07:43 AM (IST) May 13

Karnataka News Live 13 May 2026ನೀಟ್ ಪರೀಕ್ಷೆ ರದ್ದು ಬೆನ್ನಲ್ಲೇ ರಾಜಕೀಯ ಕದನ! ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರು ವಾಗ್ದಾಳಿ

ನೀಟ್‌ ಪರೀಕ್ಷೆ ರದ್ದುಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪರೀಕ್ಷಾ ವೈಫಲ್ಯದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಮತ್ತು ಈ ಹಿಂದೆ ಇದ್ದಂತೆ ರಾಜ್ಯಗಳಿಗೇ ಪರೀಕ್ಷೆ ನಡೆಸುವ ಅಧಿಕಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
Read Full Story
07:14 AM (IST) May 13

Karnataka News Live 13 May 2026IMD forecasts - ಈ ವರ್ಷ ಒಂದು ವಾರ ಮೊದಲೇ, ಮೇ 17ಕ್ಕೆ ಅಂಡಮಾನ್‌ಗೆ ಮಾನ್ಸೂನ್‌ ಪ್ರವೇಶ

ಈ ವರ್ಷ ಮುಂಗಾರು ಮಾರುತಗಳು ವಾಡಿಕೆಗಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ. ಯುರೋಪ್‌ ಹವಾಮಾನ ಮುನ್ಸೂಚನೆ ಕೇಂದ್ರದ ಪ್ರಕಾರ, ಮೇ 17ರಂದು ಅಂಡಮಾನ್‌ ಮತ್ತು ಮೇ 25ರ ಸುಮಾರಿಗೆ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದ್ದು, ದಕ್ಷಿಣ ಭಾರತಕ್ಕೆ ಬಿಸಿಲಿನಿಂದ ಶೀಘ್ರದಲ್ಲೇ ಮುಕ್ತಿ ಸಿಗಲಿದೆ.
Read Full Story
07:00 AM (IST) May 13

Karnataka News Live 13 May 2026HD Kumaraswamy - ಇಂಧನ ಮಿತಬಳಕೆ ಕುರಿತು ಮೋದಿ ಹೇಳಿಕೆ ಟೀಕಿಸಿದ ಕಾಂಗ್ರೆಸ್‌ಗೆ ಹೆಚ್‌ಡಿಕೆ ತಿರುಗೇಟು

ಪ್ರಧಾನಿ ಮೋದಿ ಅವರ ಇಂಧನ ಮಿತಬಳಕೆ ಹೇಳಿಕೆಯನ್ನು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ. ದೇಶದ ಹಿತದೃಷ್ಟಿಯಿಂದ ನೀಡಿದ ಸಲಹೆಯನ್ನು ಟೀಕಿಸುವ ಮೂಲಕ ಕಾಂಗ್ರೆಸ್ ಸಣ್ಣತನ ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

Read Full Story
06:47 AM (IST) May 13

Karnataka News Live 13 May 2026Bengaluru - ಮನೆಯಲ್ಲಿ ಚಾರ್ಜ್‌ ಹಾಕಿದ್ದಾಗ ಇವಿ ಬೈಕ್‌ ಬ್ಯಾಟರಿ ಸ್ಫೋಟ - ವ್ಯಕ್ತಿ ಸಾವು

ಬೆಂಗಳೂರಿನ ಹಲಸೂರಿನಲ್ಲಿ, ಮನೆಯೊಳಗೆ ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಮಧ್ಯರಾತ್ರಿ ಸ್ಫೋಟಗೊಂಡಿದೆ. ಈ ದುರ್ಘಟನೆಯಲ್ಲಿ 65 ವರ್ಷದ ಲೂರ್ದ್ ನಾಥನ್ ಎಂಬುವವರು ಸುಟ್ಟಗಾಯಗಳಿಂದ ಮೃತಪಟ್ಟಿದ್ದು, ಬ್ಯಾಟರಿ ಓವರ್‌ಫ್ಲೋನಿಂದ ಸ್ಫೋಟ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
Read Full Story