- Home
- News
- State
- Karnataka News Live: 100 ದಿನದ ಸಂಭ್ರಮದಲ್ಲಿ 'ಪ್ರೋಟೋಕಾಲ್' ಕಿಚ್ಚು: ಹೈಕಮಾಂಡ್ ಬಾಗಿಲು ತಟ್ಟಿದ್ರಾ ಹರಿಪ್ರಸಾದ್!
LIVE NOW
Karnataka News Live: 100 ದಿನದ ಸಂಭ್ರಮದಲ್ಲಿ 'ಪ್ರೋಟೋಕಾಲ್' ಕಿಚ್ಚು: ಹೈಕಮಾಂಡ್ ಬಾಗಿಲು ತಟ್ಟಿದ್ರಾ ಹರಿಪ್ರಸಾದ್!

ಸಾರಾಂಶ
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಆಡಳಿತ ಸರ್ಕಾರಕ್ಕೆ 100 ದಿನದ ಸಾಧನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರನ್ನೂ ಕರೆದಿದ್ದೇವೆ. ನಮ್ಮ ಪಕ್ಷದ ಅಧ್ಯಕ್ಷರಿಗೂ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ. ಪ್ರೋಟೋಕಾಲ್ ನಿಂದಾಗಿ ವೇದಿಕೆ ಮೇಲೆ ಕರೆದಿಲ್ಲ. ಆಹ್ವಾನ ನೀಡಿಲ್ಲ ಅಂತ ಯಾರು ಹೇಳಿದ್ದು ಎಂದು ಪ್ರಶ್ನೆ ಮಾಡಿದರು. ಪಕ್ಷದಲ್ಲಿ ಜೊತೆಗೆ ನಾವು ಕೆಲಸ ಮಾಡಿಕೊಂಡು ಹೋಗ್ತಿದ್ದೇವೆ. ಇದರಲ್ಲಿ ನೀವು ರಾಜಕೀಯ ಮಾಡ್ತಿದ್ದೀರಿ ಎಂದು ಸಿಎಂ ಹೇಳಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಶಿಷ್ಟಾಚಾರಕ್ಕಾದರೂ ಒಂದು ಸಣ್ಣ ಫೋಟೋ ಕೂಡ ಹಾಕಿಲ್ಲ. ವಿಧಾನಪರಿಷತ್ ಸದಸ್ಯನಾಗಿದ್ದೇನೆ, ಆದರೂ ಆಹ್ವಾನ ಕೊಟ್ಟಿಲ್ಲ ಎಂದು ಎಐಸಿಸಿ ನಾಯಕರ ಬಳಿ ಬಿಕೆ ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.