11:45 PM (IST) Mar 15

Karnataka News Live 15 March 2026ಮಂಡ್ಯ ಜಿಲ್ಲೆಗೆ ಕೈಗಾರಿಕೆಯಲ್ಲಿ ಶಾಶ್ವತ ಕೊಡುಗೆ ನೀಡುವೆ - ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಆಟೋಮೋಟೀವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾದಿಂದ ವಾಹನಗಳ ಪರೀಕ್ಷೆ, ಪ್ರಮಾಣೀಕರಣ ಮತ್ತು ತಾಂತ್ರಿಕ ಸಂಶೋಧನೆಗಳನ್ನು ಇಲ್ಲಿಯೇ ನಡೆಸಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

Read Full Story
11:21 PM (IST) Mar 15

Karnataka News Live 15 March 2026ಮಗನ ಮಾನಗೇಡಿ ಕೆಲಸಕ್ಕೆ ಇಡೀ ಕುಟುಂಬಕ್ಕೆ ಬಹಿಷ್ಕಾರ - ಮನನೊಂದು ನದಿಗೆ ಹಾರಿದ ತಾಯಿ

ಮಗ ಮಾಡಿದ ಅವಾಂತರಕ್ಕೆ ಇಲ್ಲಿ ತಾಯಿಯೊಬ್ಬರು ಪ್ರಾಣ ಬಿಟ್ಟಿದ್ದಾರೆ. ಮಗ ಅನೈತಿಕ ಸಂಬಂಧ ಹೊಂದಿರುವುದಕ್ಕೆ ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕಿ ಕಿರುಕುಳ ನೀಡಿದ್ದರಿಂದ ಆ ಯುವಕನ ತಾಯಿ ಮನನೊಂದು ನದಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ.

Read Full Story
10:37 PM (IST) Mar 15

Karnataka News Live 15 March 2026ಬೀದರ್, ಬೆಳಗಾವಿಯಲ್ಲಿ ಭಾರಿ ಮಳೆ - ಶಿವಮೊಗ್ಗದಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಶಿವಮೊಗ್ಗದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡರೆ, ಬೀದರ್ ಮತ್ತು ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
Read Full Story
10:35 PM (IST) Mar 15

Karnataka News Live 15 March 2026ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ ಸಾಲುಸಾಲು ರಜೆ - ಕೆಎಸ್‌ಆರ್‌ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್‌ ಸಂಚಾರ

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಕೆಎಸ್ಸಾರ್ಟಿಸಿ 2,000 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲು ನಿರ್ಧರಿಸಿದೆ. ಈ ಬಸ್‌ಗಳು ಮಾರ್ಚ್ 18 ರಿಂದ 20 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಹಾಗೂ ಹೊರರಾಜ್ಯಗಳಿಗೆ ಸಂಚರಿಸಲಿದ್ದು, ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಮತ್ತು ರಿಯಾಯಿತಿ ಸೌಲಭ್ಯ ಲಭ್ಯವಿದೆ.
Read Full Story
10:24 PM (IST) Mar 15

Karnataka News Live 15 March 2026ಯುಗಾದಿ ಸಂಭ್ರಮದಲ್ಲಿ ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ! ಬೆಂಗಳೂರು-ಮಂಗಳೂರು-ಗೋವಾ ಈ ದಿನದಂದು ವಿಶೇಷ ರೈಲು

ಯುಗಾದಿ ಹಬ್ಬದ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ನೈರುತ್ಯ ರೈಲ್ವೆಯು ಬೆಂಗಳೂರಿನಿಂದ ಕರಾವಳಿ ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ವಿಶೇಷ ರೈಲು ಸೇವೆಯನ್ನು ಘೋಷಿಸಿದೆ. ಈ ರೈಲು (06267/06268) ಮಾರ್ಚ್ 18 ಮತ್ತು 19 ರಂದು ಸಂಚರಿಸಲಿದ್ದು, ಮಂಗಳೂರು, ಉಡುಪಿ, ಕುಂದಾಪುರ ಸೇರಿದಂತೆ ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
Read Full Story
09:29 PM (IST) Mar 15

