ರಾಮಲಿಂಗಾರೆಡ್ಡಿ ಅವರು BTM ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ 3 ಮೆಟ್ರೋ ನಿಲ್ದಾಣಗಳ ಮರುನಾಮಕರಣಕ್ಕೆ ಬಿಎಂಆರ್ಸಿಎಲ್ಗೆ ಪತ್ರ ಬರೆದಿದ್ದಾರೆ. ಈ ಹೆಸರುಗಳು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಸ್ಥಳೀಯ, ಭೌಗೋಳಿಕ ಮಹತ್ವವನ್ನು ಪರಿಗಣಿಸಿ ಹೆಸರುಗಳನ್ನು ಬದಲಾಯಿಸುವಂತೆ ಸೂಚಿಸಿದ್ದಾರೆ.
- Home
- News
- State
- Karnataka News Live: BTM ಲೇಔಟ್ ವ್ಯಾಪ್ತಿಯ 3 ನಿಲ್ದಾಣಗಳ ಹೆಸರು ಬದಲಿಸಿ - BMRCLಗೆ ರಾಮಲಿಂಗಾರೆಡ್ಡಿ ಪತ್ರ
Karnataka News Live: BTM ಲೇಔಟ್ ವ್ಯಾಪ್ತಿಯ 3 ನಿಲ್ದಾಣಗಳ ಹೆಸರು ಬದಲಿಸಿ - BMRCLಗೆ ರಾಮಲಿಂಗಾರೆಡ್ಡಿ ಪತ್ರ

ಬಳ್ಳಾರಿ: ಬಳ್ಳಾರಿಯಲ್ಲಿ ಬಿಜೆಪಿ ನಡೆಸಿದ ಬಳ್ಳಾರಿ ಚಲೋ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ವತಿಯಿಂದ ಸಮಾವೇಶ ಆಯೋಜಿಸುವ ಕುರಿತು ಪಕ್ಷದ ನಾಯಕರು ಹಾಗೂ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ. ಶೀಘ್ರದಲ್ಲೇ ಬಳ್ಳಾರಿಯಲ್ಲಿ ಕಾಂಗ್ರೆಸ್ನ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಶಾಸಕ ಬಿ. ನಾಗೇಂದ್ರ ತಿಳಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯ ಹಾಗೂ ಸರ್ಕಾರದ ಸಾಧನೆ ಜನರಿಗೆ ತಿಳಿಸುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗುತ್ತಿದೆ. ಸಾವಿರಾರು ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದು, ಈ ಸಾಧನೆ ಜನರ ಮುಂದಿಡುವುದು ಸಮಾವೇಶದ ಉದ್ದೇಶವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚನೆ ಮೇರೆಗೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಸಮಾವೇಶ ನಡೆಸುವ ಕುರಿತು ಚರ್ಚೆ ನಡೆಯುತ್ತಿದೆ.
ಸಮಾವೇಶಕ್ಕೆ ಮುಖ್ಯಮಂತ್ರಿ ಶಿವಕುಮಾರ ಅವರಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕಾಂಗ್ರೆಸ್ ನಾಯಕರು ಭಾಗವಹಿಸುವ ಸಾಧ್ಯತೆ ಇದೆ. ಈ ಕುರಿತು ಎಲ್ಲ ನಾಯಕರೊಂದಿಗೆ ಮತ್ತಷ್ಟು ಚರ್ಚೆ ನಡೆಸಿದ ಬಳಿಕ ಸಮಾವೇಶದ ದಿನಾಂಕ ನಿಗದಿಪಡಿಸಲಾಗುವುದು. ಸಮಾವೇಶದ ಸಿದ್ಧತೆ ಕುರಿತು ಶೀಘ್ರದಲ್ಲೇ ಸಭೆ ನಡೆಸಿ ಅಂತಿಮ ರೂಪ ನೀಡಲಾಗುವುದು ಎಂದು ತಿಳಿಸಿದರು.