09:01 AM (IST) Jul 18

Karnataka News Live 18 July 2026ಪಾಕಿಸ್ತಾನದ ಸ್ಟಾರ್‍‌ ಕ್ರಿಕೆಟರ್‍‌‌ಗೆ ICC ಬಿಗ್ ಶಾಕ್.. ಮೊಹಮ್ಮದ್ ನವಾಜ್ ಕ್ರಿಕೆಟ್‌ನಿಂದ ಬ್ಯಾನ್!

ಪಾಕಿಸ್ತಾನ ಕ್ರಿಕೆಟ್ ತಂಡದ ಆಲ್‌ರೌಂಡರ್ ಮೊಹಮ್ಮದ್ ನವಾಜ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ದೊಡ್ಡ ಶಾಕ್ ನೀಡಿದೆ. ಡೋಪಿಂಗ್ ವಿರೋಧಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನವಾಜ್ ಅವರಿಗೆ ಮೂರು ತಿಂಗಳ ಕಾಲ ಕ್ರಿಕೆಟ್‌ನಿಂದ ನಿಷೇಧ ಹೇರಲಾಗಿದೆ

Read Full Story
08:36 AM (IST) Jul 18

Karnataka News Live 18 July 2026ಬೆಂಗಳೂರು-ಮಂಗಳೂರು-ಉಡುಪಿ-ಕಾರವಾರ ನಡುವೆ ವಂದೇ ಭಾರತ್ ರೈಲು - ಸಂಸದರು ಹೇಳಿದ್ದೇನು?

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಪ್ರಕಾರ, ಕೊಂಕಣ ರೈಲ್ವೆಯು ಶೀಘ್ರದಲ್ಲೇ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳುವ ಸಾಧ್ಯತೆಯಿದೆ. ಈ ವಿಲೀನದಿಂದ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ನಿರೀಕ್ಷಿಸಲಾಗಿದ್ದು, ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಲಿಫ್ಟ್ ಉದ್ಘಾಟನೆ ವೇಳೆ ಅವರು ಈ ಮಾಹಿತಿ ನೀಡಿದರು.
Read Full Story
08:17 AM (IST) Jul 18

Karnataka News Live 18 July 2026ಮೂಡುಬಿದಿರೆಯ ಅನುಷಾ ಆಚಾರ್ ಸ್ಟಾರ್ಟಪ್‌ಗೆ ರಾಷ್ಟ್ರಪತಿ ಭವನದಿಂದ ಅಹ್ವಾನ! ರಾಷ್ಟ್ರೀಯ ಮನ್ನಣೆ

ಮೂಡುಬಿದಿರೆಯ ಅನುಷಾ ಆಚಾರ್ ಅವರ 'ಮಾವೇದಾಸ್' ಸ್ಟಾರ್ಟಪ್‌ಗೆ ನೀತಿ ಆಯೋಗದ ರಾಷ್ಟ್ರೀಯ ಮನ್ನಣೆ ಲಭಿಸಿದೆ. ಬಾಣಂತನದ ಸಾಂಪ್ರದಾಯಿಕ ಆಹಾರವನ್ನು ನಾವೀನ್ಯತೆಯೊಂದಿಗೆ ಉಳಿಸುವ ಈ ಪ್ರಯತ್ನ, ದೇಶದ 26 ಪ್ರಮುಖ ನಾವೀನ್ಯತೆಗಳಲ್ಲಿ ಒಂದಾಗಿ ಆಯ್ಕೆಯಾಗಿದ್ದು, ಈ ಸಾಧನೆಗಾಗಿ ಅನುಷಾ ಆಚಾರ್ ಅವರು ರಾಷ್ಟ್ರಪತಿ ಭವನದಲ್ಲಿ ಗೌರವ ಸ್ವೀಕರಿಸಲಿದ್ದಾರೆ.
Read Full Story
08:07 AM (IST) Jul 18

Karnataka News Live 18 July 2026ಹೂವಿನಹಡಗಲಿ - 632 ಸರ್ಕಾರಿ ಶಾಲೆಗಳ ದುಸ್ಥಿತಿ, ಅಪಾಯದಲ್ಲಿ ಮಕ್ಕಳ ಅಕ್ಷರಾಭ್ಯಾಸ!

ಹೂವಿನಹಡಗಲಿ ತಾಲೂಕಿನ ಸರ್ಕಾರಿ ಶಾಲೆಗಳ ಸುರಕ್ಷತೆಯ ಕುರಿತು ನಡೆಸಿದ ಪರಿಶೀಲನೆಯಲ್ಲಿ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ. ತಾಲೂಕಿನ 166 ಶಾಲೆಗಳ ಪೈಕಿ 183 ಕೊಠಡಿಗಳು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳ ಜೀವಕ್ಕೆ ಅಪಾಯವನ್ನುಂಟುಮಾಡುವ ಸ್ಥಿತಿಯಲ್ಲಿವೆ.

Read Full Story
07:25 AM (IST) Jul 18

Karnataka News Live 18 July 20262ನೇ ವಿಮಾನ ನಿಲ್ದಾಣ ಕನಕಪುರಕ್ಕೆ ಬೇಡ; ಸಿಎಂಗೆ ಪತ್ರ ಬರೆದು ಸ್ಥಳ ಹೇಳಿದ ವಿಜಯೇಂದ್ರ

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರದ ಬದಲು ತುಮಕೂರಿನಲ್ಲಿ ಸ್ಥಾಪಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಹಕಾರಿಯಾಗಲಿದೆ, ಆದರೆ ಕನಕಪುರದಲ್ಲಿ ಸ್ಥಾಪಿಸಿದರೆ ಅದರ ಪ್ರಯೋಜನ ಸೀಮಿತ ಪ್ರದೇಶಕ್ಕೆ ಮಾತ್ರ ಲಭ್ಯವಾಗಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

Read Full Story