾರಿಕೆ ಬೆಳೆಗಳಿಗೆ ಮುಂದಾಗಿದ್ದಾರೆ. ಭತ್ತದ ಬೆಳೆಯ ಕಟಾವಿಗೂ ಮೊದಲು ಪೂಜೆ ಮಾಡಿ ತೋಟದ ಕೆಲಸಗಾರರ ಜೊತೆ ಭತ್ತವನ್ನು ಕಟಾವು ಮಾಡಿ ಅವರೇ ಗದ್ದೆಯಿಂದ ಟ್ರ್ಯಾಕ್ಟರ್ಮೂಲಕ ಭತ್ತವನ್ನು ಮನೆಗೆ ರವಾನಿಸಿದ್ದಾರೆ.
Karnataka News Live 12th October 2025 ನಮ್ಮನೇಲಿ ನನ್ ಹೆಂಡ್ತಿ ನ್ಯೂಸ್ ನೋಡಲ್ಲ, ಬಿಗ್ ಬಾಸ್ ನೋಡ್ತಾರೆ; ಡಿ.ಕೆ. ಶಿವಕುಮಾರ್
Karnataka News Live 12th October 2025 Amruthadhaare Serial - ಭೂಮಿಕಾ, ಯಾವುದು ಆಗಬಾರದು ಅನ್ಕೊಂಡಿದ್ದಳೋ ಅದೇ ಆಗೋಯ್ತು; ಭರ್ಜರಿ ಟ್ವಿಸ್ಟ್!
Amruthadhaare Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಭೂಮಿಕಾ ಹಾಗೂ ಗೌತಮ್ಗೆ ದೊಡ್ಡ ಶಾಕ್ ಎದುರಾಗಿದೆ. ಗೌತಮ್ ಬಯಸದೆ ಇರೋದು ಕಣ್ಣು ಮುಂದೆ ಬಂದಿದೆ. ಈಗ ಅವನು ಏನು ಮಾಡುತ್ತಾನೆ?
Karnataka News Live 12th October 2025 BBK 12 - ಎಲಿಮಿನೇಶನ್ ಟೆನ್ಶನ್ನಲ್ಲಿದ್ದವ್ರಿಗೆ ಕಿಚ್ಚ ಸುದೀಪ್ರಿಂದ ಸರ್ಪ್ರೈಸ್; ಇದು ಅಂತಿಂಥ ವಿಷಯ ಅಲ್ಲ
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಎರಡನೇ ವಾರ ಎಲಿಮಿನೇಶನ್ ನಡೆಯಲಿದೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ದರು. ಆದರೆ ಕಿಚ್ಚ ಸುದೀಪ್ ಅವರು ದೊಡ್ಡ ಸರ್ಪ್ರೈಸ್ ನೀಡಿದ್ದಾರೆ. ಇದು ಅಂತಿಂಥ ಸರ್ಪ್ರೈಸ್ ಅಲ್ಲವೇ ಅಲ್ಲ!
Karnataka News Live 12th October 2025 ಮುಖದಲ್ಲಾಗುವ ಈ ಬದಲಾವಣೆ ಫ್ಯಾಟಿ ಲಿವರ್ ಸಮಸ್ಯೆಯ ಆರಂಭಿಕ ಚಿಹ್ನೆಗಳು
Fatty Liver Symptoms: ಈ ಚಿಹ್ನೆಗಳು ಮತ್ತು ಲಕ್ಷಣಗಳನ್ನು ಗಮನಿಸಿದರೆ ಫ್ಯಾಟಿ ಲಿವರ್ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬಹುದು. ಇಲ್ಲಿ ಆರಂಭಿಕ ಚಿಹ್ನೆಗಳನ್ನು ವಿವರಿಸುತ್ತೇವೆ. ನೀವು ಈ ಲಕ್ಷಣಗಳನ್ನು ಗಮನಿಸಿದರೆ ತಡಮಾಡದೆ ವೈದ್ಯರನ್ನು ಸಂಪರ್ಕಿಸಬೇಕು.
