10:29 PM (IST) Nov 17

Karnataka News Live 17 November 2025 ಸಿಎಂ ಸಿದ್ದರಾಮಯ್ಯ ಪತ್ನಿಗೆ ಐಸಿಯುವಿನಲ್ಲಿ ಚಿಕಿತ್ಸೆ, ಪುತ್ರ ಯತೀಂದ್ರ ಮಾಹಿತಿ

ಸಿಎಂ ಸಿದ್ದರಾಮಯ್ಯ ಪತ್ನಿಗೆ ಐಸಿಯುವಿನಲ್ಲಿ ಚಿಕಿತ್ಸೆ, ಪುತ್ರ ಯತೀಂದ್ರ ಮಾಹಿತಿ ನೀಡಿದ್ದಾರೆ. ಆರೋಗ್ಯ ಏರುಪೇರಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ತಾಯಿ ಆರೋಗ್ಯದ ಕುರಿತು ಪುತ್ರ ಯತೀಂದ್ರ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.

Read Full Story
09:55 PM (IST) Nov 17

Karnataka News Live 17 November 2025 ಸಾವಿರ ರು. ಬಲ್ಬು 11 ಸಾವಿರಕ್ಕೆ, 300 ಬಲ್ಬುಗಳಿಗೆ 33 ಲಕ್ಷ ..!

ನಗರ ಸೌಂದರ್ಯೀಕರಣಕ್ಕೆಂದು ಕೈಗೆತ್ತಿಕೊಂಡ, ಬೀದಿದೀಪಗಳ ಅಳವಡಿಕೆ ಹೆಸರಲ್ಲಿ ಕೋಟ್ಯಂತರ ರುಪಾಯಿಗಳ ಹಣ ಲೂಟಿ ಹೊಡೆಯಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. 1 ಕೋಟಿ ರು.ಗಳ ವೆಚ್ಚದ ಈ ಕಾಮಗಾರಿಯನ್ನು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತಕ್ಕೆ ವಹಿಸಲಾಗಿತ್ತು.

Read Full Story
09:37 PM (IST) Nov 17

Karnataka News Live 17 November 2025 ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಏರುಪೇರು, ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆ ದಾಖಲು

ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಏರುಪೇರು, ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆ ದಾಖಲು, ಇಂದು ಮಧ್ಯಾಹ್ನ ಅಸ್ವಸ್ಥಗೊಂಡ ಪಾರ್ವತಿ ಅವರನ್ನು ಅಪೋಲೋ ಆಸ್ಪತ್ರೆ ದಾಖಲಿಸಲಾಗಿದೆ.

Read Full Story
08:57 PM (IST) Nov 17

Karnataka News Live 17 November 2025 ದೆಹಲಿ ಅಂಗಳದಲ್ಲಿ ಸಂಪುಟ ಸರ್ಕಸ್ - ಸಿದ್ದು-ಖರ್ಗೆ ಸಭೆಯ ಅಂತ್ಯ, ಒಂದು ಗಂಟೆ ನಡೆದ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ, ಖಾಲಿ ಸಚಿವ ಸ್ಥಾನಗಳ ಭರ್ತಿ ಮತ್ತು ನಾಯಕತ್ವದ ವಿಷಯಗಳು ಪ್ರಮುಖವಾಗಿ ಚರ್ಚೆಯಾಗಿದ್ದು, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.
Read Full Story
07:50 PM (IST) Nov 17

Karnataka News Live 17 November 2025 ಬಿಗ್ ಬಾಸ್ ಗಿಲ್ಲಿ ನಟನ ವಿರುದ್ಧ ದೂರು ದಾಖಲು, ಮಹಿಳಾ ಆಯೋಗದಿಂದ ಬೆಂಗಳೂರು ಕಮಿಷನರ್‌ಗೆ ಪತ್ರ!

