ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್ನಲ್ಲಿ ಕುಸಿದು ಬಿದ್ದು ಸಾವು, 22 ವರ್ಷದ ವಿದ್ಯಾರ್ಥಿನಿ ಎದೆ ನೋವಿನಿಂದ ಕುಸಿದು ಬಿದ್ದಿದ್ದಾಳೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದರೆ, ಇತ್ತ ಹಾಸ್ಟೆಲ್ ಇತರ ವಿದ್ಯಾರ್ಥನಿಯರು ಆಘಾತಕ್ಕೊಳಗಾಗಿದ್ದಾರೆ.
- Home
- News
- State
- Karnataka News Live: ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್ನಲ್ಲಿ ಕುಸಿದು ಬಿದ್ದು ಸಾವು
Karnataka News Live: ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್ನಲ್ಲಿ ಕುಸಿದು ಬಿದ್ದು ಸಾವು

ಬೆಳಗಾವಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಲಾಭ ಪಡೆಯುತ್ತಿರುವ ಫಲಾನುಭವಿಗಳ ಪೈಕಿ 1.80 ಲಕ್ಷ ಮಂದಿ ಆದಾಯ ತೆರಿಗೆ- ಜಿಎಸ್ಟಿ ಪಾವತಿದಾರರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ವಿಧಾನ ಪರಿಷತ್ನಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿರುವ ಇಲಾಖೆ ಅಧಿಕಾರಿಗಳು, ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ತಲಾ 2 ಸಾವಿರ ರು.ನಂತೆ 2023ರ ಜೂ. 6ರಿಂದ ಗೃಹಲಕ್ಷ್ಮೀ ಯೋಜನೆ ಅಡಿ ಸಹಾಯಧನ ಪಾವತಿಸಲಾಗುತ್ತಿದೆ. ಅಕ್ಟೋಬರ್ ಅಂತ್ಯಕ್ಕೆ 1.28 ಕೋಟಿ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ ಅರ್ಹ 1.24 ಕೋಟಿ ರು. ಮಹಿಳೆಯರಿಗೆ ಆಗಸ್ಟ್ ಅಂತ್ಯದವರೆಗೆ 22 ಕಂತಿನಲ್ಲಿ ಹಣ ಪಾವತಿಸಲಾಗಿದೆ. ಒಟ್ಟಾರೆ 52,416 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.
Karnataka News Live 16 December 2025ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್ನಲ್ಲಿ ಕುಸಿದು ಬಿದ್ದು ಸಾವು
Karnataka News Live 16 December 2025ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್ಅಪ್, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಪಿಕ್ಅಪ್ ಮತ್ತು ಡ್ರಾಪ್-ಆಫ್ ವ್ಯವಸ್ಥೆಯ ಕುರಿತು BIAL ಸ್ಪಷ್ಟನೆ ನೀಡಿದೆ. ಪ್ರಯಾಣಿಕರ ಸುರಕ್ಷತೆಯೇ ಈ ನಿಯಮದ ಮುಖ್ಯ ಉದ್ದೇಶವಾಗಿದ್ದು, ಆರಂಭಿಕ ಸಮಸ್ಯೆಗಳನ್ನು 30 ದಿನಗಳಲ್ಲಿ ಪರಿಹರಿಸುವುದಾಗಿ ಭರವಸೆ ನೀಡಿದೆ.
Karnataka News Live 16 December 2025ಚೈತ್ರಾ ಕುಂದಾಪುರ 2ನೇ ಬಾರಿ ಬಿಗ್ ಬಾಸ್ ಮನೆಗೆ ಬಂದ್ರೂ ಚೀಪ್ ಮೆಂಟಾಲಿಟಿ ಆಟ ಬಿಡ್ಲಿಲ್ಲ!
Karnataka News Live 16 December 2025ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು
ಮಂಗಳೂರಿನ ಯೆಯ್ಯಾಡಿ ಹರಕೆ ನೇಮ ವಿವಾದದ ಕುರಿತು ಮಾತನಾಡಿದ ತಮ್ಮಣ್ಣ ಶೆಟ್ಟಿಯವರು, ತಾವು ದೈವಾರಾಧನೆಯ ಲೋಪದೋಷಗಳ ಬಗ್ಗೆ ಮಾತ್ರ ಧ್ವನಿ ಎತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ತುಳು ಭಾಷೆಯ ಬದಲು ಕನ್ನಡದಲ್ಲಿ ನುಡಿ ಹೇಳಿರುವುದು, ನಿಯಮ ಮುರಿದಿರುವುದನ್ನು ಆಕ್ಷೇಪಿಸಿದ್ದಾರೆ.
Karnataka News Live 16 December 2025ಬೆಂಗಳೂರಲ್ಲಿ ಚಿನ್ನದ ಬೆಲೆ 15,200 ರೂ ಇಳಿಕೆ, ಬಂಗಾರ ಖರೀದಿಗೆ ಇದು ಸೂಕ್ತ ಸಮಯವೇ?
