ಗೃಹಲಕ್ಷ್ಮೀ ಯೋಜನೆ ಕುರಿತು ಲಕ್ಷ್ಮೀ ಹೆಬ್ಬಾಳ್ಕರ್ ತಪ್ಪು ಮಾಹಿತಿ ನೀಡಿದ್ದರೆ ಹಕ್ಕುಚ್ಯುತಿ ಮಂಡಿಸಿ. ಅದಕ್ಕೂ ಮೊದಲು ನರೇಗಾ ಹಣ, ನೀರಾವರಿ, ಜಲಜೀವನ್ ಮಿಷನ್ ಕೇಂದ್ರದಿಂದ ಬಂದಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
- Home
- News
- State
- Karnataka News Live: ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್ ವಿರುದ್ಧ ಹಕ್ಯುಚ್ಯುತಿ ಮಂಡಿಸಿ - ಡಿ.ಕೆ.ಶಿವಕುಮಾರ್
Karnataka News Live: ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್ ವಿರುದ್ಧ ಹಕ್ಯುಚ್ಯುತಿ ಮಂಡಿಸಿ - ಡಿ.ಕೆ.ಶಿವಕುಮಾರ್

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿದ್ದೇನೆ ಎಂದು ಸುಳ್ಳು ಹೇಳಿ ಜೈಲಿಗೆ ಸೇರಿದ್ದ ಬುರುಡೆ ಪಾತ್ರಧಾರಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೊನೆಗೂ ಜೈಲಿನಿಂದ ಬಿಡುಗಡೆ ಭಾಗ್ಯ ಒದಗಿಬಂದಿದೆ. ಜಾಮೀನು ಸಿಕ್ಕರೂ ಶೂರಿಟಿ ಇಲ್ಲ ದೇ ಶಿವಮೊಗ್ಗದ ಜೈಲಿನಲ್ಲಿ ಚಿನ್ನಯ್ಯ ಮಂಕಾ ಗಿದ್ದು, ಮೌನಕ್ಕೆ ಶರಣಾಗಿದ್ದ. ಈಗ 1 ಲಕ್ಷ ಬಾಂಡ್, 2 ಜಾಮೀನುದಾರರಿಂದ ಬೆಳ್ತಂಗಡಿ ಕೋರ್ಟ್ಗೆ ಶೂರಿಟಿ ನೀಡಲಾಗಿದೆ. ಚಿನ್ನಯ್ಯ ಬಿಡುಗಡೆಗೆ ನ್ಯಾಯಾಧೀಶರು ಅಸ್ತು ಎಂದಿದ್ದಾರೆ. ಡಿ.18 ರಂದು ಚಿನ್ನಯ್ಯ ಬಿಡುಗಡೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಳೆದ ನ.24ರಂದು 1 ಲಕ್ಷ ಬಾಂಡ್, ಇಬ್ಬರ ಶೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು .ಚಿನ್ನಯ್ಯನಿಗೆ ಶೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರ ಕೊರತೆಯಿಂದ ಬಿಡುಗ ಡೆಯಾಗದೇ ಚಿನ್ನಯ್ಯ ಜೈಲಿನಲ್ಲಿದ್ದ. ಆ.23ರಂದು ಸುದೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಸೆ.6ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.
Karnataka News Live 18 December 2025 ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್ ವಿರುದ್ಧ ಹಕ್ಯುಚ್ಯುತಿ ಮಂಡಿಸಿ - ಡಿ.ಕೆ.ಶಿವಕುಮಾರ್
Karnataka News Live 18 December 2025 ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ, ಬೈಕ್ ಸವಾರ ಗಂಭೀರ
ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ, ಬೈಕ್ ಸವಾರ ಗಂಭೀರ, ಸವದತ್ತಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳುವಾಗ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ.
Karnataka News Live 18 December 2025 Avatar Fire and Ash Review - ಪಂಡೋರಾ ದೃಶ್ಯ ಅದ್ಭುತ, ಆದರೆ ಕಥೆ ಡಲ್? ಜೇಮ್ಸ್ ಕ್ಯಾಮರೂನ್ ಹೀಗೇಕೆ ಮಾಡಿದ್ರು?
ಜೇಮ್ಸ್ ಕ್ಯಾಮರೂನ್ ನಿರ್ದೇಶನದ 'ಅವತಾರ್: ಫೈರ್ ಅಂಡ್ ಆಶ್' ಸಿನಿಮಾ ಡಿಸೆಂಬರ್ 19ರಂದು ವಿಶ್ವಾದ್ಯಂತ ತೆರೆ ಕಾಣಲಿದೆ. ಈ ಹಿನ್ನೆಲೆಯಲ್ಲಿ ಅವತಾರ್ 3 ಬಗ್ಗೆ ಆರಂಭಿಕ ವಿಮರ್ಶೆಗಳು ಶುರುವಾಗಿವೆ.