ಬಿಗ್ ಬಾಸ್ ಸೀಸನ್ 12ರ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಸಹ ಸ್ಪರ್ಧಿಯೊಬ್ಬರ ಉಡುಪನ್ನು ಬಾತ್‌ರೂಮ್‌ನಿಂದ ಹೊರಹಾಕಿದ ಆರೋಪದ ಮೇಲೆ ಕಲಾವಿದೆ ಕುಶಲ ದೂರು ನೀಡಿದ್ದು, ಆಯೋಗವು ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತನಿಖೆಗೆ ಸೂಚಿಸಿದೆ. 

Read Full Story
07:26 PM (IST) Nov 17

Karnataka News Live 17 November 2025 ಸೌದಿ ಬಸ್‌ - ಟ್ಯಾಂಕರ್ ದುರಂತದಲ್ಲಿ ಕನ್ನಡಿಗನೂ ಸಾವು, ಮೃತ ಭಾರತೀಯರ ಸಂಖ್ಯೆ 45ಕ್ಕೆ ಏರಿಕೆ!

ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಉಮ್ರಾ ಯಾತ್ರೆಗೆ ತೆರಳಿದ್ದ ಹುಬ್ಬಳ್ಳಿಯ ಅಬ್ದುಲ್ ಗಣಿ ಶಿರಹಟ್ಟಿ ಎಂಬುವವರು ಮೃತಪಟ್ಟಿದ್ದಾರೆ. ಮೆಕ್ಕಾ-ಮದೀನಾ ಮಾರ್ಗದಲ್ಲಿ ನಡೆದ ಈ ದುರಂತದಲ್ಲಿ 45ಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದಾರೆ.

Read Full Story
06:57 PM (IST) Nov 17

Karnataka News Live 17 November 2025 'ನನಗೆ ಮಾತ್ರವಲ್ಲ ಇನ್ನೂ ಮೂವರಿಗೆ ಇದೇ ರೀತಿ ಮೋಸ ಮಾಡಿದ್ದಾಳೆ..' ಸ್ಯಾಂಡಲ್‌ವುಡ್‌ ನಟಿ ವಿರುದ್ಧ ಅರವಿಂದ್‌ ರೆಡ್ಡಿ ಹೊಸ ಬಾಂಬ್‌!

ಸ್ಯಾಂಡಲ್‌ವುಡ್ ನಟಿಯ ಕಿರುಕುಳ ಆರೋಪವನ್ನು ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ನಿರಾಕರಿಸಿದ್ದಾರೆ. ಇದು ಲೈಂಗಿಕ ಕಿರುಕುಳವಲ್ಲ ಎಂದ ಅವರು, ನಟಿ ತನಗೆ 3 ಕೋಟಿ ಹಾಗೂ ಇತರೆ ಮೂವರಿಗೆ ಮದುವೆ ಹೆಸರಲ್ಲಿ ವಂಚಿಸಿದ್ದಾಳೆ ಎಂದು ಆರೋಪಿಸಿದ್ದಾರೆ. 

Read Full Story
06:22 PM (IST) Nov 17

Karnataka News Live 17 November 2025 ಸೋದರ ಮಾವನ ಜೊತೆಗೆ ಸೇರಿ ಗಂಡನನ್ನು ಕೊಂದ ಪತ್ನಿ! ಆಕೆಗೆ ಗಂಡ ಮುಖ್ಯನಲ್ಲ ಮಾವನೂ ಅಲ್ಲ! ಕೊಂದಿದ್ಯಾಕೆ?

ಬೆಂಗಳೂರಿನ ಅಂದ್ರಹಳ್ಳಿಯಲ್ಲಿ ಆಸ್ತಿಗಾಗಿ ಪತ್ನಿಯೇ ತನ್ನ ಸೋದರ ಮಾವನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ್ದಾಳೆ. ಮನೆಯನ್ನು ತನ್ನ ಹೆಸರಿಗೆ ಬರೆಯಲು ಒಪ್ಪದ ಕಾರಣ, ಪತಿ ವೆಂಕಟೇಶ್ ಅವರನ್ನು ಮೇಲಿಂದ ತಳ್ಳಿ ಹತ್ಯೆ ಮಾಡಲಾಗಿದೆ.

