ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಬ್ಬರಿದ್ದ ಬ್ಯಾರಕ್ನಿಂದ 16 ಕೈದಿಗಳಿರುವ ಬ್ಯಾರಕ್ಗೆ ವರ್ಗಾಯಿಸಲಾಗಿದೆ. ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾದ ಹಿನ್ನೆಲೆಯಲ್ಲಿ ಜೈಲಿನಲ್ಲಿ ಕಟ್ಟುನಿಟ್ಟಿನ ಕ್ರಮ.
- Home
- News
- State
- Karnataka News Live: ಜೈಲಲ್ಲಿ ನಟಿ ಪವಿತ್ರಾ ಗೌಡಗೆ ಬಿಗ್ ಶಾಕ್; ಇಬ್ಬರಿದ್ದ ಬ್ಯಾರಕ್ನಿಂದ 16 ಜನ ಇರುವೆಡೆ ಸ್ಥಳಾಂತರ! ಯಾಕೆ ಗೊತ್ತಾ?
LIVE NOW
Karnataka News Live: ಜೈಲಲ್ಲಿ ನಟಿ ಪವಿತ್ರಾ ಗೌಡಗೆ ಬಿಗ್ ಶಾಕ್; ಇಬ್ಬರಿದ್ದ ಬ್ಯಾರಕ್ನಿಂದ 16 ಜನ ಇರುವೆಡೆ ಸ್ಥಳಾಂತರ! ಯಾಕೆ ಗೊತ್ತಾ?

ಸಾರಾಂಶ
ಹಾನಗಲ್ಲ: ರಾಜ್ಯ ಸರ್ಕಾರದಿಂದ ಬಡವರಿಗೆ ಕಡಿಮೆ ದರದಲ್ಲಿ ನಿವೇಶನ, ಕಡುಬಡವರಿಗೆ ಉಚಿತ ನಿವೇಶನ ಯೋಜನೆ ಅರಂಭವಾಗಲಿದೆ. ಅಲ್ಲದೆ, 6 ತಿಂಗಳಲ್ಲಿ 72 ಸಾವಿರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ರಾಜ್ಯ ಕರ್ನಾಟಕ ಗೃಹ ಮಂಡಳಿ ನೂತನ ಅಧ್ಯಕ್ಷ ಶಾಸಕ ಶ್ರೀನಿವಾಸ್ ಮಾನೆ ತಿಳಿಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸ್ವಾತಂತ್ರ್ಯ ದಿನೋತ್ಸವದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರ ಸಮಸ್ಯೆಗಳನ್ನು ಈಡೇರಿಸಲು ಬದ್ಧರಾಗಿದ್ದೇವೆ. ದೆಹಲಿಯಲ್ಲಿ ನಮ್ಮ ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಕರ್ನಾಟಕ ಭವನ ಆರಂಭಿಸಲಾಗಿದೆ. ಸಮರ್ಥ ಸಮೃದ್ಧ ಭಾರತ ನಿರ್ಮಾಣ ನಮ್ಮ ಆದ್ಯತೆ ಎಂದರು
08:20 AM (IST) Aug 16
Karnataka News Live 16 August 2026ಜೈಲಲ್ಲಿ ನಟಿ ಪವಿತ್ರಾ ಗೌಡಗೆ ಬಿಗ್ ಶಾಕ್; ಇಬ್ಬರಿದ್ದ ಬ್ಯಾರಕ್ನಿಂದ 16 ಜನ ಇರುವೆಡೆ ಸ್ಥಳಾಂತರ! ಯಾಕೆ ಗೊತ್ತಾ?
Read Full Story
07:50 AM (IST) Aug 16
Karnataka News Live 16 August 2026ಆಸ್ಟ್ರೇಲಿಯಾದ ಮೌಂಟ್ ಕೊಸ್ಸಿಯಸ್ಕೊ ಶಿಖರವನ್ನೇರಿದ ಕೊಡಗಿನ ಜಮ್ಮಡ ಪ್ರೀತ್ ಅಪ್ಪಯ್ಯ
ಕೊಡಗಿನ ಸಾಹಸಿ ಮಹಿಳೆ ಜಮ್ಮಡ ಪ್ರೀತ್ ಅಪ್ಪಯ್ಯ ಅವರು ಆಸ್ಟ್ರೇಲಿಯಾದ ಮೌಂಟ್ ಕೊಸ್ಸಿಯಸ್ಕೊ ಶಿಖರವನ್ನು ಕೊಡವ ಉಡುಪಿನಲ್ಲಿ ಏರಿ ಸಾಧನೆ ಮಾಡಿದ್ದಾರೆ. ಇದೇ ವೇಳೆ, ಕೊಡಗು ಸೈನಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು.
Read Full Story 07:47 AM (IST) Aug 16
Karnataka News Live 16 August 2026ಬೆಂಗಳೂರಲ್ಲಿ ಬಂಧಿತ ಶಂಕಿತ ಉಗ್ರನ ಶಾಕಿಂಗ್ ಹಿಸ್ಟರಿ!ಕೂಲಿ ಹಣದಲ್ಲಿ ₹10,000 ಪ್ಯಾಲೆಸ್ತೀನ್ ಪರ ದೇಣಿಗೆ, ಐಬಿ ಕಣ್ಣಿಗೆ ಬಿದ್ದಿದ್ದು ಹೇಗೆ?;
ಬೆಂಗಳೂರಿನಲ್ಲಿ ಬಂಧಿತನಾದ ಶಂಕಿತ ಉಗ್ರ ಅಸಾಫೂಲ್ ಮಲ್ಲಿಕ್, ತನ್ನ ಕೂಲಿ ಹಣದಲ್ಲಿ 10 ಸಾವಿರ ರುಪಾಯಿಯನ್ನು ಇಸ್ರೇಲ್ ವಿರುದ್ಧದ ಹೋರಾಟಕ್ಕಾಗಿ ಪ್ಯಾಲೆಸ್ತೀನ್ ಸೇನೆಗೆ ದೇಣಿಗೆ ನೀಡಿದ್ದ. ಪಾಕಿಸ್ತಾನದ ಟಿಟಿಪಿ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಈತ, ಫೇಸ್ಬುಕ್ ಮೂಲಕ ಉಗ್ರರ ಸಂಪರ್ಕಕ್ಕೆ ಬಂದಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
Read Full Story 07:40 AM (IST) Aug 16
Karnataka News Live 16 August 2026Shivamogga - ಹೆಲಿಕಾಪ್ಟರ್ನಲ್ಲಿ ಹಾರಾಡಿದ ಸರ್ಕಾರಿ ಶಾಲೆಯ ಮಕ್ಕಳು!
ಶಿಕಾರಿಪುರದ ಕಡೇನಂದಿಹಳ್ಳಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುವ ಸೌಭಾಗ್ಯ ಲಭಿಸಿತು. ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ವಿಶ್ವಾಗ್ರಹ ಫೌಂಡೇಶನ್ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ, ಮಕ್ಕಳ ಶಿಕ್ಷಣಕ್ಕೆ ಸ್ಫೂರ್ತಿ ತುಂಬಿದವು.