ಪ್ರಧಾನಿ ಮೋದಿ ಚಿನ್ನದ ಖರೀದಿ ಮಿತಿಗೊಳಿಸಲು ಕರೆ ನೀಡಿದ್ದನ್ನು ಸಂಸದ ರಮೇಶ ಜಿಗಜಿಣಗಿ ಸಮರ್ಥಿಸಿಕೊಂಡಿದ್ದಾರೆ. ದೇಶದ ಹೆಸರಲ್ಲಿ ಕಾಂಗ್ರೆಸ್ ನಾಯಕರು ಚಿನ್ನದ ತುಲಾಭಾರ ಮಾಡಿಸಿಕೊಂಡಿದ್ದನ್ನು ಸ್ಮರಿಸಿದ ಅವರು, ಕೋವಿಡ್ನಂತಹ ಸಂಕಷ್ಟವನ್ನು ಮೋದಿ ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದರು.
- Home
- News
- State
- Karnataka News Live: ಭೀಕರ ಬರಗಾಲದಲ್ಲೂ ಕಾಂಗ್ರೆಸ್ಸಿಗರಂತೆ ಪ್ರಧಾನಿ ಮೋದಿ ಚಿನ್ನದ ತುಲಾಭಾರ ಮಾಡಿಸಿಕೊಂಡಿಲ್ಲ - ಸಂಸದ ರಮೇಶ್ ಜಿಗಜಿಣಗಿ ಸ್ಫೋಟಕ ಹೇಳಿಕೆ
Karnataka News Live: ಭೀಕರ ಬರಗಾಲದಲ್ಲೂ ಕಾಂಗ್ರೆಸ್ಸಿಗರಂತೆ ಪ್ರಧಾನಿ ಮೋದಿ ಚಿನ್ನದ ತುಲಾಭಾರ ಮಾಡಿಸಿಕೊಂಡಿಲ್ಲ - ಸಂಸದ ರಮೇಶ್ ಜಿಗಜಿಣಗಿ ಸ್ಫೋಟಕ ಹೇಳಿಕೆ

ಬೆಂಗಳೂರು: ಹಟ್ಟಿ ಚಿನ್ನದ ಗಣಿ ಕಂಪನಿ (ಎಚ್ಜಿಎಂಎಲ್) 2025-26 ನೇ ಸಾಲಿನಲ್ಲಿ ಹೊಂದಿದ್ದ 1,700 ಕೆ.ಜಿ. ಚಿನ್ನ ಉತ್ಪಾದಿಸುವ ಗುರಿ ಪೈಕಿ ಶೇ.99.50ರಷ್ಟು ಅಂದರೆ 1,691.50 ಕೆ.ಜಿ. ಚಿನ್ನ ಉತ್ಪಾದಿಸಿದೆ. ಆ ಮೂಲಕ ಇದೇ ಮೊದಲ ಬಾರಿಗೆ ₹1,910 ಕೋಟಿ ವಹಿವಾಟು ನಡೆಸಿದ್ದು, ₹844 ಕೋಟಿ ನಿವ್ವಳ ಲಾಭ ಗಳಿಸಿದೆ. ಈ ಹಿನ್ನೆಲೆಯಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರು ಹಾಗೂ ಶಾಸಕರಾದ ಜೆ.ಟಿ. ಪಾಟೀಲ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ವರದಿ ನೀಡಿದರು. ಈ ವೇಳೆ ಗೃಹ ಸಚಿವ ಡಾ। ಜಿ. ಪರಮೇಶ್ವರ್, ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆರ್.ಶಿಲ್ಪಾ ಹಾಜರಿದ್ದರು.

