LIVE NOW
Karnataka News Live: ಪತಿ ವಿರುದ್ಧವೇ 9 ಕೇಸ್ ದಾಖಲಿಸಿದ ಪತ್ನಿ - ಗಂಡನ 'ಬದುಕು ಜಟಕಾಬಂಡಿ' ಕಥೆ!

ಸಾರಾಂಶ
ತೀರ್ಥಹಳ್ಳಿ: ಆಗುಂಬೆ ಘಾಟ್ ಮಾರ್ಗದ ಅಗಲೀಕರಣಕ್ಕೆ ಸಂಬಂಧಿಸಿ ತಾಂತ್ರಿಕ ತಜ್ಞರ ಅಭಿಪ್ರಾಯದ ಆಧಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನ ಅಂತಿಮವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆಗುಂಬೆ ಮಾರ್ಗದ ಅಗಲೀಕರಣ ಮತ್ತು ಸುರಂಗ ಮಾರ್ಗ ನಿರ್ಮಾಣ ಎರಡಕ್ಕೂ ಅವಕಾಶವಿದ್ದು, ರಾಜ್ಯ ಸರ್ಕಾರದ ಪೂರ್ಣ ಸಹಕಾರವೂ ಇದೆ. ಅಂತಿಮ ತೀರ್ಮಾನ ಕೇಂದ್ರ ಸರ್ಕಾರದ್ದು ಎಂದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹುಲಿಕಲ್ ಘಾಟಿಯ ಬಗ್ಗೆ ಪ್ರತಿಕ್ರಿಯಿಸಿ, ಹುಲಿಕಲ್ ಘಾಟಿಯ ಕೆಲಸ ಇನ್ನೂ ಪೂರ್ಣಗೊಂಡಿಲ್ಲ. ಕಾರು ಮತ್ತು ಪ್ರಯಾಣಿಕರ ಬಸ್ಸುಗಳಿಗೆ ಅನುಮತಿ ನೀಡಲಾಗಿದೆ. ಉಳಿದಂತೆ ಭಾರಿ ವಾಹನಗಳ ಸಂಚಾರದ ಬಗ್ಗೆ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.
07:56 AM (IST) Jul 16
Karnataka News Live 16 July 2026 ಪತಿ ವಿರುದ್ಧವೇ 9 ಕೇಸ್ ದಾಖಲಿಸಿದ ಪತ್ನಿ - ಗಂಡನ 'ಬದುಕು ಜಟಕಾಬಂಡಿ' ಕಥೆ!
ಇಂಗ್ಲೆಂಡ್ನಿಂದ ಮರಳಿದ ಪತಿಯು ತನ್ನ ಮನೆಗೆ ಪ್ರವೇಶಿಸಿದ್ದಕ್ಕೆ ಪತ್ನಿ ಅತಿಕ್ರಮ ಪ್ರವೇಶದ ದೂರು ದಾಖಲಿಸಿದ್ದಾರೆ. ಇದು ಪತ್ನಿ ದಾಖಲಿಸಿದ 9ನೇ ಪ್ರಕರಣವಾಗಿದ್ದು, ಈ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತನ್ನದೇ ಮನೆಗೆ ಪ್ರವೇಶಿಸಿದ್ದಕ್ಕೆ ಪತಿಯ ಮೇಲೆ ಅತಿಕ್ರಮ ಪ್ರವೇಶದ ಕೇಸ್ ಹಾಕಲಾಗದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
Read Full Story 07:36 AM (IST) Jul 16
Karnataka News Live 16 July 2026 BDA - ಕಾರಂತ ಬಡಾವಣೆಯಲ್ಲಿ ಸೈಟ್ ಬೇಕಿದ್ದರೆ ಜುಲೈ ಒಳಗೆಯೇ ಅರ್ಜಿ ಹಾಕಿ, ಬೆಲೆ ಎಷ್ಟು?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಹೈಕೋರ್ಟ್ ಅನುಮತಿಯ ನಂತರ ಡಾ. ಶಿವರಾಮ ಕಾರಂತ ಬಡಾವಣೆಯ ನಿವೇಶನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲು ಸಿದ್ಧತೆ ನಡೆಸಿದೆ. ಜುಲೈ ಅಂತ್ಯದೊಳಗೆ ಆನ್ಲೈನ್ ಮೂಲಕ ಅರ್ಜಿ ಸ್ವೀಕಾರ ಆರಂಭವಾಗಲಿದ್ದು, ಭೂಮಾಲೀಕರು, ಕಂದಾಯ ನಿವೇಶನದಾರರು ಹಾಗೂ ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತದೆ. ಈ ಸಂಪೂರ್ಣ ಪ್ರಕ್ರಿಯೆಯು ಪಾರದರ್ಶಕತೆಗಾಗಿ ಸಾಫ್ಟ್ವೇರ್ ಮೂಲಕ ನಡೆಯಲಿದೆ.
Read Full Story 07:34 AM (IST) Jul 16
Karnataka News Live 16 July 2026 ಸ್ತ್ರೀಯರ ಒಳ ಉಡುಪು ರಾತ್ರಿ ಕದ್ದು ಮತ್ತೆ ತಂದಿಡುತ್ತಿದ್ದ ಸೈಕೋ ಡೆಲವರಿ ಬಾಯ್ ಅರೆಸ್ಟ್!
ಮನೆ ಹೊರಗೆ ಒಣ ಹಾಕುತ್ತಿದ್ದ ಒಳ ಉಡುಪುಗಳನ್ನು ರಾತ್ರಿ ಕಳವು ಮಾಡುತ್ತಿದ್ದ ಕಿಡಿಗೇಡಿಯೊಬ್ಬನನ್ನು ಇಬ್ಬರು ಯುವತಿಯರು ಪತ್ತೆ ಹಚ್ಚಿ ಇಂದಿರಾನಗರ ಠಾಣೆ ಪೊಲೀಸರಿಗೆ ಹಿಡಿದು ಕೊಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.