- Home
- News
- State
- Karnataka News Live: ನೀಟ್ ಪರೀಕ್ಷೆ ರದ್ದು ಬೆನ್ನಲ್ಲೇ ರಾಜಕೀಯ ಕದನ! ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರು ವಾಗ್ದಾಳಿ
Karnataka News Live: ನೀಟ್ ಪರೀಕ್ಷೆ ರದ್ದು ಬೆನ್ನಲ್ಲೇ ರಾಜಕೀಯ ಕದನ! ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರು ವಾಗ್ದಾಳಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಎಸ್ಐಟಿ ರಚಿಸಿ ನಡೆಸಿದ ತನಿಖೆ ಸಂದರ್ಭ ದುಡಿದ ಕಾರ್ಮಿಕರಿಗೆ ವೇತನ, ಜೆಸಿಬಿ ಬಾಡಿಗೆ ಇನ್ನೂ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಎಸ್ಐಟಿ ತನಿಖೆ ಶುರುವಾಗಿ ಮಾಸ್ಕ್ಮ್ಯಾನ್ ಚಿನ್ನಯ್ಯನನ್ನು ಆತ ಹೇಳಿದ ಸ್ಥಳಕ್ಕೆ ಕರೆದುಕೊಂಡು ಬಂದು, ಸ್ಥಳ ಗುರುತು ಮಾಡಿ ಒಟ್ಟು 17 ಕಡೆಗಳಲ್ಲಿ ಹೊಂಡಗಳನ್ನು ತೋಡಿ ಶೋಧ ನಡೆಸಲಾಗಿತ್ತು. ಒಟ್ಟು ಹತ್ತು ದಿನ ಜೆಸಿಬಿಯಿಂದ ಕೆಲಸ ಮಾಡಲಾಗಿತ್ತು. ಒಟ್ಟು ₹71,500 ಬಿಲ್ ಮಾಡಿ ಕೊಟ್ಟಿದ್ದರು. ಆದರೆ, ಜೆಸಿಬಿ ಬಾಡಿಗೆ ಇನ್ನೂ ಬಂದಿಲ್ಲ.
ದಿನ ನಿತ್ಯ 10-12 ಕಾರ್ಮಿಕರು ಎಸ್ಐಟಿ ತಂಡಕ್ಕೆ ಸಹಾಯವಾಗಿ ದುಡಿಯುತ್ತಿದ್ದರು. ಆದರೆ, ಕಾರ್ಮಿಕರ ಕೂಲಿ ಕೊಡದೆ ಬಾಕಿ ಉಳಿಸಿಕೊಳ್ಳಲಾಗಿದೆ. ಕಾರ್ಮಿಕರದ್ದು ಒಟ್ಟು ₹80 ಸಾವಿರಕ್ಕೂ ಅಧಿಕ ಹಣ ಕೊಡುವುದು ಬಾಕಿ ಇದೆ. ಇದೀಗ ಕಾರ್ಮಿಕರು ದುಡಿದ ಹಣಕ್ಕಾಗಿ ಅಲೆದಾಡುವಂತಾಗಿದೆ.
ಎಸ್ಐಟಿ ತಂಡಕ್ಕೆ ಕುಳಿತುಕೊಳ್ಳಲು ಶಾಮಿಯಾನ ವ್ಯವಸ್ಥೆ ಮಾಡಲಾಗಿತ್ತು. ಇದರ ಬಿಲ್ ಕೂಡ ಬಾಕಿ ಇದೆ. ಹಾರೆ, ಪಿಕಾಸು, ನೀರಿನ ಬಾಟಲಿ, ಕೂಲಿಯಾಳುಗಳನ್ನು ಕರೆ ತಂದ ವಾಹನ ಬಾಡಿಗೆ ಹೀಗೆ ಒಟ್ಟು ₹2 ಲಕ್ಷಕ್ಕೂ ಅಧಿಕ ಬಿಲ್ ಕೊಡಲು ಬಾಕಿ ಇದೆ.
Karnataka News Live 13 May 2026ನೀಟ್ ಪರೀಕ್ಷೆ ರದ್ದು ಬೆನ್ನಲ್ಲೇ ರಾಜಕೀಯ ಕದನ! ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರು ವಾಗ್ದಾಳಿ
Karnataka News Live 13 May 2026IMD forecasts - ಈ ವರ್ಷ ಒಂದು ವಾರ ಮೊದಲೇ, ಮೇ 17ಕ್ಕೆ ಅಂಡಮಾನ್ಗೆ ಮಾನ್ಸೂನ್ ಪ್ರವೇಶ
Karnataka News Live 13 May 2026HD Kumaraswamy - ಇಂಧನ ಮಿತಬಳಕೆ ಕುರಿತು ಮೋದಿ ಹೇಳಿಕೆ ಟೀಕಿಸಿದ ಕಾಂಗ್ರೆಸ್ಗೆ ಹೆಚ್ಡಿಕೆ ತಿರುಗೇಟು
ಪ್ರಧಾನಿ ಮೋದಿ ಅವರ ಇಂಧನ ಮಿತಬಳಕೆ ಹೇಳಿಕೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ. ದೇಶದ ಹಿತದೃಷ್ಟಿಯಿಂದ ನೀಡಿದ ಸಲಹೆಯನ್ನು ಟೀಕಿಸುವ ಮೂಲಕ ಕಾಂಗ್ರೆಸ್ ಸಣ್ಣತನ ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದ್ದಾರೆ.