Ninna Jothe Nanna Kathe Serial: ನಿನ್ನ ಜೊತೆ ನನ್ನ ಕಥೆ ಧಾರಾವಾಹಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಒಳ್ಳೆಯ ಟಿಆರ್ಪಿ ಪಡೆಯುತ್ತಿದೆ. ಇದು ಅಪ್ಪಟ ಕನ್ನಡದ ಕಥೆ. ಈಗ ಈ ಸೀರಿಯಲ್ ಖ್ಯಾತಿ ಬೇರೆ ರಾಜ್ಯಗಳಿಗೂ ಹರಡಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
- Home
- News
- State
- State News Live: ಬೇರೆ ರಾಜ್ಯಗಳಲ್ಲೂ ಡಿಮ್ಯಾಂಡ್ ಸೃಷ್ಟಿಸಿದ Ninna Jothe Nanna Kathe Serial - ಇದು ಕನ್ನಡದ ತಾಕತ್ತು!
State News Live: ಬೇರೆ ರಾಜ್ಯಗಳಲ್ಲೂ ಡಿಮ್ಯಾಂಡ್ ಸೃಷ್ಟಿಸಿದ Ninna Jothe Nanna Kathe Serial - ಇದು ಕನ್ನಡದ ತಾಕತ್ತು!

ಬೆಂಗಳೂರು (ಮಾ.16):ಇರಾನ್ ಯುದ್ಧದಿಂದ ಉಂಟಾಗಿದ್ದ ಎಲ್ಪಿಜಿ ಸಿಲಿಂಡರ್ ಪೂರೈಕೆ ಸಮಸ್ಯೆ ಕೊಂಚ ತಹಬದಿಗೆ ಬರುವ ಲಕ್ಷಣಗಳು ಗೋಚರಿಸಿವೆ, ‘ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಕಳೆದ ಮೂರು ದಿನದಲ್ಲಿ ತೈಲ ಕಂಪನಿಗಳ ಅನಿಲ ಸಿಲಿಂಡರ್ ಸರಬರಾಜಿನಲ್ಲಿ ಶೇ.20 ರಷ್ಟು ಸುಧಾರಣೆಯಾಗಿದೆ’ ಎಂದು ರಾಜ್ಯದ ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆ ಭಾನುವಾರ ಹೇಳಿದೆ. ಇದರಲ್ಲಿ ಹೆಚ್ಚು ಬಾಧಿತವಾಗಿದ್ದ ವಾಣಿಜ್ಯ ಎಲ್ಪಿಜಿ ಪೂರೈಕೆಯೂ ಸೇರಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
=
Karnataka News Live 16th March:ಬೇರೆ ರಾಜ್ಯಗಳಲ್ಲೂ ಡಿಮ್ಯಾಂಡ್ ಸೃಷ್ಟಿಸಿದ Ninna Jothe Nanna Kathe Serial - ಇದು ಕನ್ನಡದ ತಾಕತ್ತು!
Karnataka News Live 16th March:63 ದನಕರುಗಳೊಂದಿಗೆ ನಾಲ್ವರು ಅವಿವಾಹಿತ ಸಹೋದರಿಯ ಸಹಜೀವನ; ಗೋಪ್ರೇಮಕ್ಕೆ ಇವರೇ ಮಾದರಿ
Karnataka News Live 16th March:ಬಾಗಲಕೋಟೆ ಉಪಕದನ ಹಣಾಹಣಿಗೆ ವೇದಿಕೆ ಸಜ್ಜು - HY ಮೇಟಿ ನಂತರ ಯಾರಿಗೆ ಪಟ್ಟ? ಕ್ಷೇತ್ರದ ಹಿನ್ನೋಟ
Karnataka News Live 16th March:ತುಮಕೂರು - ಸಹಕಾರಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಅಕ್ರಮ - ಕಾಂಗ್ರೆಸ್ ಅಭ್ಯರ್ಥಿಗೆ ಮತ ಸೇರಿಸಿದ ಆರೋಪ
ತುಮಕೂರಿನ ಕುಣಿಗಲ್ ತಾಲೂಕಿನ ಸೊಸೈಟಿ ಚುನಾವಣೆಯಲ್ಲಿ, ಚುನಾವಣಾಧಿಕಾರಿಯೊಬ್ಬರು ಕಾಂಗ್ರೆಸ್ ಅಭ್ಯರ್ಥಿ ಪರ ಮತಪತ್ರಗಳನ್ನು ಅಕ್ರಮವಾಗಿ ಮತಪೆಟ್ಟಿಗೆಗೆ ತುಂಬುವಾಗ ಜೆಡಿಎಸ್ ಕಾರ್ಯಕರ್ತರಿಗೆ ಸಿಕ್ಕಿಬಿದ್ದಿದ್ದಾರೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿ, ಚುನಾವಣೆಯನ್ನು ರದ್ದುಗೊಳಿಸಲಾಗಿದೆ.
Karnataka News Live 16th March:ಗ್ಯಾಸ್ಗಾಗಿ ಪರದಾಡುತ್ತಿರುವವರಿಗೆ ಇಂದು ಸಿಹಿಸುದ್ದಿ?