ಬೆಂಗಳೂರಲ್ಲಿ ಚಿನ್ನದ ಬೆಲೆ 15,200 ರೂ ಇಳಿಕೆ, ಏರಿಕೆಯಾಗುತ್ತಾ ಸಾಗಿದ್ದ ಚಿನ್ನದ ಬೆಲೆಯಲ್ಲಿ ಆಗಿರುವ ಭಾರಿ ಇಳಿಕೆಯಿಂದ ಜನರು ಖರೀದಿ ಹಾಗೂ ಹೂಡಿಕೆಗೆ ಮುಂದಾಗಿದ್ದಾರೆ. ಮತ್ತೆ ಏರಿಕೆಯಾಗುವ ಮೊದಲು ಖರೀದಿಸಲು ಪ್ಲಾನ್ ಮಾಡುತ್ತಿದ್ದಾರೆ.
Karnataka News Live 16 December 2025ನಾಳೆ ಅರ್ಧ ಬೆಂಗಳೂರಿಗೆ ನೀರು ಪೂರೈಕೆ ಸ್ಥಗಿತ - ಕಾವೇರಿ 5ನೇ ಹಂತದ ಪೈಪ್ಲೈನ್ನಲ್ಲಿ ಸೋರಿಕೆ!
Karnataka News Live 16 December 2025ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ, ಕರ್ನಾಟಕದ ಹನೂರಿನಲ್ಲಿ ಬೃಹತ್ ಚಿನ್ನದ ನಿಕ್ಷೇಪ ಪತ್ತೆ!
ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆಯು ಚಾಮರಾಜನಗರ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪವನ್ನು ಪತ್ತೆಹಚ್ಚಿದೆ. ಪ್ರಾಥಮಿಕ ಹಂತದ ಸರ್ವೆಯಲ್ಲಿ ಈ ಸುಳಿವು ದೊರೆತಿದ್ದು, ನಿಕ್ಷೇಪದ ಪ್ರಮಾಣ ಮತ್ತು ಗುಣಮಟ್ಟವನ್ನು ಖಚಿತಪಡಿಸಲು ಹೆಚ್ಚಿನ ಸಂಶೋಧನೆ ನಡೆಯಲಿದೆ.
Karnataka News Live 16 December 2025ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗದ ಭ್ರಷ್ಟ ತಿಮಿಂಗಲ; ಕೈತುಂಬಾ ಚಿನ್ನ, ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ
Karnataka News Live 16 December 2025ಕರ್ನಾಟಕಕ್ಕೆ ಮಹಾತ್ಮ ಗಾಂಧಿ ನರೇಗಾ ಯೋಜನೆ 5 ಕೋಟಿ ಮಾನವ ದಿನ ಕಡಿತ; ಪ್ರಿಯಾಂಕ್ ಖರ್ಗೆ ಆರೋಪ
ಕೇಂದ್ರ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ 'ನರೇಗಾ' ಯೋಜನೆಯಡಿ ಕರ್ನಾಟಕಕ್ಕೆ ನೀಡಲಾಗುತ್ತಿದ್ದ 5 ಕೋಟಿ ಮಾನವ ದಿನಗಳನ್ನು ಕಡಿತಗೊಳಿಸಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
Karnataka News Live 16 December 2025ಬೆಂಗಳೂರು-ಕರಾವಳಿ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ!
Karnataka News Live 16 December 2025ಧುರಂಧರದಲ್ಲಿ ರಣವೀರ್ ಲುಕ್ ಬದಲಿಸಿದ ಟಾಪ್ ಮೇಕಪ್ ಆರ್ಟಿಸ್ಟ್, ಯಾರೀಕೆ ಪ್ರೀತಿಶೀಲ್? ದಿನವೊಂದಕ್ಕೆ ಎಷ್ಟು ವೇತನ??
ಬಾಲಿವುಡ್ಗೆ ಹೊಸ ಹುರುಪು ತಂದಿರುವ 'ಧುರಂಧರ್' ಚಿತ್ರದಲ್ಲಿ ರಣವೀರ್ ಸಿಂಗ್, ಹಮ್ಜಾ ಅಲಿ ಮಜಾರಿ ಎಂಬ ಗೂಢಚಾರನಾಗಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಖ್ಯಾತ ಮೇಕಪ್ ಕಲಾವಿದೆ ಪ್ರೀತಿಶೀಲ್ ಸಿಂಗ್ ಅವರು, ರಣವೀರ್ರ ಹಿಂದಿನ ಖಿಲ್ಜಿ ಪಾತ್ರಕ್ಕಿಂತ ಸಂಪೂರ್ಣ ಭಿನ್ನವಾದ ನೋಟ ಸೃಷ್ಟಿಸಿದ್ದಾರೆ.
Karnataka News Live 16 December 2025ಉಡುಪಿ ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು; ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು!
Karnataka News Live 16 December 2025'ಮಾದೇಶ್ವರ ದಯಬಾರದೆ..' ಯೂಟ್ಯೂಬ್ನಲ್ಲಿ ಟ್ರೆಂಡ್ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಹಾಡು!
