ವಸತಿ ಉದ್ದೇಶಕ್ಕಾಗಿ ಪಡೆದ ಪರವಾನಗಿಯಲ್ಲಿ ಮಸೀದಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಪುರಸಭೆಗೆ ದೂರು ನೀಡಿದ್ದಾರೆ. ಈ ಅಕ್ರಮ ನಿರ್ಮಾಣದಿಂದಾಗಿ ಬಡಾವಣೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಕೂಡಲೇ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
- Home
- News
- State
- Karnataka News Live: ವಸತಿ ಉದ್ದೇಶಕ್ಕಾಗಿ ಮನೆ ಪರವಾನಗಿ ಪಡೆದು ಮಸೀದಿ ನಿರ್ಮಾಣದ ಆರೋಪ; ಸ್ಥಳೀಯರಿಂದ ದೂರು
Karnataka News Live: ವಸತಿ ಉದ್ದೇಶಕ್ಕಾಗಿ ಮನೆ ಪರವಾನಗಿ ಪಡೆದು ಮಸೀದಿ ನಿರ್ಮಾಣದ ಆರೋಪ; ಸ್ಥಳೀಯರಿಂದ ದೂರು

ಬೆಂಗಳೂರು: ಆ.6ರಿಂದ ಮಳೆಗಾಲದ ವಿಧಾನಮಂಡಲ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆ.6 ರಂದು ಅಧಿವೇಶನ ಕರೆಯಲು ತೀರ್ಮಾನಿಸಿರುವುದಾಗಿ ತಿಳಿಸಿದರು. ಹೀಗಾಗಿ ಆಗಸ್ಟ್ ಮೊದಲ ವಾರ ಅಧಿವೇಶನ ನಡೆಯುವುದು ಬಹುತೇಕ ಖಚಿತಗೊಂಡಿದೆ.
ಆ.6 ರಿಂದ ಅಧಿವೇಶನ ಶುರುವಾಗಲಿದ್ದು, ಮೊದಲ ದಿನ ಹಂಗಾಮಿ ಸ್ಪೀಕರ್ ಆಗಿರುವ ಉಪಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಬಳಿಕ ನಿಧನರಾದ ಮಾಜಿ ಸಚಿವ ಸುಧಾಕರ್ ಅವರಿಗೆ ಸಂತಾಪ ಸೂಚನೆ ನಡೆಯಲಿದೆ. ನಂತರ ಆ.10 ರಿಂದ ಕಾರ್ಯಕಲಾಪ ಶುರುವಾಗಲಿದ್ದು ಆ.14ರವರೆಗೆ ನಡೆಯುತ್ತದೆಯೇ ಅಥವಾ ಆ.21ರವರೆಗೆ ನಡೆಯುತ್ತದೆಯೇ ಎಂಬುದು ಇನ್ನೂ ಅಂತಿಮಗೊಂಡಿಲ್ಲ.
ಸರ್ಕಾರದಿಂದ ವಿಧಾನಸಭೆ ಸಚಿವಾಲಯಕ್ಕೆ ಈವರೆಗೆ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ತಲುಪಿಲ್ಲ. ದಿನಾಂಕದ ಬಗ್ಗೆ ಮಾಹಿತಿ ತಲುಪಿದರೆ ಶಾಸಕರಿಗೆ ಪ್ರಶ್ನೋತ್ತರಕ್ಕೆ ಪ್ರಶ್ನೆಗಳನ್ನು ಸಲ್ಲಿಸಲು ಸೂಚಿಸಬೇಕಾಗುತ್ತದೆ. ಸಚಿವಾಲಯಕ್ಕೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
Karnataka News Live 14 July 2026ವಸತಿ ಉದ್ದೇಶಕ್ಕಾಗಿ ಮನೆ ಪರವಾನಗಿ ಪಡೆದು ಮಸೀದಿ ನಿರ್ಮಾಣದ ಆರೋಪ; ಸ್ಥಳೀಯರಿಂದ ದೂರು
Karnataka News Live 14 July 2026ಅಂಜನಾದ್ರಿ, ಗೋಕಾಕ್, ಮಧುಗಿರಿ ಸೇರಿದಂತೆ ರಾಜ್ಯದ 13 ಕಡೆಯಲ್ಲಿ ರೋಪ್ವೇ - ಜಾರ್ಜ್
ರಾಜ್ಯದ 13 ಪ್ರಮುಖ ಪ್ರವಾಸಿ ತಾಣಗಳಲ್ಲಿ ಉದ್ದೇಶಿತ ರೋಪ್ವೇ ಯೋಜನೆಗಳ ವಿಳಂಬಕ್ಕೆ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ಪ್ರಸ್ತಾಪದ ಹಂತದಲ್ಲೇ ಇರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, ತ್ವರಿತ ಅನುಷ್ಠಾನಕ್ಕೆ ಸೂಚನೆ ನೀಡಿದ್ದಾರೆ.