ಬೆಂಗಳೂರಿನಲ್ಲಿ ಪಾರ್ಟಿ ಮುಗಿಸಿ ಉಬರ್ ಕ್ಯಾಬ್ನಲ್ಲಿ ಮನೆಗೆ ಮರಳುತ್ತಿದ್ದ ಪ್ರಯಾಣಿಕ ನಿದ್ರೆಗೆ ಜಾರಿದ್ದಾರೆ. ಇದೇ ಸಮಯ ಸಾಧಿಸಿದ ಚಾಲಕ, ಪ್ರಯಾಣಿಕನ ಚಿನ್ನಾಭರಣ ಹಾಗೂ ಐಪೋನ್ ದೋಚಿ, ಮಾರ್ಗ ಮಧ್ಯದಲ್ಲೇ ಇಳಿಸಿ ಪರಾರಿಯಾಗಿದ್ದಾನೆ.
- Home
- News
- State
- Karnataka News Live: Bengaluru - ನಿದ್ರೆಗೆ ಜಾರಿದ ಪ್ರಯಾಣಿಕನ ದೋಚಿ ಮಾರ್ಗ ಮಧ್ಯೆಯೇ ಇಳಿಸಿ ಕ್ಯಾಬ್ ಚಾಲಕ ಪರಾರಿ!
Karnataka News Live: Bengaluru - ನಿದ್ರೆಗೆ ಜಾರಿದ ಪ್ರಯಾಣಿಕನ ದೋಚಿ ಮಾರ್ಗ ಮಧ್ಯೆಯೇ ಇಳಿಸಿ ಕ್ಯಾಬ್ ಚಾಲಕ ಪರಾರಿ!

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಲೋಟ್ ವಾಚನ್ನು ಧರಿಸಿ ಭಾರಿ ಸುದ್ದಿಯಾಗಿದ್ದರು. ಇದೀಗ ಇಂಥಹ ಸುದ್ದಿಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಸಿಲುಕಿದ್ದು, ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಇತ್ತೀಚೆಗೆ ಹಿರೇಬಗನಾಳ ಗ್ರಾಮಕ್ಕೆ ಆಗಮಿಸಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿರೊಂದಿಗೆ ಸುತ್ತಾಡುವಾಗ ಹಿಟ್ನಾಳ ₹18 ಲಕ್ಷ ಮೌಲ್ಯದ ಹುಬ್ಲೋಟ್ ವಾಚ್ ಕಟ್ಟಿಕೊಂಡಿದ್ದರು. ಆ ಫೋಟೋ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಶಾಸಕರು ಶನಿವಾರದ ಕಾರ್ಯಕ್ರಮಕ್ಕೆ ಹುಬ್ಲೋಟ್ ಬದಲು ಬೇರೆಯ ವಾಚ್ ಕಟ್ಟಿಕೊಂಡಿದ್ದಾರೆ.
ಮಾಧ್ಯಮದವರು ಕೇಳಿದ್ದಕ್ಕೆ ‘ಯಾಕೆ ಅಂಥ ದುಬಾರಿ ವಾಚ್ ಕಟ್ಟಬಾರದೆ? ಅದು ನನ್ನ ಸಹೋದರನ ವಾಚ್, ಎರಡು ದಿನ ಕಟ್ಟಿಕೊಳ್ಳಲು ಕೊಟ್ಟಿದ್ದರು’ ಎಂದು ಶಾಸಕರು ಸಮರ್ಥಿಸಿಕೊಂಡಿದ್ದಾರೆ.
Karnataka News Live 15 March 2026Bengaluru - ನಿದ್ರೆಗೆ ಜಾರಿದ ಪ್ರಯಾಣಿಕನ ದೋಚಿ ಮಾರ್ಗ ಮಧ್ಯೆಯೇ ಇಳಿಸಿ ಕ್ಯಾಬ್ ಚಾಲಕ ಪರಾರಿ!
Karnataka News Live 15 March 2026Belagavi - ಗೃಹಲಕ್ಷ್ಮಿಯಿಂದ ಬದುಕು ಕಟ್ಟಿಕೊಂಡ ಮಹಿಳೆಯರು; ಶಕ್ತಿ ಯೋಜನೆಯ ಸದ್ಬಳಕೆ
Karnataka News Live 15 March 2026Mandya - ಹೋಟೆಲ್ ಟಾಯ್ಲೆಟ್ನಲ್ಲಿ ಮೊಬೈಲಿಟ್ಟು ವಿಡಿಯೋ ರೆಕಾರ್ಡಿಂಗ್ - ಸಪ್ಲೈಯರ್ ಬಂಧನ
ಶ್ರೀರಂಗಪಟ್ಟಣದ ಶರವಣ ಹೋಟೆಲ್ನಲ್ಲಿ ಸಪ್ಲೈಯರ್ ಹರೀಶ್, ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡಿಂಗ್ ಮಾಡುತ್ತಿದ್ದ. ಹೋಟೆಲ್ಗೆ ಬಂದ ಮಹಿಳೆಯೊಬ್ಬರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Karnataka News Live 15 March 2026ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಈಗ ಕನ್ನಡಮಯ! ಹಳದಿ-ಕೆಂಪು ಬಣ್ಣ, ಕನ್ನಡ ಸೂಚನಾ ಫಲಕಗಳೊಂದಿಗೆ ಹೊಸ ರೂಪ
ಬೆಂಗಳೂರಿನ ಪ್ರಸಿದ್ಧ ಎಂ. ಚಿನ್ನಸ್ವಾಮಿ ಕ್ರೀಡಾಂಗಣವು ಇದೀಗ ಕನ್ನಡಮಯವಾಗುತ್ತಿದೆ. ಈ ಹಿಂದೆ ಕನ್ನಡ ಕಡೆಗಣನೆಗೆ ಟೀಕೆಗೊಳಗಾಗಿದ್ದ ಕೆಎಸ್ಸಿಎ, ಇದೀಗ ಹೊಸ ಗೇಟ್ಗಳು, ಸೂಚನಾ ಫಲಕಗಳಲ್ಲಿ ಕನ್ನಡಕ್ಕೆ ಮತ್ತು ಕರ್ನಾಟಕದ ಬಾವುಟದ ಹಳದಿ-ಕೆಂಪು ಬಣ್ಣಗಳಿಗೆ ಆದ್ಯತೆ ನೀಡಿದೆ.