ಸಾರಾಂಶ
ದಾವಣಗೆರೆ: ತಮ್ಮ ಸಹೋದರ, ಸಚಿವ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದೇ ಇರುವುದು ಒಳ್ಳೆಯದಾಗಿದೆ. ಅಧ್ಯಕ್ಷರಾಗಿದ್ದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆಯನ್ನು ನಾಯಕ ಸಮಾಜಕ್ಕೆ ಕಟ್ಟುತ್ತಿದ್ದರು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಬಿಜೆಪಿ ಎಸ್ಟಿ ಮೋರ್ಚಾದಿಂದ ಭಾನುವಾರ ನಡೆದ ಸಂವಿಧಾನಬದ್ಧ ಶೇ.7ರ ಎಸ್ಟಿ ಮೀಸಲಾತಿ ಜಾರಿಯಾಗಲೇಬೇಕು ಎಂಬ ಸಮಾವೇಶದಲ್ಲಿ ಮಾತನಾಡಿ, ಒಂದು ವೇಳೆ ತಮ್ಮ ಸಹೋದರ ಅಧ್ಯಕ್ಷರಾಗಿದ್ದರೆ ಇಡೀ ನಮ್ಮ ಸಮುದಾಯ ಕೆಡುತ್ತಿತ್ತು. ಕಾಂಗ್ರೆಸ್ ಸೋತರೆ ನಾಯಕ ಸಮಾಜದ ಲೀಡರ್ಶಿಪ್ನಿಂದಾಗಿಯೇ ಪಕ್ಷಕ್ಕೆ ಸೋಲಾಯಿತು ಅಂತ ನಮ್ಮ ಮೇಲೆಯೇ ಕಾಂಗ್ರೆಸ್ಸಿನವರು ಅಪವಾದ ಹೊರಿಸುತ್ತಿದ್ದರು. ಅದಕ್ಕೆ ದೇವರು ಒಳ್ಳೆಯದನ್ನೇ ಮಾಡಿದ್ದಾನೆ ಎಂದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಿಜೆಪಿ ತಪ್ಪಿನಿಂದಲೇ ಇವತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಾವು ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲಾ ಸಮಾಜಗಳನ್ನೂ ಜೊತೆಗೆ ಕರೆದುಕೊಂಡು ಹೋಗಿದ್ದರೆ ಸೋಲುತ್ತಿರಲಿಲ್ಲ. ಗೆದ್ದ ಮೇಲೆ ಒಂದೇ ಸಮುದಾಯದ ರಾಜಕೀಯವನ್ನೂ ಮಾಡಬಾರದು. ಅದನ್ನು ನಾವು ಹೋರಾಟದ ಮೂಲಕ ಗಟ್ಟಿಯಾಗಿ ಎದುರಿಸಬೇಕು ಎಂದು ಹೇಳಿದರು.
Karnataka News Live 15 June 2026ದ್ವೇಷಭಾಷಣ ಮಸೂದೆ ರಾಜ್ಯದಲ್ಲಿ ಜಾರಿ ಅನಾವಶ್ಯ - ವಿಧೇಯಕ ಜಾರಿಗೆ ಬಂದರೆ ಹಿರಿಯರು ಬುದ್ಧಿವಾದ ಹೇಳಲಾಗದು, ಇತಿಹಾಸಕಾರರು ಸತ್ಯ ನುಡಿಯಲು ಆಗದು!
ಭಾರತದ ಸಂವಿಧಾನದತ್ತ ಅಭಿವ್ಯಕ್ತಿ ಸ್ವಾತಂತ್ರ್ಯ, ಅದರ ಮೇಲಿನ ನಿಯಂತ್ರಣಗಳು ಮತ್ತು ದ್ವೇಷ ಭಾಷಣದ ಕಾನೂನುಗಳನ್ನು ಈ ಲೇಖನ ವಿವರಿಸುತ್ತದೆ. ಇಂತಹ ಕಾನೂನುಗಳ ದುರುಪಯೋಗವನ್ನು ತಡೆಯಲು ಸುಪ್ರೀಂ ಕೋರ್ಟ್ ನೀಡಿದ ಮಾರ್ಗಸೂಚಿಗಳನ್ನು ಚರ್ಚಿಸುತ್ತಾ, ಕರ್ನಾಟಕದ ಹೊಸ ದ್ವೇಷಭಾಷಣ ಮಸೂದೆಯ ಅನಗತ್ಯತೆಯನ್ನು ಇದು ಪ್ರತಿಪಾದಿಸುತ್ತದೆ.
Read Full StoryKarnataka News Live 15 June 2026ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಶಾಲೆ ಮೇಲ್ಛಾವಣಿ ಕಾಂಕ್ರೀಟ್ ಕುಸಿತ - ತಪ್ಪಿದ ಅವಘಡ
ಸಂಗೋಳಗಿ ಗ್ರಾಮದ ಸರ್ಕಾರಿ ಶಾಲೆಯ ಹಳೆಯ, ಬಳಕೆಯಲ್ಲಿಲ್ಲದ ಕಟ್ಟಡದ ಛಾವಣಿ ಕುಸಿದಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಈ ಘಟನೆಯು ತಾಲೂಕಿನಲ್ಲಿರುವ ಶಿಥಿಲಗೊಂಡ ಶಾಲಾ ಕಟ್ಟಡಗಳ ಸುರಕ್ಷತೆಯ ಗಂಭೀರ ಸಮಸ್ಯೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
Read Full StoryKarnataka News Live 15 June 2026ಮುನಿಸು ಮರೆತು ಒಂದಾದ ಮೈತ್ರಿ ಪಕ್ಷದ ನಾಯಕರು; ಅಕ್ಕಪಕ್ಕ ಕುಳಿತು ಖುಷಿಯಿಂದಲೇ ಮಾತುಕತೆ
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ ಎಂದಿದ್ದ ಬಿಜೆಪಿ ನಾಯಕ ಕೆ.ಸಿ.ನಾರಾಯಣಗೌಡ, ಇದೀಗ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜೊತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ನರೇಂದ್ರ ಮೋದಿ ಆಡಳಿತ ಸ್ಮರಣೆ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ಅಕ್ಕಪಕ್ಕ ಕುಳಿತು ಖುಷಿಯಿಂದ ಮಾತನಾಡಿದ್ದು, ಮೈತ್ರಿ ಪಕ್ಷಗಳ ನಡುವಿನ ಮುನಿಸು ಶಮನವಾದಂತೆ ಕಂಡುಬಂದಿದೆ.