ಅನಿಲ ಸಿಲಿಂಡರ್ ಕೊರತೆಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸೋಮವಾರ ಅನಿಲ ಕಂಪನಿಗಳ ಜೊತೆ ಸಭೆ ನಡೆಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
Karnataka News Live 16th March:ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮ - ರಸ್ತೆ ಅಪಘಾತವೆಂದು ಬಿಂಬಿಸಲೆತ್ನಿಸಿದ್ದ ಆರೋಪಿಗಳು
ಹರಪನಹಳ್ಳಿಯಲ್ಲಿ ಆಸ್ತಿ ವಿಚಾರಕ್ಕಾಗಿ ತಮ್ಮನೇ ತನ್ನ ಸ್ನೇಹಿತನೊಂದಿಗೆ ಸೇರಿ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಂತರ ಇದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದರೂ, ಮೃತನ ತಾಯಿಯ ದೂರಿನ ಮೇರೆಗೆ ಪೊಲೀಸರು 24 ಗಂಟೆಯೊಳಗೆ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
Karnataka News Live 16th March:ರೆಸಾರ್ಟ್, ಹೋಮ್ ಸ್ಟೇಗಳು ಖಾಲಿ ಖಾಲಿ
ಇಸ್ರೇಲ್-ಇರಾನ್ ಯುದ್ಧದ ಪರಿಣಾಮದಿಂದ ರಾಜ್ಯದ ಹಲವೆಡೆ ವಾಣಿಜ್ಯ ಬಳಕೆಯ ಸಿಲಿಂಡರ್ ಅಭಾವ ಮುಂದುವರಿದಿದ್ದು, ಹೋಟೆಲ್ ಉದ್ಯಮಕ್ಕೆ ಭಾರಿ ಸಮಸ್ಯೆಯಾಗಿದೆ. ಹಲವೆಡೆ ಹೋಟೆಲ್ನವರು ಕಟ್ಟಿಗೆ ಒಲೆ ಹೂಡಿ ಅಡುಗೆ ಮಾಡಲಾರಂಭಿಸಿದ್ದಾರೆ.
Karnataka News Live 16th March:ಅರ್ಹತೆ ಇಲ್ಲದೆ ಶಸ್ತ್ರ ಚಿಕಿತ್ಸೆ ವಂಚನೆಗೆ ಸಮ - ಹೈಕೋರ್ಟ್
ವೈದ್ಯಕೀಯ ಅರ್ಹತೆಯಿಲ್ಲದೆಯೇ ಪಿಸ್ತುಲ್ಲಾಗೆ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಅರ್ಹತೆಯಿಲ್ಲದೆ ಪಿಸ್ತುಲಾ ಶಸ್ತ್ರ ಚಿಕಿತ್ಸೆ ನಡೆಸುವುದು ವಂಚನೆಯಲ್ಲದೆ ಮತ್ತೇನು ಎಂದು ಖಾರವಾಗಿ ಪ್ರಶ್ನಿಸಿದೆ.
Karnataka News Live 16th March:2.5 ದಶಕದ ಬಳಿಕ ಹಲಸೂರು ಕೆರೆ ಹೂಳು ತೆರವು
ಬರೋಬ್ಬರಿ ಎರಡುವರೆ ದಶಕಗಳ ಬಳಿಕ 100 ಎಕರೆಗೂ ಹೆಚ್ಚು ವಿಸ್ತೀರ್ಣದ ಹಲಸೂರು ಕೆರೆಯ ಹೂಳು ತೆಗೆದು ಸಮಗ್ರ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದ್ದು, ಸುಂದರೀಕರಣ ಮತ್ತು ಶುದ್ಧ ನೀರಿನ ಸಂಗ್ರಹಣೆಯ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಕಾಮಗಾರಿ ಆರಂಭಿಸಲಾಗಿದೆ.
Karnataka News Live 16th March:ನಾನಂತೂ ಜಿಬಿಎ ಚುನಾವಣೆ ಮಾಡುವವನೇ - ಡಿಕೆಶಿ ಶಪಥ
‘ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳಿಗೂ ಚುನಾವಣೆ ನಡೆಯುವುದು ಖಚಿತ. ನಾನಂತೂ ಜಿಬಿಎ ಪಾಲಿಕೆಗಳ ಚುನಾವಣೆ ಮಾಡುತ್ತೇನೆ. ಇದಕ್ಕಾಗಿ ಎಲ್ಲ ಆಕಾಂಕ್ಷಿಗಳು ಸಿದ್ಧತೆ ಮಾಡಿಕೊಳ್ಳಿ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
Karnataka News Live 16th March:ಎಲ್ಪಿಜಿ ಪೂರೈಕೆ ಸುಧಾರಣೆ : ಸಪ್ಲೈ ಶೇ.20ರಷ್ಟು ಏರಿಕೆ
ಇರಾನ್ ಯುದ್ಧದಿಂದ ಉಂಟಾಗಿದ್ದ ಎಲ್ಪಿಜಿ ಸಿಲಿಂಡರ್ ಪೂರೈಕೆ ಸಮಸ್ಯೆ ಕೊಂಚ ತಹಬದಿಗೆ ಬರುವ ಲಕ್ಷಣಗಳು ಗೋಚರಿಸಿವೆ, ‘ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಕಳೆದ ಮೂರು ದಿನದಲ್ಲಿ ತೈಲ ಕಂಪನಿಗಳ ಅನಿಲ ಸಿಲಿಂಡರ್ ಸರಬರಾಜಿನಲ್ಲಿ ಶೇ.20 ರಷ್ಟು ಸುಧಾರಣೆಯಾಗಿದೆ