Read Full Story
06:12 PM (IST) Nov 17

Karnataka News Live 17 November 2025 ರಾಜೀನಾಮೆ ಕೊಡ್ತೀನಿ ಅಂತಾ ಕಾಂಗ್ರೆಸ್‌ಗೆ ಬ್ಲಾಕ್‌ಮೇಲ್‌ ಮಾಡೋದಿಲ್ಲ ಎಂದ ಡಿಕೆ ಶಿವಕುಮಾರ್‌

ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ವದಂತಿಗಳನ್ನು ತಳ್ಳಿಹಾಕಿದ್ದಾರೆ. ತಾವು ಪಕ್ಷದ 'ಶಿಸ್ತಿನ ಸಿಪಾಯಿ' ಎಂದು ಹೇಳಿಕೊಂಡಿರುವ ಅವರು, ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನರ್ರಚನೆಯ ಊಹಾಪೋಹಗಳ ನಡುವೆ ತಮ್ಮ ದೆಹಲಿ ಭೇಟಿಯ ಉದ್ದೇಶವನ್ನು ಸ್ಪಷ್ಟಪಡಿಸಿದ್ದಾರೆ.

Read Full Story
05:58 PM (IST) Nov 17

Karnataka News Live 17 November 2025 Ind vs SA - ಟೈಮಿಂಗ್ಸ್‌ನಲ್ಲಿ ಬದಲಾವಣೆ, ಇಷ್ಟು ಗಂಟೆಯಿಂದ ಆರಂಭವಾಗತ್ತೇ ಎರಡನೇ ಟೆಸ್ಟ್ ಮ್ಯಾಚ್!

ಬೆಂಗಳೂರು: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಮುಕ್ತಾಯವಾಗಿದ್ದು, ಇದೀಗ ಎರಡನೇ ಪಂದ್ಯ ಯಾವಾಗ ಆರಂಭವಾಗಲಿದೆ? ಟೈಮಿಂಗ್ಸ್‌ನಲ್ಲಿ ಏನೆಲ್ಲಾ ಬದಲಾವಣೆಗಳಾಗಲಿವೆ? ಎಲ್ಲಿ ನೇರಪ್ರಸಾರ ವೀಕ್ಷಿಸಬಹುದು ತಿಳಿಯೋಣ ಬನ್ನಿ.

Read Full Story
05:36 PM (IST) Nov 17

Karnataka News Live 17 November 2025 ಡೇಟಿಂಗ್ ಆ್ಯಪ್ ಪ್ರೀತಿ, ಮೊದಲ ಭೇಟಿಯಲ್ಲೇ ಲಾಡ್ಜ್, ಯುವತಿ ಕುಡಿಸಿದ ನೀರಿಂದ ಪ್ರಜ್ಞೆ ತಪ್ಪಿದ ಶ್ರೀಮಂತ ಯುವಕ ಬೆಳಗ್ಗೆ ಬಡವನಾದ!

ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಯುವಕರನ್ನು ಪರಿಚಯಿಸಿಕೊಂಡು, ಮಂಪರು ಔಷಧ ನೀಡಿ ದೋಚುತ್ತಿದ್ದ ಜೋಡಿಯನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಸಾಲ ತೀರಿಸಲು ಕಳ್ಳತನಕ್ಕೆ ಇಳಿದಿದ್ದ ಕವಿಪ್ರಿಯಾ ಮತ್ತು ಆಕೆಯ ಬಾಯ್‌ಫ್ರೆಂಡ್ ಹರ್ಷವರ್ಧನ್, ಮೊದಲ ಪ್ರಯತ್ನದಲ್ಲೇ ಸಿಕ್ಕಿಬಿದ್ದಿದ್ದಾರೆ.
Read Full Story
05:36 PM (IST) Nov 17

