07:52 AM (IST) May 17

Karnataka News Live 17 May 2026ಭೀಕರ ಬರಗಾಲದಲ್ಲೂ ಕಾಂಗ್ರೆಸ್ಸಿಗರಂತೆ ಪ್ರಧಾನಿ ಮೋದಿ ಚಿನ್ನದ ತುಲಾಭಾರ ಮಾಡಿಸಿಕೊಂಡಿಲ್ಲ - ಸಂಸದ ರಮೇಶ್ ಜಿಗಜಿಣಗಿ ಸ್ಫೋಟಕ ಹೇಳಿಕೆ

ಪ್ರಧಾನಿ ಮೋದಿ ಚಿನ್ನದ ಖರೀದಿ ಮಿತಿಗೊಳಿಸಲು ಕರೆ ನೀಡಿದ್ದನ್ನು ಸಂಸದ ರಮೇಶ ಜಿಗಜಿಣಗಿ ಸಮರ್ಥಿಸಿಕೊಂಡಿದ್ದಾರೆ. ದೇಶದ ಹೆಸರಲ್ಲಿ ಕಾಂಗ್ರೆಸ್ ನಾಯಕರು ಚಿನ್ನದ ತುಲಾಭಾರ ಮಾಡಿಸಿಕೊಂಡಿದ್ದನ್ನು ಸ್ಮರಿಸಿದ ಅವರು, ಕೋವಿಡ್‌ನಂತಹ ಸಂಕಷ್ಟವನ್ನು ಮೋದಿ ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದರು.

Read Full Story
07:36 AM (IST) May 17

Karnataka News Live 17 May 2026ಉಡುಪಿ - ಕಣ್ಣೀರಲ್ಲಿ ಅರಳಿದ ಮಾನವೀಯತೆ! ಹೃದಯಸ್ಪರ್ಶಿ ಘಟನೆ ಹಂಚಿಕೊಂಡ ಸಚಿವೆ ಹೆಬ್ಬಾಳ್ಕರ್

ಉಡುಪಿ ಪ್ರವಾಸದಲ್ಲಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೋಮು ಸೌಹಾರ್ದತೆಯ ಅಪರೂಪದ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಈ ಮಾನವೀಯ ಕಾರ್ಯವನ್ನು ಸಚಿವರು ಶ್ಲಾಘಿಸಿ, ತಕ್ಷಣವೇ ಆ ತಾಯಿಗೆ ನ್ಯಾಯ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Read Full Story
07:23 AM (IST) May 17

Karnataka News Live 17 May 2026ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಚಿಗಟೇರಿ ಆಸ್ಪತ್ರೆಗೆ ದಿಢೀರ್ ಭೇಟಿ! ಅಲ್ಲಿ ನಡೆದ ಘಟನೆ ಏನು?

ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಾರ್ಡ್‌ಗಳಲ್ಲಿ ರೋಗಿಗಳ ಆರೋಗ್ಯ ವಿಚಾರಿಸಿ, ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಗುಣಮಟ್ಟದ ಸೇವೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
Read Full Story
07:22 AM (IST) May 17

Karnataka News Live 17 May 2026ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ಆರಂಭಿಸಿ ಸ್ವಾವಲಂಬಿ ಬದುಕಿನತ್ತ ಕುಷ್ಟಗಿಯ ಮಹಿಳೆಯರು

ಕುಷ್ಟಗಿ ಪಟ್ಟಣದ ಮೂವರು ಮಹಿಳೆಯರು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಿಂದ ದೊರೆತ ಹಣವನ್ನು ಸದ್ಬಳಕೆ ಮಾಡಿಕೊಂಡು 'ಗೃಹಲಕ್ಷ್ಮೀ ರೊಟ್ಟಿ ಕೇಂದ್ರ'ವನ್ನು ಆರಂಭಿಸಿದ್ದಾರೆ. ಈ ಸ್ವಯಂ ಉದ್ಯೋಗದ ಮೂಲಕ ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮುಂದಾಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ.
Read Full Story
07:08 AM (IST) May 17

Karnataka News Live 17 May 2026Bengaluru - ಮನೆಯಲ್ಲಿರುವ ಹಳೆ ಬಟ್ಟೆ, ಹಾಸಿಗೆ,ಸೋಫಾ, ಚಪ್ಪಲಿ ಸಂಗ್ರಹಕ್ಕೆ ಆ್ಯಪ್‌

ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಯಮಿತವು (ಬಿಎಡಬ್ಲ್ಯುಎಂಎಲ್) 'ಡಿಕ್ಲಟರ್' ಎಂಬ ಹೊಸ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ. ಈ ಆ್ಯಪ್ ಮೂಲಕ, ನಾಗರಿಕರು ತಮ್ಮ ಮನೆಗಳಲ್ಲಿನ ಪೀಠೋಪಕರಣ, ಹಾಸಿಗೆ, ಬಟ್ಟೆಗಳಂತಹ ಹಳೆಯ ಹಾಗೂ ಬೇಡವಾದ ವಸ್ತುಗಳ ಉಚಿತ ವಿಲೇವಾರಿಗೆ ಕೋರಿಕೆ ಸಲ್ಲಿಸಬಹುದು. 

Read Full Story
07:02 AM (IST) May 17

Karnataka News Live 17 May 2026'ಕೇಸರಿ ಶಾಲು ಧಾರ್ಮಿಕ ಅಲ್ಲ' ಶಾಲೆಗಳಲ್ಲಿ ಹಿಜಾಬ್‌ಗೆ ಅವಕಾಶ, ಸರ್ಕಾರದ ನಿರ್ಧಾರದ ಬಗ್ಗೆ ಪೊನ್ನಣ್ಣ ಸಮರ್ಥನೆ

ಶಾಸಕ ಎ.ಎಸ್ ಪೊನ್ನಣ್ಣ ಅವರು, ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಿದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ಸಾಂವಿಧಾನಿಕ ಹಕ್ಕಾಗಿದ್ದು, ಕೇಸರಿ ಶಾಲನ್ನು ಧಾರ್ಮಿಕ ಸಂಕೇತವಾಗಿ ಹೋಲಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

Read Full Story
06:55 AM (IST) May 17

Karnataka News Live 17 May 2026ಹಂಪಿ ಉತ್ಖನನ - ಪುರಾತನ ದೇವಾಲಯದ ಕಲ್ಲಿನ ಚಾವಣಿ, ಅಪರೂಪದ ಆನೆಯ ಕಲಾಕೃತಿಗಳು ಪತ್ತೆ

ಹೊಸಪೇಟೆಯ ವಿಶ್ವವಿಖ್ಯಾತ ಹಂಪಿಯ ಹಜಾರ ರಾಮ ದೇವಸ್ಥಾನದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ನಡೆಸಿದ ಉತ್ಖನನದಲ್ಲಿ ವಿಜಯನಗರ ಕಾಲದ ಪುರಾತನ ದೇವಾಲಯದ ಕಲ್ಲಿನ ಚಾವಣಿ ಮತ್ತು ಅಪರೂಪದ ಆನೆಯ ಕಲಾಕೃತಿಗಳು ಪತ್ತೆಯಾಗಿವೆ. 

Read Full Story