Read Full StoryKarnataka News Live 15 June 2026ಉಚ್ಛಾಟಿತ ಈಶ್ವರಪ್ಪ, ಯತ್ನಾಳ್ ಮತ್ತೆ ಬಿಜೆಪಿ ಸೇರ್ಪಡೆ ಆಗ್ತಾರಾ? ರಮೇಶ ಜಾರಕಿಹೊಳಿ ಹೇಳಿದ್ದೇನು?
ಬಿಜೆಪಿಯಿಂದ ಉಚ್ಛಾಟಿತ ನಾಯಕರ ಮರುಸೇರ್ಪಡೆಗೆ ತಮ್ಮ ಬೆಂಬಲವಿದೆ, ಆದರೆ ಅಂತಿಮ ನಿರ್ಧಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ತಮ್ಮ ಸಹೋದರ ಸತೀಶ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದಿರುವುದೇ ಒಳ್ಳೆಯದಾಯಿತು, ಇಲ್ಲದಿದ್ದರೆ ನಮ್ಮ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟರು.
Read Full StoryKarnataka News Live 15 June 2026ಫ್ರೀ ಬಸ್ ಪಾಸ್ ಅರ್ಜಿ - ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಪರದಾಟ
ಶಾಲಾ-ಕಾಲೇಜು ವಿದ್ಯಾರ್ಥಿಗಳ ಉಚಿತ ಬಸ್ಪಾಸ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸರ್ವರ್ ಸಮಸ್ಯೆಯಿಂದಾಗಿ ಸ್ಥಗಿತಗೊಂಡಿದೆ. ಒಟಿಪಿ ಬಾರದಿರುವುದು ಮತ್ತು ಬೋರ್ಡಿಂಗ್/ಡ್ರಾಪಿಂಗ್ ಪಾಯಿಂಟ್ ದೋಷಗಳಿಂದಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗದೆ, ಪ್ರತಿದಿನ ಹಣ ಕೊಟ್ಟು ಪ್ರಯಾಣಿಸುವಂತಾಗಿದೆ. ಈ ತಾಂತ್ರಿಕ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಬೇಕೆಂದು ವಿದ್ಯಾರ್ಥಿಗಳು ಮತ್ತು ಪೋಷಕರು ಆಗ್ರಹಿಸುತ್ತಿದ್ದಾರೆ.
Read Full StoryKarnataka News Live 15 June 2026ವರುಣನ ಅಬ್ಬರಕ್ಕೆ ಸಿಲುಕಿದ ಬೆಂಗಳೂರು, ದಕ್ಷಿಣ ಕನ್ನಡ; ಎಲ್ಲಿ, ಎಷ್ಟು ಮಳೆ? ಇಲ್ಲಿದೆ ಮಾಹಿತಿ
ಭಾನುವಾರ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯುಂಟಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
Read Full StoryKarnataka News Live 15 June 2026ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆ ಸ್ಥಗಿತದ ಸುದ್ದಿಗೆ ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
‘ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಅವು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಕಲಿ ಖಾತೆಗಳನ್ನು ತಡೆಯಲು ಫಲಾನುಭವಿಗಳ ದೃಢೀಕರಣಕ್ಕಾಗಿ ಮರು ಅರ್ಜಿ ಕೇಳಲಾಗಿದೆಯೇ ಹೊರತು, ಯೋಜನೆ ನಿಲ್ಲಿಸಲು ಅಲ್ಲ ಎಂದು ಅವರು ತಿಳಿಸಿದ್ದಾರೆ.
Read Full StoryKarnataka News Live 15 June 2026ಹಣ ಇಲ್ಲದಿದ್ರೆ ಗ್ಯಾರಂಟಿ ಸ್ಕೀಂ ನೀಡಬೇಡಿ, ಸರಿಯಾಗಿ ಪ್ಲ್ಯಾನ್ ಮಾಡ್ಕೊಳ್ಳಿ - ವಿತ್ತ ಸಚಿವೆ ಸಲಹೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಫಲಾನುಭವಿಗಳಿಗೆ ಕತ್ತರಿ ಹಾಕಲು ಸರ್ಕಾರ ಮುಂದಾಗಿದೆ ಎಂದು ಅವರು ಆರೋಪಿಸಿದ್ದಾರೆ.
Read Full StoryKarnataka News Live 15 June 2026ಹೆಚ್ಚು ತೆರಿಗೆ ಕಟ್ಟಿದ್ದಕ್ಕೆ ಹೆಚ್ಚಿನ ಅನುದಾನ ಸಿಗದು - ನಿರ್ಮಲಾ ಸೀತಾರಾಮನ್ ತಿರುಗೇಟು
ಕೇಂದ್ರದಿಂದ ಕರ್ನಾಟಕಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. ರಾಜ್ಯಗಳಿಗೆ ಅನುದಾನ ನಿಗದಿ ಮಾಡುವುದು ಹಣಕಾಸು ಆಯೋಗವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Read Full Story