Karnataka News Live 17 November 2025 ಕರ್ನಾಟಕದ ಅತ್ಯಂತ ದುಬಾರಿ ಡಿಜಿಟಲ್‌ ಅರೆಸ್ಟ್‌ - 32 ಕೋಟಿ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ಬೆಂಗಳೂರಿನ 57 ವರ್ಷದ ಮಹಿಳಾ ಟೆಕ್ಕಿಯೊಬ್ಬರು 'ಡಿಜಿಟಲ್ ಅರೆಸ್ಟ್' ಹಗರಣದಲ್ಲಿ ಸಿಲುಕಿ, ಆರು ತಿಂಗಳ ಅವಧಿಯಲ್ಲಿ ₹31.83 ಕೋಟಿ ಕಳೆದುಕೊಂಡಿದ್ದಾರೆ. ವಂಚಕರು, ಸ್ಕೈಪ್ ಮೂಲಕ ಅವರನ್ನು ಗೃಹಬಂಧನದಲ್ಲಿರಿಸಿ, ಬೆದರಿಸಿ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ.

Read Full Story
05:02 PM (IST) Nov 17

Karnataka News Live 17 November 2025 ಸುಧಿಗೆ Bigg Boss ಮನೆಯಲ್ಲಿ ಸಿಕ್ಕ ಸಂಭಾವನೆ ಎಷ್ಟು? 50 ಕೋಟಿ ಬಗ್ಗೆ ಮಾತನಾಡಿದ್ದೇಕೆ ಕಾಕ್ರೋಚ್​?

ಬಿಗ್ ಬಾಸ್‌ನಿಂದ ಹೊರಬಂದ ನಂತರ ಕಾಕ್ರೋಚ್ ಸುಧಿ ಅವರ ಜನಪ್ರಿಯತೆ ಹೆಚ್ಚಾಗಿದೆ. ತಮ್ಮ ಪತಿಯ ಶೀಘ್ರ ಎಲಿಮಿನೇಷನ್‌ಗೆ ಅಶ್ವಿನಿ ಮತ್ತು ಜಾಹ್ನವಿ ಕಾರಣ ಎಂದು ಅವರ ಪತ್ನಿ ಹೇಳಿದರೆ, 50 ಕೋಟಿ ಕೊಟ್ಟರೂ ಸಿಗದ ಬಿಗ್ ಬಾಸ್ ಮನೆಯ ಅನುಭವವೇ ತನಗೆ ಮುಖ್ಯ, ಸಂಭಾವನೆಯಲ್ಲ ಎಂದು ಸುಧಿ ಹೇಳಿದ್ದಾರೆ.
Read Full Story
04:27 PM (IST) Nov 17

Karnataka News Live 17 November 2025 ರವೀಂದ್ರ ಕಲಾಕ್ಷೇತ್ರದಲ್ಲಿ ಐತಿಹಾಸಿಕ ಮುಖ್ಯಮಂತ್ರಿ ನಾಟಕ ಮತ್ತು ಕೃತಿ ಬಿಡುಗಡೆ, ಉಚಿತ ಪಾಸ್‌!

ಕಲಾಗಂಗೋತ್ರಿ ತಂಡದ ಪ್ರಸಿದ್ಧ ರಾಜಕೀಯ ವ್ಯಂಗ್ಯ ನಾಟಕ ‘ಮುಖ್ಯಮಂತ್ರಿ’ ತನ್ನ 891ನೇ ಪ್ರದರ್ಶನಕ್ಕೆ ಸಜ್ಜಾಗಿದೆ. 45 ವರ್ಷಗಳಿಂದ ನಿರಂತರವಾಗಿ ಪ್ರದರ್ಶನಗೊಳ್ಳುತ್ತಿರುವ ಈ ನಾಟಕದ ವಿಶೇಷ ಪ್ರದರ್ಶನ ಮತ್ತು ಕೃತಿ ಬಿಡುಗಡೆ ಸಮಾರಂಭವು ನವೆಂಬರ್ 23, 2025 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.
Read Full Story
03:33 PM (IST) Nov 17

