07:13 AM (IST) Jun 16

Karnataka News Live 16 June 2026ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು, ಪುತ್ತೂರು ಗೆಲ್ಲಲು ಬಿಜೆಪಿಯಿಂದ ರಹಸ್ಯ ಟಾಸ್ಕ್!

ಮುಂದಿನ ಅಸೆಂಬ್ಲಿ ಚುನಾವಣೆಗೆ ಎರಡು ವರ್ಷ ಬಾಕಿ ಇರುವಾಗಲೇ, ಬಿಜೆಪಿ ಮಂಗಳೂರು ಮತ್ತು ಪುತ್ತೂರು ಕ್ಷೇತ್ರಗಳನ್ನು ಗೆಲ್ಲಲು ಸಿದ್ಧತೆ ಆರಂಭಿಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ ದಾಸ್ ಅಗರ್‌ವಾಲ್ ರಹಸ್ಯ ಸಭೆ ನಡೆಸಿ, ಪಕ್ಷದ ಚಿಹ್ನೆಗೆ ಮಹತ್ವ ನೀಡುವುದು ಮತ್ತು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವಂತಹ ತಂತ್ರಗಾರಿಕೆಯ ಟಾಸ್ಕ್ ನೀಡಿದ್ದಾರೆ.
Read Full Story
06:56 AM (IST) Jun 16

Karnataka News Live 16 June 2026ವಿಜಯಪುರ To ಬೇನಾಳ RS - ಕೊನೆಗೂ ಆರಂಭವಾದ ಬಹುನಿರೀಕ್ಷಿತ ಸೇವೆ, ಈಡೇರಿತು ಗ್ರಾಮಸ್ಥರ ಬೇಡಿಕೆ

ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ವಿಜಯಪುರದಿಂದ ಬೇನಾಳ ರೈಲು ನಿಲ್ದಾಣಕ್ಕೆ ನೂತನ ಬಸ್ ಸಂಚಾರ ಆರಂಭವಾಗಿದೆ. ಈ ಬಸ್ ಪ್ರತಿದಿನ ನಾಲ್ಕು ಟ್ರಿಪ್‌ಗಳ ಮೂಲಕ ಆಲಮಟ್ಟಿ ಉದ್ಯಾನದವರೆಗೆ ಸಂಚರಿಸಲಿದ್ದು, ವಿದ್ಯಾರ್ಥಿಗಳು, ರೈತರು ಮತ್ತು ಉದ್ಯೋಗಿಗಳಿಗೆ ಅನುಕೂಲವಾಗಲಿದೆ.

Read Full Story
06:41 AM (IST) Jun 16

Karnataka News Live 16 June 20264 ದಶಕಗಳ ಬಳಿಕ ಒಂದೆಡೆ ಸೇರಿದ 1983-84ನೇ ಸಾಲಿನ ವಿದ್ಯಾರ್ಥಿಗಳು; ಮೃತ ಗೆಳೆಯರಿಗೆ ಕಂಬನಿ

ಹರಪನಹಳ್ಳಿಯ ಎಚ್.ಎಂ. ಏಕೋರಾಮರಾಧ್ಯ ಪ್ರೌಢಶಾಲೆಯ 1983-84ನೇ ಸಾಲಿನ ವಿದ್ಯಾರ್ಥಿಗಳು 'ಗುರು ವಂದನಾ ಮತ್ತು ಸ್ನೇಹ ಸಮ್ಮಿಲನ' ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ತಮ್ಮ ಗುರುಗಳನ್ನು ಸನ್ಮಾನಿಸಿ, ಶಾಲೆಯ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಿದರು. ತೆಗ್ಗಿನಮಠದ ಶ್ರೀಗಳು ಗುರುವಿನ ಮಹತ್ವವನ್ನು ಸಾರಿದರು.
Read Full Story
06:10 AM (IST) Jun 16

Karnataka News Live 16 June 2026ಫ್ರಿ ಬಸ್ ಸ್ಮಾರ್ಟ್‌ಕಾರ್ಡ್‌ ವಿತರಣೆಗೆ ಸಿದ್ಧವಾಯ್ತು ಹೊಸ ಸೂತ್ರ - ಸಚಿವ ಬೈರತಿ ಸುರೇಶ್‌

