08:29 AM (IST) Feb 16

Karnataka News Live 16 february 2026 ಪ್ರಿನ್ಸಿಪಾಲ್ ವಾರ್ನಿಂಗ್ ಬೆನ್ನಲ್ಲೇ 10ನೇ ಕ್ಲಾಸ್ ಎಕ್ಸಾಂಗೆ ವೈಭವ್ ಸೂರ್ಯವಂಶಿ ಚಕ್ಕರ್! ಅಷ್ಟಕ್ಕೂ ಆಗಿದ್ದೇನು?

ಸಮಸ್ತಿಪುರ(ಬಿಹಾರ): ಭಾರತ ಅಂಡರ್-19 ವಿಶ್ವಕಪ್ ಹೀರೋ ವೈಭವ್ ಸೂರ್ಯವಂಶಿ 10ನೇ ಕ್ಲಾಸ್ ಎಕ್ಸಾಂಗೆ ಚಕ್ಕರ್ ಹೊಡೆಯಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಯಾಕೆ ಹೀಗೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಡೀಟೈಲ್ಸ್

Read Full Story
08:25 AM (IST) Feb 16

Karnataka News Live 16 february 2026 ಭೀಕರ ಅಪಘಾತದಲ್ಲಿ ಐವರ ಸಾವು - ಯುವಕರು ಮದ್ಯಪಾನ ಮಾಡಿದ್ರಾ? ಪೊಲೀಸರು ಹೇಳಿದ್ದೇನು?

ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ಮೂಲದ ಐವರು ಕಾರಿನಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

Read Full Story
08:10 AM (IST) Feb 16

Karnataka News Live 16 february 2026 ಒಲ್ಲೆ ಎಂದರೂ ಜೆನ್‌ಝಿ ಕತ್ತೆಗಳಿಗೆ ಮದುವೆ ಭಾಗ್ಯ!

ಬೇರೇನೋ ಕಾರಣ ಹೇಳಿ ಕರೆದುಕೊಂಡು ಬಂದು ಈಗ ಮದುವೆ ಮಾಡಲು ಹೊರಟಿದ್ದಾರೆಂದು ತಿಳಿದುಕೊಂಡ ಕತ್ತೆ ‘ಮದುವೆ ಬೇಡಪ್ಪಾ ಬೇಡಾ..’ಎಂದು ಓಟಕ್ಕಿತ್ತಿತು. ಮದುವೆಗೆ ಗಂಡೇ ಇರದಿದ್ದರೆ ಕಷ್ಟ ಅಂತ ಒಂದಿಬ್ಬರು ಅದರ ಹಿಂದೆ ಓಡಿ ಹಿಡಿದುಕೊಂಡರು.

Read Full Story
07:56 AM (IST) Feb 16

Karnataka News Live 16 february 2026 ಅಮೆರಿಕದಲ್ಲಿ ನಾಪತ್ತೆಯಾಗಿದ್ದ ತುಮಕೂರಿನ ಸಾಕೇತ್‌ ಆತ್ಮ*ತ್ಯೆ ಶಂಕೆ - ನಡವಳಿಕೆಯು ಬದಲಾಗಿತ್ತು

ಎರಡು ವಾರದ ಹಿಂದೆ ನಾಪತ್ತೆಯಾಗಿದ್ದ ಬರ್ಕ್‌ಲೆಯ ಕ್ಯಾಲಿಫೋರ್ನಿಯಾ ವಿವಿಯ ವಿದ್ಯಾರ್ಥಿ ಸಾಕೇತ್‌ ಶ್ರೀನಿವಾಸಯ್ಯ ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಬರ್ಕಲಿ ಹಿಲ್ಸ್‌ ಸಮೀಪದ ಅನ್ಜಾ ಕೆರೆಯಲ್ಲಿ ಸಾಕೇತ್‌ ಶವ ಪತ್ತೆಯಾಗಿದೆ ಎನ್ನಲಾಗಿದೆ.

Read Full Story
07:55 AM (IST) Feb 16

Karnataka News Live 16 february 2026 KSRTC ಬಸ್ ಡಿಕ್ಕಿಯಿಂದ ಎರಡೂ ಕೈ ಊನ - ನೊಂದ ಟೆಕ್ಕಿ ಯುವತಿಗೆ ಹೈಕೋರ್ಟ್ ಮಹಾ ತೀರ್ಪು

KSRTC ಬಸ್ ಡಿಕ್ಕಿಯಿಂದ ಕೈಗಳನ್ನು ಕಳೆದುಕೊಂಡು ಐಟಿ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದ ಮಹಿಳೆಗೆ ಅಪಘಾತ ಪರಿಹಾರ ನ್ಯಾಯಾಧಿಕರಣವು ಕೇವಲ 2.80 ಲಕ್ಷ ರೂ. ಪರಿಹಾರ ನೀಡಿತ್ತು. ಹೈಕೋರ್ಟ್ ಮಹಿಳೆ ಭವಿಷ್ಯದ ಆದಾಯ ನಷ್ಟ ಪರಿಗಣಿಸಿ ಪರಿಹಾರದ ಮೊತ್ತವನ್ನು 15 ಲಕ್ಷ ರೂ.ಗೆ ಹೆಚ್ಚಿಸಿ ಮಹತ್ವದ ಆದೇಶ ನೀಡಿದೆ.