Karnataka News Live 17 November 2025 ಕೆಲಸದಿಂದ ವಜಾಗೊಳಿಸುತ್ತಿರುವ ಟಿಸಿಎಸ್‌ಗೆ ಬಿಗ್‌ ಶಾಕ್ - ಉದ್ಯೋಗಿಗಳ ದೂರಿನನ್ವಯ ಕಾರ್ಮಿಕ ಇಲಾಖೆಯಿಂದ ಸಮನ್ಸ್

ಐಟಿ ನೌಕರರ ಸಂಘಟನೆ NITES ನೀಡಿದ ದೂರಿನ ಅನ್ವಯ, ಪುಣೆಯ ಕಾರ್ಮಿಕ ಆಯುಕ್ತರ ಕಚೇರಿಯು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ಗೆ (TCS) ಸಮನ್ಸ್ ಜಾರಿ ಮಾಡಿದೆ. ಕಾನೂನುಬಾಹಿರ ಉದ್ಯೋಗಿ ವಜಾ ಮತ್ತು ಅನ್ಯಾಯದ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Read Full Story
02:50 PM (IST) Nov 17

Karnataka News Live 17 November 2025 ನೀ ಹಿಂದೂನಾ? ಧರ್ಮ ಕೇಳಿ ಶಿವಮೊಗ್ಗ ನಿವಾಸಿ ಹರೀಶ್ ಮೇಲೆ ಮಾರಣಾಂತಿಕ ಹಲ್ಲೆ

ನೀ ಹಿಂದೂನಾ? ಧರ್ಮ ಕೇಳಿ ಶಿವಮೊಗ್ಗ ನಿವಾಸಿ ಹರೀಶ್ ಮೇಲೆ ಮಾರಣಾಂತಿಕ ಹಲ್ಲೆ, ಅನ್ಯ ಕೋಮಿನ ಯುವಕರಿಂದ ಹಲ್ಲೆ ನಡೆದಿದೆ.ಹರೀಶ್ ಮೇಲೆ ಹಲ್ಲೆ ನಡೆಸುತ್ತಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Read Full Story
02:34 PM (IST) Nov 17

Karnataka News Live 17 November 2025 ರಕ್ತದಲ್ಲೇ ಪತ್ರ ಬರೆದ Bigg Boss ಕಾಕ್ರೋಚ್​ ಸುಧಿ! ಎಲಿಮಿನೇಷನ್​ ಬೆನ್ನಲ್ಲೇ ಇದೆಂಥ ಸುದ್ದಿ?

ಬಿಗ್​ಬಾಸ್​ ಮನೆಯಿಂದ ಅಚ್ಚರಿಯಾಗಿ ಹೊರಬಂದಿರುವ ಸ್ಪರ್ಧಿ ಕಾಕ್ರೋಚ್ ಸುಧಿ, ಹಿಂದೆ ಜೈಲಿನಲ್ಲಿದ್ದಾಗ ತಮ್ಮ ಪತ್ನಿಗೆ ರಕ್ತದಲ್ಲಿ ಪತ್ರ ಬರೆದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ತಮ್ಮ ಪ್ರೀತಿಯನ್ನು ಸಾಬೀತುಪಡಿಸಲು ತುಟಿಗೆ ಹೊಡೆಸಿಕೊಂಡು ಬಂದ ರಕ್ತದಲ್ಲಿ ಪತ್ರ ಬರೆದಿದ್ದಾಗಿ ಹೇಳಿಕೊಂಡಿದ್ದರು.

