ಪಾಕಿಸ್ತಾನ ಕ್ರಿಕೆಟ್ ತಂಡದ ಆಲ್ರೌಂಡರ್ ಮೊಹಮ್ಮದ್ ನವಾಜ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ದೊಡ್ಡ ಶಾಕ್ ನೀಡಿದೆ. ಡೋಪಿಂಗ್ ವಿರೋಧಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನವಾಜ್ ಅವರಿಗೆ ಮೂರು ತಿಂಗಳ ಕಾಲ ಕ್ರಿಕೆಟ್ನಿಂದ ನಿಷೇಧ ಹೇರಲಾಗಿದೆ
- Home
- News
- State
- Karnataka News Live: ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ಗೆ ICC ಬಿಗ್ ಶಾಕ್.. ಮೊಹಮ್ಮದ್ ನವಾಜ್ ಕ್ರಿಕೆಟ್ನಿಂದ ಬ್ಯಾನ್!
Karnataka News Live: ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ಗೆ ICC ಬಿಗ್ ಶಾಕ್.. ಮೊಹಮ್ಮದ್ ನವಾಜ್ ಕ್ರಿಕೆಟ್ನಿಂದ ಬ್ಯಾನ್!

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ. ಕಳೆದ ಮೂರು ದಿನಗಳಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಉಸಿರಾಟದ ತೊಂದರೆ ಎದುರಿಸಿದ್ದರು. ಈ ಹಿನ್ನೆಲೆಯಲ್ಲಿ ತೀವ್ರ ಆತಂಕಗೊಂಡಿದ್ದ ಕುಟುಂಬ ಸದಸ್ಯರು, "ನಾವು ನಂಬಿದ ದೇವರೇ ಅವರನ್ನು ಕಾಪಾಡಬೇಕು" ಎಂದು ಪ್ರಾರ್ಥಿಸಿದ್ದರು.
ವಿಷಯ ತಿಳಿಯುತ್ತಿದ್ದಂತೆಯೇ ನಿನ್ನೆ ಪತಿ ಎಚ್. ಡಿ. ದೇವೇಗೌಡ, ಪುತ್ರರಾದ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಎಚ್. ಡಿ. ರೇವಣ್ಣ ಸೇರಿದಂತೆ ಕುಟುಂಬದ ಇತರೆ ಸದಸ್ಯರು ಆಸ್ಪತ್ರೆಗೆ ಆಗಮಿಸಿ ಅವರ ಆರೋಗ್ಯ ವಿಚಾರಿಸಿದ್ದರು. ಇಂದು ವೈದ್ಯರು ಮತ್ತೊಮ್ಮೆ ತಪಾಸಣೆ ನಡೆಸಿ ಅಧಿಕೃತ ಹೆಲ್ತ್ ಬುಲೆಟಿನ್ (ವರದಿ) ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಆ ಬಳಿಕವಷ್ಟೇ ಅವರ ಆರೋಗ್ಯದ ನಿಖರ ಮಾಹಿತಿ ಹೊರಬರಲಿದೆ. ಸದ್ಯ ಚೆನ್ನಮ್ಮ ಅವರು ಶೀಘ್ರದಲ್ಲೇ ಗುಣಮುಖರಾಗಿ ಮನೆಗೆ ವಾಪಸ್ ಆಗಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಇಡೀ ಕುಟುಂಬಸ್ಥರಿದ್ದಾರೆ.
Karnataka News Live 18 July 2026ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ಗೆ ICC ಬಿಗ್ ಶಾಕ್.. ಮೊಹಮ್ಮದ್ ನವಾಜ್ ಕ್ರಿಕೆಟ್ನಿಂದ ಬ್ಯಾನ್!
Karnataka News Live 18 July 2026ಬೆಂಗಳೂರು-ಮಂಗಳೂರು-ಉಡುಪಿ-ಕಾರವಾರ ನಡುವೆ ವಂದೇ ಭಾರತ್ ರೈಲು - ಸಂಸದರು ಹೇಳಿದ್ದೇನು?
Karnataka News Live 18 July 2026ಮೂಡುಬಿದಿರೆಯ ಅನುಷಾ ಆಚಾರ್ ಸ್ಟಾರ್ಟಪ್ಗೆ ರಾಷ್ಟ್ರಪತಿ ಭವನದಿಂದ ಅಹ್ವಾನ! ರಾಷ್ಟ್ರೀಯ ಮನ್ನಣೆ
Karnataka News Live 18 July 2026ಹೂವಿನಹಡಗಲಿ - 632 ಸರ್ಕಾರಿ ಶಾಲೆಗಳ ದುಸ್ಥಿತಿ, ಅಪಾಯದಲ್ಲಿ ಮಕ್ಕಳ ಅಕ್ಷರಾಭ್ಯಾಸ!
ಹೂವಿನಹಡಗಲಿ ತಾಲೂಕಿನ ಸರ್ಕಾರಿ ಶಾಲೆಗಳ ಸುರಕ್ಷತೆಯ ಕುರಿತು ನಡೆಸಿದ ಪರಿಶೀಲನೆಯಲ್ಲಿ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ. ತಾಲೂಕಿನ 166 ಶಾಲೆಗಳ ಪೈಕಿ 183 ಕೊಠಡಿಗಳು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳ ಜೀವಕ್ಕೆ ಅಪಾಯವನ್ನುಂಟುಮಾಡುವ ಸ್ಥಿತಿಯಲ್ಲಿವೆ.
Karnataka News Live 18 July 20262ನೇ ವಿಮಾನ ನಿಲ್ದಾಣ ಕನಕಪುರಕ್ಕೆ ಬೇಡ; ಸಿಎಂಗೆ ಪತ್ರ ಬರೆದು ಸ್ಥಳ ಹೇಳಿದ ವಿಜಯೇಂದ್ರ
ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರದ ಬದಲು ತುಮಕೂರಿನಲ್ಲಿ ಸ್ಥಾಪಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಹಕಾರಿಯಾಗಲಿದೆ, ಆದರೆ ಕನಕಪುರದಲ್ಲಿ ಸ್ಥಾಪಿಸಿದರೆ ಅದರ ಪ್ರಯೋಜನ ಸೀಮಿತ ಪ್ರದೇಶಕ್ಕೆ ಮಾತ್ರ ಲಭ್ಯವಾಗಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.