ಬೆಂಗಳೂರಿನ ರಾಜಭವನ ರಸ್ತೆಯಲ್ಲಿ, ಮೊಬೈಲ್ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ಚಾಲಕನೊಬ್ಬ ಮಾಜಿ ಸಚಿವ ನಾರಾಯಣಗೌಡ ಅವರ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ, ನಿರ್ಲಕ್ಷ್ಯದ ಚಾಲನೆಯ ಬಗ್ಗೆ ನಾರಾಯಣಗೌಡ ಅವರು ಚಾಲಕನನ್ನು ತರಾಟೆಗೆ ತೆಗೆದುಕೊಂಡರು.
Karnataka News Live: ಮಾಜಿ ಸಚಿವ ನಾರಾಯಣಗೌಡರ ಕಾರಿಗೆ ಗುದ್ದಿದ ಮತ್ತೊಂದು ಕಾರು!
ಮಂಗಳೂರು: ಅಪ್ರಾಪ್ತ ಕಾರು ಚಲಾಯಿಸಿ ಒಂದು ಕಾರು ಹಾಗೂ ನಿಲ್ಲಿಸಿದ್ದ 6 ಬೈಕ್ಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಅಪಘಾತಕ್ಕೆ ಕಾರಣವಾದ ಕಾರಿನ ಮಾಲೀಕರಾದ ಬಾಲಕನ ತಾಯಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದ ಅಪ್ರಾಪ್ತನ ಕಾರು ಬಳಿಕ ರಸ್ತೆ ಬದಿ ನಿಲ್ಲಿಸಲಾಗಿದ್ದ 6 ಬೈಕ್ಗೆ ಡಿಕ್ಕಿ ಹೊಡೆದು ನೆಲಕ್ಕುರುಳಿಸಿತ್ತು. ಅಪ್ರಾಪ್ತ ಕಾರು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದ. ನಂತರ ಪೆರಿಗೇರಿ ಎಂಬಲ್ಲಿ ಸ್ಥಳೀಯರು ಕಾರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದರು. ತನಿಖೆ ನಡೆಸಿದ ಪೊಲೀಸರು ವಾಹನ ಮಾಲೀಕಿ ಆದ ಆತನ ತಾಯಿ ಕೆ.ಎ.ಮಮ್ತಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Karnataka News Live 14 March 2026ಮಾಜಿ ಸಚಿವ ನಾರಾಯಣಗೌಡರ ಕಾರಿಗೆ ಗುದ್ದಿದ ಮತ್ತೊಂದು ಕಾರು!
Karnataka News Live 14 March 2026ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಕಾಣಿಕೆ - 9.92 ಕೋಟಿ ಹಣ, ಚಿನ್ನ, ಬೆಳ್ಳಿ ಸಂಗ್ರಹ
ಪ್ರಸಿದ್ಧ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ದಾಖಲೆಯ ₹3.07 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಈ ಎಣಿಕೆಯಲ್ಲಿ ₹2.78 ಕೋಟಿ ನಗದು, 100 ಗ್ರಾಂ ಚಿನ್ನ ಹಾಗೂ ಸುಮಾರು 4.5 ಕೆಜಿ ಬೆಳ್ಳಿ ಸೇರಿದೆ.
Karnataka News Live 14 March 2026ಬೆಂಗಳೂರಿನ ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ₹4,000ಕ್ಕೆ ಸೇಲ್!
ಬೆಂಗಳೂರಿನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಅಭಾವದಿಂದ ಹೋಟೆಲ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದೆ. ಕಾಳಸಂತೆಯಲ್ಲಿ ಸಿಲಿಂಡರ್ ಬೆಲೆ ₹4000 ದಾಟಿದ್ದು, ಅನಿವಾರ್ಯವಾಗಿ ಹಲವು ಹೋಟೆಲ್ಗಳು ಸೌದೆ ಒಲೆಗಳ ಮೊರೆ ಹೋಗಿವೆ. ಇದರಿಂದ ಅಡುಗೆ ಸಿಬ್ಬಂದಿ ಹೊಗೆ ಹಾಗೂ ಅನುಭವದ ಕೊರತೆಯಿಂದ ಪರದಾಟ.