Read Full Story
02:27 PM (IST) Nov 17

Karnataka News Live 17 November 2025 ತುಮಕೂರಿಗೆ ಮೆಟ್ರೋ ವಿಸ್ತರಣೆ - ರಿಯಲ್‌ ಎಸ್ಟೇಟ್‌ಗೆ ಸಹಾಯ ಮಾಡೋಕೆ ಹೋದ್ರೆ ಇಂಥಾ ಯೋಚ್ನೆ ಬರುತ್ತೆ ಎಂದ ತೇಜಸ್ವಿ ಸೂರ್ಯ!

ಸಂಸದ ತೇಜಸ್ವಿ ಸೂರ್ಯ ಅವರು ನಮ್ಮ ಮೆಟ್ರೋವನ್ನು ತುಮಕೂರಿನವರೆಗೆ ವಿಸ್ತರಿಸುವ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ರಿಯಲ್ ಎಸ್ಟೇಟ್‌ಗೆ ಸಹಾಯ ಮಾಡುವ ಹುನ್ನಾರ ಎಂದಿರುವ ಅವರು, ಮೆಟ್ರೋ ಬದಲು ಕಡಿಮೆ ಖರ್ಚಿನ RRTS ಅಥವಾ ಸಬರ್ಬನ್ ರೈಲು ಯೋಜನೆ ಜಾರಿಗೊಳಿಸಲು ಸಲಹೆ ನೀಡಿದ್ದಾರೆ. 

Read Full Story
02:14 PM (IST) Nov 17

Karnataka News Live 17 November 2025 ಆಟವಾಡುತ್ತಾ ಕೋಣೆ ಬಾಗಿಲಿಗೆ ಒಳಗಿನಿಂದ ಬೋಲ್ಟ್ ಹಾಕಿದ ಮಗು - ಆಮೇಲೆ ತಾಯಿ ಮಾಡಿದ್ದೇನು?

toddler locked in kitchen: ಕೆಲ ಮಕ್ಕಳು ಮಾಡುವ ತುಂಟಾಟ ಪೋಷಕರನ್ನು ಧರ್ಮ ಸಂಕಟಕ್ಕೆ ಸಿಲುಕಿಸುತ್ತವೆ. ಕುಳಿತಲ್ಲಿ ಕೂರದ ಈ ಮಕ್ಕಳು ಏನಾದರೊಂದು ಎಡವಟ್ಟು ಮಾಡುತ್ತಲೇ ಇರುತ್ತವೆ. ಅದೇ ರೀತಿ ಪುಟ್ಟ ಮಗುವೊಂದು ಆಟವಾಡುತ್ತಾ ಅಡುಗೆ ಕೋಣೆಯೊಳಗೆ ಹೋಗಿ ಚಿಲಕ ಹಾಕಿಕೊಂಡಿದೆ. ಆಮೇಲೆ ತಾಯಿ ಮಾಡಿದ್ದೇನು?

Read Full Story
01:57 PM (IST) Nov 17

Karnataka News Live 17 November 2025 ಐಬೊಮ್ಮ ಪ್ರೆಸ್ ಮೀಟ್ - ಗೇಮ್ ಚೇಂಜರ್, OG ನಷ್ಟದ ಬಗ್ಗೆ ಚಿರಂಜೀವಿ, ರಾಜಮೌಳಿ ಹೇಳಿದ್ದೇನು?

ಐಬೊಮ್ಮ ನಿರ್ವಾಹಕ ಇಮ್ಮಡಿ ರವಿಯನ್ನು ಬಂಧಿಸಿದ ನಂತರ ವಿಸಿ ಸಜ್ಜನರ್ ಅವರು ಚಿತ್ರರಂಗದ ಗಣ್ಯರೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಚಿರಂಜೀವಿ, ರಾಜಮೌಳಿ, ನಾಗಾರ್ಜುನ, ದಿಲ್ ರಾಜು ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿದರು.

Read Full Story