08:06 AM (IST) Mar 17

Karnataka News Live 17 March 2026Chamarajanagar - 10 ವರ್ಷದ ಬಾಲಕಿಯನ್ನು ಬಲವಂತದಿಂದ ಹಿಡಿದು ಎದೆ ಮುಟ್ಟಿದ 65ರ ಮುದುಕ

ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ 65 ವರ್ಷದ ವೃದ್ಧನೊಬ್ಬ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಸಂಬಂಧ ಬೇಗೂರು ಪೊಲೀಸರು ಆರೋಪಿ ಮಹದೇವಪ್ಪನನ್ನು ಬಂಧಿಸಿ, ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Read Full Story
08:04 AM (IST) Mar 17

Karnataka News Live 17 March 2026ಗುಂಡ್ಲುಪೇಟೆಯಲ್ಲಿ ಕೇರಳಿಗ ಅಳವಡಿಸಿದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ 2 ವರ್ಷದ ಹುಲಿ ಮರಿ ಸಾವು

tiger cub died by Electric shock: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ, ಕೇರಳ ಮೂಲದ ವ್ಯಕ್ತಿಯೊಬ್ಬರು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಎರಡು ವರ್ಷದ ಹುಲಿಯೊಂದು ಸಾವನ್ನಪ್ಪಿದೆ. ಡ್ರೋನ್ ಮೂಲಕ ಪರಿಶೀಲನೆ ನಡೆಸುವಾಗ ಈ ಘಟನೆ ಬೆಳಕಿಗೆ ಬಂದಿದೆ.

Read Full Story
08:04 AM (IST) Mar 17

Karnataka News Live 17 March 2026ಸಿದ್ದರಾಮಯ್ಯ ಅವರದ್ದು ಖಾಲಿ ಚೊಂಬು, ಸಾಲದ ಮೇಲೆ ರೂಪಿಸಿದಬಜೆಟ್‌ - ಸಿಟಿ ರವಿ

ವಿಧಾನಪರಿಷತ್ತಿನಲ್ಲಿ, ಬಿಜೆಪಿ ಸಿ.ಟಿ. ರವಿ ಅವರು ಸಿದ್ದರಾಮಯ್ಯನವರ ಬಜೆಟನ್ನು ಸಾಲದ ಮೇಲಿನ 'ಖಾಲಿ ಚೊಂಬು' ಎಂದು ಟೀಕಿಸಿದರು. ಇದು ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಪ್ರತಿಕ್ರಿಯೆ ಏನು?

Read Full Story
07:52 AM (IST) Mar 17

Karnataka News Live 17 March 2026ಋತುಚಕ್ರದ ರಜೆ ನೀಡುವ ಅಧಿಸೂಚನೆ; ಶೋಕಾಸ್‌ ನೋಟಿಸ್‌ ನೀಡದಂತೆ ಹೈಕೋರ್ಟ್‌ ಮೌಖಿಕ ಸೂಚನೆ

ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡುವ ಸರ್ಕಾರದ ಅಧಿಸೂಚನೆಗೆ ಸಂಬಂಧಿಸಿದಂತೆ, ಉದ್ಯೋಗದಾತರಿಗೆ ಶೋಕಾಸ್‌ ನೋಟಿಸ್‌ ನೀಡದಂತೆ ಹೈಕೋರ್ಟ್‌ ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿದೆ. 

Read Full Story
07:42 AM (IST) Mar 17

Karnataka News Live 17 March 2026ಗ್ಯಾಸ್ ಸಿಲಿಂಡರ್ ಇಲ್ಲದೆ ಸೌದೆ ಒಲೆ ಮೇಲೆ ಅಡುಗೆ, ಕಾರ್ಮಿಕರನ್ನ ಊರಿಗೆ ಕಳಿಸಿದ ಹಲವು ಹೋಟೆಲ್ಸ್!

ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ತೀವ್ರ ಅಭಾವ ಉಂಟಾಗಿದ್ದು, ಹೋಟೆಲ್‌ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಹಲವು ಹೋಟೆಲ್‌ಗಳು ಸೌದೆ ಒಲೆಗಳನ್ನು ಅವಲಂಬಿಸಿದ್ದು. ಕೆಲವು ಹೋಟೆಲ್‌ಗಳು ಕಾರ್ಮಿಕರನ್ನು ಊರಿಗೆ ಕಳುಹಿಸುವಂತಾಗಿದೆ.