Karnataka News Live 15 March 2026ಹೊನ್ನಾವರ - KSRTC ಬಸ್ - ಓಮ್ನಿ ನಡುವೆ ಭೀಕರ ಅಪಘಾತ - ಓಮ್ನಿ ಚಾಲಕ ಆಸ್ಪತ್ರೆಗೆ ಸಾಗಿಸುವಾಗ ಸಾವು

KSRTC bus accident Honnavar: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೆರಂಗಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓಮ್ನಿ ಚಾಲಕ ಮೃತಪಟ್ಟಿದ್ದಾರೆ. 

Read Full Story
09:19 PM (IST) Mar 15

Karnataka News Live 15 March 2026ಬೆಂಗಳೂರಿನಲ್ಲಿ ಟೆಕ್ಕಿಯ ಕನಸಿನ ಉದ್ಯೋಗ, 1.5 ಲಕ್ಷ ರೂ ಸಂಬಳ, ಉಳಿತಾಯ ಮಾತ್ರ 15 ಸಾವಿರ, ಮಿಕ್ಕಿದೆಲ್ಲ ಇತರ ಖರ್ಚು!

ಬೆಂಗಳೂರಿನಲ್ಲಿ ತಿಂಗಳಿಗೆ ₹1.5 ಲಕ್ಷ ಸಂಬಳ ಪಡೆಯುವ ಯುವ ಸಾಫ್ಟ್‌ವೇರ್ ಡೆವಲಪರ್, ನಗರದ ದುಬಾರಿ ಜೀವನ ವೆಚ್ಚದಿಂದಾಗಿ ನಿರೀಕ್ಷಿತ ಉಳಿತಾಯ ಮಾಡಲು ವಿಫಲರಾಗುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಈ ಪೋಸ್ಟ್, ಹೆಚ್ಚಿನ ಸಂಬಳದ ಹೊರತಾಗಿಯೂ ಬಾಡಿಗೆ, ಆಹಾರ, ಮತ್ತು ಪ್ರಯಾಣದಂತಹ ಖರ್ಚುಗಳು ಹೇಗೆ ಆದಾಯವನ್ನು ಕಬಳಿಸುತ್ತವೆ ಎಂಬುದನ್ನು ವಿವರಿಸುತ್ತದೆ.

Read Full Story
08:31 PM (IST) Mar 15

Karnataka News Live 15 March 2026ಪತ್ನಿ ಅನಾರೋಗ್ಯ, ಮಾವ ಶಿವರಾಜ್‌ಕುಮಾರ್‌ ಬಗ್ಗೆ ಡಾ ದಿಲೀಪ್‌ ಹೇಳಿದ್ದೇನು? - ಫಸ್ಟ್‌ ಇಂಟರ್‌ವ್ಯೂ

Actor Shiva Rajkumar Son in Law Dileep: ನಟ ಶಿವರಾಜ್‌ಕುಮಾರ್‌ ಅವರ ಮೊದಲ ಮಗಳು ನಿರುಪಮಾ ಕೂಡ ಟಾಕ್ಟರ್‌, ಅವರ ಪತಿ ದಿಲೀಪ್‌ ಕೂಡ ಡಾಕ್ಟರ್.‌ ರ್ಯಾಪಿಡ್‌ ರಶ್ಮಿ ಯುಟ್ಯೂಬ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ದಿಲೀಪ್‌ ಅವರು ಪತ್ನಿ, ಮಾವ ಶಿವರಾಜ್‌ಕುಮಾರ್‌ ಬಗ್ಗೆ ಮಾತನಾಡಿದ್ದಾರೆ.

Read Full Story
08:05 PM (IST) Mar 15

Karnataka News Live 15 March 2026ಬೆಂಗಳೂರಿನಲ್ಲಿ ಇಂಟರ್ನ್ ಜೀವನ, ತಿಂಗಳಿಗೆ ₹26000 ವೆಚ್ಚ, ಪಿಜಿ ಊಟವೂ ನರಕ ವೈರಲ್ ಆಯ್ತು ಪೋಸ್ಟ್!

