ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಸಹ ಕೈದಿಗಳಿಂದ ಕಜ್ಜಿ, ಕೆಮ್ಮು ಮುಂತಾದ ಸೋಂಕು ಹರಡುವ ಭಯದಿಂದ ತಮ್ಮನ್ನು ಬೇರೆ ಸೆಲ್ಗೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಮೊಬೈಲ್ ಪತ್ತೆ ಪ್ರಕರಣದ ನಂತರ ಸಾಮಾನ್ಯ ಬ್ಯಾರಕ್ಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟಪಡುತ್ತಿದ್ದಾರೆ.
- Home
- News
- State
- Karnataka News Live: Prajwal Revanna - ಸಹ ಕೈದಿಗಳಿಂದ ಕಜ್ಜಿ ಬರಹುದು - ಸೆಲ್ ಬದಲಿಸುವಂತೆ ಪ್ರಜ್ವಲ್ ಗೋಳಾಟ
Karnataka News Live: Prajwal Revanna - ಸಹ ಕೈದಿಗಳಿಂದ ಕಜ್ಜಿ ಬರಹುದು - ಸೆಲ್ ಬದಲಿಸುವಂತೆ ಪ್ರಜ್ವಲ್ ಗೋಳಾಟ

ಬೆಂಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಅಧ್ಯಕ್ಷರ ನೇಮಕ ಸಂಬಂಧ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ರಾಜ್ಯದ 35 ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಹೊಸದಾಗಿ ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸುವವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಪ್ರತಿ ಜಿಲ್ಲೆಗಳಿಗೂ ವೀಕ್ಷಕರನ್ನು ನೇಮಿಸಿ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ. ಅದರ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಂಗಳವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮತ್ತೊಂದೆಡೆ ಆ.19ರಂದು ದೆಹಲಿಯ ಇಂದಿರಾ ಭವನದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ.