08:53 AM (IST) Jun 17

Karnataka News Live 17 June 2026Bengaluru NICE road accident - ರಸ್ತೆ ಅಪಘಾತದಲ್ಲಿ ಅರ್ಧದೇಹ ಸಿಕ್ಕಿದೆ, ಗುರುತು ಸಿಕ್ಕಿಲ್ಲ! ಪೊಲೀಸರಿಗೆ ತಲೆನೋವಾದ ಪ್ರಕರಣ!

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಮೇ 4 ರಂದು ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರ ಅರ್ಧ ದೇಹ ಪತ್ತೆಯಾಗಿದೆ. ಒಂದೂವರೆ ತಿಂಗಳು ಕಳೆದರೂ ಮೃತರ ಗುರುತು ಅಥವಾ ಅಪಘಾತ ಮಾಡಿದ ವಾಹನದ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ನಿಗೂಢ ಪ್ರಕರಣವನ್ನು ಭೇದಿಸಲು ಕಾಮಾಕ್ಷಿಪಾಳ್ಯ ಸಂಚಾ ಪೊಲೀಸರಿಂದ ತನಿಖೆ..

Read Full Story
08:47 AM (IST) Jun 17

Karnataka News Live 17 June 2026ಬೆಂಗಳೂರು ರಸ್ತೆ ಗುಂಡಿ ಮುಚ್ಚೋದು ರಾಕೆಟ್ ಸೈನ್ಸಾ? ಜಿಬಿಎ ಅಧಿಕಾರಿಗಳ ಮೇಲೆ ಗುಡುಗಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು, ನಗರದ ರಸ್ತೆ ಗುಂಡಿಗಳ ಸಮಸ್ಯೆಯ ಕುರಿತು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿ ಮುಚ್ಚುವುದು ರಾಕೆಟ್ ಸೈನ್ಸಾ ಎಂದು ಪ್ರಶ್ನಿಸಿದ ಅವರು, ತಾತ್ಕಾಲಿಕ ಪರಿಹಾರದ ಬದಲು ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.
Read Full Story
08:44 AM (IST) Jun 17

Karnataka News Live 17 June 2026Karnataka Lokayukta Raid - 8 ಅಧಿಕಾರಿಗಳ ಬಳಿ ಪತ್ತೆಯಾಯ್ತಯ ₹31.11 ಕೋಟಿ ಆಸ್ತಿ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ರಾಜ್ಯದ 8 ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ದಾವಣಗೆರೆ, ಕಲಬುರಗಿ ಸೇರಿದಂತೆ ಹಲವೆಡೆ ನಡೆದ ಈ ದಾಳಿಯಲ್ಲಿ ಒಟ್ಟು ₹31.11 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಈ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Read Full Story
08:35 AM (IST) Jun 17

Karnataka News Live 17 June 2026Davanagere - ಜಿಮ್ ಮುಗಿಸಿ ಮನೆಗೆ ಬಂದ 26 ವರ್ಷದ ಬಾಡಿ ಬಿಲ್ಡರ್ ಸುಶೀಲ್ ಕುಸಿದು ಸಾವು

ಜಿಮ್ ಮುಗಿಸಿ ಮನೆಗೆ ಬಂದ 26 ವರ್ಷದ ಬಾಡಿ ಬಿಲ್ಡರ್ ಸುಶೀಲಕುಮಾರ್ ದಿಢೀರ್ ಕುಸಿದುಬಿದ್ದು ಮೃತಪಟ್ಟಿದ್ದಾರೆ. ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದ ಇವರು ಅಂತರಾಷ್ಟ್ರೀಯ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದರು. ಈ ಘಟನೆಯು ಅತಿಯಾದ ದೇಹ ಕಸರತ್ತಿನ ಅಪಾಯಗಳ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

Read Full Story
08:21 AM (IST) Jun 17

Karnataka News Live 17 June 2026Karnataka MSP payment dela - ಬೆಂಬಲ ಬೆಲೆಯ ಬಲೆಗೆ ಸಿಲುಕಿ ರಾಜ್ಯದ 1.40 ಲಕ್ಷ ರೈತರು ಪರದಾಟ!

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ, ಭತ್ತ ಮಾರಾಟ ಮಾಡಿದ ಲಕ್ಷಾಂತರ ರೈತರಿಗೆ ರಾಜ್ಯ ಸರ್ಕಾರ ಇನ್ನೂ 1,714 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಮುಂಗಾರು ಬಿತ್ತನೆಗೆ ಹಣವಿಲ್ಲದೆ ರೈತರು ಪರದಾಡುತ್ತಿದ್ದು, ಬಾಕಿ ಹಣ ಪಾವತಿಗೆ ಒತ್ತಡ ಹೆಚ್ಚಾದ ನಂತರ ಸರ್ಕಾರ 650 ಕೋಟಿ ರೂ. ಬಿಡುಗಡೆ ಮಾಡಿದೆ.

Read Full Story
08:18 AM (IST) Jun 17

Karnataka News Live 17 June 2026FIFA World Cup 2026 - ಒಂದೇ ದಿನ ಬರೋಬ್ಬರಿ 4 ಪಂದ್ಯಗಳು ಡ್ರಾ - 68 ವರ್ಷಗಳಲ್ಲಿ ಇದೇ ಮೊದಲು

ಪಿಫಾ ಫುಟ್ಬಾಲ್‌ ವಿಶ್ವಕಪ್‌ನಲ್ಲಿ 68 ವರ್ಷಗಳ ಬಳಿಕ ಒಂದೇ ದಿನ ನಾಲ್ಕು ಪಂದ್ಯಗಳು ಡ್ರಾಗೊಂಡಿವೆ. ಮಾಜಿ ಚಾಂಪಿಯನ್ ಸ್ಪೇನ್‌ ವಿರುದ್ಧ ಕೇಪ್‌ ವರ್ಡೆ ಐತಿಹಾಸಿಕ ಡ್ರಾ ಸಾಧಿಸಿದರೆ, ಬೆಲ್ಜಿಯಂ ಮತ್ತು ಈಜಿಫ್ಟ್‌ ನಡುವಿನ ಪಂದ್ಯವೂ 1-1 ಗೋಲುಗಳಿಂದ ಸಮಬಲಗೊಂಡಿತು. ಈ ಮೂಲಕ 1958ರ ಬಳಿಕ ಈ ಅಪರೂಪದ ದಾಖಲೆ ಮರುಕಳಿಸಿದೆ.
Read Full Story
08:06 AM (IST) Jun 17

Karnataka News Live 17 June 2026ಫೇಸ್-ಲೊಕೇಶನ್ ಹಾಜರಾತಿ ಎಫೆಕ್ಟ್‌ - ನಿಗದಿತ ಸಮಯಕ್ಕೆ ಶಾಲೆ ಅಂಗಳದಲ್ಲಿ ಶಿಕ್ಷಕರು ಹಾಜರ್

ಬಳ್ಳಾರಿಯಲ್ಲಿ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಎಐ ಆಧಾರಿತ ಫೇಸ್-ಲೊಕೇಶನ್ ಹಾಜರಾತಿ ವ್ಯವಸ್ಥೆಯಿಂದಾಗಿ, ಶಿಕ್ಷಕರು ನಿಗದಿತ ಸಮಯಕ್ಕೆ ಶಾಲೆಗೆ ಹಾಜರಾಗುತ್ತಿದ್ದಾರೆ. ಈ ಹೊಸ ನಿಯಮವು ಶಿಕ್ಷಕರ ಸಮಯಪ್ರಜ್ಞೆಯನ್ನು ಹೆಚ್ಚಿಸಿದ್ದು, ತಡವಾಗಿ ಬರುವ ಪ್ರವೃತ್ತಿಗೆ ಕಡಿವಾಣ ಹಾಕಿದೆ. ಇದೇ ವ್ಯವಸ್ಥೆಯನ್ನು ಶೀಘ್ರದಲ್ಲೇ ವಿದ್ಯಾರ್ಥಿಗಳಿಗೂ ಜಾರಿಗೊಳಿಸಲು ಇಲಾಖೆ ಮುಂದಾಗಿದೆ.
Read Full Story
07:53 AM (IST) Jun 17

Karnataka News Live 17 June 2026Karnataka Congress - ಎಸ್‌ಐಆರ್ ಜನಜಾಗೃತಿಗಾಗಿ ರಾಜ್ಯದ 5 ಕಡೆ ಕಾಂಗ್ರೆಸ್ ಬೃಹತ್ ಸಮಾವೇಶ! ಯಾವಾಗ, ಎಲ್ಲೆಲ್ಲಿ ಕಾರ್ಯಕ್ರಮ?

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯಿಂದ (SIR) ತಮ್ಮ ಮತಬ್ಯಾಂಕ್‌ಗೆ ಸೇರಿದ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗದವರ ಹೆಸರುಗಳು ಕೈಬಿಡುವ ಆತಂಕ. ಕಾಂಗ್ರೆಸ್(Congress) ಇದೆ. ಇದನ್ನು ತಡೆಯಲು, ರಾಜ್ಯಾದ್ಯಂತ ಜೂ.23 ರಿಂದ ಜೂ.30 ರವರೆಗೆ ಐದು ಬೃಹತ್ ಜಾಗೃತಿ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಿದೆ

Read Full Story
07:42 AM (IST) Jun 17

Karnataka News Live 17 June 2026ಜೂನ್ 21ರಿಂದ ಜೋಗ, ಸಿಗಂದೂರು ಪ್ರವಾಸಕ್ಕೆ ವಿಶೇಷ ವೇಗದೂತ ಬಸ್ ಸೇವೆ - ಇಲ್ಲಿದೆ ಮಾಹಿತಿ

ಜೋಗ್ ಫಾಲ್ಸ್ ಮತ್ತು ಸಿಗಂದೂರು ದೇವಸ್ಥಾನಕ್ಕೆ ಜೂ. 21 ರಿಂದ ವಿಶೇಷ ವೇಗದೂತ ಬಸ್ ಸೇವೆ ಆರಂಭವಾಗಲಿದೆ. ಈ ಲೇಖನದಲ್ಲಿ ಬಸ್‌ನ ಸಮಯ, ಮಾರ್ಗ, ದರ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣ ಲಭ್ಯವಿಲ್ಲದಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಜೊತೆಗೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನದ ವಿವರಗಳೂ ಇವೆ.

Read Full Story