Read Full Story
07:41 AM (IST) Mar 17

Karnataka News Live 17 March 2026ಗ್ಯಾಸ್ ಟ್ರಬಲ್‌ - ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿಯ 3000 ಕೈಗಾರಿಕೆಗಳು ಅತಂತ್ರ

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಸುಮಾರು 3,000 ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಕಳೆದ 10 ದಿನಗಳಿಂದ ಈ ಸಮಸ್ಯೆ ಉಲ್ಬಣಗೊಂಡಿದ್ದು, ಕೈಗಾರಿಕೆಗಳು ಕಾರ್ಯಾಚರಣೆಯನ್ನೇ ಸ್ಥಗಿತಗೊಳಿಸುವ ಆತಂಕ ಎದುರಿಸುತ್ತಿವೆ.
Read Full Story
07:30 AM (IST) Mar 17

Karnataka News Live 17 March 2026ಒಡಿಶಾ ಕಾಂಗ್ರೆಸ್ ಶಾಸಕರಿಗೆ 5 ಕೋಟಿ ಆಮಿಷ - ಬಿಡದಿಯಲ್ಲಿ ನಾಲ್ವರ ವಿರುದ್ಧ ಪ್ರಕರಣ

ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ತಂಗಿದ್ದ ಒಡಿಶಾ ಕಾಂಗ್ರೆಸ್ ಶಾಸಕರಿಗೆ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ₹5 ಕೋಟಿ ಆಮಿಷವೊಡ್ಡಿ, ಕೊಲೆ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಶಾಸಕ ಅಶೋಕ್ ಕುಮಾರ್ ದಾಸ್ ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story
07:26 AM (IST) Mar 17

Karnataka News Live 17 March 2026ಒಂದು ಕಡೆ ಫೈನಾನ್ಸ್‌ನವರ ಕಾಟ, ಇನ್ನೊಂದು ಕಡೆ 11 ತಿಂಗಳಿಂದ ಸಂಬಳ ಇಲ್ಲ, ಡೆತ್‌ನೋಟ್ ಬರೆದಿಟ್ಟು ವಾಟರ್‌ಮನ್ ದುರಂತ ಸಾವು!

Chikkamagaluru waterman death case: ಚಿಕ್ಕಮಗಳೂರು ತಾಲೂಕಿನ ಆಣೂರು ಗ್ರಾಪಂ ನೀರುಗಂಟಿ ರಮೇಶ್, 11 ತಿಂಗಳಿನಿಂದ ಸಂಬಳ ನೀಡದ ಕಾರಣ ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. ಸಾಲಗಾರರ ಕಾಟ ಹಾಗೂ ಸಂಬಳ ನೀಡದಿರುವುದೇ ಸಾವಿಗೆ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟಿದ್ದಾರೆ. 

Read Full Story
07:17 AM (IST) Mar 17

Karnataka News Live 17 March 2026Hassan - ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಅದಲು ಬದಲು - 6 ವಿದ್ಯಾರ್ಥಿಗಳಿಗೆ ಅನ್ಯಾಯ

ದ್ವಿತೀಯ ಪಿಯುಸಿ ಕಂಪ್ಯೂಟರ್‌ ಸೈನ್ಸ್ ಪರೀಕ್ಷೆ ವೇಳೆ, ಆರು ವಿದ್ಯಾರ್ಥಿನಿಯರಿಗೆ ಪುನರಾವರ್ತಿತ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆ ನೀಡಿ ಅನ್ಯಾಯ ಮಾಡಲಾಗಿದೆ. ಮೂರು ಗಂಟೆಗಳ ಕಾಲ ತಪ್ಪಾದ ಪರೀಕ್ಷೆ ಬರೆದ ನಂತರ, ಹೊಸ ಪ್ರಶ್ನೆಪತ್ರಿಕೆಗೆ ಕೇವಲ ಅರ್ಧ ಗಂಟೆ ಸಮಯ ನೀಡಲಾಗಿತ್ತು.

Read Full Story
07:13 AM (IST) Mar 17

Karnataka News Live 17 March 2026ಖಾಸಗಿ ಜಾಗದ ಜಾಹೀರಾತಿಗೂ ಶುಲ್ಕ

ಖಾಸಗಿ ಅಥವಾ ಸರ್ಕಾರಿ ಜಾಗದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವ ಜಾಹೀರಾತಿನ ಮೇಲೆ ಶುಲ್ಕ ವಿಧಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಮುನ್ಸಿಪಾಟಲಿಟಿಗಳ ಮತ್ತು ಕೆಲವು ಇತರ ಕಾನೂನುಗಳ ತಿದ್ದುಪಡಿ ವಿಧೇಯಕ-2026ಕ್ಕೆ’ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

Read Full Story
06:56 AM (IST) Mar 17

Karnataka News Live 17 March 2026Heartbreaking Incident in Hassan - ಸಾಲ ಮಾಡಿ ತಂದ ಮೇವಿನ ಬಣವೆಗೆ ಬೆಂಕಿ, ರೈತ ಕಣ್ಣೀರು

ಹಾಸನ ತಾಲೂಕಿನ ವೇದಾವತಿ ಗ್ರಾಮದ ರೈತ ರಂಗಸ್ವಾಮಿ ಅವರು ಸಾಲ ಮಾಡಿ ಸಂಗ್ರಹಿಸಿದ್ದ 80 ಸಾವಿರಕ್ಕೂ ಹೆಚ್ಚು ಮೌಲ್ಯದ ಮೇವಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಈ ದುರ್ಘಟನೆಯಿಂದ ಸಂಪೂರ್ಣ ಮೇವು ನಾಶವಾಗಿದ್ದು, ರೈತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ದನಕರುಗಳಿಗೆ ಮೇವು ಒದಗಿಸಲು ಪರದಾಟ.

Read Full Story