ಬೆಂಗಳೂರಿನಲ್ಲಿ ಇಂಟರ್ನ್‌ಶಿಪ್ ಮಾಡುತ್ತಿರುವ ಯುವತಿಯೊಬ್ಬಳು ತನ್ನ ಮಾಸಿಕ ₹26,000 ವೆಚ್ಚದ ವಿವರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ವಸತಿ ಮತ್ತು ಆಹಾರಕ್ಕೆ ಹೆಚ್ಚಿನ ಹಣ ಖರ್ಚಾಗುವುದನ್ನು ಈ ಪೋಸ್ಟ್ ಬಹಿರಂಗಪಡಿಸಿದ್ದು, ಇದು ನಗರದ ಜೀವನ ವೆಚ್ಚದ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ.
Read Full Story
07:52 PM (IST) Mar 15

Karnataka News Live 15 March 2026ಉಪ ಚುನಾವಣೆ ಘೋಷಣೆ - ಬಾಗಲಕೋಟೆಯಲ್ಲಿ ರಾಜಕಾರಣಿಗಳ ಫ್ಲೆಕ್ಸ್, ಸರ್ಕಾರಿ ಜಾಹೀರಾತು ಫಲಕ ಬ್ಯಾನರ್‌ಗಳ ತೆರವು

ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ, ಬಾಗಲಕೋಟೆ ನಗರದಲ್ಲಿ ರಾಜಕೀಯ ನಾಯಕರ ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗುತ್ತಿದೆ.ಎಚ್‌ ವೈ ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಈ ಉಪಚುನಾವಣೆಗಳು ನಡೆಯುತ್ತಿವೆ.

Read Full Story
07:41 PM (IST) Mar 15

Karnataka News Live 15 March 2026Dhurandhar 3 - ಧುರಂಧರ್ 2 ರಿಲೀಸ್‌ಗೂ ಮುನ್ನವೇ 3ನೇ ಭಾಗದ ಸಿದ್ಧತೆ? ಬಂತು ಬಿಗ್ ಅಪ್‌ಡೇಟ್

ಮಾರುಕಟ್ಟೆಯಲ್ಲಿ 'ಧುರಂಧರ್ 2' ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಕ್ರೇಜ್ ಇದೆ. ಈ ಸಿನಿಮಾ ಮಾರ್ಚ್ 19 ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಇದಕ್ಕೂ ಮುನ್ನ ಮಾರ್ಚ್ 18 ರಂದು ಪೇಯ್ಡ್ ಪ್ರಿವ್ಯೂ ಶೋ ಇರಲಿದೆ. ಈ ಎಲ್ಲದರ ನಡುವೆ ಒಂದು ದೊಡ್ಡ ಬ್ರೇಕಿಂಗ್ ನ್ಯೂಸ್ ಬಂದಿದೆ. ಅದೇನು ಅಂತ ನೋಡಿ..

Read Full Story
07:35 PM (IST) Mar 15

Karnataka News Live 15 March 2026Karna Serial - ಕರ್ಣ ಧಾರಾವಾಹಿ ಮುಖ್ಯ ಪಾತ್ರವೇ ಮುಗೀತಾ? ವೀಕ್ಷಕರಿಗೆ ಸಿಕ್ಕ ಸುಳಿವೇನು?

Karna Kannada Serial Episode: ಕರ್ಣ ಧಾರಾವಾಹಿಯಲ್ಲಿ ಕರ್ಣ, ನಿಧಿ, ನಿತ್ಯಾ ಸುತ್ತವೇ ಕಥೆ ಸಾಗುತ್ತಿದೆ. ಕರ್ಣ ಯಾರನ್ನು ಮದುವೆ ಆಗ್ತಾನೆ? ನಿತ್ಯಾ ಕಥೆ ಏನಾಗಲಿದೆ ಎಂದು ಕಾದು ನೋಡಬೇಕಿದೆ. ಹೀಗಿರುವಾಗ ಒಂದು ಪಾತ್ರ ಅಂತ್ಯ ಆಗಲಿದೆಯಾ ಎಂಬ ಪ್ರಶ್ನೆ ಶುರುವಾಗಿದೆ.

Read Full Story
06:30 PM (IST) Mar 15

Karnataka News Live 15 March 2026ಕೊನೆಗೂ ಓಪನ್​ ಅಯ್ತು ಉಪೇಂದ್ರರ ಸೀಕ್ರೆಟ್​ ಲಿಂಕ್​ - ನೀವು ಓಪನ್​ ಮಾಡಿದ್ರೆ ಕೂಡ್ಲೇ ಡಿಲೀಟ್​ ಮಾಡಿಬಿಡಿ!

ನಟ ಉಪೇಂದ್ರ ಅವರು ಸೋಷಿಯಲ್ ಮೀಡಿಯಾದಲ್ಲಿ ಸೀಕ್ರೆಟ್ ಲಿಂಕ್ ಹಂಚಿಕೊಳ್ಳುವುದಾಗಿ ಹೇಳಿ ಕುತೂಹಲ ಮೂಡಿಸಿದ್ದರು. ಆದರೆ, ಆ ಲಿಂಕ್ ತೆರೆದಾಗ ಅದರಲ್ಲಿ ಖಾಲಿ ಸಿಲಿಂಡರ್ ಚಿತ್ರವಿದ್ದು, ಇದು ಸದ್ಯದ ಎಲ್‌ಪಿಜಿ ಕೊರತೆ ಮತ್ತು ಕಾಳಸಂತೆಯ ಸಮಸ್ಯೆಯನ್ನು ಬಿಂಬಿಸಿತ್ತು.
Read Full Story
06:14 PM (IST) Mar 15

Karnataka News Live 15 March 2026Chikkamagaluru - ಮಳೆಗಾಗಿ ಪೂಜೆ ಮುಗಿಯುತ್ತಿದ್ದಂತೆಯೇ ಮಲೆನಾಡಿನಲ್ಲಿ ಧಾರಾಕಾರ ಮಳೆ

ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸಿದ್ದು, ಮಲೆನಾಡಿಗರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಮಳೆಗಾಗಿ ನಡೆದ ವಿಶೇಷ ಪೂಜೆ ಮುಗಿಯುವಷ್ಟರಲ್ಲೇ ಭಾರೀ ಮಳೆ ಸುರಿದ ಘಟನೆ ಭಕ್ತರಲ್ಲಿ ಸಂತಸ ಮೂಡಿಸಿದೆ.

Read Full Story
05:39 PM (IST) Mar 15

Karnataka News Live 15 March 2026ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ - ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ಸರಕಾರ ಬಳಿ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಮ್ಮ ಸರಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ ನೀಡುತ್ತಿದೆ.

Read Full Story
05:21 PM (IST) Mar 15

Karnataka News Live 15 March 2026ಬೆಂಗಳೂರು ಬೆಚ್ಚಿದ ತ್ರಿವಳಿ ಕೊಲೆಗಾರರಿಗೆ ಜೀವಾವಧಿ - ಐಐಎಸ್‌ ಪ್ರಾಧ್ಯಾಪಕ ಸೇರಿ ಇಡೀ ಕುಟುಂಬ ಕೊಂದ ಕೆಲಸದಾಳುಗಳು!

17 ವರ್ಷಗಳ ಹಿಂದೆ ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಆರ್‌ಟಿ ನಗರದ ತ್ರಿವಳಿ ಕೊಲೆ ಪ್ರಕರಣದಲ್ಲಿ, ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಲಾಲ್ ಸಚ್‌ದೇವ್, ಅವರ ಪತ್ನಿ ಮತ್ತು ಪುತ್ರನನ್ನು ಹತ್ಯೆಗೈದಿದ್ದ ನಾಲ್ವರು ವಲಸೆ ಕಾರ್ಮಿಕರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಸೆಷನ್ಸ್ ನ್ಯಾಯಾಲಯದ ಖುಲಾಸೆ ಆದೇಶವನ್ನು ರದ್ದುಗೊಳಿಸಿದೆ.
Read Full Story
04:20 PM (IST) Mar 15

Karnataka News Live 15 March 2026ಪಾರಂಪರಿಕ ಕಲಾ ಉತ್ಪನ್ನಗಳಿಗೆ ಬೆಂಗಳೂರಿನಲ್ಲಿ ಹೊಸ ಮಾರುಕಟ್ಟೆ - ಸಚಿವ ಶಿವಾನಂದ ಪಾಟೀಲ

ಪಾರಂಪರಿಕ ಕಲೆಯ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

Read Full Story
02:44 PM (IST) Mar 15

Karnataka News Live 15 March 2026ಭಾರತೀಯ ಸೇನೆ 2026 - ಯುವಕರಿಗೆ ದೇಶಸೇವೆಯ ಕರೆ, ನರ್ಸಿಂಗ್ ಮತ್ತು ಸಿಪಾಯಿ ಫಾರ್ಮಾ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯು 2026ನೇ ಸಾಲಿನ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟೆಂಟ್ ಮತ್ತು ಸಿಪಾಯಿ ಫಾರ್ಮಾ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಪ್ರಕ್ರಿಯೆ ಫೆಬ್ರವರಿ 13 ರಿಂದ ಏಪ್ರಿಲ್ 1, 2026ರವರೆಗೆ ನಡೆಯಲಿದೆ. ದೇಶಸೇವೆಯ ಆಸಕ್ತಿ ಹೊಂದಿರುವ ಯುವಕರಿಗೆ ಇದು ಉತ್ತಮ ವೃತ್ತಿ ಅವಕಾಶವಾಗಿದೆ.
Read Full Story
02:41 PM (IST) Mar 15

Karnataka News Live 15 March 2026ಒಂದು ವೋಟಿಗೆ ₹5 ಕೋಟಿ ಆಫರ್; 'ಆಪರೇಷನ್ ಕಮಲ' ಆಟ, ಕಾಂಗ್ರೆಸ್‌ಗೆ ಶಾಸಕರ ರಕ್ಷಣೆಯದ್ದೇ ಪರದಾಟ!

ಒಡಿಶಾ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ 'ಆಪರೇಷನ್ ಕಮಲ'ದ ಮೂಲಕ ಶಾಸಕರಿಗೆ ತಲಾ 5 ಕೋಟಿ ರೂ. ಹಾಗೂ ಬ್ಲ್ಯಾಂಕ್ ಚೆಕ್ ಆಮಿಷವೊಡ್ಡಿದೆ ಎಂದು ಕಾಂಗ್ರೆಸ್ ಸಂಸದ ಸಪ್ತಗಿರಿ ಉಲಾಖ ಆರೋಪಿಸಿದ್ದಾರೆ. ಬಿಡದಿಯ ರೆಸಾರ್ಟ್‌ನಲ್ಲಿ ಕುದುರೆ ವ್ಯಾಪಾರ ಯತ್ನದ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

Read Full Story
01:58 PM (IST) Mar 15

Karnataka News Live 15 March 2026ಕೈಯಲ್ಲಿ ಒಂದು ಫೋನ್ ಇದ್ರೆ ಸಾಕು, ನೀವೂ ಲಕ್ಷಾಧಿಪತಿ! AI ಬಳಸಿ ಹಣ ಗಳಿಸಲು ಸೂಪರ್ ಮಾರ್ಗಗಳು!

Monetize AI ಕೃತಕ ಬುದ್ಧಿಮತ್ತೆ (AI) ಬಳಸಿ ಮನೆಯಿಂದಲೇ ಹಣ ಗಳಿಸುವುದು ಹೇಗೆ? ಆರಂಭಿಕರಿಗಾಗಿ ಇಲ್ಲಿದೆ ಸಂಪೂರ್ಣ ಮಾಹಿತಿ. ಹಣ ಗಳಿಸಲು 5 ಅತ್ಯುತ್ತಮ ಮಾರ್ಗಗಳನ್ನು ಇಲ್ಲಿ ವಿವರಿಸಲಾಗಿದೆ.

Read Full Story