- Home
- News
- State
- Karnataka News Live: ಪುತ್ರ ಹರೀಶ್ ಗೌಡನನ್ನು ನೆನೆದು ಜಿಟಿ ದೇವೇಗೌಡ ಭಾವುಕರಾಗಿ ಬಿಕ್ಕಿ ಬಿಕ್ಕಿ ಅತ್ತ ಶಾಸಕರು
Karnataka News Live: ಪುತ್ರ ಹರೀಶ್ ಗೌಡನನ್ನು ನೆನೆದು ಜಿಟಿ ದೇವೇಗೌಡ ಭಾವುಕರಾಗಿ ಬಿಕ್ಕಿ ಬಿಕ್ಕಿ ಅತ್ತ ಶಾಸಕರು

ಮೈಸೂರು: ಲಲಿತಾಭಿನಂದನ- ಕೆ.ಲಲಿತಾ ಜಿ.ಟಿ. ದೇವೇಗೌಡ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಕೆಲಕಾಲ ಭಾವುಕರಾದರು. ಪುತ್ರ ಶಾಸಕ ಹರೀಶ್ ಗೌಡ ಹೊರತುಪಡಿಸಿ ಕುಟುಂಬದ ಪ್ರತಿಯೊಬ್ಬ ಸದಸ್ಯರು ಭಾಗಿಯಾಗಿದ್ದರು.
ನಗರದ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ. ದೇವೇಗೌಡ ಅವರು ಮಾತು ಆರಂಭಿಸುವ ಮುನ್ನವೇ ಗದ್ಗಿತರಾಗಿ ಕಣ್ಣೀರಿಟ್ಟರು. ಏನನ್ನೂ ನೆನೆದುಕೊಂಡು ಜಿ.ಟಿ. ದೇವೇಗೌಡರು ಬಿಕ್ಕಿ ಬಿಕ್ಕಿ ಅತ್ತರು, ಸಭಾಂಗಣದಲ್ಲಿ ನೆರೆದಿದ್ದವರ ಕಣ್ಣಂಚು ಒದ್ದೆಯಾಯಿತು.
ಬೆಂಬಲಿಗರು ‘ಸದಾ ಕಾಲ ನಿಮ್ಮ ಜೊತೆಗಿರುತ್ತೇವೆ ವಿ ಅಣ್ಣಾ, ಅಳಬೇಡಿ’ ಎಂದು ಕೂಗಿದರು. ಸುಧಾರಿಸಿಕೊಂಡು ಮಾತನಾಡಿದ ಜಿ.ಟಿ. ದೇವೇಗೌಡರು, ನಾನು ಬಂಗಾರದ ಮನುಷ್ಯ ಸಿನೆಮಾ ನೋಡಿ ಅಳುತ್ತಿದ್ದೆ, ಅದರಿಂದ ಪ್ರೇರಣೆ ಪಡೆದು ಪ್ರಗತಿಪರ ಕೃಷಿಕನಾದೆ. ನನಗೆ 32 ವರ್ಷ ಇದ್ದಾಗ, ಲಲಿತಾಳಿಗೆ 16 ವರ್ಷ ಹೈಸ್ಕೂಲ್ ಓದುತ್ತಿದ್ದಳು. ದಲಿತ ಚೆಲುವಯ್ಯ ಹಾಗೂ ಲಿಂಗೇಗೌಡ ನನ್ನ ತಾಯಿಯ ಸೂಚನೆಯಂತೆ ಹುಡುಗಿ ನೋಡಿಕೊಂಡು ಬಂದಿದ್ದರು. ನಂತರ ಮದುವೆಯ ಬಳಿಕ ಅವಳು ಒಂದು ದಿನಾನು ಸುಖ ಪಟ್ಟಿಲ್ಲ ಎಂದು ಭಾವುಕರಾದರು.