ಶಕ್ತಿ ಯೋಜನೆ ಫಲಾನುಭವಿಗಳಿಗೆ ಸ್ಮಾರ್ಟ್‌ಕಾರ್ಡ್‌ ವಿತರಿಸಲು ವಿಶೇಷ ಉದ್ದೇಶಿತ ವಾಹಕ (ಎಸ್‌ಪಿವಿ) ರಚಿಸಲು ಸಾರಿಗೆ ಸಚಿವ ಬೈರತಿ ಸುರೇಶ್‌ ಸೂಚಿಸಿದ್ದಾರೆ. ಪಿಪಿಪಿ ಮಾದರಿಯಲ್ಲಿ ನಡೆಯುವ ಈ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಉಚಿತವಾಗಿ ಕಾರ್ಡ್‌ ನೀಡಲಾಗುವುದು ಮತ್ತು ಪುರುಷರು ಹಣ ನೀಡಿ ಖರೀದಿಸಬೇಕಾಗುತ್ತದೆ.
Read Full Story
06:00 AM (IST) Jun 16

Karnataka News Live 16 June 2026ವಾರದಲ್ಲಿ 4 ದಿನ ದರ್ಶನ್‌ ಕೇಸ್‌ ವಿಚಾರಣೆ ಫಾಸ್ಟ್‌ ಟ್ರ್ಯಾಕ್‌; 60 ಪ್ರಮುಖ ಸಾಕ್ಷಿಗಳ ವಿಚಾರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರತಿದಿನ ನಡೆಸಲು ಸೆಷನ್ಸ್ ನ್ಯಾಯಾಲಯ ನಿರ್ಧರಿಸಿದೆ. ಸುಪ್ರೀಂಕೋರ್ಟ್ ಆದೇಶದಂತೆ ಒಂದು ವರ್ಷದಲ್ಲಿ 60 ಪ್ರಮುಖ ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸುವ ಗುರಿಯೊಂದಿಗೆ ಈ ತೀರ್ಮಾನ ಕೈಗೊಳ್ಳಲಾಗಿದೆ. ನ್ಯಾಯಾಲಯವು ಇಬ್ಬರು ಸಾಕ್ಷಿಗಳಿಗೆ ಸಮನ್ಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.
Read Full Story
05:50 AM (IST) Jun 16

Karnataka News Live 16 June 2026ವೋಟ್ ಇರೋರಿಗೆ ಕಾಂಗ್ರೆಸ್ ಗ್ಯಾರಂಟಿ - SIRನಲ್ಲಿ ಹೆಸ್ರು ರದ್ದಾಗದಂತೆ ನೋಡಿಕೊಳ್ಳೋ ಅನಿವಾರ್ಯ

ರಾಜ್ಯದ ಗ್ಯಾರಂಟಿ ಯೋಜನೆಗಳು ಕೇವಲ ಕರ್ನಾಟಕದ ಮತದಾರರಿಗೆ ಮಾತ್ರ ಸೀಮಿತವಾಗಲಿದ್ದು, ಶೀಘ್ರದಲ್ಲೇ ವೋಟರ್ ಐಡಿ ಕಡ್ಡಾಯವಾಗುವ ಸಾಧ್ಯತೆಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾರೆ. ಯೋಜನೆಗಳ ದುರ್ಬಳಕೆ ತಡೆದು, ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Read Full Story
05:42 AM (IST) Jun 16

Karnataka News Live 16 June 2026RSS ನೋಂದಾಯಿಸಿ, ಆಸ್ತಿಮೂಲ ತಿಳಿಸಿ, ಭಾಗವತ್‌ಗೆ 8 ಪ್ರಶ್ನೆಗಳ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಆರೆಸ್ಸೆಸ್‌ ಅನ್ನು ನೋಂದಾಯಿಸದಿರುವ ಕಾನೂನಾತ್ಮಕ ಕಾರಣಗಳು, ಅದರ ಆಸ್ತಿ, ದೇಣಿಗೆ ಮತ್ತು ತೆರಿಗೆ ಪಾವತಿ ವಿವರಗಳನ್ನು ಬಹಿರಂಗಪಡಿಸುವ ಮೂಲಕ ಪಾರದರ್ಶಕತೆ ಮೆರೆಯುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.

Read Full Story
05:30 AM (IST) Jun 16

Karnataka News Live 16 June 2026ಅನುಮಾನಾಸ್ಪದವಾಗಿ 'ಮಜಾ ಭಾರತ' ಖ್ಯಾತಿಯ ಹಾಸ್ಯ ಕಲಾವಿದ ಸಿದ್ದು ಪರಸನೂರು ನಿಧನ; ಶವ ಪತ್ತೆ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದ ಸಿದ್ದು ಪರಸನೂರು ಬೀದರ್‌ನಲ್ಲಿ ನಿಧನರಾಗಿದ್ದಾರೆ. ಹುಮ್ನಾಬಾದ್ ಹೊರವಲಯದಲ್ಲಿ ಅವರ ಶವ ಪತ್ತೆಯಾಗಿದ್ದು, ವಿದ್ಯುತ್ ಶಾಕ್‌ನಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read Full Story