Karnataka News Live 16 December 2025ರಾಜ್ಯಾದ್ಯಂತ ಎಲ್ಕೆಜಿ ಯಿಂದ ಪಿಯುಸಿವರೆಗೆ ಕಲಿಕಾ ಸಮಯದ ಅವಧಿ ಬದಲಾಯಿಸಿಸುವಂತೆ ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ
ರಾಜ್ಯದಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಎಲ್ಕೆಜಿ ಯಿಂದ ಪಿಯುಸಿ ವರೆಗಿನ ಶಾಲಾ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಕ್ಷಣ ಇಲಾಖೆಗೆ ಮನವಿ ಮಾಡಿದೆ. ಚಳಿಗಾಲ ಮುಗಿಯುವವರೆಗೆ ತರಗತಿಗಳನ್ನು ಬೆಳಿಗ್ಗೆ 9.30ಕ್ಕೆ ಆರಂಭಿಸಲು ಆಯೋಗ ಸಲಹೆ ನೀಡಿದೆ.
Karnataka News Live 16 December 2025ಸಣ್ಣ ಜೆರಾಕ್ಸ್ ಅಂಗಡಿ ಮಾಲೀಕನಿಂದ ₹1.6 ಲಕ್ಷ ವಸೂಲಿ; ಕಗ್ಗಲೀಪುರ PSI ಹರೀಶ್ ಸಸ್ಪೆಂಡ್
ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪ ಮಾಡಿ ಕನಕಪುರದ ಜೆರಾಕ್ಸ್ ಅಂಗಡಿ ಮಾಲೀಕ ರಾಜೇಶ್ ಅವರಿಂದ ₹1.6 ಲಕ್ಷ ವಸೂಲಿ ಮಾಡಿದ್ದ ಕಗ್ಗಲೀಪುರ ಪಿಎಸ್ಐ ಹರೀಶ್ ಅವರನ್ನು ರಾಮನಗರ ಎಸ್.ಪಿ. ಶ್ರೀನಿವಾಸ್ ಗೌಡ ಅಮಾನತುಗೊಳಿಸಿದ್ದಾರೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಕ್ರಮ ಕೈಗೊಳ್ಳಲಾಗಿದೆ.
Karnataka News Live 16 December 2025ಮುಡಾ ಹಗರಣದಲ್ಲಿ ಕೋರ್ಟ್ ಹೊಸ ಆದೇಶ, ಜೈಲಲ್ಲಿದ್ದ ಮಾಜಿ ಆಯುಕ್ತ ದಿನೇಶ್ ಕುಮಾರ್ ಮತ್ತೆ ಪೊಲೀಸ್ ಕಸ್ಟಡಿಗೆ!
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ, ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 24 ಗಂಟೆಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿದೆ. ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಕೋರಿದ್ದು, ಡಿ.18 ರಂದು ಅಂತಿಮ ತನಿಖಾ ವರದಿ ಸಲ್ಲಿಕೆಯಾಗಲಿದೆ.
Karnataka News Live 16 December 2025ಲೋಕಾಯುಕ್ತ ದಾಳಿ - ₹50 ಸಾವಿರ ಹಣ ಟಾಯ್ಲಟ್ ಕಮೋಡ್ನಲ್ಲಿ ಹಾಕಿ ಫ್ಲಶ್ ಮಾಡಿದ ಕೃಷಿ ಅಧಿಕಾರಿ!
Karnataka News Live 16 December 2025ಕೊಪ್ಪಳದ ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ಹುಳು ಪತ್ತೆ; ಸಚಿವರೇನ್ ನಿದ್ದೆ ಮಾಡ್ತಿದ್ದಾರಾ?
ಕೊಪ್ಪಳ ತಾಲೂಕಿನ ಬಿಸರಹಳ್ಳಿ ಮತ್ತು ಹೊಸಲಿಂಗಾಪುರ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಮತ್ತು ನುಶಿಗಳು ಪತ್ತೆಯಾಗಿವೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
Karnataka News Live 16 December 2025ಮೆಜೆಸ್ಟಿಲ್ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಬಾಲಕಿ; ದೆಹಲಿ, ಬೆಂಗಳೂರು ಸೇರಿ 2 ವರ್ಷ ವೇಶ್ಯಾವಾಟಿಕೆ ನರಕ ದರ್ಶನ!
ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾದ ಅಪ್ರಾಪ್ತ ಬಾಲಕಿಯ ರಕ್ಷಣೆಯಿಂದ, ದೆಹಲಿ ಮತ್ತು ಬೆಂಗಳೂರಿನಲ್ಲಿ ಸಕ್ರಿಯವಾಗಿದ್ದ ಮಾನವ ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆ ಜಾಲವೊಂದು ಬಯಲಾಗಿದೆ. ದೆಹಲಿ ಹಾಗೂ ಬೆಂಗಳೂರಿನ ಸ್ಪಾದಲ್ಲಿ ಬಾಲಕಿಯನ್ನು ಕೂಡಿಹಾಕಿ ದಂಧೆ ನಡೆಸಿದ್ದಾರೆ.