Karnataka News Live 18 December 2025 ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆ ಸಂಪ್ ಕ್ಯಾಪ್ ಕಳ್ಳತನ ಮಾಡಿ 700 ರೂಗೆ ಮಾರಾಟ, ಆರೋಪಿ ಅರೆಸ್ಟ್
ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆ ಸಂಪ್ ಕ್ಯಾಪ್ ಕಳ್ಳತನ ಮಾಡಿ 700 ರೂಗೆ ಮಾರಾಟ, ಆರೋಪಿ ಅರೆಸ್ಟ್ ಮಾಡಲಾಗಿದೆ. ಇತ್ತೀಚೆಗೆ ಘಟನೆ ಕುರಿತು ರಿಕ್ಕಿ ಕೇಜ್ ರೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
Karnataka News Live 18 December 2025 ಜೈಲುಗಳು ರೆಸಾರ್ಟ್ಗಳಾಗಿದ್ದು, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಕೈಮೀರಿದೆ - ಆರ್.ಅಶೋಕ್ ಆತಂಕ
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಡ್ರಗ್ಸ್ ಮಾಫಿಯಾ ನಿಯಂತ್ರಣ ತಪ್ಪಿದೆ. ಜೈಲುಗಳು ರೆಸಾರ್ಟ್ಗಳಾಗಿವೆ. ರಕ್ಷಣೆ ನೀಡಬೇಕಾದ ಪೊಲೀಸರೇ ಕಳ್ಳರಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.
Karnataka News Live 18 December 2025 ಕಾಂಗ್ರೆಸ್ ಯೋಜನೆ ಹೆಸರು ಬದಲಿಸಿದ್ದೇ ಬಿಜೆಪಿ ಸಾಧನೆ - ಸಚಿವ ಸಂತೋಷ್ ಲಾಡ್ ವ್ಯಂಗ್ಯ
ದೇಶದಲ್ಲಿ ಕಾಂಗ್ರೆಸ್ ಹಾಗೂ ಯುಪಿಎ ಆಡಳಿತದಲ್ಲಿ ಜಾರಿಗೆ ತಂದ ಯೋಜನೆಗಳ ಹೆಸರುಗಳನ್ನು ಬದಲಿಸಿದ್ದೊಂದೇ ಬಿಜೆಪಿಯವರ ಬಹುದೊಡ್ಡ ಸಾಧನೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವ್ಯಂಗ್ಯವಾಡಿದ್ದಾರೆ.
Karnataka News Live 18 December 2025 ರಾಜ್ಯದ 2ನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯ - ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ನಮಗೆ ಎಲ್ಲಾ ಧರ್ಮ, ಜಾತಿ ಒಂದೇ. ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ. ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
Karnataka News Live 18 December 2025 ಲೋಕಸಭೆಯಲ್ಲಿ 2 ರೈತಪರ ಮಸೂದೆ ಮಂಡನೆ - ಸಂಸದ ಡಾ.ಕೆ.ಸುಧಾಕರ್
ರಾಜ್ಯದ ಸಮಸ್ಯೆಗಳ ಬಗ್ಗೆ ವಿಶೇಷವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ, ಹೂವು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಿದ್ದು, ಲೋಕಸಭೆಯಲ್ಲಿ ರೈತರ ಪರವಾದ 2 ಮಹತ್ವದ ಮಸೂದೆ ಮಂಡಿಸಿದ್ದೇನೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.
Karnataka News Live 18 December 2025 ಮಾಲೀಕನ ನಿರ್ಲಕ್ಷ್ಯಕ್ಕೆ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಇಟ್ಟಿಗೆ, 4 ವರ್ಷದ ಮಗು ಸಾವು
ಮಾಲೀಕನ ನಿರ್ಲಕ್ಷ್ಯಕ್ಕೆ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಇಟ್ಟಿಗೆ, 4 ವರ್ಷದ ಮಗು ಸಾವು, ಕಟ್ಟಡದ ಪಕ್ಕದಲ್ಲೇ ಶೀಟ್ ಮನೆಯೊಳಗಿದ್ದ ಮಕ್ಕಳ ಮೇಲೆ ಬಿದ್ದಿದೆ. ಇನ್ನಿಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ.
Karnataka News Live 18 December 2025 ಮುರಿದ ಕನ್ನಡಿ ಮನೆಯಲ್ಲಿದ್ದರೆ ಏನೇನಾಗುತ್ತೆ ಗೊತ್ತಾ?
ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕನ್ನಡಿ ಒಡೆಯುವುದು (broken mirror vastu tips) ಕೆಲವೊಮ್ಮೆ ಶುಭ ಸಂಕೇತ. ಆದರೆ ಒಡೆದ ಗಾಜು ಮನೆಯಲ್ಲಿರುವುದು ಶುಭವಲ್ಲ. ಹಾಗಾದರೆ ಯಾವುದು ಶುಭ, ಯಾವುದು ಅಶುಭ? ಬನ್ನಿ ತಿಳಿಯೋಣ.
Karnataka News Live 18 December 2025 ಕೊಡಗಿನಲ್ಲಿ ಗನ್ನಿಗೆ ದೈವತ್ವ - ಕೋವಿಗೂ ಪೂಜೆ ಮಾಡಿ ಮೆರವಣಿಗೆ ಸಲ್ಲಿಸಿದ ಕೊಡವರು!
ಅದೊಂದು ಆಯುಧವೆಂದು ಬಳಕೆ ಮಾಡುವ ಕೋವಿಗೂ ಇಲ್ಲಿಗೆ ಹೂ ಮುಡಿಸಿ, ದೀಪ, ಊದುಬತ್ತಿಗಳ ಹೆಚ್ಚಿ ಪೂಜೆ ಸಲ್ಲಿಸಿದ್ರು. ಅಷ್ಟೇ ಏಕೆ ಎಲ್ಲರೂ ಹೆಗಲ ಮೇಲೇರಿಸಿ ಅದೇ ಕೋವಿಗೆ ಮೆರವಣಿಗೆಯನ್ನೂ ಮಾಡಿದರು.
Karnataka News Live 18 December 2025 ಬೆಂಗಳೂರು ಪಶ್ಚಿಮದಲ್ಲಿ 2.76 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಗುರಿ! ಡಿ.21ರಿಂದ ಲಸಿಕೆ ಆರಂಭ
ಬೆಂಗಳೂರಿನ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ ನಾಲ್ಕು ದಿನಗಳ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ 2,76,693 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
Karnataka News Live 18 December 2025 ನ್ಯೂ ಈಯರ್ ಪಾರ್ಟಿಗೆ ಪೊಲೀಸ್ ಖಡಕ್ ಎಚ್ಚರಿಕೆ, ಕುಡಿದು ಡ್ರೈವ್ ಮಾಡುವಂತಿಲ್ಲ, ರಾತ್ರಿ 12.30ರೊಳಗೆ ಎಲ್ಲಾ ಬಂದ್!
ಮಂಗಳೂರಿನಲ್ಲಿ ಹೊಸ ವರ್ಷಾಚರಣೆ ಆಯೋಜಿಸಲು ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ರಾತ್ರಿ 12.30ರೊಳಗೆ ಕಾರ್ಯಕ್ರಮ ಮುಗಿಸಬೇಕು, ಡಿಜೆ ಪಾರ್ಟಿ, ಮಾದಕ ವಸ್ತುಗಳ ಸೇವನೆ, ಅಶ್ಲೀಲ ನೃತ್ಯಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
Karnataka News Live 18 December 2025 ಮಹೇಶ್ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಬೆನ್ನಲ್ಲೇ ನಾಪತ್ತೆ! ಮೈಕ್ ಮೂಲಕ ಪ್ರಕಟಣೆ ಹೊರಡಿಸಿದ ಸರ್ಕಾರ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನ 10 ತಿಂಗಳ ಕಾಲ ಗಡೀಪಾರು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ತಿಮರೋಡಿ ಮನೆಯಲ್ಲಿ ಲಭ್ಯವಿಲ್ಲದ ಕಾರಣ ಮನೆ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.
Karnataka News Live 18 December 2025 ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರವೇ ಡಿಪಿಆರ್, ಚಿತ್ರದುರ್ಗವರೆಗೆ ವಿಸ್ತರಿಸುವಂತೆ ಒತ್ತಾಯ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಒತ್ತಾಸೆಯಂತೆ, ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗದ ಡಿಪಿಆರ್ ಇನ್ನೈದು ತಿಂಗಳಲ್ಲಿ ಸಿದ್ಧವಾಗಲಿದೆ. ಈ ಮಾರ್ಗವನ್ನು ಚಿತ್ರದುರ್ಗದವರೆಗೆ ವಿಸ್ತರಿಸುವಂತೆ ಒತ್ತಾಯಿಸಲಾಗಿದ್ದು, ಇದು ವಿಜಯಪುರ-ಬೆಂಗಳೂರು ನಡುವಿನ ಪ್ರಯಾಣದ ದೂರವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ.