Read Full Story
07:33 AM (IST) Feb 16

Karnataka News Live 16 february 2026 ಬೇಡವಾಗಿದ್ದ ಗಂಡ, ಬೇಕಿದ್ದ ಡೇವಿಡ್ - ಪೊಲೀಸರ ಮುಂದೆ ಇಂಚಿಂಚು ಲವ್ ಕಹಾನಿ ಹೇಳಿದ ಪ್ರಿಯಾಂಕಾ

30 ಲಕ್ಷ ಮೌಲ್ಯದ ಒಡವೆಗಳೊಂದಿಗೆ ನಾಪತ್ತೆಯಾಗಿದ್ದ ಪ್ರಿಯಾಂಕಾ, ತಾನು ಕೊ*ಲೆಯಾಗಿದ್ದೇನೆಂದು ಬಿಂಬಿಸಿ ಪ್ರಿಯಕರನೊಂದಿಗೆ ಪರಾರಿಯಾಗಲು ಯತ್ನಿಸಿದ್ದಳು. ಪತಿ ಜೊತೆಗಿನ ಜೀವನದಲ್ಲಿ ಅಸಮಾಧಾನಗೊಂಡಿದ್ದ ಆಕೆ, ತನ್ನ ಕೊಲೆ ನಾಟಕದ ಮೂಲಕ ಮಧ್ಯಪ್ರದೇಶಕ್ಕೆ ಹೋಗಲು ಯೋಜಿಸಿದ್ದಳು.

Read Full Story
07:18 AM (IST) Feb 16

Karnataka News Live 16 february 2026 ಬಿಡಿಎ ಖಾಲಿ ನಿವೇಶನಗಳ ದಂಡದ ಶುಲ್ಕ ಇಳಿಕೆ

ಬೆಂಗಳೂರು ಅಭಿವೃದ್ಧಿ ಪ್ರಾಕಾರದಿಂದ ಹಂಚಿಕೆ ಮಾಡಿರುವ ನಿವೇಶನಗಳಲ್ಲಿ ಗುತ್ತಿಗೆ ಮತ್ತು ಕರಾರು ಪತ್ರದ ಪ್ರಕಾರ ನಿಗದಿತ ಅವಧಿಯೊಳಗೆ ಮನೆ ಅಥವಾ ಕಟ್ಟಡ ನಿರ್ಮಿಸದ ಮಾಲೀಕರಿಗೆ ವಿಧಿಸುತ್ತಿದ್ದ ಶೇ.10ರಷ್ಟು ದಂಡ ಶುಲ್ಕ ಪರಿಷ್ಕರಣೆ ಮಾಡಿ ಶೇ.2.5 ರಿಂದ ಶೇ.10 ರವರೆಗೆ ನಾಲ್ಕು ವಿಭಾಗಗಳಲ್ಲಿ ದರ ನಿಗದಿ

Read Full Story
07:16 AM (IST) Feb 16

Karnataka News Live 16 february 2026 ₹400 ಕೋಟಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು; ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ?

 ₹400 ಕೋಟಿ ನಾಪತ್ತೆ ಪ್ರಕರಣದಲ್ಲಿ, ದೂರುದಾರ ಸಂದೀಪ್ ಪಾಟೀಲ್ ಮಹಾರಾಷ್ಟ್ರ ಎಸ್‌ಐಟಿ ತನಿಖೆ ಪಾರದರ್ಶಕವಾಗಿಲ್ಲ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಬೆಳಗಾವಿಯಲ್ಲಿ ಹೊಸ ಎಫ್‌ಐಆರ್ ದಾಖಲಿಸಿ ಸ್ವತಂತ್ರ ತನಿಖೆ ನಡೆಸುವಂತೆ ಅವರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ.

Read Full Story
07:11 AM (IST) Feb 16

Karnataka News Live 16 february 2026 ಇಂದಿನಿಂದ ಕೆಎಸ್‌ಆರ್‌ಟಿಸಿ ಬಸ್ಸಲ್ಲಿ ಲಗೇಜ್‌ ದರ ಹೆಚ್ಚಳ

ಡೀಸೆಲ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಪರಿಷ್ಕರಿಸಲಾಗಿದ್ದು, ಪರಿಷ್ಕೃತ ದರ ಸೋಮವಾರದಿಂದ ಜಾರಿಗೆ ಬರಲಿದೆ. ಡೀಸೆಲ್, ಸಿಬ್ಬಂದಿ ಹಾಗೂ ಇತರೆ ವೆಚ್ಚಗಳ ಹೆಚ್ಚಳ ಹಿನ್ನೆಲೆಯಲ್ಲಿ ನಿಗಮದ ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರವನ್ನು ಪರಿಷ್ಕರಿಸಲಾಗಿದೆ.

Read Full Story
07:00 AM (IST) Feb 16

Karnataka News Live 16 february 2026 ಮಡುರೋ ಕಿಡ್ನಾಪ್‌ಗೆ ಆ್ಯಂಥ್ರೋಪಿಕ್‌ ಎಐ ಟೂಲ್‌ ಕ್ಲಾಡ್‌ ಬಳಸಿದ್ದ ಅಮೆರಿಕ

ಇತ್ತೀಚೆಗಷ್ಟೇ ಕೋಡರ್‌ಗಳ ಕೆಲಸ ಕಸಿಯುವ ಭೂತದಂತೆ ಬಿಂಬಿತವಾಗಿದ್ದ ಆ್ಯಂಥ್ರೋಪಿಕ್‌ ಸಂಸ್ಥೆಯ ಎಐ ಟೂಲ್‌ ಕ್ಲಾಡ್‌, ವೆನಿಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೋ ಅವರ ಅಪಹರಣದಲ್ಲಿ ಅಮೆರಿಕ ಸೇನೆಗೆ ಸಹಾಯ ಮಾಡಿತ್ತು ಎಂಬ ಅಚ್ಚರಿಯ ಮಾಹಿತಿ ಬೆಳಕಿಗೆ ಬಂದಿದೆ.

Read Full Story