Karnataka News Live 12th October 2025 ನಿಮ್ಮ ತಂದೆ RSS ಕಾರ್ಯ ಮೆಚ್ಚಿ ಸಹಕಾರ ನೀಡಿರುವುದು ಮರೆತಿದ್ದೀರಾ? ಪ್ರಿಯಾಂಕ್ ಖರ್ಗೆ ಬಿಜೆಪಿ ಪ್ರಶ್ನೆ
ನಿಮ್ಮ ತಂದೆ RSS ಕಾರ್ಯ ಮೆಚ್ಚಿ ಸಹಕಾರ ನೀಡಿರುವುದು ಮರೆತಿದ್ದೀರಾ? ಪ್ರಿಯಾಂಕ್ ಖರ್ಗೆ ಬಿಜೆಪಿ ಪ್ರಶ್ನೆ ಮಾಡಿದೆ. 2002ರ ಘಟನೆ ಫೋಟೋ ಪೋಸ್ಟ್ ಮಾಡಿರುವ ಬಿಜೆಪಿ, ಹೈಕಮಾಂಡ್ ಮೆಚ್ಚಿಸಲು ಪ್ರಿಯಾಂಕ್ ಖರ್ಗೆ ನಾಟಕವಾಡುತ್ತಿದ್ದೀರಾ ಎಂದು ಪ್ರಶ್ನಿಸಿದೆ.
Karnataka News Live 12th October 2025 ಬೆಂಗಳೂರಲ್ಲಿ ಸ್ವಂತ ಕಚೇರಿ ಸ್ಥಾಪನೆಗೆ ಮುಗಿಬಿದ್ದ ಎಂಎನ್ಸಿ ಕಂಪನಿಗಳು; ಬಿಟ್ಟು ಹೋಗ್ತೀನೆಂದವರಿಗೆ ಡಿಕೆಶಿ ಶಾಕ್!
ಬೆಂಗಳೂರು ಬಿಟ್ಟು ಹೋಗ್ತೀನೆಂದವರು ಹೋಗ್ಲಿ ನೋಡೋಣ, ಅಮೇರಿಕಾದ ವೀಸಾ ಸಮಸ್ಯೆ ನಂತರ ಹಲವು ಅಂತಾರಾಷ್ಟ್ರೀಯ ಕಂಪನಿಗಳು ಬೆಂಗಳೂರೇ ಬೇಕೆಂದು ಇಲ್ಲಿಯೇ ಭೂಮಿ ಖರೀದಿಸುತ್ತಿವೆ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ರಸ್ತೆಗುಂಡಿ, ಟ್ರಾಫಿಕ್ ಸಮಸ್ಯೆಗಳನ್ನು ಒಪ್ಪಿಕೊಂಡರು.
Karnataka News Live 12th October 2025 ಅಕ್ರಮ ಚಟುವಟಿಕೆಗಳಿಗೆ ರಾಜ್ಯ ಸರ್ಕಾರದ ಆಶೀರ್ವಾದವೇ ಕಾರಣ - ಸಂಸದ ಬೊಮ್ಮಾಯಿ
ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು ವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆಶೀರ್ವಾದವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಕಿಡಿಕಾರಿದರು.
Karnataka News Live 12th October 2025 ಅಪ್ಪ-ಅಮ್ಮನ ಮುಂಚೆ ನಾನೇ ಸಾಯಬೇಕೆಂದ ರಕ್ಷಿತಾ ಶೆಟ್ಟಿಗೆ ಮಲ್ಲಮ್ಮ ಫುಲ್ ಕ್ಲಾಸ್
Mallamma and Rakshitha Shetty conversation: ಮಕ್ಕಳ ಸಾವಿನ ಬಗ್ಗೆ ಪೋಷಕರಿಗಾಗುವ ನೋವಿನ ಕುರಿತು ಚರ್ಚೆ. ರಕ್ಷಿತಾ ಪದೇ ಪದೇ ಕೇಳಿದ ಪ್ರಶ್ನೆಯಿಂದ ಬೇಸರಗೊಂಡ ಮಲ್ಲಮ್ಮ, ಆಟವಾಡಲು ಬಂದ ಜಾಗದಲ್ಲಿ ಇಂತಹ ಮಾತುಗಳು ಬೇಡವೆಂದು ರಕ್ಷಿತಾಗೆ ಖಡಕ್ ಕ್ಲಾಸ್ ತೆಗೆದುಕೊಳ್ಳುತ್ತಾರೆ.
Karnataka News Live 12th October 2025 ಪಾಕ್ ಜಿಂದಾಬಾದ್ ಅಂದ್ರೆ ಢಮ್ ಅಷ್ಟೆ,ಮಾತು ಕೇಳದಿದ್ರೆ ಬುಲ್ಡೋಜರ್, ಯತ್ನಾಳ್ ಬೆಂಕಿ ಭಾಷಣ
ಪಾಕ್ ಜಿಂದಾಬಾದ್ ಅಂದ್ರೆ ಢಮ್ ಅಷ್ಟೆ,ಮಾತು ಕೇಳದಿದ್ರೆ ಬುಲ್ಡೋಜರ್, ಯತ್ನಾಳ್ ಬೆಂಕಿ ಭಾಷಣ ಮಾಡಿದ್ದಾರೆ. ಹನುಮಧ್ವಜ ವಿವಾದದ ಮೂಲಕ ಭಾರಿ ಸದ್ದು ಮಾಡಿದ ಕೆರಗೋಡಿನಲ್ಲಿ ಯತ್ನಾಳ್ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಆಗಮಿಸಿ ಭಾಷಣ ಮಾಡಿದ್ದಾರೆ.
Karnataka News Live 12th October 2025 13 ವರ್ಷಗಳ ಹಿಂದೆ ಅತಿಥಿಯಾಗಿ ಬಂದು ಮಹಾರಾಜನಾದ ಪ್ರಭಾಸ್.. ಆ ಘಟನೆಯೇ ಸಾಕ್ಷಿ, ಏನಾಯ್ತು?
ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅವರ ದೊಡ್ಡ ಮನಸ್ಸಿನ ಬಗ್ಗೆ ಎಲ್ಲರಿಗೂ ಗೊತ್ತು. ಎಷ್ಟೇ ಎತ್ತರಕ್ಕೆ ಬೆಳೆದರೂ ವಿನಯದಿಂದ ಇರುವುದು ಪ್ರಭಾಸ್ ಶೈಲಿ. 13 ವರ್ಷಗಳ ಹಿಂದಿನ ಒಂದು ಘಟನೆ ಪ್ರಭಾಸ್ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ.
Karnataka News Live 12th October 2025 ಈ ಅಣಬೆ ತಿಂದ್ರೆ ಕಿಕ್ಕೋ ಕಿಕ್ಕು; ಬೆಂಗಳೂರಿಗೆ ಬರುತ್ತಿದ್ದಂತೆ ₹50 ಕೋಟಿ ಮಾಲ್ ಸಮೇತ ಲಾಕ್!
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್ಸಿಬಿ ಭರ್ಜರಿ ಕಾರ್ಯಾಚರಣೆ! ₹50 ಕೋಟಿ ಮೌಲ್ಯದ ಹೈಡ್ರೋಗಾಂಜಾ, ಸೈಲೋಸಿಬಿನ್ ಅಣಬೆ ವಶ. ಆಹಾರದ ಟಿನ್ಗಳಲ್ಲಿ ಸಾಗಾಟದ ರಹಸ್ಯ ತಿಳಿಯಲು ಕ್ಲಿಕ್ ಮಾಡಿ.
