19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ, ಪದಾಚಾರಿಗೆ ಡಿಕ್ಕಿ ಹೊಡೆದ ಬಳಿಕ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಎರ್ಟಿಗಾ ಕಾರು, ಐದಾರು ಬೈಕ್ಗಳಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
- Home
- News
- State
- Karnataka News Live: 19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ
Karnataka News Live: 19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ

ಬೆಂಗಳೂರು: ಬಿಜೆಪಿಗೆ ಹೊಸ ಸಾರಥಿ ನೇಮಕ ಬೆನ್ನಲ್ಲೇ ರಾಜ್ಯದ ಕೇಸರಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಳಗಾವಿ ಅಧಿವೇಶನ ಬಿಟ್ಟು ದೆಹಲಿಗೆ ತೆರಳಿದ್ದಾರೆ. ಬಿಜೆಪಿ ರಾಷ್ಟ್ರೀಯ ನೂತನ ಕಾರ್ಯಾಧ್ಯಕ್ಷ ನಿತಿನ್ ನವೀನ್ ಅವರನ್ನು ಮಂಗಳವಾರ ಭೇಟಿ ಮಾಡಿ ಶುಭ ಕೋರಿದ್ದಾರೆ. ಅಲ್ಲದೆ, ರಾಜ್ಯದ ಪ್ರಸಕ್ತ ರಾಜಕೀಯ ಸ್ಥಿತಿಗತಿ, ಪಕ್ಷ ಸಂಘಟನೆ, ರಾಜ್ಯದಲ್ಲಿನ ಸಿಎಂ ಬದಲಾವಣೆ ಕುರಿತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಿಜೆಪಿಗೆ ರಾಷ್ಟ್ರೀಯ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ನಿತಿನ್ ನವೀನ್ ಅವರು, ರಾಜ್ಯದ ಬಗ್ಗೆಯೂ ಗಮನ ಹರಿಸುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಅವರ ಭೇಟಿ ಮಹತ್ವ ಪಡೆದಿದೆ.
Karnataka News Live 17 December 202519ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ
Karnataka News Live 17 December 2025100 ಸಿನಿಮಾಗಳಲ್ಲಿ 40 ಫ್ಲಾಪ್, 33 ರಿಲೀಸ್ ಆಗಿಲ್ಲ.. ಆದರೂ ಇಂಡಸ್ಟ್ರಿ ಆಳಿದ ಕಿಚ್ಚ ಸುದೀಪ್ ಜೊತೆ ನಟಿಸಿದ ಸ್ಟಾರ್ ಹೀರೋ ಯಾರು?
ಅವರೊಬ್ಬ ಸ್ಟಾರ್ ಹೀರೋ.. 100 ಸಿನಿಮಾ ಪೂರೈಸಿದ ನಟ, ಅದರಲ್ಲಿ 40 ಸಿನಿಮಾಗಳು ಫ್ಲಾಪ್ ಆಗಿವೆ, 33 ಸಿನಿಮಾಗಳು ರಿಲೀಸ್ ಆಗಿಲ್ಲ. ಆದರೂ ಇಂಡಸ್ಟ್ರಿಯಲ್ಲಿ ಸ್ಟಾರ್ ಹೀರೋ ಸ್ಟೇಟಸ್ ಗಳಿಸಿದರು. ಇಷ್ಟು ವರ್ಷಗಳ ಸಿನಿಮಾ ಕೆರಿಯರ್ನಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿದ ಆ ಸ್ಟಾರ್ ನಟ ಯಾರು ಗೊತ್ತಾ?
Karnataka News Live 17 December 2025ಕಾರ್ಯಕರ್ತರು ಎದೆಗುಂದಬೇಡಿ, ಜೆಡಿಎಸ್ಗೆ ಉತ್ತಮ ಕಾಲ ಬರಲಿದೆ - ಕೇಂದ್ರ ಸಚಿವ ಕುಮಾರಸ್ವಾಮಿ
ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಫಲ ಸಿಗುತ್ತದೆ. ಮುಂದಿನ ದಿನಗಳಲ್ಲಿ ಜೆಡಿಎಸ್ಗೆ ಒಳ್ಳೆಯ ಕಾಲ ಬರುತ್ತದೆ. ಅಲ್ಲಿಯವರೆಗೆ ಕಾರ್ಯಕರ್ತರು ಎದೆಗುಂದಬಾರದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
Karnataka News Live 17 December 2025ರಾಜ್ಯದಲ್ಲಿ ಹೊಸ 600 ಪಿಎಸ್ಐ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭ - ಗೃಹ ಸಚಿವ ಪರಮೇಶ್ವರ್
ಹೊಸದಾಗಿ 600 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮತಿ ದೊರೆತ ಕೂಡಲೇ ಪಿಎಸ್ಐ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
Karnataka News Live 17 December 2025ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ - ಸಚಿವ ಮಧು ಬಂಗಾರಪ್ಪ
ಕನ್ನಡ ಭಾಷಾ ಕಲಿಕೆ ಅಧಿನಿಯಮದಡಿ ಕನ್ನಡ ಕಲಿಸುತ್ತಿಲ್ಲ ಎಂಬ ದೂರು ಬಂದರೆ ಅಂತಹ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
Karnataka News Live 17 December 2025ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್ ಅಧಿಕಾರಿ ನೇಮಕ - ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ಒಬ್ಬರು ನೋಡಲ್ ಅಧಿಕಾರಿ ನೇಮಿಸಲಾಗುವುದು. ಕೆಲ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಗಂಡು ಮಕ್ಕಳೇ ಹೆಚ್ಚು ಜನಿಸಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
Karnataka News Live 17 December 2025ನಬಾರ್ಡ್ ಅನುದಾನ ಕಡಿತದಿಂದ ಕೃಷಿ ಸಾಲ ನೀಡಲು ಸಮಸ್ಯೆ - ಸಿಎಂ ಸಿದ್ದರಾಮಯ್ಯ
2,185 ಕೋಟಿ ರು. ಅನುದಾನ ಕಡಿತಗೊಳಿಸಲಾಗಿದೆ. ಇದು ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Karnataka News Live 17 December 2025ಸ್ಪೆಷಲ್ ಡ್ಯಾನ್ಸ್ಗಾಗಿಯೇ ನಾಯಕಿಯನ್ನು ಹುಡುಕುವ ನೆಲ್ಸನ್ - ಜೈಲರ್ 2ನಲ್ಲಿ ರಜನಿಕಾಂತ್ ಆ ಫೀಲಿಂಗ್ಸ್ ಈಡೇರುತ್ತಾ?
ಜೈಲರ್ ಚಿತ್ರದಲ್ಲಿ ಕಾವಾಲಾ ಹಾಡಿನ ವೇಳೆ ತಮನ್ನಾ ಜೊತೆ ಮಾತನಾಡಲು ಅವಕಾಶ ಸಿಗಲಿಲ್ಲ ಎಂದು ಹೇಳಿದ್ದ ರಜನಿಕಾಂತ್ ಅವರ ಫೀಲಿಂಗ್ಸ್ ಅನ್ನು ನೋರಾ ಫತೇಹಿ ಈಡೇರಿಸಲಿದ್ದಾರೆ ಎಂದು ಕಾಣುತ್ತಿದೆ.
Karnataka News Live 17 December 2025ಗಂಭೀರತೆ ಪಡೆದ ಕಲ್ಲಿದ್ದಲು ಕಳ್ಳತನ ಪ್ರಕರಣ, ಪವರ್ ಮೇಕ್ ಸಂಸ್ಥೆಯ ಇಬ್ಬರ ವಿರುದ್ಧ ಎಫ್ಐಆರ್
ರಾಯಚೂರಿನ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ (ವೈಟಿಪಿಎಸ್) ಕಲ್ಲಿದ್ದಲು ವ್ಯಾಗನ್ಗಳನ್ನು ಸರಿಯಾಗಿ ಖಾಲಿ ಮಾಡದೆ, ನಷ್ಟ ಉಂಟುಮಾಡಿದ ಆರೋಪದ ಮೇಲೆ ಪವರ್ ಮೆಕ್ ಪ್ರೈವೆಟ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಬೃಹತ್ ಕಳ್ಳತನದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಿರ್ಧರಿಸಿದೆ.
Karnataka News Live 17 December 2025ದುಬೈನಲ್ಲಿ ಮೋಸದಿಂದ 'ಬಾರ್ ಗರ್ಲ್' ಆದೆ, ಆದ್ರೆ ಆ ಅನುಭವವೇ ಸೂಪರ್ - ರಾಧಾ ಕಲ್ಯಾಣ ನಟಿ ಮಾತು ಕೇಳಿ
'ರಾಧಾ ಕಲ್ಯಾಣ' ಖ್ಯಾತಿಯ ನಟಿ ಚಿತ್ರಾಲ್ ರಂಗಸ್ವಾಮಿ ಅವರು ಡಾನ್ಸ್ ಈವೆಂಟ್ ಎಂದು ನಂಬಿಸಿ ದುಬೈಗೆ ಕರೆದೊಯ್ದು ಬಾರ್ ಗರ್ಲ್ ಮಾಡಿದ ಮೋಸದ ಕಥೆಯನ್ನು ಹಂಚಿಕೊಂಡಿದ್ದಾರೆ. ಅಲ್ಲಿನ ಮೂರು ತಿಂಗಳ ಅನುಭವ, ಬಾರ್ ಗರ್ಲ್ಗಳ ಬಗೆಗಿನ ತಪ್ಪು ಕಲ್ಪನೆಗಳು ಮತ್ತು ಅಲ್ಲಿನ ಕೋಡ್ ವರ್ಡ್ಗಳ ಬಗ್ಗೆ ತಿಳಿಸಿದ್ದಾರೆ.
Karnataka News Live 17 December 2025ಕಾರವಾರದಲ್ಲಿ ಸಿಕ್ಕಿದ ಸೀಗಲ್ ಹಕ್ಕಿಯಲ್ಲಿ ಚೈನಾದ ಜಿಪಿಎಸ್ ಟ್ರ್ಯಾಕರ್ ಪತ್ತೆ! ಪೊಲೀಸರಿಂದ ತನಿಖೆ
ಕಾರವಾರದಲ್ಲಿ ಸೀಗಲ್ ಹಕ್ಕಿಯ ದೇಹದಲ್ಲಿ ಚೀನಾದ ಜಿಪಿಎಸ್ ಟ್ರ್ಯಾಕರ್ ಪತ್ತೆಯಾಗಿ ಆತಂಕ ಸೃಷ್ಟಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಬೀಜಿಂಗ್ನ ಪರಿಸರ ಅಧ್ಯಯನದ ಭಾಗವೆಂದು ತಿಳಿದುಬಂದಿದೆ. ಭದ್ರತಾ ದೃಷ್ಟಿಯಿಂದ ಪೊಲೀಸ್ ಮತ್ತು ಅರಣ್ಯ ಇಲಾಖೆಗಳು ತನಿಖೆ ನಡೆಸುತ್ತಿವೆ.
Karnataka News Live 17 December 20259 ಸಿನಿಮಾ ಮಾಡಿದ್ರೂ 8 ಫ್ಲಾಪ್.. ಪ್ಯಾನ್ ಇಂಡಿಯಾ ಸ್ಟಾರ್ ಮೇಲಿದೆ ಭರವಸೆ.. ಯಾರು ಈ ನಟಿ?
ಸಿನಿಮಾ ಇಂಡಸ್ಟ್ರಿಯಲ್ಲಿ ನೆಲೆಯೂರೋದು ತುಂಬಾ ಕಷ್ಟ.. ಸೌಂದರ್ಯದ ಜೊತೆಗೆ ಅದೃಷ್ಟವೂ ಇರಬೇಕು. ಆದರೆ ಅದೃಷ್ಟ ಇಲ್ಲದ ನಟಿಯರು ಟಾಲಿವುಡ್ನಲ್ಲಿ ತುಂಬಾ ಜನರಿದ್ದಾರೆ. ಈ ನಟಿ ಕೂಡಾ ಅದೇ ಸಾಲಿಗೆ ಸೇರುತ್ತಾರೆ. ಹಾಗಾದ್ರೆ ಆ ಕಥೆ ಏನು ಅಂತ ಈಗ ನೋಡೋಣ ಬನ್ನಿ..
Karnataka News Live 17 December 2025BBK 12 - ಕಳ್ಳಿಯಂತೆ ಹೋಗಿ ಕ್ಷಮೆಯಾಚಿಸಿದ ಚೈತ್ರಾ ಕುಂದಾಪುರ; ಎಲ್ಲರ ಮುಂದೆ ರಿವೀಲ್ ಮಾಡಿದ ಗಿಲ್ಲಿನಟ!
ಬಿಗ್ ಬಾಸ್ ಕ್ಯಾಪ್ಟನ್ಸಿ ಟಾಸ್ಕ್ ವೇಳೆ ಅಶ್ವಿನಿ ಗೌಡ ಅವರಿಗೆ ಗಾಯ ಮಾಡಿ, ಎಂಜಲು ಉಗುಳಿದ್ದ ಚೈತ್ರಾ ಕುಂದಾಪುರ, ಇದೀಗ ತನ್ನ ತಪ್ಪಿನ ಅರಿವಾಗಿ ಕ್ಷಮೆಯಾಚಿಸಿದ್ದಾರೆ. ದೇವರ ಮುಂದೆ ಕುಳಿತಾಗ ತಪ್ಪು ಎನಿಸಿತು ಎಂದು ಹೇಳಿಕೊಂಡ ಚೈತ್ರಾ, ಕ್ಯಾಮೆರಾ ಇಲ್ಲದಾಗ ಅಶ್ವಿನಿ ಬಳಿ ಕ್ಷಮೆ ಕೇಳಿದ್ದಾರೆ.
Karnataka News Live 17 December 2025ಭಾರತದ ಸಂಗೀತ ದಂತಕಥೆ ಸುಬ್ಬಲಕ್ಷ್ಮಿ ಬಯೋಪಿಕ್ನಲ್ಲಿ ರಾಮಾಯಣದ ಸೀತೆ - ಅಭಿಮಾನಿಗಳಲ್ಲಿ ಕುತೂಹಲ!
ಗಾಯಕಿ ಎಂಎಸ್ ಸುಬ್ಬಲಕ್ಷ್ಮಿ ಅವರ ಪಾತ್ರದಲ್ಲಿ ನಟಿಸಲು ಸಾಯಿ ಪಲ್ಲವಿ ಒಪ್ಪಿಗೆ ನೀಡಿದ್ದಾರೆ. ಈ ಪಾತ್ರಕ್ಕಾಗಿ ವಿಶೇಷ ತಯಾರಿಯನ್ನೂ ಸಹ ಸಾಯಿ ಪಲ್ಲವಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
Karnataka News Live 17 December 2025ರಾಜಕುಮಾರ ಚಿತ್ರದ ನಟನ ಜೊತೆ ಲವ್ ಅಫೇರ್ ಇಟ್ಕೊಂಡಿದ್ದ ಸ್ಟಾರ್ ನಟಿ? ಮದುವೆಯಾಗದೆ ಒಂಟಿಯಾಗಿ ಉಳಿದ್ರು!
ಚಿರಂಜೀವಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ನಟನೊಂದಿಗೆ ಸ್ಟಾರ್ ನಟಿಯೊಬ್ಬರು ಲವ್ ಅಫೇರ್ ಹೊಂದಿದ್ದರು. ಆದರೆ ಕೊನೆಗೆ ಆಕೆ ಮದುವೆಯಾಗದೆ ಒಂಟಿಯಾಗಿ ಉಳಿದರು. ಆ ನಟ ಮತ್ತು ನಟಿ ಯಾರೆಂದು ಈ ಲೇಖನದಲ್ಲಿ ತಿಳಿಯಿರಿ.
Karnataka News Live 17 December 2025Bigg Boss ಚೈತ್ರಾ, ಪ್ರತಿ ಶುಕ್ರವಾರ ಹುಷಾರ್ ತಪ್ಪೋದು ಯಾಕೆ? ಕಿಡಿ ಹಚ್ಚಿ ಮಜಾ ತಗೊಂಡ ಗಿಲ್ಲಿ- ರಜತ್
ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿರುವ ಗಿಲ್ಲಿ ನಟ, ರಜತ್ ಮತ್ತು ಚೈತ್ರಾ ಕುಂದಾಪುರ ನಡುವೆ ಜಗಳಕ್ಕೆ ಕಿಡಿ ಹಚ್ಚಿದ್ದಾರೆ. ರಜತ್ ಅವರು ಗಿಲ್ಲಿ ನಟನನ್ನು ಬಳಸಿಕೊಂಡು ಚೈತ್ರಾ ಅವರನ್ನು ಕೆರಳಿಸುತ್ತಿದ್ದು, ಇದು ಮನೆಯಲ್ಲಿ ಹೊಸ ಗಲಾಟೆಗೆ ಕಾರಣವಾಗಿದೆ
Karnataka News Live 17 December 2025ಹೀರೋಗಳೆಲ್ಲಾ ಲೈನ್ ಹೊಡೆಯೋಕೆ ಬರ್ತಾರೆ ಅಂತ ಸ್ಟಾರ್ ನಟನನ್ನೇ ದೂರವಿಟ್ಟಿದ್ದ ಪುಷ್ಪ ನಟಿ!
ಆ್ಯಂಕರ್ ಅನಸೂಯಾ ಭಾರದ್ವಾಜ್ ಸದ್ಯ ಕೆಲವೇ ಕೆಲವು ಸಿನಿಮಾಗಳನ್ನು ಮಾಡುತ್ತಿದ್ದಾರೆ. 'ಜಬರ್ದಸ್ತ್' ಶೋ ತೊರೆದ ನಂತರ ಅವರ ಕ್ರೇಜ್ ಕಡಿಮೆಯಾಗಿದೆ. ಈ ನಡುವೆ, ಹೀರೋಗಳ ಬಗ್ಗೆ ಅವರು ಮಾಡಿದ ಕಾಮೆಂಟ್ ವೈರಲ್ ಆಗಿದೆ.
Karnataka News Live 17 December 2025ರಾಜ್ ಬಿ ಶೆಟ್ಟಿ ಹೆಸರು ತೆಗೆದುಕೊಳ್ಳದೆ 45 ಸಿನಿಮಾಗೆ ವಿಶ್ ಮಾಡಿದ ರಿಷಭ್, ಶೆಟ್ಟಿ ಗ್ಯಾಂಗ್ನಲ್ಲಿ ಮೂಡಿದ್ಯಾ ಬಿರುಕು?
Raj B Shetty Breaks Silence on Rishab Shetty Missing His Name ಸ್ಯಾಂಡಲ್ವುಡ್ನ ಶೆಟ್ಟಿ ಗ್ಯಾಂಗ್ನಲ್ಲಿ ಬಿರುಕು ಮೂಡಿದೆ ಎಂಬ ವದಂತಿ ಹಬ್ಬಿತ್ತು. '45' ಸಿನಿಮಾ ಕುರಿತು ರಿಷಬ್ ಶೆಟ್ಟಿ ಮಾಡಿದ ಟ್ವೀಟ್ನಲ್ಲಿ ರಾಜ್ ಬಿ ಶೆಟ್ಟಿ ಹೆಸರು ಪ್ರಸ್ತಾಪಿಸದಿದ್ದದ್ದು ಇದಕ್ಕೆ ಕಾರಣವಾಗಿತ್ತು.
Karnataka News Live 17 December 2025ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು; ಬೆಳಗಾವಿ ಸರ್ಕ್ಯೂಟ್ ಹೌಸ್ಗೆ ಗಣ್ಯರ ದಂಡು!
ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರು ಸದನಕ್ಕೆ ಗೈರಾಗಿ ಸರ್ಕ್ಯೂಟ್ ಹೌಸ್ನಲ್ಲಿ ವಿಶ್ರಾಂತಿ ಪಡೆದರು. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಜಿ.ಟಿ. ದೇವೇಗೌಡರಂತಹ ರಾಜಕೀಯ ನಾಯಕರು ಅವರನ್ನು ಭೇಟಿ ಮಾಡಿದ್ದಾರೆ.
Karnataka News Live 17 December 2025ರಾಜ್ಯದ ಮಹಿಳೆಯರಿಗೆ ತಪ್ಪಿದ 2 ಗೃಹಲಕ್ಷ್ಮಿ ಹಣ; ಸದನದಲ್ಲಿ ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!
ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮೀ ಹಣ ವಿಳಂಬಕ್ಕೆ ಇಲಾಖೆಗಳ ನಡುವಿನ ಸಂಘರ್ಷವೇ ಕಾರಣ. ಈ ಬಗ್ಗೆ ಮಾಹಿತಿ ಇಲ್ಲದೇ ತಪ್ಪು ಮಾಹಿತಿ ನಿಡಿದ್ದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನದಲ್ಲಿ ಕ್ಷಮೆಯಾಚನೆ ಮಾಡಿದರು. ಪೂರ್ಣ ವಿವರ ಇಲ್ಲಿದೆ.