Karnataka News Live 14 March 2026ಬೈಎಲೆಕ್ಷನ್ - ಬಿಜೆಪಿಯಿಂದ ಬಾಗಲಕೋಟೆಗೆ ಚರಂತಿಮಠ? ದಾವಣಗೆರೆಯಿಂದ ಅಚ್ಚರಿ ಅಭ್ಯರ್ಥಿ ಘೋಷಣೆ ಸಾಧ್ಯತೆ
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಬಾಗಲಕೋಟೆಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರ ಹೆಸರು ಬಹುತೇಕ ಅಂತಿಮವಾಗಿದ್ದು, ದಾವಣಗೆರೆಯಲ್ಲಿನ ಭಿನ್ನಾಭಿಪ್ರಾಯಗಳ ನಡುವೆ ಅಚ್ಚರಿಯ ಅಭ್ಯರ್ಥಿ ಆಯ್ಕೆಯ ಸಾಧ್ಯತೆಗಳಿವೆ.
Karnataka News Live 14 March 2026ಚಿನ್ನದ ಸಾಲ ಪಡೆದಿದ್ದೀರಾ? ನಿಮಗಾಗಿ ವಿಧಾನಪರಿಷತ್ತಿನಲ್ಲಿ ಹೊಸ ವಿಧೇಯಕ ಮಂಡನೆ!
ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ನ ರಮೇಶ್ ಬಾಬು ಅವರು 'ಕರ್ನಾಟಕ ಚಿನ್ನ ಅಡಮಾನವಿಟ್ಟ ಸಾಲಗಾರರ ರಕ್ಷಣಾ ವಿಧೇಯಕ 2025' ಎಂಬ ಖಾಸಗಿ ವಿಧೇಯಕವನ್ನು ಮಂಡಿಸಿದ್ದಾರೆ. ಈ ವಿಧೇಯಕವು ಚಿನ್ನದ ಸಾಲಗಾರರ ಹಿತರಕ್ಷಣೆಗಾಗಿ, ಅಡವಿಟ್ಟ ಚಿನ್ನದ ಹರಾಜು ಪ್ರಕ್ರಿಯೆಯನ್ನು ನಿಯಂತ್ರಣ ಉದ್ದೇಶಿಸಿದೆ.
Karnataka News Live 14 March 2026ಗಿಲ್ಲಿ ನಟನ ಬೆಂಬಲಕ್ಕೆ ನಿಂತ ರಾಕಿಂಗ್ ಸ್ಟಾರ್ ಯಶ್; ಕಿರಾತಕ-2ಕ್ಕೆ ನಾಯಕನಾಗಿ ಮಂಡ್ಯ ಹೈದ
Karnataka News Live 14 March 2026ಡಿಕೆಶಿ ಭೇಟಿಯಾದ ಕಾಡುಗಳ್ಳ ವೀರಪ್ಪನ್ ಪುತ್ರಿ! ವಿದ್ಯಾರಾಣಿಯ ರಾಜಕೀಯ ನಡೆ ಏನು? ಕುತೂಹಲ
Karnataka News Live 14 March 2026Bengaluru - 15 ವರ್ಷದ ಮಗಳಿಗೆ 5-6 ಸಾವಿರ ಫಿಕ್ಸ್ ಮಾಡಿ ವೇಶ್ಯಾವಾಟಿಕೆ ತಳ್ಳಿದ ತಾಯಿ
ಬೆಂಗಳೂರಿನ ಚಂದ್ರಾಲೇಔಟ್ನಲ್ಲಿ ಹಣದಾಸೆಗಾಗಿ 15 ವರ್ಷದ ಮಗಳನ್ನು ತಾಯಿಯೇ ವೇಶ್ಯಾವಾಟಿಕೆಗೆ ದೂಡಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿಯ ತಾಯಿ, ಮಲತಂದೆ ಹಾಗೂ ಮಧ್ಯವರ್ತಿಯನ್ನು ಪೊಲೀಸರು ಬಂಧಿಸಿದ್ದು, ಬಾಲಕಿಯನ್ನು ರಕ್ಷಿಸಿದ್ದಾರೆ.
Karnataka News Live 14 March 2026ಆಪರೇಷನ್ ಕಮಲದ ಭೀತಿ - ಒಡಿಶಾದ 8 ಕಾಂಗ್ರೆಸ್ ಶಾಸಕರಿಗೆ ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ 'ಆಪರೇಷನ್ ಕಮಲ'ದ ಭೀತಿಯಿಂದ ಒಡಿಶಾದ 8 ಕಾಂಗ್ರೆಸ್ ಶಾಸಕರನ್ನು ರಾಮನಗರದ ವಂಡರ್ ಲಾ ರೆಸಾರ್ಟ್ಗೆ ಸ್ಥಳಾಂತರಿಸಲಾಗಿದೆ. ಅಡ್ಡ ಮತದಾನ ತಡೆಯಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಶಾಸಕರ ಉಸ್ತುವಾರಿ ವಹಿಸಿಕೊಂಡಿದ್ದಾರೆ.