Karnataka News Live 18 December 2025 Bigg Boss - ದೇವರ ಮುಂದೆ ಬಿಕ್ಕಿಬಿಕ್ಕಿ ಅತ್ತ ಚೈತ್ರಾ ಕುಂದಾಪುರ - ವೀಕೆಂಡ್ ಹೊತ್ತಲ್ಲಿ ಅಂಥದ್ದೇನಾಯ್ತು?
Karnataka News Live 18 December 2025 ರಾಮನಗರದಲ್ಲಿದೆ ವಾರಸುದಾರರಿಲ್ಲದ 48.69 ಕೋಟಿ ರು! ಹಣ ವಾಪಸ್ ಹಿಂದಿರುಗಿಸಲು ನಿಮ್ಮ ಹಣ-ನಿಮ್ಮ ಹಕ್ಕು ಅಭಿಯಾನ
ರಾಮನಗರ ಜಿಲ್ಲೆಯ ವಿವಿಧ ಬ್ಯಾಂಕ್ಗಳಲ್ಲಿ ಸುಮಾರು 48.69 ಕೋಟಿ ರೂಪಾಯಿ ವಾರಸುದಾರರಿಲ್ಲದೆ ಉಳಿದಿದೆ. ಈ ಹಣವನ್ನು ಅದರ ಹಕ್ಕುದಾರರಿಗೆ ತಲುಪಿಸಲು 'ನಿಮ್ಮ ಹಣ-ನಿಮ್ಮ ಹಕ್ಕು' ಅಭಿಯಾನವನ್ನು ಆರಂಭಿಸಿದ್ದು, ಗ್ರಾಹಕರು ಡಿಸೆಂಬರ್ ಅಂತ್ಯದೊಳಗೆ ಅಗತ್ಯ ದಾಖಲೆಗಳನ್ನು ನೀಡಿ ತಮ್ಮ ಹಣವನ್ನು ಮರಳಿ ಪಡೆಯಬಹುದು.
Karnataka News Live 18 December 2025 ಎಲ್ಲೆಡೆ ರಣವೀರ್ ಸಿಂಗ್ ಅಬ್ಬರ.. 'ಧುರಂಧರ್' ವಿಮರ್ಶೆ ಕೊಟ್ಟ ಪಾಕಿಸ್ತಾನಿ ವ್ಯಕ್ತಿ - ವಿಡಿಯೋ ಸಖತ್ ವೈರಲ್
ರಣವೀರ್ ಸಿಂಗ್ ಅಭಿನಯದ 'ಧುರಂಧರ್' ಚಿತ್ರ ಭಾರತದಲ್ಲಿ ಮಾತ್ರವಲ್ಲದೆ ಪಾಕಿಸ್ತಾನದಲ್ಲೂ ಮೆಚ್ಚುಗೆ ಗಳಿಸುತ್ತಿದೆ. ಅಲ್ಲಿಯೂ ಶೋಗಳು ಹೌಸ್ಫುಲ್ ಆಗುತ್ತಿವೆ. ಈ ನಡುವೆ, ಪಾಕಿಸ್ತಾನಿ ವ್ಯಕ್ತಿಯೊಬ್ಬರು ಈ ಚಿತ್ರದ ವಿಮರ್ಶೆ ಮಾಡಿದ್ದು, ಅದು ವೈರಲ್ ಆಗಿದೆ.
Karnataka News Live 18 December 2025 Smita Patil - ಸಿನಿಮಾ ಸೆಟ್ನಲ್ಲಿ ತನ್ನ ಅಡುಗೆ ತಾನೇ ತಯಾರಿಸುತ್ತಿದ್ದ ಹೀರೋಯಿನ್!
ಭಾರತೀಯ ಸಿನೆಮಾ ರಂಗದ ಈ ಮಹಾನ್ ಹೀರೋಯಿನ್ (Smita patil), ತಮ್ಮ ಖ್ಯಾತಿಯ ನಡುವೆಯೂ ಸರಳ ಜೀವನ ನಡೆಸುತ್ತಿದ್ದರು. ಶೂಟಿಂಗ್ ಸೆಟ್ನಲ್ಲಿ ತಾವೇ ಅಡುಗೆ ಮಾಡಿಕೊಳ್ಳುತ್ತಿದ್ದ ಅವರ ಸರಳತೆ, ಮಹಿಳಾ ಹಕ್ಕುಗಳ ಬಗೆಗಿನ ಅವರ ದೃಢ ನಿಲುವು ಹಾಗೂ ಅವರ ಬಲಿಷ್ಠ ಪಾತ್ರಗಳು ಇಂದಿಗೂ ಸ್ಮರಣೀಯ.