Karnataka News Live 12th October 2025 ಕೇಂದ್ರ, ರಾಜ್ಯ ಪೂರಕವಾಗಿದ್ದರೆ ಮಾತ್ರ ಕೃಷಿಕರಿಗೆ ಲಾಭ - ಸಂಸದ ಕೋಟ ಶ್ರೀನಿವಾಸ ಪೂಜಾರಿ
2100ಕ್ಕೂ ಹೆಚ್ಚು ಯೋಜನೆಗಳ ಮೂಲಕ 42,000 ಕೋಟಿ ರು. ಅನುದಾನ ನೀಡಿ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ರೈತರಿಗೆ ಲಾಭವಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Karnataka News Live 12th October 2025 ಬಿಗ್ಬಾಸ್ 7ರಲ್ಲಿ ದೀಪಿಕಾ ದಾಸ್ ತುಟಿಗೆ ಕಿಸ್ ಕೊಟ್ಟಿದ್ಯಾರು? ಅಚ್ಚರಿಯ ದೃಶ್ಯ ವೈರಲ್!
Bigg Boss Kannada Season 7 viral clip: ಬಿಗ್ಬಾಸ್ ಕನ್ನಡ ಸೀಸನ್ 7ರ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ಇದರಲ್ಲಿ ಸ್ಪರ್ಧಿ ದೀಪಿಕಾ ದಾಸ್ ಅವರ ತುಟಿಗಳಿಗೆ ಸಹ ಮಹಿಳಾ ಸ್ಪರ್ಧಿ ಮುತ್ತಿಕ್ಕಿದ್ದಾರೆ.
Karnataka News Live 12th October 2025 ಸೌಂದರ್ಯ ಜೊತೆ ವೆಂಕಟೇಶ್ ರೊಮ್ಯಾನ್ಸ್.. ಶಾಕ್ ಕೊಟ್ಟ ರಾಮಾನಾಯ್ಡು.. ಏನ್ ಮಾಡಿದ್ರು ಗೊತ್ತಾ?
ಟಾಲಿವುಡ್ನಲ್ಲಿ ವೆಂಕಟೇಶ್ ಮತ್ತು ಸೌಂದರ್ಯ ಜೋಡಿಯಾಗಿ ಅನೇಕ ಸಿನಿಮಾಗಳು ಬಂದಿವೆ. ತೆರೆಯ ಮೇಲೆ ಇವರಿಬ್ಬರ ಕೆಮಿಸ್ಟ್ರಿ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಒಂದು ಕಾಲದಲ್ಲಿ ಈ ಇಬ್ಬರು ಸ್ಟಾರ್ಸ್ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ವೈರಲ್ ಆಗಿದ್ದವು. ಆಗ ರಾಮಾನಾಯ್ಡು ಏನು ಮಾಡಿದರು ಗೊತ್ತಾ?
Karnataka News Live 12th October 2025 ಕಾಂಗ್ರೆಸ್ಗೆ ತಾಕತ್ತಿದ್ದರೆ ಆರ್ಎಸ್ಎಸ್ ನಿಷೇಧ ಮಾಡಲಿ, ಸರ್ಕಾರಕ್ಕೆ ಈ ಅಧಿಕಾರವೇ ಇಲ್ಲ; ಆರ್.ಅಶೋಕ
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿದ್ದರೆ ಆರ್ಎಸ್ಎಸ್ ನಿಷೇಧ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಸವಾಲು ಹಾಕಿದ್ದಾರೆ. ರಾಜ್ಯ ಸರ್ಕಾರಕ್ಕೆ ಆರ್ಎಸ್ಎಸ್ ನಿಷೇಧಿಸುವ ಅಧಿಕಾರವೇ ಇಲ್ಲ, ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಹಲವು ನಾಯಕರು RSSನವರೇ ಆಗಿದ್ದಾರೆ ಎಂದು ಅವರು ಹೇಳಿದ್ದಾರೆ.
Karnataka News Live 12th October 2025 ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ - ಸಲೀಂ ಅಹ್ಮದ್
25 ವರ್ಷ ಪ್ರಾಮಾಣಿಕವಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಮುಂದಿನ ದಿನಗಳಲ್ಲಿ ಸಂಪುಟ ವಿಸ್ತರಣೆಯಾದರೆ ಹೈಕಮಾಂಡ್ ವರಿಷ್ಠರು ನನಗೆ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
Karnataka News Live 12th October 2025 ರಾಹುಲ್ ಗಾಂಧಿ ಸತ್ಯ ಹೇಳಲು ಹೊರಟಿದ್ದಾರೆ, ಅವರ ಹಿಂದೆ ನಿಲ್ಲೋಣ - ಸಚಿವ ಸಂತೋಷ್ ಲಾಡ್
ರಾಹುಲ್ ಗಾಂಧಿ ಸತ್ಯ ಹೇಳಲು ಹೊರಟಿದ್ದಾರೆ. ಅವರು ಜನರ ಬಳಿಗೆ ಬಂದು ಸಮಸ್ಯೆ ಆಲಿಸುತ್ತಿದ್ದಾರೆ. ವೋಟ್ ಚೋರಿ ಸಹಿತ ಹಲವು ವಿಚಾರಗಳನ್ನು ಬಯಲಿಗೆಳೆಯುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
Karnataka News Live 12th October 2025 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ - FDA, SDA ಹುದ್ದೆಗಳಿಗೆ ಅರ್ಜಿ ಆಹ್ವಾನ!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಪ್ರಥಮ ದರ್ಜೆ ಸಹಾಯಕ (FDA) ಮತ್ತು ದ್ವಿತೀಯ ದರ್ಜೆ ಸಹಾಯಕ (SDA) ಸೇರಿದಂತೆ ಹಲವು ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು, ನಿಗದಿತ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿಯೊಂದಿಗೆ ನವೆಂಬರ್ 10ರೊಳಗೆ ಅರ್ಜಿ ಸಲ್ಲಿಸಬಹುದು.
Karnataka News Live 12th October 2025 ಜೂ.ಎನ್ಟಿಆರ್ 'ವಾರ್ 2' ಡಿಸಾಸ್ಟರ್ನಿಂದ ಕಿಯಾರಾ ಅಡ್ವಾಣಿಗೆ ಬಿಗ್ ಶಾಕ್.. ಅಯ್ಯೋ ಪಾಪ ಹೀಗಾಯ್ತಲ್ಲ?
ವಾರ್ 2 ಚಿತ್ರದ ಸೋಲಿನಿಂದ ನಟಿ ಕಿಯಾರಾ ಅಡ್ವಾಣಿ ವೃತ್ತಿಜೀವನದ ಮೇಲೆ ಪರಿಣಾಮ ಬೀರಿದೆ ಎಂದು ವರದಿಗಳು ಬರುತ್ತಿವೆ. ಇದೀಗ YRF ಸಂಸ್ಥೆ ಕಿಯಾರಾಗೆ ಬಿಗ್ ಶಾಕ್ ನೀಡಿದೆ ಎಂದು ತಿಳಿದುಬಂದಿದೆ.
Karnataka News Live 12th October 2025 ಬೆಂಗಳೂರು ಟ್ರಾಫಿಕ್ ಸಿಗ್ನಲ್ನಲ್ಲಿ ಸೈಡ್ ಕೊಡದ, ಬಿಎಂಟಿಸಿ ಚಾಲಕನ ಮೇಲೆ ಆಟೋ ಡ್ರೈವೈರ್ ಹಲ್ಲೆ!
ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್ನಲ್ಲಿ ರೆಡ್ ಸಿಗ್ನಲ್ನಲ್ಲಿ ಬಸ್ ನಿಲ್ಲಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕನೊಬ್ಬ ಬಿಎಂಟಿಸಿ ಬಸ್ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ. ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.