Karnataka News Live 17 May 2026ಭೀಕರ ಬರಗಾಲದಲ್ಲೂ ಕಾಂಗ್ರೆಸ್ಸಿಗರಂತೆ ಪ್ರಧಾನಿ ಮೋದಿ ಚಿನ್ನದ ತುಲಾಭಾರ ಮಾಡಿಸಿಕೊಂಡಿಲ್ಲ - ಸಂಸದ ರಮೇಶ್ ಜಿಗಜಿಣಗಿ ಸ್ಫೋಟಕ ಹೇಳಿಕೆ
Karnataka News Live 17 May 2026ಉಡುಪಿ - ಕಣ್ಣೀರಲ್ಲಿ ಅರಳಿದ ಮಾನವೀಯತೆ! ಹೃದಯಸ್ಪರ್ಶಿ ಘಟನೆ ಹಂಚಿಕೊಂಡ ಸಚಿವೆ ಹೆಬ್ಬಾಳ್ಕರ್
ಉಡುಪಿ ಪ್ರವಾಸದಲ್ಲಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೋಮು ಸೌಹಾರ್ದತೆಯ ಅಪರೂಪದ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಈ ಮಾನವೀಯ ಕಾರ್ಯವನ್ನು ಸಚಿವರು ಶ್ಲಾಘಿಸಿ, ತಕ್ಷಣವೇ ಆ ತಾಯಿಗೆ ನ್ಯಾಯ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Karnataka News Live 17 May 2026ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಚಿಗಟೇರಿ ಆಸ್ಪತ್ರೆಗೆ ದಿಢೀರ್ ಭೇಟಿ! ಅಲ್ಲಿ ನಡೆದ ಘಟನೆ ಏನು?
Karnataka News Live 17 May 2026ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ಆರಂಭಿಸಿ ಸ್ವಾವಲಂಬಿ ಬದುಕಿನತ್ತ ಕುಷ್ಟಗಿಯ ಮಹಿಳೆಯರು
Karnataka News Live 17 May 2026Bengaluru - ಮನೆಯಲ್ಲಿರುವ ಹಳೆ ಬಟ್ಟೆ, ಹಾಸಿಗೆ,ಸೋಫಾ, ಚಪ್ಪಲಿ ಸಂಗ್ರಹಕ್ಕೆ ಆ್ಯಪ್
ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಯಮಿತವು (ಬಿಎಡಬ್ಲ್ಯುಎಂಎಲ್) 'ಡಿಕ್ಲಟರ್' ಎಂಬ ಹೊಸ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ. ಈ ಆ್ಯಪ್ ಮೂಲಕ, ನಾಗರಿಕರು ತಮ್ಮ ಮನೆಗಳಲ್ಲಿನ ಪೀಠೋಪಕರಣ, ಹಾಸಿಗೆ, ಬಟ್ಟೆಗಳಂತಹ ಹಳೆಯ ಹಾಗೂ ಬೇಡವಾದ ವಸ್ತುಗಳ ಉಚಿತ ವಿಲೇವಾರಿಗೆ ಕೋರಿಕೆ ಸಲ್ಲಿಸಬಹುದು.
Karnataka News Live 17 May 2026'ಕೇಸರಿ ಶಾಲು ಧಾರ್ಮಿಕ ಅಲ್ಲ' ಶಾಲೆಗಳಲ್ಲಿ ಹಿಜಾಬ್ಗೆ ಅವಕಾಶ, ಸರ್ಕಾರದ ನಿರ್ಧಾರದ ಬಗ್ಗೆ ಪೊನ್ನಣ್ಣ ಸಮರ್ಥನೆ
ಶಾಸಕ ಎ.ಎಸ್ ಪೊನ್ನಣ್ಣ ಅವರು, ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ಸಾಂವಿಧಾನಿಕ ಹಕ್ಕಾಗಿದ್ದು, ಕೇಸರಿ ಶಾಲನ್ನು ಧಾರ್ಮಿಕ ಸಂಕೇತವಾಗಿ ಹೋಲಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Karnataka News Live 17 May 2026ಹಂಪಿ ಉತ್ಖನನ - ಪುರಾತನ ದೇವಾಲಯದ ಕಲ್ಲಿನ ಚಾವಣಿ, ಅಪರೂಪದ ಆನೆಯ ಕಲಾಕೃತಿಗಳು ಪತ್ತೆ
ಹೊಸಪೇಟೆಯ ವಿಶ್ವವಿಖ್ಯಾತ ಹಂಪಿಯ ಹಜಾರ ರಾಮ ದೇವಸ್ಥಾನದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ನಡೆಸಿದ ಉತ್ಖನನದಲ್ಲಿ ವಿಜಯನಗರ ಕಾಲದ ಪುರಾತನ ದೇವಾಲಯದ ಕಲ್ಲಿನ ಚಾವಣಿ ಮತ್ತು ಅಪರೂಪದ ಆನೆಯ ಕಲಾಕೃತಿಗಳು ಪತ್ತೆಯಾಗಿವೆ.